Skip to main content

#Blog number 1773. ನನ್ನ ಆಫೀಸು ಪ್ರವೇಶಿಸಿ "ನಾನ್ಯಾರು" ಅಂದಾಗ ನೀವು ಶಾಂತಮ್ಮರ ಮಗ ವಸಂತಣ್ಣ ನಿಮ್ಮ ತಂದೆ ಪಾರೆಸ್ಟರ್ ಸುಶೀಲಪ್ಪನವರು, ನಿಮ್ಮ ತಂಗಿ ವಿಮಲಕ್ಕ ಮತ್ತು ಪ್ರೇಮಕ್ಕ ಅಂದಾಗ ಅವರಿಗೇ ಆಶ್ಚರ್ಯ ಕಾರಣ 56 ವರ್ಷದ ಹಿಂದೆ ಉದ್ಯೋಗಕ್ಕಾಗಿ ಊರು ತೊರೆದವರನ್ನು ಇದೇ ಮೊದಲ ಬಾರಿಗೆ ನೋಡಿದ್ದು.

#ನಿನ್ನೆಯ_ಘಟನೆ_ಮರೆಯಲಾರದ್ದು.

#ಅವರು_ನಮ್ಮ_ಊರು_ಬಿಟ್ಟಿದ್ದು_1967 .

#ನಾನು_ಹುಟ್ಟಿದ್ದು_1965.

#ನಿನ್ನೆ_ನನ್ನ_ಆಫೀಸಿಗೆ_ಬಂದು_ನಾನ್ಯಾರು_ಗೊತ್ತಾ_ಅಂದಾಗ_ನೀವು_ವಸಂತಣ್ಣ_ಅಂದಾಗ

#ನನ್ನ_ಮೆದುಳಿನ_ನೆನಪಿನ_ಕೋಶಗಳ_ಸಾಮರ್ಥ್ಯ_ನನಗೆ_ಅಚ್ಚರಿ.
     ನನಗೆ ನನ್ನ ನೆನಪಿನ ಶಕ್ತಿ ಬಗ್ಗೆ ಅಂತಹ ನಿರ್ಧಿಷ್ಟ ಸಾಮರ್ಥ್ಯ ಗೊತ್ತಿಲ್ಲ ಮತ್ತು ಕೆಲ ಸಂದರ್ಭದಲ್ಲಿ ಅದು ಬೆಳಕಿಗೆ ಬಂದಾಗ ನನಗೆ ಆಶ್ಚರ್ಯ.
  ನಿನ್ನೆ ಬೆಳಿಗ್ಗೆ ನಮ್ಮ ಆನಂದಪುರ೦ನ ನಾಡ ಕಛೇರಿಯಲ್ಲಿ ಕಾರ್ಯನಿರ್ವಹಿಸುವ ತಾವರೇಹಳ್ಳಿ ಗೋವಿಂದ ಮೂರ್ತಿ ಬಂದು ಈ ಹಿಂದೆ ಆನಂದಪುರಂನ ರೆವಿನ್ಯೂ ಇನ್ಸ್ಪೆಕ್ಟರ್ ಆಗಿದ್ದ ಈಗ ನಿವೃತ್ತರಾದ ಚೌಡಪ್ಪರ ಮಗ ಬಂದಿದ್ದಾರೆ ನಿಮ್ಮನ್ನು ಬೇಟಿ ಆಗಲು ಅಂದಾಗ 5-6 ಜನ ನನ್ನ ಅಪೀಸ್ ಒಳಗೆ ಬಂದರು.
   ಅವರಲ್ಲಿ ಒಬ್ಬರು "ನಾನ್ಯಾರು ಗೊತ್ತಾಯಿತಾ?" ಅಂದರು ತಕ್ಷಣ ಬನ್ನಿ ಬನ್ನಿ ಅಂತ ಅನ್ನುತ್ತಾ ಅವರ ಪ್ರಶ್ನೆಗೆ ಉತ್ತರಿಸಲು ನನ್ನ ಮೆದುಳಿನ ನೆನಪಿನ ಕೋಶಗಳು ನೆನಪನ್ನು   ಹೊರಹಾಕಿತು.. "ವಸಂತಣ್ಣ.. ಶಾಂತಮ್ಮರ ಮಗ... ನಿಮ್ಮ ತಂದೆ ಪಾರೆಸ್ಟರ್ ಸುಶೀಲಪ್ಪ ಅವರ ಹ್ಯಾಟ್ ಬ್ರಿಟಿಷ ಕಾಲದ್ದು ... ನಿಮ್ಮ ತಂಗಿಯಂದಿರು ವಿಮಲಕ್ಕ ಮತ್ತು ಪ್ರೇಮಕ್ಕ" ಅಂದಾಗ ಅವರಿಗೆ ಒಂದು ಕ್ಷಣ ಶಾಕ್ ಆಯಿತು.
   ಅವರು ನಮ್ಮ ಯಡೇಹಳ್ಳಿಯ ಮೂಲ ನಿವಾಸಿಗಳು, ಇವರ ತಂದೆ ಬ್ರಿಟೀಶ್ ಕಾಲದಲ್ಲಿ ನಮ್ಮ ಊರಿನ ಫಾರೆಸ್ಟರ್ ಸ್ವಾತಂತ್ರ್ಯ ನಂತರವೂ ಇವರ ಉದ್ಯೋಗ ಮುಂದುವರೆಯಿತು.
  ಇವರ ಮನೆ ಯಡೇಹಳ್ಳಿಯ ಸಂತ ಜೂದರ ಚರ್ಚ ಎದುರು ಇತ್ತು ಆಗ ನಮ್ಮ ಯಡೇಹಳ್ಳಿಯ ಹೊಸನಗರ ರಸ್ತೆಯಲ್ಲಿ ಮೊದಲಿಗೆ ನಮ್ಮ ಮನೆ ನಂತರದ್ದು ಕುಲಿಮೆ ರಾಮಣ್ಣ ಆಚಾರದ್ದು ನಂತರದ್ದು ಪಾಂಡು ಪ್ರಭು ಅವರ ತಂದೆಯ ಮನೆ ನಂತರದ್ದು ಪಾರೆಸ್ಟರ್ ಸುಶೀಲಪ್ಪರ ಮನೆ ನಂತರ ರೈಲ್ವೇ ರಸ್ತೆ ನಂತರ ಬ್ರಿಟಿಷ್ ಬಂಗ್ಲೆ ನಂತರ ಬಟ್ಟಿಮಲ್ಲಪ್ಪದ ತನಕ ರಸ್ತೆಯ ಇಕ್ಕೆಲ 10 ಕಿ.ಮಿ.ದಟ್ಟಾರಣ್ಯ ಆಗಿತ್ತು.
 ಅಲ್ಲಿ ಆಗಿನ ಕಾಲದಲ್ಲಿ ಇವರ ಮನೆ ಮಾಡರ್ನ್ ಅನ್ನಿಸಿತ್ತು ಯಾಕೆಂದರೆ ಅವರ ಆಗಿನ ಮನೆ ಆನಂದಪುರಂಗೆ ಸೂಪರ್ ಶೈಲಿ.
  ಒಂದು ಭಾಗ ಪಾರೆಸ್ಟರ್ ಸುಶೀಲಪ್ಪರ ವಾಸಕ್ಕೆ ಇನ್ನೊಂದು ಭಾಗ ಬಾಡಿಗೆ ಮನೆ ಮದ್ಯದಲ್ಲಿ ಒಂದು ಅಂಗಡಿ ಮಳಿಗೆ ಅದರಲ್ಲಿ ಆ ಕಾಲದ ಪ್ರತಿಷ್ಟಿತ ಬ್ರಾಂಡ್ ನ ಚಾಕೋಲೆಟ್ ಬಿಸ್ಕಿಟ್ ಗಳು ಸ್ವಚ್ಚ ಗಾಜಿನ ಭರಣಿಗಳಲ್ಲಿ ಇರುತ್ತಿತ್ತು.
 ಅಂಗಡಿ ಎದರಲ್ಲಿ ಚೆಸ್ ಮತ್ತು ಕೇರಂ ಬೋರ್ಡ್ ಇರುತ್ತಿತ್ತು.
  ಸುಶೀಲಪ್ಪನವರು ಪ್ರೋಟೆಸ್ಟಂಟ್ ಕ್ರಿಶ್ಚಿಯನ್ ಪಂಗಡಕ್ಕೆ ಸೇರಿದವರು ಅವರ ಪತ್ನಿ ಶಾಂತಮ್ಮ ನನ್ನ ತಾಯಿಯ ಆತ್ಮೀಯ ಗೆಳತಿ.
   ವಸಂತ್ ಆರೋಗ್ಯ ಇಲಾಖೆ ಉದ್ಯೋಗಕ್ಕಾಗಿ 1967ರಲ್ಲಿ ಊರು ಬಿಟ್ಟರು, ಇವರ ತಂಗಿ ವಿಮಲಾ ಸ್ವಾಪ್ ನರ್ಸ ಆಗಿ ಉದ್ಯೋಗಕ್ಕೆ ಹೋದರು, ಇವರ ಸಣ್ಣ ತಂಗಿ ಪ್ರೇಮ ಶಿಕ್ಷಕಿ ಆಗಿ ಶಿಕಾರಿಪುರದಲ್ಲಿ ನೆಲೆಸಿದರು.
  ವಸಂತರಿಗೆ ಈಗ 78ರ ವಯೋಮಾನ ನನಗೆ 58.
   ಇವರು ನನ್ನ ಆತ್ಮೀಯರಾಗಿದ್ದ ರೆವಿನ್ಯೂ ಇನ್ಸ್ಪೆಕ್ಟರ್ ಚೌಡಪ್ಪರ ಸಂಬಂದಿಗಳೂ ಆಗಿದ್ದಾರೆ.
   ಚೌಡಪ್ಪರ ಸಣ್ಣ ಮಗ, ಪ್ರೇಮಾರ ಕಿರಿಯ ಮಗಳು ವೈದ್ಯರಾಗಿ ಬೆಳೆಗಾ೦ನಲ್ಲಿದ್ದಾರೆ ಅವರ ಪತಿ ಜೊತೆ ವಸಂತ್ ಬಂದಿದ್ದರು.
  55 ವರ್ಷದ ಹಿಂದಿನ ನೆನಪಿನ ಸಂಬಂದ ಆ ಕ್ಷಣದಲ್ಲಿ ನೆನಪಾಗಿದ್ದು ಹೇಗೆ? ನನಗೆ ಆಶ್ವರ್ಯ, ನಾನು ನನ್ನ ಬ್ಲಾಗಿನಲ್ಲಿ ಈಗ ದಾಖಲಿಸಿರುವ 1770 ಲೇಖನಗಳು ಇದೇ ರೀತಿ ಇದ್ದಕ್ಕಿದ್ದಂತೆ ನೆನಪಾದ ನೆನಪುಗಳು, ನನ್ನ ಗುರಿಯಾದ 2000 ಲೇಖನಗಳಿಗೆ 230 ಲೇಖನ ಬಾಕಿ ಇದೆ.
   ಮನುಷ್ಯನ ಮೆದುಳು ಏನೇನಲ್ಲ ನೆನಪನ್ನು ಶೇಖರಿಸಿಕೊಂಡಿರುತ್ತೋ ದೇವರೇ ಬಲ್ಲ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ