Skip to main content

Blog number 1750. ಸರ್ವರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು.

https://youtu.be/aTfwCMwJqBk?feature=shared

#ಸರ್ವರಿಗೂ_ಗೌರಿ_ಗಣೇಶ_ಹಬ್ಬದ_ಶುಭಾಷಯಗಳು.

#ನಮ್ಮ_ಲಾಡ್ಜಿನ_ಶಿಲಾಮಯ_ಗಣಪತಿ

#ಶಿಲಾ_ಗಣಪತಿ_ನೀಡಿದವರು_ಡಾಕ್ಟರ್_ವಿಶ್ವಪತಿ_ಶಾಸ್ತ್ರೀಜಿ_ಬೆಂಗಳೂರು.

#ಕಳೆದ_ಹದಿನೈದು_ವರ್ಷದಿಂದ_ಪೂಜಿಸುತ್ತಿದ್ದೇವೆ.


    ನಮ್ಮ ಹೊಂಬುಜ ಲಾಡ್ಜ್ ಮುಖ್ಯ ದ್ವಾರದ ಬಲಭಾಗದಲ್ಲಿ ಇರುವ ಶಿಲಾಮಯ ಗಣಪತಿ ನೀಡಿದವರು ಸದಾ ನಮ್ಮ ಅಭಿವೃದ್ಧಿಗೆ ಕಾಳಜಿ ವಹಿಸಿರುವ ಡಾಕ್ಟರ್ ಎನ್.ಎಸ್. ವಿಶ್ವಪತಿ ಶಾಸ್ತ್ರೀಗಳು ದೈವಜ್ಞ ಜೋತಿಷಿಗಳು ವಿಜಯ ನಗರ ಬೆಂಗಳೂರು.
    ದೇಶ ವಿದೇಶದಲ್ಲಿ ನೂರಾರು ದೇವಾಲಯ ಪ್ರತಿಷ್ಟಾಪನೆಯ ನೇತೃತ್ವ ವಹಿಸಿದ್ದ ವಿಶ್ವಪತಿ ಶಾಸ್ತ್ರಿಗಳು ತ್ಯಾಗರ್ತಿಯ ವಿವೇಕಾನಂದ ಪ್ರೌಢ ಶಾಲೆ ನಿರ್ಮಿಸಿ ಊರಿಗೆ ಅರ್ಪಿಸಿದ್ದ ಇನಾಂದಾರರಾಗಿದ್ದ ಗುರುಮೂರ್ತಿರಾಯರ ಕಿರಿಯ ಪುತ್ರಿ ಶ್ರೀಮತಿ ಸುಧಾಮಣಿ ಅವರ ಪತಿ.
   ನೆಲಮಂಗಲದಲ್ಲಿ ಇವರ ತಂದೆ ನಿರ್ಮಿಸಿರುವ ಅಡಿಕೆ ಗಣಪತಿ ದೇವಾಲಯ ಸುಪ್ರಸಿದ್ಧ, ಹಿಂದಿನ ಆದಿಚುಂಚನಗಿರಿ ಸ್ವಾಮಿಗಳ ಅವಧಿಯಲ್ಲಿ ಇವರು ಪ್ರಕಟಿಸುತ್ತಿದ್ದ ಪಂಚಾಂಗ ಈಗ ಇವರ ಅನೋರೋಗ್ಯ ಮತ್ತು ವಯೋಸಹಜ ಸಮಸ್ಯೆಯಿಂದ ಪ್ರಕಟವಾಗುತ್ತಿಲ್ಲ ಆದರೆ ಆನ್ ಲೈನ್ ನಲ್ಲಿ ಲಭ್ಯವಿದೆ.
  ನಮ್ಮ ಯಡೇಹಳ್ಳಿಯ ಶ್ರೀವರ ಸಿದ್ದಿ ವಿನಾಯಕ ದೇವಸ್ಥಾನ ನಿರ್ಮಿಸಿ ಪ್ರತಿಷ್ಟಾಪಿಸಿ ಊರಿಗೆ ಸಮರ್ಪಿಸುವ ಭಾಗ್ಯ ನನ್ನ ತಂದೆ- ತಾಯಿ ಮತ್ತು ಪೂರ್ವಿಕರ ಅನುಗ್ರಹದಿಂದ ನನಗೆ ಬಂದಾಗ ಅದಕ್ಕೆ ಎಲ್ಲಾ ರೀತಿಯ ಸಲಹೆ ಸಹಕಾರದ ನೇತೃತ್ವ ವಹಿಸಿದ್ದವರು ಶ್ರೀ ವಿಶ್ವಪತಿ ಶಾಸ್ತ್ರೀಗಳು.
  ದೇವಾಲಯದ ಶಿಖರ ಗೋಪುರದ ಕಲಶ, ಪಂಚಲೋಹದ ಉತ್ಸವ ಮೂರ್ತಿ ಮತ್ತು ಕಳೆದ ವರ್ಷ ಇವರು ನಿಮಿ೯ಸಿ ಅರ್ಪಿಸಿದ ಪಾಕಶಾಲೆಗಳು ನಮ್ಮ ಊರಿಗೆ ಇವರು ನೀಡಿದ ಕೊಡುಗೆಗಳು.
   ನಮ್ಮ ಮನೆ, ಕಲ್ಯಾಣ ಮಂಟಪ, ಲಾಡ್ಜ್ ಮತ್ತು ರೆಸ್ಟೋರಂಟ್ ಗಳು ಇವರದ್ದೇ ವಾಸ್ತುಶಾಸ್ತ್ರದಲ್ಲಿ ನಿಮಿ೯ಸಿದ್ದು.
   ಇವರೇ ನಮ್ಮ ಸಂಸ್ಥೆಗೆ ನೀಡಿದ ಈ ಶಿಲಾಮಯ ಗಣಪತಿ ಕಳೆದ 15 ವರ್ಷದಿಂದ ನಿತ್ಯ ಪೂಜೆ ಮಾಡುತ್ತಾ ಗಣೇಶ ಹಬ್ಬದಲ್ಲಿ ವಿಶೇಷ ಪೂಜೆ ಮಾಡುವ ವಿಗ್ರಹವಾಗಿದೆ ಈ ಸಂದರ್ಭದಲ್ಲಿ ವಿಶ್ವಪತಿ ಶಾಸ್ತ್ರೀಗಳ ಸ್ಮರಿಸುತ್ತಾ ಅವರಿಗೆ ಮತ್ತು ಅವರ ಕುಟುಂಬ ಪರಿವಾರಕ್ಕೆ ಆಯುರಾರೋಗ್ಯ ಆಯಸ್ಸು ಐಶ್ವರ್ಯ ದಯಪಾಲಿಸಲಿ ಎಂದು  ಶ್ರೀವರ ಸಿದ್ದಿ ವಿನಾಯಕ ದೇವರಲ್ಲಿ ಪ್ರಾರ್ಥನೆ ಮಾಡುತ್ತೇವೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...