Skip to main content

Blog number 1720.ದೊಡ್ಡ ವ್ಯಕ್ತಿಗಳು ಕೊಳಕು ನಿಂದನೆಯ ಮಾತು ಆಡುವುದೇಕೆ?

ನಿಮ್ಮ ನಿಮ್ಮ ಇಷ್ಟದಂತೆ ನೀವಿರುವ ಬಗ್ಗೆ ಯಾರೂ ಚಿಂತನೆ ಮಾಡಬೇಕಾಗಿಲ್ಲ.


ನೀವು ಹೇಳಿದ್ದು ಸರಿ 2012 ರ ನಂತರ ಇಡೀ ದೇಶದಲ್ಲೇ ಪೀತ ಪತ್ರಿಕೊದ್ಯಮ, ಬ್ಲಾಕ್ ಮೇಲ್ ಪತ್ರಕತ೯ರು ಹೆಚ್ಚಾದರು ಜೊತೆಯಲ್ಲಿ ಟಿವಿ ಮಾಧ್ಯಮ ಕೂಡ.
ಅಂಡ್ರಾಯಿಡ್ ಫೋನ್ ಬಳಕೆದಾರರು ಹೆಚ್ಚಾದರು, ಸೊಷಿಯಲ್ ಮೀಡೀಯದಲ್ಲಿ ಇಂಗ್ಲಿಷ್ ಬಳಸುವವರು ಮಾತ್ರ ಹೆಚ್ಚು ಕ್ರಿಯಾಶೀಲರಿದ್ದರು ಆದರೆ ಈಗ ಅಲ್ಲಿ ಸ್ಥಳೀಯ ಭಾಷೆಗಳಿಗೆ ಅವಕಾಶ ಇರುವುದರಿಂದ ಈಗ ಕನ್ನಡಿಗರು ಹೆಚ್ಚು ಕ್ರಿಯಾಶೀಲರಾಗಿದ್ದಾರೆ.
ಹಾಗಾಗಿಯೆ ಕ್ರಿಯೆ ಪ್ರತಿಕ್ರಿಯೆ, ಧ್ವನಿ ಪ್ರತಿಧ್ವನಿ ಹೆಚ್ಚಾಗಿದೆ.
ಹುಚ್ಚು ಅಭಿಮಾನದಿಂದ, ಹತಾಷೆ ಯಿ೦ದ ಕೊಳಕು ಬಾಷೆಯಲ್ಲಿ ಬರೆಯುತ್ತಿದ್ದಾರೆ.
ನಿಜವಾದ ಆರ್ ಎಸ್ ಎಸ್ ನವರು ಈ ರೀತೀ ವತಿ೯ಸುವುದು ಕಡಿಮೆಯೆ ಆದರೆ ಅಲ್ಲಿ ಈಗ ತೀವ್ರಗಾಮಿಗಳ ಹಿಡಿತ ಹೆಚ್ಚಾಗುತ್ತಿರುವುದು ಬಿಜೆಪಿ ಪಕ್ಷದಲ್ಲೂ ನೋಡಬಹುದು, ಅಡ್ವಾನಿಯ೦ತವರು ಅಲ್ಲಿ ಮೂಲೆಗುಂಪು ಮಾಡಲಾಗಿದೆ.
ಕಾ೦ಗ್ರೆಸ್ ತನ್ನ ಮತ ಬ್ಯಾ೦ಕ್ ರಕ್ಷಣೆಯ ಬರದಲ್ಲಿ ದೇಶದಲ್ಲಿನ ಆಂತರಿಕ ಭಯೋತ್ಪಾದಕರನ್ನ ರಕ್ಷಿಸುತ್ತಿದೆ ಎಂಬ ಭಾವನೆ ಸಾವ೯ಜನಿಕರಲ್ಲಿ ಬರುವಂತೆ ಅದು ವತಿ೯ಸುತ್ತಿದೆ ಉದಾಹರಣೆ ಕನಾ೯ಟಕದಲ್ಲಿ ಆತಂಕವಾದಿಗಳಿಗೆ ಅನುಕೂಲ ಮಾಡಿಕೊಡುವ ಸಂಘಟನೆಗಳನ್ನ ಬಗ್ಗೆ ಉದಾರವಾಗಿ ರುವುದು ಹಾಗೆಯ ಅವರ ಸಕಾ೯ರವೇ ಇದ್ದರು ನೈತಿಕ ಪೋಲಿಸ್ ಗಿರಿ ನಿಲ್ಲಿಸಲು ಸಾಧ್ಯವಿಲವಾಗಿರುವುದು.
ದಿನೇಶ್ ಅಮಿನರು ಒಳ್ಳೆಯ ಪತ್ರಕತ೯ರು ಆದರೆ ಇತ್ತಿಚಿಗೆ ಹೆಚ್ಚು ಅಕ್ರೊಶದಿಂದ ಪ್ರತಿಕ್ರಿಯೆ ನೀಡುವುದು ನನಗೂ ಸರಿ ಅನ್ನಿಸುತ್ತಿಲ್ಲ.
ಜನಾದ೯ನ ಪೂಜಾರರ ಬಗ್ಗೆ ಅವರಿಗೆ ವೈಯಕ್ತಿಕವಾಗಿ ಏನಾದರು ಇರಲಿ ಅವರೊಬ್ಬ ಒಬ್ಬ ಮುಖ್ಯಮಂತ್ರಿಯ ಪತ್ರಿಕಾ ಸಲಹೆಗಾರರಾಗಿ ಅವರ ಪಕ್ಷದ ಹಿರಿಯರನ್ನ ಹೀಗೆ ಸಾವ೯ಜನಿಕವಾಗಿ ನಿಂದಿಸಿದರೆ ವಿರೊದಿಗಳಿಗೆ ಇವರೆ ರತ್ನಗಂಬಳಿ ಹಾಕಿದ೦ತೆ ಅಲ್ಲವೆ.
ಅ೦ಗವಿಕಲೆ ಎಂದು ಬರೆದಿದ್ದು ಜಾತಿ ನಿಂದನೆಯ ಸಮವಾದದ್ದು , My Foot ಎಂಬ ಪದ ಸರಿಯಲ್ಲ.
ಇವೆಲ್ಲ ದಿನೇಶ ಅಮೀನ ಮಟ್ಟು ಎಂಬ ಪತ್ರಕತ೯ ಅಥವ ರಾಜ್ಯ ಒಂದರ ಮುಖ್ಯಮ೦ತ್ರಿಯ ಪತ್ರಿಕಾ ಸಲಹೆಗಾರರ ಬಾಯಿ೦ದ, ಲೇಖನದಿಂದ ಜನ ನಿರೀಕ್ಷಿಸಿರಲಿಲ್ಲ.
ಇದೆಲ್ಲ ಕೊಳಕು ಜನ ಸಾವ೯ಜನಿಕ ಟಾಯಿಲೆಟ್ ಗೋಡೆ ಮೇಲೆ ಬರೆಯುವ ಕೊಳಕು ಬರಹದಂತೆ ಕಾಣುತ್ತಿದೆ.
ಪೇಸ್ ಬುಕ್ ಗೊಡೆ ಕೊಳಕು ಟಾಯಲೆಟ್ ಗೊಡೆ ಆಗಿ ಬದಲಾಗುತ್ತಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...