Skip to main content

Blog number 1749. ಗಿಣಿವಾರದ ನರಹಂತಕ ಆನೆ ಕೆಲವು ದಶಕದಿಂದ ಆಗುಂಬೆ ಭಾಗದಲ್ಲಿ ಪ್ರತಿ ವರ್ಷ ಕಾಣಿಸುತ್ತಿದೆ ಜನರು ತಮ್ಮ ಸೆಲ್ ಫೋನಿನಲ್ಲಿ ಸೆರೆ ಹಿಡಿದ ಈ ಆನೆಯ ಚಿತ್ರ.

#ಗಿಣಿವಾರದ_ನರ_ಹಂತಕ_ಆನೆ.

#ಸಾಗರ_ತಾಲ್ಲುಕಿನ_ಆವಿನಹಳ್ಳಿ_ಗಿಣಿವಾರದಲ್ಲಿ_ಮಹಿಳೆಯ_ಕೊಂದ_ಕಾಡಾನೆ.

#ಇವತ್ತಿಗೂ_ತೀರ್ಥಹಳ್ಳಿಯ_ಆಗು೦ಬೆ_ಭಾಗದಲ್ಲಿ_ಆಗಾಗ್ಗೆ_ಕಾಣಿಸುತ್ತಾ_ಜನರಲ್ಲಿ_ಆತಂಕ_ಸೃಷ್ಟಿಸುತ್ತಿದೆ.

#ಆನೆ_ಸೆರೆಹಿಡಿಯಲಾಗದಿದ್ದರೂ_ಜನರು_ತಮ್ಮ_ಸೆಲ್_ಪೋನಿನಲ್ಲಿ_ಸೆರೆ_ಹಿಡಿದಿದ್ದಾರೆ.

#ಈ_ಒಂಟಿ_ಆನೆಯ_ಸಂಚಾರದ_ಮಾಗ೯_ವಿಶಿಷ್ಟ.

#ಶಿವಮೊಗ್ಗ_ಜಿಲ್ಲೆಯ_ಅರಸಾಳಿನಲ್ಲಿ_ಆ_ಕಾಲದ_ಆನೆ_ಖೆಡ್ಡಾದಲ್ಲಿ_ಕಾಡಾನೆ_ಹಿಡಿದ_ಪ್ರಕರಣ.

 ಶಿವಮೊಗ್ಗ ಜಿಲ್ಲೆ ಈ ಸಾರಿ ಸರ್ಕಾರದ ಲೆಖ್ಖದಲ್ಲಿ ಬರ ಪೀಡಿತ ಎಂದು ಘೋಷಣೆ ಆಗಿದೆ ಹಾಗಂತ ಪ್ರತಿ ಮುಂಗಾರಿನಲ್ಲಿ ಹೆಚ್ಚು ಮಳೆ ಸುರಿಯುವುದು ಶಿವಮೊಗ್ಗ ಜಿಲ್ಲೆಯ ಸಾಗರ - ಹೊಸನಗರ- ತೀರ್ಥಹಳ್ಳಿ ಭಾಗದಲ್ಲಿ ಮಾತ್ರ.
   ಮಲೆನಾಡು ಕ್ಷೀಣಿಸುತ್ತಿದೆ ಬಯಲು ಸೀಮೆ ವಿಸ್ತರಿಸುತ್ತಾ ಬಂದಿದೆ, 1995ರಲ್ಲಿ ಕುಂಸಿ ಭಾಗದಲ್ಲಿ ಮಳೆ ಕಡಿಮೆ ಆಗುತ್ತಿದ್ದು ಈಗ ಚೋರಡಿ ದಾಟಿದೆ ಮುಂದಿನ 30 ವರ್ಷದಲ್ಲಿ ಆನಂದಪುರ೦ ಬಯಲು ಸೀಮೆ ಆಗಬಹುದು ಎಂಬ ಅನುಮಾನ ಇದೆ.
   #ಇದು_ಮಲೆನಾಡಿನ_ಎಲ್ಲಾ_ಹಳ್ಳಿಗಳ_ಕಥೆ.
 ಶಿವಮೊಗ್ಗ ಜಿಲ್ಲೆಯ ಭದ್ರಾ ಅಭಯಾರಣ್ಯದಲ್ಲಿ ಇವತ್ತಿಗೂ ಕಾಡಾನೆಗಳು ಅವುಗಳ ಕಾರಿಡಾರ್ ಇದೆ, ಶರಾವತಿ ಅಭಯಾರಣ್ಯದಲ್ಲಿ ಶರಾವತಿ ನದಿಗೆ ಆಣೆಕಟ್ಟು ಕಟ್ಟಿದ ನಂತರ ಕಾಡಾನೆಗಳು ಇಲ್ಲ.
  ಆದರೆ ಒಂದು ಒಂಟಿ ಸಲಗ ತೀರ್ಥಹಳ್ಳಿಯ ಆಗು೦ಬೆ ಭಾಗದಲ್ಲಿ ಪ್ರತಿ ವರ್ಷ ನಿಗದಿತ ಸಮಯದಲ್ಲಿ ಜನವಸತಿ ಕೇಂದ್ರಗಳಲ್ಲಿ ಕಾಣಿಸುಕೊಳ್ಳುತ್ತಾ ಆ ಭಾಗದಲ್ಲಿನ ಜನರಲ್ಲಿ ಭಯ - ಆತಂಕ ಸೃಷ್ಟಿಸಿದೆ.
   ಕೆಲವು ವರ್ಷದ ಹಿಂದೆ ಸಾಗರ ತಾಲ್ಲೂಕಿನ ಗಿಣಿವಾರ ಎಂಬ ಗ್ರಾಮದಲ್ಲಿ ಈ ಆನೆ ಕಾಣಿಸಿಕೊಂಡಾಗ ಗ್ರಾಮಸ್ಥರು ಒಂದು ರಾತ್ರಿ  ಕಾಡಾನೆಯ ಉಪಟಳ ನಿವಾರಿಸಲು ಸಭೆ ಆಯೋಜಿಸಿದ್ದರು ಅದಕ್ಕೆ ಭಾಗವಹಿಸಲು ಕೃಷಿ ಕಾರ್ಮಿಕ ಮಹಿಳೆ ರಾತ್ರಿಯ ಅಡುಗೆ ಮಾಡಿ ಮನೆಯಿಂದ ಹೊರಬಂದಾಗ ಈ ಕಾಡಾನೆ ಆ ಮಹಿಳೆಯನ್ನು ಹತ್ಯೆ ಮಾಡಿತ್ತು.
  ಸಾಗರ ಹೊಸನಗರ ತಾಲ್ಲೂಕಿನ ಜನರಿಗೆ ಇದು ಅಘಾತಕಾರಿ ಸುದ್ದಿ ಏಕೆಂದರೆ ಕಳೆದ ನೂರು ವರ್ಷದಲ್ಲಿ ಈ ಭಾಗದಲ್ಲಿ. ಆನೆ ಹಾವಳಿಗೊತ್ತಿಲ್ಲದವರು.1970 ರಲ್ಲಿ ಅರಸಾಳು ಭಾಗದಲ್ಲಿ ಒ0ದು ಕಾಡಾನೆ ಉಪಟಳ ಹೊರತು ಪಡಿಸಿ.
  ಅರಸಾಳು ಭಾಗದಲ್ಲಿ ಉಪಟಳ ನೀಡುತ್ತಿದ್ದ ಕಾಡಿನ ಆನೆ ಒಂದನ್ನು ಹಿಡಿಯಲು ಸರ್ಕಾರ ಆ ಕಾಲದ ಆನೆ ಖೆಡ್ಡಾ ನಿಮಿ೯ಸಿ ಕಾಡಾನೆ ಹಿಡಿಯಲು ಯಶಸ್ವಿ ಆದರೂ ಕಾಡಾನೆ ಬದುಕುಳಿಯಲಿಲ್ಲ.
  ಈಗೆಲ್ಲ ಈ ರೀತಿ ಜನರಿಗೆ ಉಪಟಳ ನೀಡುವ ಕಾಡಾನೆ ಹಿಡಿಯಲು ವ್ಯೆಜ್ಞಾನಿಕವಾದ ದಾರಿಗಳಿದೆ.
  ಗಿಣಿವಾರದ ನರಹಂತಕ ಮಾತ್ರ ಸರ್ಕಾರದ ಅರಣ್ಯ ಇಲಾಖೆಗೆ ಚಳ್ಳೆಹಣ್ಣು ತಿನ್ನಿಸಿ ವೀರಪ್ಪನಂತೆ ಒಂಟಿಯಾಗಿ ಮಲೆನಾಡಿನಲ್ಲಿ ಆತಂಕ ಸೃಷ್ಟಿಸುತ್ತಿದೆ.
   ಕೆಲ ವರ್ಷದ ಹಿಂದೆ ಕೊಡಚಾದ್ರಿಯ ಮೂಲ ಮೂಕಾಂಬಿಕ ದೇವಾಲಯದ ಅವರಣಕ್ಕೂ ಒಮ್ಮೆ ದಿಡೀರನೆ ನುಗ್ಗಿತ್ತು.
  ಮೊದಲೆಲ್ಲ ಜನರ ಕಣ್ಣಿಗೆ ಅಪರೂಪವಾಗಿ ಕಾಣಿಸುತ್ತಿದ್ದ ಈ ಗಿಣಿವಾರದ ನರ ಹಂತಕ ಪ್ರತಿ ವರ್ಷ ಆಗುಂಬೆಯ ಸಮೀಪದಲ್ಲಿ ರಸ್ತೆಗಳಲ್ಲಿ ಸಂಚರಿಸಿ ಆಭಾಗದ ಜನರಲ್ಲಿ ಆತಂಕ ಉಂಟು ಮಾಡುತ್ತಿದೆ ಮತ್ತು ಅದನ್ನು ಸರ್ಕಾರಗಳು ಸೆರೆ ಹಿಡಿಯಲಾಗದಿದ್ದರು ಜನರು ತಮ್ಮ ಸೆಲ್ ಫೋನ್ ನಲ್ಲಿ ಸೆರೆ ಹಿಡಿದಿದ್ದಾರೆ.
  ಈ ವರ್ಷ ಮಳೆ ಕೂಡ ಕಡಿಮೆ ಇರುವುದರಿಂದ ಬತ್ತಿರುವ ಹಳ್ಳ ಕೊಳ್ಳಗಳು ಈ ಗಿಣಿವಾರದ ನರ ಹಂತಕನಿಗೆ ಸಾಗರ ತಾಲೂಕಿನ ಭಾಗಗಳಿಗೆ ಸಾಗಲು ತೆರೆದ ಬಾಗಿಲಾಗಿದೆ.
 ದಶಕಗಳಿಂದ ಈ ಕಾಡಾನೆ ಯಾಕೆ ಒಂಟಿ ಆಗಿ ಸಂಚರಿಸುತ್ತಿದೆ? ಈ ನಿಗೂಡ ಆನೆಯ ಮೂಲ ಎಲ್ಲಿ? ಇದನ್ನು ಯಾಕೆ ಸರ್ಕಾರ ಸೆರೆ ಹಿಡಿಯಲಾಗುತ್ತಿಲ್ಲ? ಈ ಪ್ರಶ್ನೆಗೆ  ಇನ್ನೂ ಉತ್ತರ ಸಿಕ್ಕಿಲ್ಲ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ