Skip to main content

Blog number 1703. ಬೇಲೂರು ಗೋಪಿ ಮುಖತಃ ಬೇಟಿ ಆಗಲು ಸಾಧ್ಯವಾಗಲೇ ಇಲ್ಲ ಎಂಬ ಕೊರಗು ನನ್ನ ಹೃದಯವನ್ನು ಈಗಲೂ ಕೊರೆಯುತ್ತದೆ.

#ನನ್ನ_ಬಗ್ಗೆ_ಅವರಿಗೆ_ಗೊತ್ತಿತ್ತು_ಆದರೆ_ನನಗೆ_ಅವರ_ಮುಖತಃ_ಪರಿಚಯ_ಇರಲಿಲ್ಲ.

#ಅವರ_ಬೇಟೆಗೆ_ಕಾದಿದ್ದೆ_ಆದರೆ_ವಿದಿಯಾಟ_ ಸಾಧ್ಯವಾಗಲಿಲ್ಲ.

#ಪೇಸ್ಬುಕ್ ಗೆಳೆಯ ಬರಹಗಾರ ಚಿ೦ತಕ ಶ್ರಮ ಜೀವಿ ಗೋಪಿ ಬೇಲೂರು ಆತ್ಮಕ್ಕೆ ಸದ್ಗತಿ ಸ್ವಗ೯ಪ್ರಾಪ್ತಿಗಾಗಿ ಪ್ರಾಥ೯ನೆ.

  #40ವಷ೯ದಲ್ಲಿ ಇಹಲೋಕ ಯಾತ್ರೆ ಮುಗಿಸಿದ (27-ಡಿಸೆಂಬರ್_2019).

#ಸೋಷಿಯಲ್_ಮೀಡಿಯಾದಲ್ಲಿ_ಗೆಳೆಯರಾದೆವು.

#ಒಮ್ಮೆಯೂ_ಬೇಟಿ_ಆಗಿದೆ_ಇಹಲೋಕದಿಂದ_ನಿರ್ಗಮಿಸಿದರು.

 ನಮ್ಮ ಊರು ಆನಂದಪುರದಲ್ಲಿ ಜೆ.ಪಿ.ನಾರಾಯಣಸ್ವಾಮಿಯವರ ಸರಾಯಿ ಕ೦ಪನಿಯಲ್ಲಿ ಕೆಲಸ ಮಾಡಿದ ಬಗ್ಗೆ ಹೇಳಿದ್ದರು ಅವರಿಗೆ ನಮ್ಮ ಊರು ಚಿರಪರಿಚಿತ ಜೀವನಕ್ಕಾಗಿ ಬಸ್ ಕಂಡಕ್ಟರ್ ಆಗಿದ್ದು ಈಗ ಬೇಲೂರಿನಲ್ಲಿ ಹಣ್ಣಿನ ಅಂಗಡಿ ನಡೆಸುವುದಾಗಿ ತಿಳಿಸಿದ್ದರು, ಈ ಕಡೆ ಬಂದಾಗ ಬರಬೇಕೆಂದು ಆಮOತ್ರಣ ನೀಡಿದ್ದೆ ಕಳೆದ ವಷ೯ ಸಿಗಂದೂರಿಗೆ ಹೋದವರು ಕಾಲಾವಕಾಶ ಆಗದೆ ಬೇಟಿ ಆಗಲಿಲ್ಲ ಅಂತೂ ಕೊನೆಗೂ ಪರಸ್ಪರ ಬೇಟಿ ಸಾಧ್ಯವಾಗಲೇ ಇಲ್ಲ.
  16 ಆಗಸ್ಟ್ 2016ರಲ್ಲಿ ಅವರು ನನ್ನ ಬಗ್ಗೆ ಬರೆದ ಪೋಸ್ಟ್ ಇಲ್ಲಿದೆ ನೋಡಿ....
    ಧನ್ಯವಾದಗಳು ಸರ್.ನಾನು 1998ರಲ್ಲಿ
ಆನಂದಪುರದಲ್ಲಿದ್ದೆ.ನೀವು ವಿಧಾನಸಭಾ
ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ ನೀವೇ
ಗೆಲ್ಲಲೆಂದು ಹಾರೈಸಿದ್ದೆ.ನಿಮ್ಮಬಗ್ಗೆ ಅಂದು
ಹಾಯ್ ಬೆಂಗಳೂರ್ ಪತ್ರಿಕೆಯಲ್ಲಿ ಲೇಖನ
ಬಂದಿತ್ತು..ಶೀರ್ಷಿಕೆ ಇಂದೂ ನೆನಪಿದೆ.!!
ಎರಡು ತಿಮ್ಸ್ ಗಳಮಧ್ಯೆ ಒಬ್ಬ ಅರುಣ
ಪ್ರಸಾದ್. ನಿಮ್ಮ ಪ್ರಚಾರಸಭೆಗೆ ಗಣಪತಿ
ಯಪ್ಪನವರು ..ಚಿತ್ರನಟರಾದ ಅರವಿಂದ್
ಮತ್ತು ಹೊನ್ನವಳ್ಳಿ ಕೃಷ್ಣರವರು ಬಂದಿದ್ದರು..
ನಾನು ಸಾರಾಯಿ ಗುತ್ತಿಗೆದಾರರಲ್ಲಿ ಕೆಲಸಕ್ಕಿದ್ದೆ.
ಆನಂದಪುರದ ಪೋಲಿಸ್ ಠಾಣೆಯ ಪಕ್ಕದಲ್ಲಿ
.ಈಗಲೂ ಇರುವ. -ಕಟ್ಟಡದಲ್ಲಿ ವಾಸವಿದ್ದೆ....
  ಇವರೊಳಗೆ ಒಬ್ಬ ಕವಿ ಇದ್ದ, ಪುಸ್ತಕ ಖರೀದಿಸಿ ಓದಿ ವಿಮಷೇ೯ ಮಾಡುತ್ತಿದ್ದರು, ಪ್ರತಿ ನಿತ್ಯ ನಾನು ಅವರ Post ಓದುತ್ತಿದ್ದೆ, 2015ರಿಂದಲೂ.
  ಕಳೆದ ಎರೆಡು ಮೂರು ತಿಂಗಳಿOದ ಹತಾಷರಾದOತೆ ಬರೆಯುತ್ತಿದ್ದರು ನವೆಂಬರ್ 30ರ ನಂತರ FB ಯಲ್ಲಿ ವಿರಳರಾದರು ಇವತ್ತು ಇವರು ಇಹಲೋಕ ತ್ಯಜಿಸಿದ್ದು ಕೇಳಿ ದುಃಖವಾಯಿತು ಕಣ್ಣು ನೀರಾಯಿತು.
 ಇಬ್ಬರು ಚಿಕ್ಕ ಹೆಣ್ಣು ಮಕ್ಕಳ ಸ್ವ೦ತ ಮನೆಯಲ್ಲಿ ಸುಖ ಸಂಸಾರ ನಡೆಸಿದ್ದರು ಅವರಿಗೆಲ್ಲ ಈ ದುಃಖ, ಅಗಲಿಕೆ ಎದುರಿಸುವ ಶಕ್ತಿ ದೇವರು ನೀಡಲಿ ಎಂದು ನಾವೆಲ್ಲ FB ಗೆಳೆಯರು ಪ್ರಾಥಿ೯ಸೋಣ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...