Skip to main content

Blog number 1714. ಮಹೂರ್ತ ತಪ್ಪಿ ಹೋದ ಆ ವೇಳೆಯಲ್ಲಿ ನಡೆದ ನನ್ನ ಮದುವೆಗೆ 34 ವರ್ಷ.

#ನಿನ್ನೆ_ಆಗಸ್ಟ್_23_ಮುಗಿದ_ಮೇಲೆ_ಗೊತ್ತಾಯಿತು.

#ಆಗಸ್ಟ್_23_1989_ನಾನು_ವಿವಾಹ_ಆದ_ದಿನಾಂಕ.

#ದಾಂಪತ್ಯ_ಜೀವನದ_34_ವಷ೯_ಕಳೆಯಿತು.

#ಹುಟ್ಟು_ಹಬ್ಬ_ವೆಡ್ಡಿಂಗ್_ಆನಿವರ್ಸರಿ_ಈವರೆಗೂ_ನಾನು_ಆಚರಿಸಿಲ್ಲ.


   ನನ್ನ ಮದುವೆ ಮೊದಲಿಗೆ ಗುಟ್ಟಾಗಿ ಶಿವಮೊಗ್ಗ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೊಂದಾಯಿಸಿದ್ದೆ ನಂತರ ಎರೆಡು ವರ್ಷದ ನಂತರ ನಮ್ಮ ತಂದೆಯ ಒಪ್ಪಿಸಿ ಶಿವಮೊಗ್ಗದ ಕೋಟೆ ಆಂಜನೇಯ ದೇವಸ್ಥಾನದಲ್ಲಿ 23 ಆಗಸ್ಟ್ 1989ರಲ್ಲಿ ಅಧಿಕೃತವಾಗಿ ಮದುವೆ ಆಗಿದ್ದೆ ಅಂದರೆ ನಿನ್ನೆಗೆ 34 ವರ್ಷ ಆಯಿತು.
   ಅವತ್ತು ವಿಪರೀತ ಮಳೆ ಮತ್ತು ನಮ್ಮ ತಂದೆ ಕೊನೆಕ್ಷಣದಲ್ಲಿ ನನ್ನ ಮದುವೆಗೆ ಬರುವುದಿಲ್ಲ ಅಂದಾಗ ಸನ್ನಿವೇಶ ಕ್ಲೈಮ್ಯಾಕ್ಸ್ ಗೆ ಹೋಗಿ ಸುಖಾಂತ್ಯವಾಗಿ ಶಿವಮೊಗ್ಗದ ಕೋಟೆ ಆಂಜನೇಯ ದೇವಾಲಯ ತಲುಪಲು ವಿಳಂಭವಾಗಿತ್ತು ಮತ್ತು ವಿವಾಹ ಮಹೂರ್ತ ತಪ್ಪಿ ಹೋಗಿತ್ತು.
  ಮದುವೆ ಮಹೂರ್ತ ಇಲ್ಲದ ಅವೇಳೆಯಲ್ಲಿ ಮದುವೆ ಆಗಬಾರದು ಮತ್ತು ಪುರೋಹಿತ್ಯ ವಹಿಸಿದರೆ ತಮ್ಮದೂ ತಪ್ಪು ಎಂದು ಶಿವಮೊಗ್ಗದ ಕೋಟೆ ಆಂಜನೇಯ ದೇವಾಲಯದ ಪ್ರದಾನ ಅರ್ಚಕರಾಗಿದ್ದ ಸಂತರ ಸಮಾವೇಶಗಳ ಸಂಚಾಲಕರಾಗಿದ್ದ ವಿಶ್ವ ಹಿಂದೂ ಪರಿಷತ್ ನ ಪ್ರಮುಖರಾಗಿದ್ದ ನರಸಿಂಹಮೂರ್ತಿ ಅಯ್ಯಂಗಾರರು ತಿಳಿಸಿದಾಗ ನನಗೆ ತಲೆಯ ಮೇಲೆ ಬಾಂಬ್ ಬಿದ್ದ ಹಾಗಾಯಿತು.
  ನಂತರ ಅವರಿಗೆ ನನ್ನ ಪ್ರೇಮ ವಿವಾಹ ಮತ್ತು ಅಂತರ್ಜಾತಿ ವಿವಾಹ ಇದಕ್ಕೆ ಎರೆಡೂ ಕುಟುಂಬ ಒಪ್ಪಿಸಿ ಇಲ್ಲಿಗೆ ನನ್ನ ತಂದೆಯನ್ನ ಒಪ್ಪಿಸಿ ಕರೆತರಲು ವಿಳಂಭವಾಗಿ ಮಹೂರ್ತ ತಪ್ಪಿ ಹೋಯಿತು, ನನಗೆ ಏನೇ ತೊಂದರೆಯಾದರೂ ಪರವಾಗಿಲ್ಲ ದಯಮಾಡಿ ಮದುವೆ ಶಾಸ್ತ್ರ ಮಾಡಿ ಕೊಡಿ ಇಲ್ಲದಿದ್ದರೆ ಮುಂದೆ ಕಷ್ಟ ಅಂತ ವಿನಂತಿಸಿದ್ದೆ.
  ನಂತರ ಮಹೂರ್ತ ಇಲ್ಲದ ಸಮಯದಲ್ಲಿ ವಿವಾಹ ನೆರವೇರಿತು ಮತ್ತು ನನ್ನ ಮದುವೆಗೆ ವಿವಾಹ ಆಹ್ವಾನ ಪತ್ರಿಕೆ ಮಾಡಿಸಿರಲಿಲ್ಲ ಅವತ್ತಿಗೆ ಅತ್ಯಾಪ್ತರಾಗಿದ್ದವರನ್ನು ಕರೆದಿದ್ದೆ ಅವತ್ತು ಮದುವೆಗೆ 25 ಜನ ಅಷ್ಟೇ ಸಾಕ್ಷಿದಾರರು.
   ನಂತರ ಶಿವಮೊಗ್ಗದ ಜ್ಯೂವೆಲ್ ರಾಕ್ ಹೋಟೆಲ್ ನಲ್ಲಿ ಅತಿಥಿಗಳಿಗೆ ಅವರಿಷ್ಟದ ವೆಜ್ - ನಾನ್ ವೆಜ್ - ಆಲ್ಕೋಹಾಲ್ ಬೋಜನ ಮಾಡಿಸಿ ಮನೆ ಸೇರಿದ್ದೆ.
  ಈವರೆಗೆ ನಾನು ನನ್ನ ಪತ್ನಿ ನನ್ನ ಇಬ್ಬರ ಮಕ್ಕಳು ಬರ್ತಡೇ ಸೆಲೆಬ್ರೇಷನ್ ಮಾಡಿಲ್ಲ ಕೇಕ್ ಕಟ್ ಮಾಡಿಲ್ಲ ಮತ್ತು ವಿವಾಹ ವಾರ್ಷಿಕೋತ್ಸವ ಕೂಡ ಆಚರಿಸುವುದಿಲ್ಲವಾದ್ದರಿಂದ ನಿನ್ನೆ ಆಗಸ್ಟ್ 23 ನನ್ನ ವಿವಾಹ ವಾರ್ಷಿಕೋತ್ಸವ ಅಂತ ನೆನಪು ನನಗೂ ಆಗಲಿಲ್ಲ ನನ್ನ ಪತ್ನಿಗೂ ನೆನಪಾಗಲಿಲ್ಲ ಕೆಲವೊಂದು ವರ್ಷ ಮಗ ಮಗಳಿಗೆ ನೆನಪಾಗಿ ಶುಭ ಹಾರೈಸುತ್ತಿದ್ದರು ಈ ವರ್ಷ ಅವರಿಗೂ ನೆನಪಾಗಲಿಲ್ಲ.
    ಆದರೆ ಪೇಸ್ ಬುಕ್ ಇವತ್ತು ನನ್ನ ವಿವಾಹ ವಾರ್ಷಿಕೊತ್ಸವ ಒಂದು ದಿನದ ನಂತರ ನೆನಪಿಸಿದಾಗಲೇ ಗೊತ್ತಾಯಿತು ಮತ್ತು 34 ವರ್ಷದ ಹಿಂದಿನ ನನ್ನ ಮದುವೆ ದಿನದ ನೆನಪು ಆಯಿತು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...