Skip to main content

Blog number 1747. ಮಹಾತ್ಮಾ ಗಾಂಧೀಜಿ ಶಿವಮೊಗ್ಗದಲ್ಲಿ ಒಂದು ವಾರ ತಂಗುತ್ತಾರೆ ಇವರನ್ನು ಶಿವಮೊಗ್ಗಕ್ಕೆ ಕರೆ ತಂದವರು ಆ ಕಾಲದ ಖ್ಯಾತ ವಕೀಲರಾದ ವೆಂಕಟಸುಬ್ಬಾ ಶಾಸ್ತ್ರೀಗಳು.

#ಮಹಾತ್ಮಾಗಾಂಧೀಜಿ_ಶಿವಮೊಗ್ಗ_ಜಿಲ್ಲಾ_ಪ್ರವಾಸದ_ವಿವರ.

#ಶಿವಮೊಗ್ಗದಲ್ಲಿ_ದಿನಾಂಕ_14_ಆಗಸ್ಟ್_1927ರಲ್ಲಿ_ಸಾವ೯ಜನಿಕ_ಸಭೆ_ನಡೆಸುತ್ತಾರೆ.

#ಈ_ದಿನಾಂಕಕ್ಕೆ_ಸರಿಯಾಗಿ_20_ವರ್ಷದ_ನಂತರ_ದೇಶ_ಸ್ವಾತಂತ್ರ_ಪಡೆಯಿತು.

#ಗಾಂಧೀಜಿ_ಶಿವಮೊಗ್ಗ_ಜಿಲ್ಲೆಗೆ_ಕರೆತಂದವರು_ಖ್ಯಾತ_ವಕೀಲರಾದ_ವೆಂಕಟಸುಬ್ಬ_ಶಾಸ್ತ್ರಿಗಳು

#ಗಾಂಧೀಜಿ_ಸಾರ್ವಜನಿಕ_ಸಭೆ_ನಡೆಸಿದ_ಸ್ಥಳ_ಗಾಂಧೀ_ಪಾರ್ಕ್_ಆಗಿದೆ.

#ಗಾಂಧೀಜಿ_ಶಿವಮೊಗ್ಗ_ಬೇಟಿ_ಸ್ಮರಣೆಗಾಗಿ_ಪುರ_ಪ್ರಮುಖರು
#ಮುಖ್ಯ_ವ್ಯಾಪಾರಿ_ಕೇಂದ್ರಕ್ಕೆ_ಗಾಂಧೀಬಜಾರ್_ಎಂದು_ನಾಮಕರಣ_ಮಾಡುತ್ತಾರೆ

#ಗಾಂಧೀ_ದಂಪತಿ_ತಂಗಿದ್ದ_ನ್ಯಾಷನಲ್_ಲಾಡ್ಜ್_ಎದುರು_ಎರೆಡು_ತೆಂಗಿನ_ಸಸಿ_ಗಾಂದೀಜಿ_ಮತ್ತು_ಕಸ್ತೂರಬಾ_ನೆಡುತ್ತಾರೆ.

#ಭದ್ರಾವತಿಯಲ್ಲಿ_ಲಂಬಾಣಿ_ಮಹಿಳಾ_ಸಮಾವೇಶ_ನಡೆಸುತ್ತಾರೆ.

#ಆನಂದಪುರಂ_ಸಾಗರ_ಬಿದನೂರುನಗರ_ತೀರ್ಥಹಳ್ಳಿಗಳಿಗೂ_ಬೇಟಿ_ನೀಡುತ್ತಾರೆ..

#ಜಿಲ್ಲೆಯ_ಈಗಿನ_ತಲೆಮಾರಿಗೆ_ಗಾಂಧೀಜಿ_ಶಿವಮೊಗ್ಗ_ಜಿಲ್ಲಾ_ಪ್ರವಾಸದ_ಮಾಹಿತಿ.

     ಶಿವಮೊಗ್ಗದ ಖ್ಯಾತ ವಕೀಲರಾದ ವೆಂಕಟ ಸುಬ್ಬ ಶಾಸ್ತ್ರೀ 1924ರ ಬೆಳಗಾವಿ ಅಧಿವೇಷನದಲ್ಲಿ ಗಾಂಧೀ ಅವರ ಪ್ರಭಾವದಿಂದ ಗಾಂಧೀಜಿಯವರನ್ನು ಶಿವಮೊಗ್ಗಕ್ಕೆ ಕರೆ ತರುವ ಸತತ ಪ್ರಯತ್ನ 1927 ರಲ್ಲಿ ಈಡೇರುತ್ತದೆ.
  ಶಿವಮೊಗ್ಗದ ನ್ಯಾಷನಲ್ ಲಾಡ್ಜ್ (ಶಿವಮೊಗ್ಗದ ಕೇಂದ್ರ ಅ0ಚೆ ಇಲಾಖೆ ಎದರು ನಂತರ ಅದು ಬೃಂದಾವನ ಹೋಟೆಲ್ ಆಗಿತ್ತು) ನಲ್ಲಿ ಒಂದು ವಾರ ಗಾಂದೀಜಿ ಮತ್ತು ಕಸ್ತೂರ ಬಾ ದಂಪತಿಗಳು ತಂಗುತ್ತಾರೆ.
  ವೆಂಕಟಸುಬ್ಬ ಶಾಸ್ತ್ರೀಗಳ ಕಾರಿನಲ್ಲಿ ಗಾಂಧೀ ದಂಪತಿಗಳು ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಡುತ್ತಾರೆ.
 ಈ ಅವಧಿಯಲ್ಲಿ ಆನಂದಪುರಂ, ಸಾಗರ (16- ಆಗಸ್ಟ್ - 1927), ನಗರ - ತೀರ್ಥಹಳ್ಳಿ - ಭದ್ರಾವತಿ ಪ್ರವಾಸ ಮಾಡುತ್ತಾರೆ ಇದೇ ದಿನ ಸಂಜೆ ಭದ್ರಾವತಿಯಲ್ಲಿ ಲಂಬಾಣಿ ಮಹಿಳೆಯರ ಸಮಾವೇಶದಲ್ಲಿ ಪಾಲ್ಗೊಂಡು ಹಿತವಚನ ಬೋದಿಸುತ್ತಾರೆ.
  14 ಆಗಸ್ಟ್ 1927 ರಲ್ಲಿ ಶಿವಮೊಗ್ಗದ ಉದ್ಯಾನವನದಲ್ಲಿ ಸ್ವಾತಂತ್ರ್ಯದ ಮಹತ್ವ ತಿಳಿಸುವ ಗಾಂಧೀಜಿಯವರ ಸಾರ್ವಜನಿಕ ಸಭೆ ನಡೆಯುತ್ತದೆ ಇದರ ಸ್ಮರಣೆಗಾಗಿ  ಈ ಉದ್ಯಾನವನಕ್ಕೆ #ಗಾಂಧೀ_ಪಾರ್ಕ್  ಎ೦ಬ ಹೆಸರು ಇಡಲಾಗುತ್ತದೆ.
   ಗಾಂಧೀಜಿ ಶಿವಮೊಗ್ಗಕ್ಕೆ ಬಂದ ನೆನಪಿಗಾಗಿ ಪ್ರಮುಖ ವ್ಯಾಪಾರಿ ಕೇಂದ್ರಕ್ಕೆ #ಗಾಂಧೀ_ಬಜಾರ್ ಎಂದು ನಾಮಕರಣ ಮಾಡಲಾಗಿದೆ.
  ಗಾಂಧೀಜಿ ತಂಗಿದ್ದ ನೆನಪಿಗಾಗಿ ನ್ಯಾಷನಲ್ ಲಾಡ್ಜ್ ಮಾಲಿಕರು ಲಾಡ್ಜ್ ಎದರು ಎರೆಡು ತೆಂಗಿನ ಸಸಿ ಗಾಂದೀಜಿ ಮತ್ತು ಕಸ್ತೂರ ಬಾ ರಿಂದ ನೆಡೆಸಿದ್ದರು.
  ಗಾಂಧೀಜಿ ಶಿವಮೊಗ್ಗದಲ್ಲಿ ಗಾಂಧೀ ಪಾರ್ಕಿನಲ್ಲಿ 14 - ಆಗಸ್ಟ್ - 1927 ರ ಸಭೆ ನಡೆಸಿದ ಇಪ್ಪತ್ತು ವರ್ಷಕ್ಕೆ ಸರಿಯಾಗಿ ಅಂದರೆ 14- ಆಗಸ್ಟ್ - 1947 ರ ರಾತ್ರಿ ದೇಶಕ್ಕೆ ಸ್ವಾತಂತ್ರ್ಯ ಲಭಿಸಿತು.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ