Skip to main content

Blog number 1706. ಕೃಷಿ ವ್ಯಾಪಾರದ ಜೊತೆ ಸಮಾಜ ಸೇವೆ ಮಾಡುತ್ತಿರುವ ಹಿರೇಜೇನಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಾಜು.

#ಶುಂಠಿ_ವ್ಯಾಪಾರಿಗಳಾದ_ರಾಜು

#ಹೊಸನಗರ_ತಾಲ್ಲೂಕಿನ_ಚಿಕ್ಕಜೇನಿ_ಗ್ರಾಮ_ಪಂಚಾಯತಿ_ಅದ್ಯಕ್ಷರಾಗಿದ್ದಾರೆ.

#ಗ್ರಾಮ_ಪಂಚಾಯತಿಗಳ_ಎರಡನೆ_ಅವಧಿ_ಅಧ್ಯಕ್ಷ_ಉಪಾದ್ಯಕ್ಷ_ಚುನಾವಣೆ.

#ಕೃಷಿ_ವ್ಯಾಪಾರದ_ಜೊತೆ_ಓದುವ_ಬರೆಯುವ_ಹವ್ಯಾಸದ_ಸಮಾಜ_ಸೇವೆ_ಇವರದ್ದು.

   ನಾಗರಳ್ಳಿ ರಾಜು ಎಂದು ಸ್ಥಳಿಯರು ಹೊಸನಗರ ತಾಲೂಕಿನಲ್ಲಿ ಕರೆದರೆ ಇವರಿಗೆ ಸಾಗರ ತಾಲೂಕಿನಲ್ಲಿ ಶುಂಠಿ ರಾಜಣ್ಣ ಅಂತ ಕರೆಯುತ್ತಾರೆ ಇವರು ತಮ್ಮ ಬತ್ತ ಮತ್ತು ಅಡಿಕೆ ಕೃಷಿ ಜೊತೆ ಶುಂಠಿ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಾರೆ ಅಷ್ಟೆ ಅಲ್ಲ ಇವರು ಶುಂಠಿ ವ್ಯಾಪಾರಿಗಳೂ ಹೌದು ಶುಂಠಿ ಒಣಗಿಸಿ ಸಂಸ್ಕರಿಸಿ ಕೋಲ್ಡ್ ಸ್ಟೋರೇಜ್ ನಲ್ಲಿ ಇಡುತ್ತಾರೆ ಉತ್ತಮ ಬೆಲೆ ಬಂದಾಗ ಮಾರಾಟ ಮಾಡುವ ಮಾದರಿ ಕೃಷಿಕರು ಕೂಡ.
   ಈ ಎರೆಡೂ ತಾಲೂಕಿನ ಶುಂಠಿ ವ್ಯಾಪಾರಿಗಳಿಗೆ ಆನಂದಪುರಂನ ಸಂತೋಷ್ ಆಗ್ರೋ ಕೋಲ್ಡ್ ಸ್ಟೋರೇಜ್ ಮತ್ತು ರಿಪ್ಪನ್ ಪೇಟೆಯ ಶಾರದಾ ಸಹಕಾರಿ ಸಂಸ್ಥೆಯ ಕೋಲ್ಡ್ ಸ್ಟೋರೇಜ್ ವರದಾನ ಕೇವಲ 10 ಕಿ.ಮಿ. ನಲ್ಲಿ ಸುಮಾರು 8000 ಟನ್ ಒಣ ಶುಂಠಿ ಸಂಗ್ರಹ ಯೋಗ್ಯವಾದ ಕೋಲ್ಡ್ ಸ್ಟೋರೇಜ್ ಅಲ್ಲದೆ ಸಮೀಪದ ಬ್ಯಾಡಗಿಯ ಕೋಲ್ಡ್ ಸ್ಟೋರೇಜ್ ಕೂಡ ಒಣ ಶುಂಠಿಯಿಂದ ತುಂಬಿ ತುಳುಕುತ್ತದೆ.
   ಹೆಚ್ಚಿನ ಶುಂಠಿ ವ್ಯಾಪಾರಿಗಳಿಗೆ ಮುಖ್ಯ ಜೋಯಿಂಟ್ ಪ್ಲೇಸ್ ನಮ್ಮ ಮಲ್ಲಿಕಾ ವೆಜ್ ಇಲ್ಲಿ ವ್ಯಾಪಾರ ಖರೀದಿ ಜೊತೆ ವ್ಯಾಪಾರಸ್ಥರ ವ್ಯಾಜ್ಯ ತಕರಾರುಗಳು ಲಾಭ ನಷ್ಟಗಳ ಪಂಚಾಯಿತಿ ಕೂಡ ನಡೆಯುತ್ತದೆ ಆ ಸಂದರ್ಭದಲ್ಲಿ ಅಂತಿಮ ಜಡ್ಜಮೆಂಟ್ ರಾಜು ಅವರದ್ದೆ.
   ತಕರಾರು ಸುಖಾಂತ್ಯಗೊಳಿಸುವ ಜೊತೆಗೆ ನಷ್ಟದಿಂದ ತತ್ತರಿಸುವ ರೈತರಿಗೆ ಮತ್ತು ವ್ಯಾಪಾರಿಗಳಿಗೆ ಹತಾಶ ಮನಸ್ಥಿತಿ ಬದಲಿಸಿ ಅವರಲ್ಲಿ ಜೀವನೋತ್ಸವ ತುಂಬುವ ಅತ್ಯುತ್ತಮ ಕೌನ್ಸಿಲಿಂಗ್ ಮಾಡುವ ರಾಜು ಅವರ ಚಾಕಚಕ್ಯತೆ ನನಗೆ ತುಂಬಾ ಮೆಚ್ಚುಗೆ ಆಗಿದೆ.
   ನಮ್ಮ ಊರಿನ ವರಸಿದ್ಧಿವಿನಾಯಕ ದೇವರ ಜಾತ್ರೆಯಲ್ಲೂ ಭಾಗವಹಿಸುತ್ತಾರೆ ಇವರು ಹೊಸನಗರ ಸಾಗರ ಸೊರಬ ಮತ್ತು ತೀರ್ಥಹಳ್ಳಿ ತಾಲೂಕಿನಲ್ಲಿ ಸಂಪರ್ಕ ಪ್ರಭಾವ ಹೊಂದಿದ್ದಾರೆ ಆದರೆ ಎಲ್ಲೂ ತೋರ್ಪಡಿಸಿಕೊಳ್ಳದೆ ಎಲೆ ಮರೆಯ ಕಾಯಿಯಂತೆ ಇರುತ್ತಾರೆ.
  ಮೂರು ಬಾರಿ ಗ್ರಾಮ ಪಂಚಾಯಿತಿಗೆ ಆಯ್ಕೆ ಆಗಿರುವ ಇವರಿಗೆ ಎರಡನೆ ಅವಧಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಪಡೆದಿದ್ದಾರೆ ಮುಂದಿನ ದಿನಗಳಲ್ಲಿ ಅವಕಾಶ ಬಂದರೆ ತಾಲ್ಲೂಕ್ ಪಂಚಾಯ್ತಿಯ ಚುನಾವಣೆಯಲ್ಲಿ ಸ್ಪರ್ಧಿಸುವ ಹುಮ್ಮಸ್ಸು ಇವರಿಗಿದೆ.
  ಅಧ್ಯಕ್ಷರಾಗಿ ಆಯ್ಕೆ ಆದ ರಾಜು ಅವರು ನಂದಿನಿ ಹಾಲಿನ ಪೇಡಾ ತಂದು ನನಗೆ ಮತ್ತು ನನ್ನ ಸಂಸ್ಥೆಯ ಸಿಬ್ಬಂದಿಗಳಿಗೆ ಬಾಯಿ ಸಿಹಿ ಮಾಡಿದ್ದಾರೆ ಇವರ ಶುಂಠಿ ವ್ಯಾಪಾರಿ ಜೊತೆಗಾರರಾದ ಪ್ರಮೋದ್ ಶೇಟ್ ಮತ್ತು ಉಳುವಿಯ ಸಾಹೇಬರ ಜೊತೆ ಬಂದಿದ್ದರು.
   ನಮ್ಮ ಸಂಸ್ಥೆವತಿಯಿಂದ ಗೌರವಿಸಿ ಮುಂದಿನ ದಿನಗಳಲ್ಲಿ ಇವರಿಗೆ ಇನ್ನೂ ಹೆಚ್ಚಿನ ಅವಕಾಶಗಳು ಲಭಿಸಲಿ ಎಂದು ಹಾರೈಸಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...