Skip to main content

#Blog number 1772. ನಿರಂತರವಾಗಿ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚಾರಣೆ 1948 ರಿಂದ ಸತತ 76 ವರ್ಷದಿಂದ ಶಿವಮೊಗ್ಗ ಗಾಂಧೀ ಬಸಪ್ಪರ ಕುಟುಂಬ ನಡೆಸಿಕೊಂಡು ಬರುತ್ತಿದೆ.

#ನೂರಾ_ಐವತ್ತೈದನೆ_ಮಹಾತ್ಮಾಗಾಂದೀಜಿ_ಜನ್ಮದಿನೋತ್ಸವ.

#ಶಿವಮೊಗ್ಗದ_ಗಾಂಧೀಬಸಪ್ಪರ_ಕುಟುಂಬ_76_ವರ್ಷಗಳಿಂದ_ತಪ್ಪದೇ_ಮಹಾತ್ಮಾಗಾಂಧೀಜಿ_ಜನ್ಮದಿನಾಚಾರಣೆ_ಆಚರಣೆ

#ಗಾಂದೀವಾದಿ_ಗಾಂಧೀಬಸಪ್ಪರ_ಶಪಥ_1999ರಿಂದ_ಮುಂದುವರಿಸಿಕೊಂಡು_ಬರುತ್ತಿರುವ_ಅವರ_ಕುಟುಂಬ

#ನಿನ್ನೆ_ಅಂಚೆಯಲ್ಲಿ_ಬಂದ_ಅಹ್ವಾನ_ಪತ್ರಿಕೆ.


  ಗಾಂದೀ ಬಸಪ್ಪನವರು (1913-1999) ಮಹಾತ್ಮಾ ಗಾಂಧೀಜಿಯವರ ತತ್ವ ಸಿದ್ದಾಂತದಿಂದ ಪ್ರೇರೇಪಿತರಾದ ಸ್ವಾತಂತ್ರ್ಯ ಹೋರಾಟಗಾರರು, ಸ್ವಾತಂತ್ರ್ಯ ಬಂದ ಸಂತೋಷದ ಮಧ್ಯದಲ್ಲೇ ಗಾಂಧೀ ಹತ್ಯೆಯ ದುಃಖದಲ್ಲಿ ಹೆಚ್ಚು ನೊಂದವರು ಶಿವಮೊಗ್ಗದ ಗಾಂಧೀ ಬಸಪ್ಪನವರು.
  1999 ರಲ್ಲಿ ತಮ್ಮ ಇಹಲೋಕ ಯಾತ್ರೆ ಮುಗಿಸುವ ಮುನ್ನ ತಮ್ಮ ಇಡೀ ಕುಟುಂಬದವರಿಂದ ಇವರು ತೆಗೆದುಕೊಂಡ ಶಪಥ ಏನೆಂದರೆ ಅವರ ತಿಥಿ ಬೇಕಾದರೆ ಆಚರಿಸದೆ ಬಿಡಿ ಆದರೆ ಅವರು ಗಾಂಧೀಜಿ ಹತ್ಯೆ ನಂತರದಿಂದ ತಪ್ಪದೇ ಆಚರಿಸಿಕೊಂಡು ಬಂದ #ಗಾಂದೀ_ಜಯಂತಿ ಮಾತ್ರ ನಿರಂತರ ನಡೆಸಬೇಕು ಎಂಬುದು.
  ಶಿವಮೊಗ್ಗದ ಇವರ ಮನೆಗೆ ವಂದೇ ಮಾತರಂ ನಿಲಯ ಎಂಬ ಹೆಸರು ಇದೆ ಗಾಂದೀ ಬಸಪ್ಪರ ಇಡೀ ಕುಟುಂಬದವರ ಹೆಸರ ಮುಂದೆ ಗಾಂಧೀ ಅಂತಲೇ ಇದೆ ಈ ಮೂಲಕ ಶಿವಮೊಗ್ಗದ ಗಾಂಧೀ ಬಸಪ್ಪ ಕುಟು೦ಬ ತಮ್ಮ ತಂದೆಯ ಅಂತಿಮ ಆಸೆ ನಿರಂತರವಾಗಿ ನೆರವೇರಿಸಿಕೊಂಡು ಬರುತ್ತಿದ್ದಾರೆ.
     ಪ್ರತಿ ವಷ೯ ಗಾಂಧೀ ಜಯಂತಿ ಇಡೀ ಕುಟುಂಬದ ಸದಸ್ಯರು ಸೇರಿ ಗಾಂಧೀ ಅಭಿಮಾನಿಗಳನ್ನು ಸೇರಿಸಿ ದೊಡ್ಡ ಹಬ್ಬದಂತೆ ಗಾಂದೀ ಜಯಂತಿ ಆಚರಿಸುತ್ತಾರೆ.
   ಶಿವಮೊಗ್ಗದ ಖ್ಯಾತ ವಕೀಲರಾದ ವೆಂಕಟ ಸುಬ್ಬ ಶಾಸ್ತ್ರೀ 1924ರ ಬೆಳಗಾವಿ ಅಧಿವೇಷನದಲ್ಲಿ ಗಾಂಧೀ ಅವರ ಪ್ರಭಾವದಿಂದ ಗಾಂಧೀಜಿಯವರನ್ನು ಶಿವಮೊಗ್ಗಕ್ಕೆ ಕರೆ ತರುವ ಸತತ ಪ್ರಯತ್ನ 1927 ರಲ್ಲಿ ಈಡೇರುತ್ತದೆ.
  ಶಿವಮೊಗ್ಗದ ನ್ಯಾಷನಲ್ ಲಾಡ್ಜ್ (ಶಿವಮೊಗ್ಗದ ಕೇಂದ್ರ ಅ0ಚೆ ಇಲಾಖೆ ಎದರು ನಂತರ ಅದು ಬೃಂದಾವನ ಹೋಟೆಲ್ ಆಗಿತ್ತು) ನಲ್ಲಿ ಒಂದು ವಾರ ಗಾಂದೀಜಿ ಮತ್ತು ಕಸ್ತೂರ ಬಾ ದಂಪತಿಗಳು ತಂಗುತ್ತಾರೆ.
   ಈ ಅವಧಿಯಲ್ಲಿ ಗಾಂಧೀಜಿ ಆನಂದಪುರಂ, ಸಾಗರ (16- ಆಗಸ್ಟ್ - 1927), ನಗರ - ತೀರ್ಥಹಳ್ಳಿ - ಭದ್ರಾವತಿ ಪ್ರವಾಸ ಮಾಡುತ್ತಾರೆ.
  14 ಆಗಸ್ಟ್ 1927 ರಲ್ಲಿ ಶಿವಮೊಗ್ಗದ ಉದ್ಯಾನವನದಲ್ಲಿ ಸ್ವಾತಂತ್ರ್ಯದ ಮಹತ್ವ ತಿಳಿಸುವ ಗಾಂಧೀಜಿಯವರ ಸಾರ್ವಜನಿಕ ಸಭೆ ನಡೆಯುತ್ತದೆ ಇದರ ಸ್ಮರಣೆಗಾಗಿ  ಈ ಉದ್ಯಾನವನಕ್ಕೆ #ಗಾಂಧೀ_ಪಾರ್ಕ್  ಎ೦ಬ ಹೆಸರು ಇಡಲಾಗುತ್ತದೆ.
   ಗಾಂಧೀಜಿ ಶಿವಮೊಗ್ಗಕ್ಕೆ ಬಂದ ನೆನಪಿಗಾಗಿ ಪುರ ಪ್ರಮುಖರು  ಪ್ರಮುಖ ವ್ಯಾಪಾರಿ ಕೇಂದ್ರಕ್ಕೆ #ಗಾಂಧೀ_ಬಜಾರ್ ಎಂದು ನಾಮಕರಣ ಮಾಡುತ್ತಾರೆ.
  ಗಾಂಧೀಜಿ ತಂಗಿದ್ದ ನೆನಪಿಗಾಗಿ ನ್ಯಾಷನಲ್ ಲಾಡ್ಜ್ ಮಾಲಿಕರು ಲಾಡ್ಜ್ ಎದರು ಎರೆಡು ತೆಂಗಿನ ಸಸಿ ಗಾಂದೀಜಿ ಮತ್ತು ಕಸ್ತೂರ ಬಾ ರಿಂದ ನೆಡೆಸಿದ್ದರು.
  ಗಾಂಧೀಜಿ ಶಿವಮೊಗ್ಗದಲ್ಲಿ ಗಾಂಧೀ ಪಾರ್ಕಿನಲ್ಲಿ 14 - ಆಗಸ್ಟ್ - 1927 ರ ಸಭೆ ನಡೆಸಿದ ಇಪ್ಪತ್ತು ವರ್ಷಕ್ಕೆ ಸರಿಯಾಗಿ ಅಂದರೆ 14- ಆಗಸ್ಟ್ - 1947 ರ ರಾತ್ರಿ ದೇಶಕ್ಕೆ ಸ್ವಾತಂತ್ರ್ಯ ಲಭಿಸಿತು.
   ಶಿವಮೊಗ್ಗದ 100 ಅಡಿ ರಸ್ತೆಗೆ #ಗಾಂಧೀ_ಬಸಪ್ಪ_ರಸ್ತೆ, ತುಂಗಾ ಚಾನಲ್ ವೃತ್ತಕ್ಕೆ #ಗಾಂಧೀ_ಬಸಪ್ಪ_ವೃತ್ತ ಎಂದು ಸರ್ಕಾರ ನಾಮಕರಣ ಮಾಡಿದೆ.
   ಸತತ 51 ವರ್ಷ ಶಿವಮೊಗ್ಗದ ಗಾಂಧೀಬಸಪ್ಪರು ನಡೆಸಿಕೊಂಡು ಬಂದ ಗಾಂಧೀ ಜಯಂತಿ ಅವರ ಕುಟುಂಬ 25 ವರ್ಷಗಳಿಂದ ಮುಂದುವರಿಸಿಕೊಂಡು ಬಂದಿದೆ ಇದು (2 ಅಕ್ಟೋಬರ್ 2023) 76ನೆ ವರ್ಷದ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಆಚರಣೆ ಈ ಕುಟುಂಬಕ್ಕೆ.
 ಒಂದು ಕುಟುಂಬ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆ ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದಾರೆ ಇದು ಇಡೀ ದೇಶದಲ್ಲೇ ಅದ್ವಿತಿಯ.
     ತಂದೆಯ ಶಪಥಕ್ಕೆ ಚ್ಯುತಿ ಬಾರದಂತೆ ಮಹಾತ್ಮಾಗಾಂಧಿ ಜಯಂತಿ ನಡೆಸುತ್ತಿರುವ ಗಾಂಧಿ ಬಸಪ್ಪ ಕುಟುಂಬಕ್ಕೆ ಅಭಿನಂದಿಸೋಣ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ