Skip to main content

Blog number 1695. ಗೆಳೆಯ ಕಲೀಮುಲ್ಲಾ ಆಚಾಪುರ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರು.

#ಕಲೀಮುಲ್ಲಾ_ಆಚಾಪುರ_ಗ್ರಾಮಪಂಚಾಯತ್_ನೂತನ_ಅಧ್ಯಕ್ಷರು.

#ಬಡವರ_ಒಡನಾಟ_ಹೆಚ್ಚು_ಇವರಿಗೆ.

#ಕೋಳಿ_ಮೊಟ್ಟೆಯ_ವ್ಯಾಪಾರದಲ್ಲಿ_ಇವರು_ದೊಡ್ಡ_ವ್ಯಾಪಾರಿಗಳು.

#ನನ್ನ_ಕಛೇರಿಗೆ_ಬಂದಿದ್ದ_ಇವರನ್ನು_ಗೌರವಿಸಿ_ಶುಭ_ಹಾರೈಸಿದೆ.

#ಸಾಗರ_ತಾಲ್ಲೂಕಿನಲ್ಲಿ_ಮುಸ್ಲಿಂ_ಸಮಾಜದ_ಏಕೈಕ_ಗ್ರಾಮಪಂಚಾಯತ್_ಅಧ್ಯಕ್ಷರು.

    ಎರಡನೆ ಅವಧಿಗೆ ಸಾಗರ ತಾಲೂಕಿನ ಆನಂದಪುರಂ ಜಿಲ್ಲಾ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಆಚಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆದ ಕಿರಿಯ ಗೆಳೆಯ ಕಲೀಮುಲ್ಲಾ ಅವರು ಯಡೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವಾನಂದ ಮತ್ತು ಶುಂಠಿ ವ್ಯಾಪಾರಿಗಳಾದ ಪ್ರಮೋದ್ ಶೇಟ್ ರ ಜೊತೆ ಬಂದಿದ್ದರು.
    ಬಹುಶಃ ಸಾಗರ ತಾಲೂಕಿನ ಗ್ರಾಮ ಪಂಚಾಯಿತಿ ಅಧ್ಯಕ್ಷರಲ್ಲಿ ಇವರು ಏಕೈಕ ಮುಸ್ಲಿಂ ಅಧ್ಯಕ್ಷರಿರ ಬೇಕು ನಾನು 1995 - 2000ದಲ್ಲಿ ಈ ಭಾಗದ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದಾಗ ಕಲೀಮುಲ್ಲಾ ಉತ್ಸಾಹಿ ಯುವಕ ಆಗಿನಿಂದ ಅವರಿಗೆ ರಾಜಕೀಯ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ.
   ಆಚಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಸ್ಲಾಂಪುರದಲ್ಲಿ ಗೋವಾದ ಉದ್ಯಮಿಗಳು ಪ್ರಾರಂಬಿಸಿದ್ದ ಪೋಲ್ಟ್ರಿ ಪಾರಂನಲ್ಲಿ ಮೊಟ್ಟೆ ವ್ಯಾಪಾರ ಪ್ರಾರಂಬಿಸಿ ಈಗ ಸ್ವತಂತ್ರವಾಗಿ ವಾರಕ್ಕೆರೆಡು ಟ್ರಕ್ ಮೊಟ್ಟೆ ಜಿಲ್ಲೆಯಾದ್ಯಂತ ಮಾರಾಟ ಮಾಡುವ ದೊಡ್ಡ ಉದ್ಯಮಿ ಕಲೀಮುಲ್ಲಾ ಗ್ರಾಮ ಪಂಚಾಯಿತಿ ಅದ್ಯಕ್ಷರಾಗಿದ್ದಾರೆ.
   2012ರಲ್ಲಿ ನನಗೆ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೇಸ್ ಪಕ್ಷ ಆಹ್ವಾನಿಸಿ ಕೊನೆಯ ಕ್ಷಣದಲ್ಲಿ ಬಿ ಪಾರಂ ನೀಡದಿದ್ದಾಗ ನನ್ನೆಲ್ಲ ಗೆಳೆಯರ ಒತ್ತಾಯದಿಂದ ಪಕ್ಷೇತರನಾಗಿ ಬಸ್ ಚಿಹ್ನೆಯಲ್ಲಿ ಸ್ಪರ್ಧಿಸಿದ್ದೆ ಆಗ ಆಚಾಪುರ ತಾಲ್ಲೂಕು ಪಂಚಾಯಿತಿ ಕ್ಷೇತ್ರದಿಂದ ಕಲೀಮುಲ್ಲಾ ಕಾಂಗ್ರೇಸ್ ಪಕ್ಷದಿಂದ ಸ್ಪರ್ದಿಸಿದ್ದರು.
   ಆಗ ಇಡೀ ಆಚಾಪುರ ಪಂಚಾಯಿತಿ ಮತದಾರರು ಜಿಲ್ಲಾ ಪಂಚಾಯತ್ ಗೆ ನನ್ನ ಬಸ್ಸು ಗುರುತಿಗೆ ಮತ್ತು ತಾಲ್ಲೂಕು ಪಂಚಾಯಿತಿಗೆ ಕಲೀಮುಲ್ಲಾರ ಹಸ್ತದ ಗುರುತಿಗೆ ಮತ ಹುರುಪಿನಿಂದ ನೀಡಿದ್ದರು ಆದರೆ ಪಲಿತಾಂಶ ಬಂದಾಗ ನಾನು 89 ಮತಗಳಿಂದ ಸೋತಿದ್ದೆ, ಕಲೀಮುಲ್ಲಾ ಕೂಡ ಸೋತಿದ್ದರು.
   ಆಗಿದ್ದೇನೆಂದರೆ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ಒಟ್ಟಿಗೆ ನಡೆಯುವುದರಿಂದ ಮೊದಲಿಗೆ ಜಿಲ್ಲಾ ಪಂಚಾಯತ್ ಬ್ಯಾಲೆಟ್ ನಂತರ ತಾಲ್ಲೂಕ್ ಪಂಚಾಯ್ತಿಯ ಬ್ಯಾಲೆಟ್ ನೀಡುವುದಾಗಿ ಚುನಾವಣಾ ಅಧಿಕಾರಿಗಳು ಘೋಷಿಸಿದ್ದರು ಆದರೆ ಮತ ಕೇಂದ್ರದಲ್ಲಿ(ಉದ್ದೇಶ ಪೂರ್ವಕವಾಗಿ) ಮೊದಲಿಗೆ ತಾಲ್ಲೂಕ್ ಪಂಚಾಯ್ತಿಯ ಬ್ಯಾಲೆಟ್ ನೀಡಿದ್ದಾರೆ ಅದರಲ್ಲಿ ಬಸ್ಸು ಗುರುತಿಗೆ ಆಚಾಪುರದ ಮತದಾರರು ಜಿಲ್ಲಾ ಪಂಚಾಯತ್ ಗೆ ಸ್ಪರ್ದಿಸಿದ್ದ ನನಗೆ ಅಂತ ಮತ ಒತ್ತಿದ್ದಾರೆ ಆದರೆ ಪಕ್ಷೇತರವಾಗಿ ತಾಲ್ಲೂಕ್ ಪಂಚಾಯ್ತಗೆ ಸ್ಪರ್ಧಿಸಿದ್ದ ನನ್ನ ಕ್ಲಾಸ್ ಮೇಟ್ ಬಸ್ ಏಜೆಂಟ್ ಚಂದು ಎನ್ನುವವರು ನನ್ನ ಪ್ರತಿ ಸ್ಪರ್ಧಿಯಿಂದ ನನ್ನ ಸೋಲಿಸಲು ಕಂಟ್ರಾಕ್ಟ್ ಪಡೆದು ಅವರು ಬಸ್ಸು ಗುರುತಲ್ಲಿಯೇ ಸ್ಪರ್ದಿಸಿದ್ದರು ಅವರಿಗೆ ಯಾವುದೇ ಪ್ರಚಾರ ಇಲ್ಲದೆ ಆರು ನೂರಕ್ಕೂ ಹೆಚ್ಚು ಓಟು ಸಿಕ್ಕಿತ್ತು.
   ನಂತರ ನೀಡಿದ್ದು ಜಿಲ್ಲಾ ಪಂಚಾಯತ್ ಬ್ಯಾಲೆಟ್ ಅದರಲ್ಲಿ ಕಲೀಮುಲ್ಲಾರದೆಂದು ಹಸ್ತಕ್ಕೆ ಮತ ಹಾಕಿದ್ದಾರೆ ಅದು ಜಿಲ್ಲಾ ಪಂಚಾಯಿತಿಗೆ ಸ್ಪರ್ದಿಸಿದ್ದ ರತ್ನಾಕರ ಹೊನಗೋಡಿಗೆ ಹೋಗಿದ್ದರಿಂದ ಕಲೀಮುಲ್ಲಾ ಸೋತರು ಇಲ್ಲದಿದ್ದರೆ ಕಲೀಮುಲ್ಲಾ 2012ರಲ್ಲಿ ತಾಲ್ಲೂಕ್ ಪಂಚಾಯಿತಿ ಸದಸ್ಯರಾಗಿ ಆಯ್ಕೆ ಆಗಿರುತ್ತಿದ್ದರು.
   ಈ ರೀತಿ ನಾನು ಮತ್ತು ಕಲೀಮುಲ್ಲಾ ಸಮಾನ ದುಃಖಿಗಳು ಇದೆಲ್ಲ ಮೊನ್ನೆ ಬಂದಾಗ ನೆನಪಿಸಿಕೊಂಡೆವು, ಕಲೀಮುಲ್ಲಾರಿಗೆ ನಮ್ಮ ಸಂಸ್ಥೆವತಿಯಿಂದ ಗೌರವಿಸಿ ಅವರಿಗೆ ನೆನಪಿನ ಕಾಣಿಕೆ ಆಗಿ ಅವರ ಊರಿನ ಕಥೆ ಇರುವ ನನ್ನ ಸಣ್ಣ ಕಥೆಗಳ ಬಿಲಾಲಿ ಬಿಲ್ಲಿ ಅಭ್ಯಂಜನ ಪುಸ್ತಕ ನೀಡಿ ಮುಂದಿನ ದಿನಗಳಲ್ಲಿ ಆಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಳ್ಳೆಯ ಕೆಲಸಗಳು ಮಾಡಿ ಎಂದು ಹಾರೈಸಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...