Skip to main content

Blog number 1731. ಪ್ರವಾಸಿ ಕಂಡ ಇಂಡಿಯಾ ಬರೆದ ಜನಪದ ಲೋಕ ನಿರ್ಮಾತೃ ಹೆಚ್.ಎಲ್.ನಾಗೇಗೌಡರು ಶಿವಮೊಗ್ಗ ಜಿಲ್ಲಾಧಿಕಾರಿಗಳಾಗಿದ್ದರು.

ಪ್ರತಿಯೊಬ್ಬ ಕನ್ನಡಿಗನೂ ಓದಲೇ ಬೇಕಾದ ನಮ್ಮ ಇತಿಹಾಸ ಪ್ರವಾಸಿ ಕಂಡ ಇಂಡಿಯಾ ಪುಸ್ತಕ ಇದನ್ನು ಬರೆದವರು ಹೆಚ್. ಎಲ್.ನಾಗೇಗೌಡರು ... ಸದ್ಯದಲ್ಲೇ ಪ್ರಕಟವಾಗಲಿರುವ ಆನಂದಪುರಂ - ಇತಿಹಾಸ ಪುಸ್ತಕದಲ್ಲಿ ಈ ವಿವರ ದಾಖಲಾಗಿದೆ.

#ಭಾಗ_60.
#ಆನಂದಪುರಂ_ಇತಿಹಾಸ.

#ಪ್ರವಾಸಿ_ಕಂಡ_ಇಂಡಿಯಾ_ಬರೆದವರು

#ಜನಪದ_ಲೋಕ_ನಿರ್ಮಿಸಿದ_ಹೆಚ್_ಎಲ್_ನಾಗೇಗೌಡರು .

#1963ರಲ್ಲಿ_ಶಿವಮೊಗ_ಜಿಲ್ಲಾದಿಕಾರಿಗಳು.

#ಇವರು_ಆನಂದಪುರಂ_ಚಂಪಕಸರಸ್ಸು_ಅನೇಕ_ಬಾರಿ_ಸಂದರ್ಶಿಸಿದ್ದರು.

#ಇವರು_ಬರೆದ_ಪುರಾತನ_ಕಾಲದಿಂದ_18ನೇ_ಶತಮಾನದವರೆಗಿನ_ಭಾರತ_ಇತಿಹಾಸ_ಪ್ರವಾಸಿ_ಕಂಡ_ಇಂಡಿಯಾ .

#ಮೈಸೂರು_ವಿಶ್ವವಿದ್ಯಾಲಯದಿಂದ_ಪ್ರಕಟ

#ಕುವೆಂಪು_ಪ್ರದಾನ_ಸಂಪಾದಕರು.

 
  ಹೆಚ್.ಎಲ್.ನಾಗೇಗೌಡರು ಕನ್ನಡ ಭಾಷೆಗೆ ಅನುವಾದಿಸಿದ ವಿದೇಶಿ ಪ್ರವಾಸಿಗಳ ಪತ್ರ, ದಿನಚರಿಗಳ  ಸುಮಾರು 4000 ಪುಟಗಳ 8 ಸಂಪುಟಗಳು ಅತ್ಯುತ್ತಮ ಇತಿಹಾಸದ ಪುಸ್ತಕಗಳು.
  ಕುವೆಂಪು ಸಂಪಾದಕತ್ವವೂ ಇದಕ್ಕೆ ಇದೆ, ಐಬಿಹೆಚ್ ಪ್ರಕಾಶನ 1972 ರಲ್ಲಿ ಮೊದಲ ಮುದ್ರಣ ಮಾಡಿತ್ತು ಅಪಾರ ಬೇಡಿಕೆಯಿಂದ 2007ರಲ್ಲಿ ಪುನರ್ ಮುದ್ರಣ ಮಾಡಿದ್ದಾರೆ.
  ಈ ಸಂಪುಟಗಳ ವಿಶೇಷ ಅಂದರೆ ಕ್ರಿ.ಪೂ 3000 ದಿಂದ ಮೂರು ಹಂತಗಳಲ್ಲಿ ಭಾರತದ ಇತಿಹಾಸ ವಿಂಗಡಿಸಿ ಬರೆದಿದ್ದಾರೆ.
  #ಪ್ರಾಚೀನ_ಭಾರತದ_ಇತಿಹಾಸ
ಪುರಾತನ ಕಾಲದಿಂದ 12 ನೇ ಶತಮಾನದ ವರೆಗಿನದ್ದು 
#ಮಧ್ಯಕಾಲ_ಇತಿಹಾಸ
13 ನೇ ಶತಮಾನದಿಂದ 18ನೇ ಶತಮಾನದವರೆಗೆ
#ಆದುನಿಕ_ಇತಿಹಾಸ
18ನೇ ಶತಮಾನದಿಂದ ಈವರೆಗಿನದ್ದು
 ಈ ಎಂಟು ಸಂಪುಟಗಳು ಓದಿದರೆ ಭಾರತದ ಇತಿಹಾಸದ ಸಂಪೂರ್ಣ ಜ್ಞಾನ ಲಭ್ಯವಿದೆ, ಅವರು ದಾಖಲೆ ಮಾಡುತ್ತಾ ಹೋಗಿರುವ ಕ್ರಮ ಓದಲು ಶುರು ಮಾಡಿದರೆ ಎಂಟು ಸಂಪುಟವೂ ರಾತ್ರಿ ಹಗಲೆನ್ನದೆ ಓದಿ ಮುಗಿಯುವವರೆಗೆ ಮುಂದುವರಿಯುವುದಷ್ಟೆ ಅಲ್ಲ ಪುನಃ ಪುನಃ ಓದುವ ಮನಸ್ಸು ಆಗುತ್ತದೆ.
  ಕನ್ನಡದ ಇತಿಹಾಸ ಸಂಶೋದಕರು ಈ ಗ್ರಂಥಗಳನ್ನು ಓದದಿದ್ದರೆ ಅವರ ಸಂಶೋದನ ಜ್ಞಾನ ಪೂರ್ಣ ಆಗಲಾರದು.
  ಹೆಚ್.ಎಲ್.ನಾಗೇಗೌಡರು ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಹೆರಗಾನಹಳ್ಳಿಯಲ್ಲಿ 22- ಸೆಪ್ಟೆಂಬರ್ -1915 ರಲ್ಲಿ ಜನಿಸಿ 2005 ರಲ್ಲಿ ಇಹಲೋಕ ತ್ಯಜಿಸಿದರು.
  ವಿಜ್ಞಾನ ಮತ್ತು ಕಾನೂನು ಪದವೀದರಾಗಿ 1940 ರಲ್ಲಿ ಮೈಸೂರು ಸಿವಿಲ್ ಸರ್ವಿಸ್ ಪಾಸ್‌ ಮಾಡಿದರು, 1963 ರಲ್ಲಿ ಶಿವಮೊಗ್ಗ ಜಿಲ್ಲಾದಿಕಾರಿಗಳಾಗಿ ಸೇವೆ ಸಲ್ಲಿಸುವ ಸಂದರ್ಭದಲ್ಲಿ ಆನಂದಪುರಂ ನ ಕೋಟೆ, ಕೆಳದಿ ರಾಜ ವೆಂಕಟಪ್ಪ ನಾಯಕರು ತಮ್ಮ ದುರಂತ ಪ್ರೇಮ ಕಥೆಯ ರಾಣಿ ಚಂಪಕಾ ಸ್ಮರಣೆಗಾಗಿ ನಿಮಿ೯ಸಿದ #ಚಂಪಕ_ಸರಸ್ಸು ವಿಗೆ ಅನೇಕ ಬಾರಿ ಸಂದರ್ಶಿಸುತ್ತಾರೆ. ಅವರ ಪ್ರಯತ್ನದಿಂದ ಪ್ರಾಚ್ಯ ವಸ್ತು ಸಂಶೋದನ ಇಲಾಖೆಯಿಂದ ಇಲ್ಲಿಗೆ ಬೋರ್ಡ್ ಅಳವಡಿಸಿ ಕೆಲಕಾಲ ಕಾವಲುಗಾರರನ್ನು ನೇಮಿಸುತ್ತಾರೆ.
  ಮಂಡ್ಯ ಜಿಲ್ಲೆಯಲ್ಲಿನ ರಾಮನಗರದಲ್ಲಿ ಇವರು 1986ರಿಂದ ಕೆಲಸ ಪ್ರಾರಂಬಿಸಿ 1994 ರಲ್ಲಿ ಲೋಕಾರ್ಪಣೆ ಮಾಡಿಸಿದ #ಜನಪದ_ಲೋಕ ಜನಪದ ಕಲೆಯ ಸಂಸ್ಕೃತಿಯ  ಅತಿದೊಡ್ಡ ಮ್ಯೂಸಿಯಂ ಆಗಿದೆ.
  1979 ರಲ್ಲಿ ಇವರೇ ಜನಪದ ಪರಿಷತ್ ಸ್ಥಾಪಿಸುತ್ತಾರೆ.
 ಗಾಂಧೀಜಿಯವರು ದೇಶ ಭಾಷೆಯಲ್ಲಿಯೇ ಶಿಕ್ಷಣ ನೀಡಬೇಕೆಂಬ ಕರೆಯನ್ನು ಮೈಸೂರು ವಿಶ್ವವಿದ್ಯಾಲಯ ದೇಶದಲ್ಲೇ ಮೊದಲನೆಯದಾಗಿ ಪ್ರಾದೇಶಿಕ ಬಾಷೆಗೆ ಅಗ್ರಸ್ಥಾನ ನೀಡುವ ದ್ವಿಭಾಷಾ ಸೂತ್ರ ಅಂಗಿಕರಿಸಿ ಅಗ್ರಸ್ಥಾನದಲ್ಲಿರುವ ಸಂದರ್ಭದಲ್ಲಿ ಹೆಚ್.ಎಲ್.ನಾಗೇಗೌಡರ ಈ ಗ್ರಂಥಗಳಿಗೆ ಕುವೆಂಪು ಪ್ರದಾನ ಸಂಪಾದಕರಾಗಿ ಪ್ರಕಟನೆ ಮಾಡಿರುವುದು ಕನ್ನಡಿಗರಿಗೆ ಅತಿ ದೊಡ್ಡ ಆಸ್ತಿ.
  ಹೆಚ್.ಎಲ್.ನಾಗೇಗೌಡರು 1963 ರಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಆನಂದಪುರಂನ ಕೆಳದಿ ರಾಜರ ಕೋಟೆ, ಚಂಪಕ ಸರಸ್ಸು ಬೇಟಿ ಮಾಡಿದ್ದು ನಮಗೆಲ್ಲ ಹೆಮ್ಮೆಯ ವಿಷಯ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ