Skip to main content

Blog number 1737. ಭಾರತೀಯ ಚಂದ್ರಯಾನ 3 ರ ಸಂದಭ೯ದಲ್ಲಿ 54 ವರ್ಷಗಳ ಹಿಂದೆ ಅಮೇರಿಕಾ ಮೊದಲ ಮಾನವ ಚಂದ್ರನ ಮೇಲೆ ಇಳಿಸಿದ ಬಿಬಿಸಿ ವೀಕ್ಷಕ ವಿವರಣೆ ಕೇಳಿದ ನೆನಪು

#ಮೊದಲ_ಮಾನವ_ಚಂದ್ರ_ಯಾನದ_ರೇಡಿಯೋ_ವೀಕ್ಷಕ_ವಿವರಣೆ_ಕೇಳಿದ_ನೆನಪು 

#ಭಾರತದ_ಚಂದ್ರಯಾನ_3ರ_ಯಶಸ್ಸಿನ_ಸಮಯದಲ್ಲಿ

#ಮಾನವ_ಚಂದ್ರನ_ಮೇಲೆ_ಇಳಿದದ್ದು_ನಂಬಲಾರದ_ದಿನಗಳು.

#ಚಂದ್ರನ_ಮೇಲೆ_ಅಮೇರಿಕಾ_ದ್ವಜ_ಸ್ಪಷ್ಟವಾಗಿ_ಕಾಣುವಂತೆ_ಪೋಟೋ_ಎಡಿಟ್_ಮಾಡಿದ್ದರು.


 ನಾನು ಹುಟ್ಟಿದ ದಿನಾ೦ಕ 9 ಪೆಬ್ರವರಿ 1965.
   ಅವತ್ತು 20 ಜುಲೈ 1969 ಭಾರತೀಯ ಕಾಲಮಾನ ರಾತ್ರಿ 1.47 ಕ್ಕೆ ನೀಲ್ ಆಮ್೯ ಸ್ಟ್ರಾ೦ಗ್ ಚಂದ್ರನ ಮೇಲೆ ಮೊದಲ ಹೆಜ್ಜೆ ಊರಿದ ಮೊದಲ ಮಾನವ ಇವರನ್ನ ಚಂದ್ರಲೋಕಕ್ಕೆ ಕರೆದೊಯ್ದ ಅಂತರಿಕ್ಷ ನೌಕೆ ಅಪೋಲೋ 11. ಆದರೆ ಅವತ್ತು ನನ್ನ ವಯಸ್ಸು 4  ವಷ೯ 5 ತಿಂಗಳು 14 ದಿನ ನನಗೆ ಇದೆಲ್ಲ ಮಾಹಿತಿ ಅವತ್ತು ಇರಲಿಲ್ಲ.
  ಬಿದನೂರು ನಗರದ ದೇವಗಂಗೆ ನನ್ನ ತಾಯಿ ತವರೂರೂ, ನನ್ನ ದೊಡ್ಡಮ್ಮನ ಮನೆ. ಅವತ್ತು ನಾವೆಲ್ಲ ನಮ್ಮ ತಾಯಿಯೊ೦ದಿಗೆ ಅಲ್ಲಿದ್ದೆವು, ಈ ಮಾನವ ಚಂದ್ರ ಯಾನದ ಬಗ್ಗೆ ತಿಳಿಯಲೆಂದೆ ನಮ್ಮಣ್ಣ ನಾಗರಾಜ್ ನಮ್ಮ ಮನೆ ಆನಂದಪುರದ ಯಡೇಹಳ್ಳಿಯ ಮನೆಯಿಂದ ರೇಡಿಯೋ ತಂದಿದ್ದ.
  ದೇವಗಂಗೆಯ ದೊಡ್ಡಮ್ಮನ ಮನೆಯ ಎತ್ತರದ ಕಟಾ೦ಜನದಲ್ಲಿ ( ವಿದ್ಯುತ್ ಸಂಪಕ೯ ಇಲ್ಲದ ಆ ದಿನಗಳಲ್ಲಿ) ನಡು ರಾತ್ರಿ ನಮಗೆ ಅಥ೯ ಆಗದ ಇಂಗ್ಲೀಷ್ ಭಾಷೆಯ BBC ವೀಕ್ಷಕ ವಿವರಣೆ ಕೇಳುತ್ತಾ ನಮ್ಮಣ್ಣ ವಿಜಯೋತ್ಸವದ ಕೇಕೆ ಹಾಕಿ ನಮಗೆಲ್ಲ ಚಂದ್ರನ ಮೇಲೆ ಮನುಷ್ಯ ಇಳಿದ ಅಂದಾಗ ನಂಬಲು ಸಾಧ್ಯವೇ ಆಗಲಿಲ್ಲ.
 ಸ್ವಲ್ಪ ಹೊತ್ತಲ್ಲಿ ಬಿದನೂರು ನಗರಕ್ಕೆ ಹೋಗಿದ್ದ ದೇವಗಂಗೆಯ ಯುವ ಪಡೆ ನಮ್ಮ ದೊಡ್ಡಣ್ಣ ಮಂಜುನಾಥರನ್ನ ಬಿಡಲು ಬಂದಿತ್ತು, ಅವರಲ್ಲಿ ಪಕೀರಣ್ಣ, ಜಗ್ಗಣ್ಣ ಮತ್ತು ಚಂದ್ರ ಶೆಟ್ಟರ ನೆನಪಿದೆ ಈಗಿನ ಜ್ಞಾನದಂತೆ ಅವರೆಲ್ಲ ಯುವಕರು ಮಧ್ಯಪಾನ ಮಾಡಿ ಬಂದವರು ಅವರಿಗೆ ನಾವೆಲ್ಲ ಸರಿ ರಾತ್ರಿಯಲ್ಲಿ ಮಲಗದೆ ರೇಡಿಯೋ ಆಲಿಸುವುದು ಅಚ್ಚರಿ ಆಯಿತು.
 ನಮ್ಮಣ್ಣ ಚಂದ್ರನ ಮೇಲೆ ನೀಲ್ ಆಮ್೯ ಸ್ಟ್ರಾ೦ಗ್ ಇಳಿದ ಸುದ್ದಿ ಹೇಳಿದ, ಇವತ್ತು ನನಗೆ ನೆನಪಿದೆ ಆ ಯುವ ಪಡೆ ಇದನ್ನ ನಂಬಲೇ ಇಲ್ಲ ಇದಲ್ಲ ಸುಳ್ಳು, ಚಂದ್ರಲೋಕ ಅಂದರೆ ದೇವರ ಲೋಕ ಅಲ್ಲಿ ಮನುಷ್ಯ ಹೋಗಲು ಸಾಧ್ಯವೇ ಇಲ್ಲ ಅಂತ ವಾದಿಸಿದ್ದು!?.
 ಅವರೆಲ್ಲ ಅವರ ಮನೆಗೆ ಹೋದ ನಂತರ ಬೆಳಗಾದಾಗ 2ನೇ ವ್ಯಕ್ತಿ ಆಲ್ಡ್ರೀನ್ ಚ೦ದ್ರನ ಮೇಲೆ ಇಳಿದರೆಂದು ನಮಗೆ ಬುದ್ಧಿ ಬಂದ ವಯಸಲ್ಲಿ ಗೊತ್ತಾಯಿತು.
  ಸುಮಾರು 54 ವಷ೯ದ ನಂತರ ಭಾರತದ ಚಂದ್ರಯಾನ 3ರ ದಿನ ಇದೆಲ್ಲ ನೆನಪಾಯಿತು.
 ಇವತ್ತು ಚಂದ್ರನ ಮೇಲೆ ಗಾಳಿ ಇಲ್ಲ ಅಮೇರಿಕಾ ಧ್ವಜ ಹೇಗೆ ಹಾರುತ್ತಿದೆ ಎಂದು ಚಂದ್ರಯಾನ ಪ್ರಶ್ನೆ ಮಾಡುವವರೂ ಇದ್ದಾರೆ!
(ಧ್ವಜ ಹಾರುವುದಿಲ್ಲ ಅಲ್ಲಿ ನಿವಾ೯ತ ಪ್ರದೇಶ ಎಂದು ಪ್ರಾಥಮಿಕ ಜ್ಞಾನ ಇರುವ ವಿಜ್ನಾನಿಗಳು ಧ್ವಜ ಸ್ಪಷ್ಟವಾಗಿ ಕಾಣಲು ಬೇರೆ ವ್ಯವಸ್ಥೆ ಮಾಡಿದ್ದಾರೆಂದು ಹೇಳುತ್ತಾರೆ)

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ