Skip to main content

Blog number 1774. ನಮ್ಮ ರೆಸ್ಟೋರೆಂಟ್ ಉದ್ಯೋಗದಲ್ಲಿ ಇಂತಹ ಪೀಡ್ ಬ್ಯಾಕ್ ನಮಗೆ ಚೇತೋಹಾರಿ ಮತ್ತು ಹುಮ್ಮಸ್ಸು ಹೆಚ್ಚಿಸುತ್ತದೆ ಆದರೆ ಅದಕ್ಕಾಗಿ ನಾವು ಸತತ ಶ್ರಮ ಮತ್ತು ಶ್ರದ್ದೆಯಿಂದ ಶುಚಿ ರುಚಿಯ ಆಹಾರ ತಯಾರಿಸಬೇಕು.https://maps.app.goo.gl/i75z12kpoypzB7fK7

#ನಮ್ಮ_ಮಲ್ಲಿಕಾ_ವೆಜ್_ಉಪಹಾರ_ಸವಿದ_ರಿನೂ_ಎನ್ನುವವರ_ಪೀಡ್_ಬ್ಯಾಕ್.

#ಯಾವುದೇ_ಉದ್ಯಮದಲ್ಲಿ_ಗ್ರಾಹಕರ_ಪೀಡ್_ಬ್ಯಾಕ್_ಅತಿ_ಮುಖ್ಯ

#ಗ್ರಾಹಕರೆ_ದೇವರು_ಅವರ_ಸಂತೃಪ್ತಿಯೇ_ಹೋಟೆಲ್_ಮಾಲಿಕರ_ಗುರಿಯಾಗ_ಬೇಕು.

#ಶುಚಿ_ಮೊದಲು_ನಂತರ_ರುಚಿ_ಅದರ_ನಂತರ_ಗ್ರಾಹಕರ_ತೃಪ್ತಿ_ಕೊನೆಯದಾಗಿ_ಲಾಭ.

#ನಿತ್ಯ_ಮಲ್ಲಿಕಾ_ವೆಜ್_ರೇಷನ್_ತರಕಾರಿ_ವಿತರಿಸುವುದು_ಮೊದಲ_ಗುಣಮಟ್ಟ_ರುಚಿ_ಪರೀಕ್ಷೆ_ನನ್ನದೆ .


    ಈಗಷ್ಟೆ ನಮ್ಮ ಮಲ್ಲಿಕಾ ವೆಜ್ ರೆಸ್ಟೋರೆಂಟ್ ನಲ್ಲಿ ಕುಟುಂಬ ಸಮೇತ ಉಪಹಾರ ಸೇವಿಸಿದ ಗ್ರಾಹಕ ದೇವರು (ನಾವು ಗ್ರಾಹಕರನ್ನು ಆ ರೀತಿ ಪರಿಗಣಿಸಬೇಕು)  ರಿನೂ ಅನ್ನುವವರು ನಮ್ಮಲ್ಲಿ ನಿತ್ಯ ಸಿಗುವ ಮಲೆನಾಡಿನ ವಿಶೇಷ ತಿನಿಸು ಹಲಸಿನ ಎಲೆಯ ಕಡಬು ಅದರ ಜೊತೆ ಹೆಸರುಕಾಳಿನ ಸಾಗು, ಕೆಂಪು ಮೆಣಸಿನ ಕಾರದ ಚಟ್ನಿ ಮತ್ತು ಕಾಯಿ ಚಟ್ನಿ ಜೊತೆಗೆ ಸವಿದಿದ್ದಾರೆ ಮತ್ತು ಬಿಸಿ ಬಿಸಿ ಬಿಸಿ ಬೇಳೆ ಬಾತ್ ಕೂಡ.
   ಇದನ್ನು ಚಿತ್ರ ಸಹಿತ ಮತ್ತು ಅವರು ಮಲ್ಲಿಕಾ ವೆಜ್ ಎದುರಿಗೆ ತೆಗೆದ ಸೆಲ್ಫಿ ಜೊತೆ ನಿಮ್ಮ ಮಲ್ಲಿಕಾ ವೆಜ್ ನಲ್ಲಿ ಈಗ ಉಪಹಾರ ಸೇವಿಸಿ ಎಂಜಾಯ್ ಮಾಡಿದ್ದೇವೆ ಎಂದು ಪ್ರತಿಕ್ರಿಯೆ ಕೂಡ ದಾಖಲಿಸಿದ್ದಾರೆ.
  ತಮ್ಮ ಪ್ರಯಾಣದಲ್ಲಿ ಬೆಳಗಿನ ಉಪಹಾರಕ್ಕೆ ನಮ್ಮ ಮಲ್ಲಿಕಾ ವೆಜ್ ಆಯ್ಕೆ ಮಾಡಿದ್ದಕ್ಕೆ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಮತ್ತು ಇನ್ನೊಮ್ಮೆ ಇಲ್ಲಿಗೆ ಬೇಟಿ ನೀಡಿ ಎಂದು ಮನವಿ ಮಾಡಿದ್ದೇನೆ.
   ಉದ್ಯೋಗ ವ್ಯವಹಾರಕ್ಕೆ ಹುಟ್ಟಿದ ಊರು ತೊರೆದು ದೂರದೂರಿಗೆ ಹೋಗುವ ಈ ಕಾಲದಲ್ಲಿ ನಾವು ಹುಟ್ಟಿದ ಊರಿನಲ್ಲಿಯೇ ಉದ್ಯೋಗ ವ್ಯವಹಾರ ಮಾಡುವುದು ಕಷ್ಟ ಸಾಧ್ಯವೇ ಆಗಿದ್ದರೂ ನಾನು ಇಲ್ಲೇ ನನ್ನ ಸ್ಪಗ೯ ಸೃಷ್ಟಿಸಿಕೊಂಡಿದ್ದೇನೆ, ಜೀವನ ಪರ್ಯಂತ ಸಾಧನೆ ಎಂಬಂತೆ ನಾವು ಮಾಡುವ ಕೆಲಸದ ಬಗ್ಗೆ ಪ್ರೀತಿ ಅಭಿಮಾನ ಗೌರವ ಹೊಂದಿ ಸತತ ಸಾಧನೆ ಮಾಡಿದರೆ ಯಶಸ್ಸು ಖಂಡಿತಾ ಸಾಧ್ಯವಿದೆ ಇದಕ್ಕೆ ತಾಳ್ಮೆ ಬೇಕು.
   ಕಲಬೆರಕೆ ಇಲ್ಲದ ವಸ್ತುಗಳ ಸಂಗ್ರಹಿಸಿ ಬಳಸುವುದು, ಕೃತಕ ರುಚಿಯ ಟೇಸ್ಟಿಂಗ್ ಪೌಡರ್, ಕೃತಕ ಬಣ್ಣ ಬಳಸದೇ ಇರುವುದು, ಶುಚಿ ರುಚಿಯಾಗಿ ಅಡುಗೆ ಮಾಡುವ ತರಬೇತಿಯ ಸಿಬ್ಬಂದಿಗೆ ನೀಡಿ ನಿತ್ಯ ಪರಿಶೀಲಿಸುವುದು ಹಾಗೂ ತಯಾರಾದ ಆಹಾರದ ಗುಣಮಟ್ಟ ಮತ್ತು ರುಚಿ ಮೊದಲಿಗೆ ನಾನೇ ಪರೀಕ್ಷೆ ಮಾಡುವುದರಿಂದ ನಮ್ಮ ರೆಸ್ಟೋರೆಂಟ್ ಗೆ ಅತ್ಯುತ್ತಮ ರೇಟಿಂಗ್ ಮತ್ತು ಫೀಡ್ ಬ್ಯಾಕ್ ದೊರಕುತ್ತಿದೆ ಅಷ್ಟೇ ಅಲ್ಲ ಗ್ರಾಹಕರು ಹುಡುಕಿಕೊಂಡು ಬರುತ್ತಾರೆ.
  ಇವತ್ತಿನ ಬೆಳಗಿನ ಈ ಪೀಡ್ ಬ್ಯಾಕ್ ನಾವು ಮಾಡುವ ಕೆಲಸದಲ್ಲಿ ಇನ್ನೂ ಹೆಚ್ಚಿನ ಹುಮ್ಮಸ್ಸು ತುಂಬಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...