Skip to main content

Blog number 1730. ಡಾಕ್ಟರ್ ಶ್ರೀಕಂಠ ಕೂಡಿಗೆ ಅವರಿಗೆ 76ನೇ ಹುಟ್ಟುಹಬ್ಬದ ಶುಭಾಶಯಗಳು.

#ಡಾ_ಶ್ರೀಕಂಠಕೂಡಿಗೆ_ಅವರಿಗೆ_ಹುಟ್ಟು_ಹಬ್ಬದ_ಶುಭಾಷಯಗಳು.

#ಅವರು_ಹುಟ್ಟಿದ_ದಿನಾಂಕ_5_ಸೆಪ್ಟೆಂಬರ್_1947.

#ಎಪ್ಪತ್ತಾರನೆ_ಹುಟ್ಟು_ಹಬ್ಬ.

#ಶಿವಮೊಗ್ಗ_ಜಿಲ್ಲೆಯ_ತೀರ್ಥಹಳ್ಳಿಯ_ಕೂಡಿಗೆ_ಊರಿನವರು.

#ಪದವಿ_ವಿದ್ಯಾರ್ಥಿಗಳಿಗೆ_ಕೂಡಿಗೆ_ಅವರ_ಪಾಠಗಳಿತ್ತು.

#ಕುವೆಂಪು_ವಿಶ್ವವಿದ್ಯಾಲಯ_ಶಿವಮೊಗ್ಗ_ಜಿಲ್ಲೆಗೆ_ತಂದವರು.

#ಆದರೆ_ಕುವೆಂಪು_ವಿವಿ_ಕುಲಪತಿ_ಆಗುವ_ಆರ್ಹತೆ_ಇದ್ದರೂ_ಕುಲಪತಿ_ಮಾಡಲಿಲ್ಲ.

#ವಾಮನವತಾರಿಯ_ಹಿನ್ನೆಲೆ_ನೋಡಿದರೆ_ವಿಶ್ವದರ್ಶನ

#ಅವರಿಗೆ_76ನೇ_ಹುಟ್ಟು_ಹಬ್ಬದ_ಶುಭಾಷಯಗಳನ್ನು_ಹೇಳೋಣ.


  ಡಾಕ್ಟರ್ ಶ್ರೀಕಂಠ ಕೂಡಿಗೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೂಡಿಗೆ ಊರಿನವರು ಮೈಸೂರು ವಿಶ್ವವಿದ್ಯಾಲಯದ ಕನ್ನಡ ಎಂ.ಎ, ಪಿ ಹೆಚ್ ಡಿ ಪದವೀದರರು, ಚಿನ್ನದ ಪದಕ ವಿಜೇತರರು ಶ್ರೀಯುತರು ಉತ್ತಮ ಪ್ರಾಧ್ಯಾಪಕರು, ಸೃಜನಶೀಲ ಲೇಖಕರು ಮತ್ತು ಪ್ರಸಿದ್ಧ ಜನಪದ ತಜ್ಞರು.
  ಕುವೆಂಪು ವಿಶ್ವವಿದ್ಯಾಲಯ ಶಿವಮೊಗ್ಗ ಜಿಲ್ಲೆಗೆ ತರಲು ಇವರ ವಿಶೇಷ ಪ್ರಯತ್ನವಿದೆ ನಂತರ ಕುವೆಂಪು ವಿಶ್ವವಿದ್ಯಾಲಯದ ಉಪಕುಲಪತಿ ಆಗೇ ಬಿಟ್ಟರು ಎಂಬ ಸುದ್ದಿ ಇತ್ತು ಆದರೆ ಜೆಲ್ಲೆಯ ರಾಜಕಾರಣಿಗಳು ಈ ಹುದ್ದೆಯನ್ನೆ ಮಾರಿಕೊಂಡರು.
    ಈ ವಿಚಾರದಲ್ಲಿ ಶ್ರೀಕಂಠ ಕೂಡಿಗೆಯವರನ್ನು ಗೌರವದಿಂದ ನಡೆಸಿಕೊಳ್ಳಲಿಲ್ಲ ಅವರ ಪ್ರತಿಭೆಗೆ, ಅವರು ಕುವೆಂಪು ವಿಶ್ವವಿದ್ಯಾಲಯ ಸ್ಥಾಪನೆಗೆ ಅವರು ಪಟ್ಟ ಶ್ರಮಕ್ಕೆ ಮತ್ತು ಶಿವಮೊಗ್ಗ ಜಿಲ್ಲೆಯವರೇ ಎಂಬುದಕ್ಕೆ ಮಾನ್ಯತೆ ನೀಡದ ನೋವು ಶ್ರೀಕಂಠ ಕೂಡಿಗೆ ಆಪ್ತರಲ್ಲಿ ಇದೆ.
   ಶ್ರೀಕಂಠ ಕೂಡಿಗೆ ಅವರ ಹಸ್ತಾಕ್ಷರ ಮುತ್ತುಗಳನ್ನು ಜೋಡಿಸಿದಂತೆ ಅತಿ ಸುಂದರ ಅನೇಕ ರಾಜ್ಯ ಮಟ್ಟದ ಪ್ರಶಸ್ತಿ ಇವರ ಕನ್ನಡ ಹಸ್ತಾಕ್ಷರಕ್ಕೆ ದೊರಕಿದೆ.
   ಪದವಿ ವಿದ್ಯಾರ್ಥಿಗಳಿಗೆ ಇವರು ಬರೆದ ಅನೇಕ ಪಠ್ಯಗಳು ಪ್ರಸಿದ್ಧಿ ಪಡೆದಿತ್ತು, ಕುವೆಂಪು ವಿವಿ ವ್ಯಾಪ್ತಿಯ ಎಲ್ಲಾ ವಿದ್ಯಾರ್ಥಿಗಳಿಗೆ, ಪ್ರಾಧ್ಯಾಪಕರಿಗೆ ಮತ್ತು ನೌಕರರ ವೃಂದಕ್ಕೆ ಇವರು ಚಿರಪರಿಚಿತರು.
   ಕುವೆಂಪು ವಿವಿಯ ಕನ್ನಡ ಅಧ್ಯಯನ ಸಂಸ್ಥೆ ಮತ್ತು ಪ್ರಸಾರಂಗದ ನಿದೇ೯ಶಕರಾಗಿ, ಸೆನೆಟ್ - ಸಿಂಡಿಕೇಟ್ - ಶಿಕ್ಷಣ ಮಂಡಳಿ ಸದಸ್ಯರಾಗಿ, ಡೀನ್ ಆಗಿ ಪರಿಕ್ಷಾಂಗದ ಕುಲ ಸಚಿವರಾಗಿದ್ದರು.
  ಕನಾ೯ಟಕ ಸಾಹಿತ್ಯ ಅಕಾಡೆಮಿ, ಕರ್ನಾಟಕ ರಾಜ್ಯ ಜಾನಪದ ಯಕ್ಷಗಾನ ಅಕಾಡೆಮಿ ನಿದೇ೯ಶಕರಾಗಿ, ಹಂಪಿ ಕನ್ನಡ ವಿವಿಯ ಆಡಳಿತ ಮಂಡಳಿ ಸದಸ್ಯರಾಗಿದ್ದರು.
  UGC/NET ಪರೀಕ್ಷಾ ಮಂಡಳಿ ಸದಸ್ಯರಾಗಿ, ದೆಹಲಿ ನ್ಯಾಷನಲ್ ಬುಕ್ ಟ್ರಸ್ಟ್ ಸದಸ್ಯರಾಗಿ, UPSC ಕನ್ನಡ ಪಠ್ಯ ರಚನಾ ಮಂಡಳಿ ಸದಸ್ಯರಾಗಿ, ಕೇಂದ್ರ ಸಾಹಿತ್ಯ ಅಕಾಡಮಿ ಸದಸ್ಯರೂ ಆಗಿದ್ದರು.
   ಕನ್ನಡ ಲಾವಣಿ ಮೇಲೆ ಪಿ .ಹೆಚ್.ಡಿ ಮಾಡಿದ್ದಾರೆ, 15 ಜನ ಎಂಪಿಲ್ ವಿದ್ಯಾರ್ಥಿಗಳಿಗೆ, 25 ಪಿ.ಹೆಚ್.ಡಿ. ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದರು.
   ಇವರ ವಿದ್ಯಾರ್ಥಿಗಳು ಮತ್ತು ಶಿಷ್ಯರು ಸೇರಿ ಬೇರೆ ಬೇರೆ ಸಂದರ್ಭದಲ್ಲಿ ಇವರಿಗಾಗಿ ಎರೆಡು ಅಭಿನಂದನಾ ಗ್ರಂಥ ಇವರಿಗೆ ಸಮರ್ಪಿಸಿದ್ದಾರೆ (ಕೂಡಿಗೆ ಮತ್ತು ಆರು ಮುನಿಸು).
  ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಸಾಹಿತ್ಯ ಅಕಾಡಮಿ ಗೌರವ, ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡಮಿಯ ಜಾನಪದ ತಜ್ಞ ಪ್ರಶಸ್ತಿ ಜೊತೆ ಅಸಂಖ್ಯಾತ ಸಂಘ ಸಂಸ್ಥೆಗಳು ರಾಜ್ಯದಾದ್ಯಂತ ಇವರಿಗೆ ನೀಡಿದ ಪ್ರಶಸ್ತಿಗಳ ದೊಡ್ಡ ಪಟ್ಟಿಯೇ ಇದೆ.
   ಶಿವಮೊಗ್ಗ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ, ತೀರ್ಥಹಳ್ಳಿಯಲ್ಲಿ ನಡೆದ ತಾಲ್ಲೂಕ್ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಯಶಸ್ಸಿಗೆ ಕಾರಣರಾಗಿದ್ದರು.
  ಬೆಳಗಾವಿಯ VTU ಪ್ರಸಾರಾಂಗದ ಸಲಹಾ ಮಂಡಳಿ ಸದಸ್ಯರಾಗಿ, ಕರ್ನಾಟಕ ಸರ್ಕಾರದ ಸಾರ್ವಜನಿಕ ಗ್ರಂಥಾಲಯ ಇಲಾಖೆ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಮಂಡಳಿ ಅಧ್ಯಕ್ಷರೂ ಆಗಿದ್ದರು.
   ಕುವೆಂಪು ವಿಶ್ವವಿದ್ಯಾಲಯದ ಎಂಟು ಪದವಿ ಕನ್ನಡ ಪುಸ್ತಕಗಳಿಗೆ ಪ್ರದಾನ ಸಂಪಾದಕರೂ ಆಗಿದ್ದರು.
  ಇನ್ನೂ ಬರೆದರೆ ಇನ್ನೂ ಕೆಲವು ಪುಟಗಳಾಗುವ ಇವರ ಸಾದನೆ ಇಲ್ಲಿಗೆ ಸಂಕ್ಷಿಪ್ತಗೊಳಿಸಿದ್ದೇನೆ ಮತ್ತು ಇಷ್ಟೆಲ್ಲಾ ಸಾದನೆಯ ಶ್ರೀಕಂಠ ಕೊಡಿಗೆ ಶಿವಮೊಗ್ಗ ಜಿಲ್ಲೆಯವರೆಂಬುದು ನನಗೆ ಹೆಮ್ಮೆ ಕೂಡ.
  ಪ್ರತಿಬೆ - ಅರ್ಹತೆ-ಯೋಗ್ಯತೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮೇರುಸ್ಥಾನದಲ್ಲಿರುವ 76 ನೇ ಹುಟ್ಟುಹಬ್ಬ ಆಚರಿಸುತ್ತಿರುವ ಆತ್ಮೀಯ ಶ್ರೀಕಂಠ ಕೂಡಿಗೆ ಅವರಿಗೆ ಶುಭ ಹಾರೈಕೆಗಳನ್ನು ಮುಂಗಡವಾಗಿ ಹಾರೈಸುತ್ತೇನೆ ಮತ್ತು ದೇವರು ಅವರಿಗೆ ಆರೋಗ್ಯ ಆಯಸ್ಸು ದಯಪಾಲಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
   ನೀವೂ ಈ ಮಹನೀಯರಿಗೆ ಹುಟ್ಟು ಹಬ್ಬದ ಶುಭಾಶಯ ಸಂದೇಶಗಳನ್ನ ಅವರ ಸೆಲ್ ಫೋನ್ ನಂಬರ್  94483 30036 ಗೆ ಕಳಿಸಬಹುದಾಗಿದೆ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ