Skip to main content

Blog number 1670. ಪಶ್ಚಿಮ ಘಟ್ಟಗಳ ಹಳ್ಳಿಗಳ ಕಥೆ ಗಾಂಜಾ ಗಮಲು ಕ್ರಮೇಣ ಅವರಿಸುತ್ತಿದೆ.

https://youtu.be/5eXkuL1CdMs

#ಸುದ್ದಿವಾಹಿನಿ_ಸುದ್ದಿಗಳು_ಮು೦ದಿನ_ಗಂಡಾಂತರ_ತೆರೆದಿಡುತ್ತಿದೆ.

#ಪಶ್ಚಿಮಘಟ್ಟಗಳ_ಜನವಸತಿ_ಪ್ರದೇಶದಲ್ಲಿ_ಅವರಿಸಿರುವ_ಗಾಂಜಾ_ಗಮಲು.

#ಪ್ರಾರಂಭದಲ್ಲಿ_ಗಾಂಜಾ_ಬೆಳೆಯುತ್ತಿದ್ದರು_ಆಗ_ಹಳ್ಳಿಗಳಲ್ಲಿ_ಗಾಂಜಾ_ವ್ಯಸನಿಗಳು_ಇರಲಿಲ್ಲ

#ಈಗ_ಹಳ್ಳಿಗಳಲ್ಲಿ_ಗಾಂಜಾ_ವ್ಯಸನಿಗಳು_ಹೆಚ್ಚಾಗಿದ್ದಾರೆ_ಗಾಂಜಾ_ಬೆಳೆಯುವವರು_ಕಡಿಮೆ_ಆಗಿದ್ದಾರೆ.

#ಬೇರೆ_ಕಡೆಯಿಂದ_ಗಾಂಜಾ_ಇಲ್ಲಿ_ಮಾರಾಟ_ಆಗುತ್ತದೆ.

#ಅಮಲು_ಪದಾರ್ಥದ_ಮೇಲಿನ_ಸದ್ಬಾವನೆ_ನಂತರದ_ಪಲಾನುಭವಿ_ಆ_ಕುಟುಂಬದವರೆ_ಆಗುವ_ವಿಪರ್ಯಾಸ.

#ಇದು_ಎಲ್ಲಾ_ನಮ್ಮ_ಪಶ್ಚಿಮಘಟ್ಟದ_ಹಳ್ಳಿ_ಕಥೆ

     
   ಪಶ್ಚಿಮ ಘಟ್ಟಗಳ ಹಳ್ಳಿಗಳಲ್ಲಿ ವಾಡಿಕೆ ಮಳೆ ಕಡಿಮೆ ಆದಾಗ ಹತ್ತಿ ಮತ್ತು ಜೋಳದ ಕೃಷಿ ಪ್ರಾರಂಭವಾಯಿತು ಅದರ ಮಧ್ಯ ಗಾಂಜಾ ಬೆಳೆ ಸೇರಿಕೊಂಡಿತು, ಮೊದಲಿಗೆ ಮನೆಯ ಹೆಣ್ಣು ಮಕ್ಕಳು ವಾಷಿ೯ಕ ಒಂದು 50 ಸಾವಿರ ಆದಾಯ ಪಡೆಯಲು ಪ್ರಾರಂಬಿಸಿದರು ನಂತರ ಇದಕ್ಕೆ ದೊಡ್ಡ ಮಾರುಕಟ್ಟೆಯೇ ಸೃಷ್ಟಿ ಆಯಿತು.
 ಉತ್ತರ ಭಾರತದಿಂದ ಹಳ್ಳಿಗಳಿಗೆ ದಲ್ಲಾಳರು ಬಂದರು ಬೀಜ, ಮುಂಗಡ ನೀಡಿದರು ಮತ್ತು ಅವರೇ ಖರೀದಿ ಮಾಡಲು ಶುರು ಮಾಡಿದರು. ಬೇರೆಯವರಿಗೆ ಅನುಮಾನ ಬರಬಾರೆದೆಂದು ಬೆಡ್ ಶೀಟ್, ಬಟ್ಟೆ ವ್ಯಾಪಾರಿಗಳಾಗಿ ಸಂವಹನ ಶುರು ಮಾಡಿದರು.
  ಒಬ್ಬರ ನೋಡಿ ಎಲ್ಲರೂ ಗಾಂಜಾ ಕೃಷಿಕರಾದರು ವಾಷಿ೯ಕ ಆದಾಯ ಕೆಲ ಲಕ್ಷಗಳಾಯಿತು, ಮನೆ, ಬೈಕ್, ಕಾರುಗಳು ಬಂತು ಜನಪ್ರತಿನಿಧಿಗಳು ಇವರ ಮನೆಗೆ ಬರಲು ಪ್ರಾರಂಭಿಸಿದರು ಎಲ್ಲೋ ಒಂದು ಕಡೆ ಸಿಕ್ಕಿಬಿದ್ದರೆ ಊರವರೆಲ್ಲ ಸೇರಿ ರಾಜಿ ಮಾಡಿ ಬಿಡಿಸಲು ಪ್ರಾರಂಭಿಸಿದರು ಅದಿಕಾರದಲ್ಲಿನ ರಾಜಕಾರಣಿಗಳು ಸಹಕರಿಸಿದರು.
  ಹಳ್ಳಿಯ ಮಕ್ಕಳಿಗೆ ಕಾನ್ವೆ೦ಟ್ ಶಾಲೆಗೆ ಸೇರಿಸುವ ಮತ್ತು ಅವರನ್ನ ನಿತ್ಯ ಬರುವ ಶಾಲಾ ವಾಹನದಲ್ಲಿ ಕಳಿಸುವ ಶೋಕಿ ಪ್ರಾರ೦ಭವಾಯಿತು ಮುಂದೆ ಹೆಚ್ಚಿನ ಶಿಕ್ಷಣಕ್ಕೆ ದೂರದ ದುಭಾರಿ ವಸತಿ ಶಾಲೆಗಳಿಗೆ ಸೇರಿಸಿದರು.
 
   ಎಲ್ಲಾ ಸುಖಾಂತ್ಯದಲ್ಲಿ ಆಗಲಿಲ್ಲ ಮಗು ಈಗ ಡ್ರಗ್ ವ್ಯಸನಿ, ಅಲ್ಲಿ ಗಾಂಜಾದಿಂದ ಪ್ರಾರಂಭವಾಗಿ ಈಗ ಬಹಳ ಮುಂದುವರಿದಿದ್ದಾನೆ, ಇನ್ನು ಕೆಲವರ ಮಕ್ಕಳು ಗಾಂಜಾ ವ್ಯಾಪಾರವನ್ನೆ ಪ್ರಾರಂಭಿಸಿದ್ದಾರೆ.
  ಆದರೆ ಯಾರಿಗೂ ಇನ್ನು ಗೊತ್ತಾಗುತ್ತಿಲ್ಲ ಇದರ ಸಮಸ್ಯೆ ಎಲ್ಲಿಂದ ಶುರುವಾಯಿತು ಅಂತ, ಪತ್ರಿಕೆಗಳು ಪೋಲಿಸರು ಕ್ರಮ ಕೈಗೊಳ್ಳಬೇಕು ಅಂತ ಬರೆಯುತ್ತೆ, ಸದನದಲ್ಲಿ ಮಂತ್ರಿ ಉಡ್ತಾ ಕನಾ೯ಟಕ ಆಗಲು ಬಿಡುವುದಿಲ್ಲ ಎನ್ನುವ ಹೇಳಿಕೆ TV ಗಳಲ್ಲಿ ಹಾರಿದೆ.
  ನಮ್ಮ ಹಳ್ಳಿಯ ಗಾಂಜಾ ಮಾರುಕಟ್ಟೆಯ ಬೇರು ಉತ್ತರ ಬಾರತದಿಂದ, ನೇಪಾಳ, ಪಾಕಿಸ್ತಾನಕ್ಕೆ ಹರಡಿದ್ದು ಈ ಗಾಂಜಾ ಭಟ್ಟಿ ಇಳಿಸಿ ತೆಗೆಯುವ ಒಂದು ರಾಸಾಯನಿಕ ಇನ್ನಾವುದೊ ದೊಡ್ಡ ಅಮಲು ಪದಾಥ೯ಕ್ಕೆ ಕಚ್ಚಾ ವಸ್ತು ಎಂಬ ವದಂತಿಯ ಸತ್ಯಾಸತ್ಯತೆಗೊತ್ತಿಲ್ಲ.
 10 ವಷ೯ದ ಹಿಂದೆಯೆ ಅಂತರಾಷ್ಟ್ರಿಯ ಮಟ್ಟದಲ್ಲಿ ನಮ್ಮ ಊರು ಗಾಂಜಾ ಮಾರುಕಟ್ಟೆಯಲ್ಲಿ ಹೆಸರಾಗಿದೆ ಅಂದಾಗ ಯಾರೂ ನಂಬಲಿಲ್ಲ.
 ವಷ೯ ವರ್ಷ ಪಸಲು ಕೂಡ ನಿಸ್ತಾರವಾಗಿ ಬೆಳೆದು ನಿಲ್ಲಲಿದೆ ನಮ್ಮ ಲಾಭದ ಬೆಳೆ ಮುಂದಿನ ಜನಾಂಗವನ್ನ ಏನು ಮಾಡಲಿದೆ ಎಂಬ ಸತ್ಯ ಮರೆಮಾಚಿ ಮುಂದುವರಿದಿದೆ.
  ಇದು ನಮ್ಮ ಹಳ್ಳಿಯ ದುರಂತದ ಕಥೆ ಮತ್ತು ವ್ಯಥೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...