Skip to main content

Blog number 1828. ಶೃಂಗೇರಿಯಲ್ಲಿಗುರುಮೂರ್ತಿ ಜೋಗಿಬೈಲು ಅವರ BEAS ಸಂಸ್ಥೆ ಪ್ರಾರಂಭವಾಗಿದೆ, ಇವರ ಪುತ್ರ ಚಿತ್ರಿಕರಣ ಮಾಡಿದ ದೊಂದಿಯಲ್ಲಿ ಅರಳಿದ ದೀಪಾವಳಿ.

#ಶೃಂಗೇರಿಯ_ಜೋಗಿಬೈಲಿನ_ಗುರುಮೂರ್ತಿ_ಅವರ_ಪೋಸ್ಟ್

#ಇವರ_ಮಗ_ಸೊಸೆ_ದೊಂದಿಯಲ್ಲಿ_ಅರಳಿಸಿದ_ದೀಪಾವಳಿ

#ದೊಂದಿಯ_ದೀಪಾವಳಿ_ಚಿತ್ರ_ಅದ್ಬುತವಾಗಿದೆ.

#ಜೋಗಿಬೈಲಿನಲ್ಲಿ_ಬಯೋಡೈವರ್ಸಿಟಿ_ಎನ್ವಿರಾನ್ಮೆಂಟ್_ಅಂಡ್_ಅಗ್ರಿಕಲ್ಚರ್_ಸ್ಟಡಿ_ಸೆಂಟರ್_BEAS_ಪ್ರಾರಂಬಿಸಿದ್ದಾರೆ

  ದೀಪಾವಳಿ ಶುಭಾಷಯದ ನೂರಾರು ದೀಪದ ಚಿತ್ರಗಳ ಸಾಲು ಸಾಲು ದೀಪಾವಳಿ ಹಬ್ಬದಲ್ಲಿ ನೋಡುತ್ತೇವೆ ಅದರಲ್ಲಿ ಗುರುಮೂರ್ತಿ ಜೋಗಿಬೈಲು ಅವರು ಪೋಸ್ಟ್ ಮಾಡಿದ #ದೀಪಾವಳಿ ಚಿತ್ರ ವಿಶೇಷದ್ದು.
   ದೊಂದಿಯನ್ನು ಇವರ ಸೊಸೆ "ದೀಪಾವಳಿ'  ಅಕ್ಷರ ಆಕೃತಿಯಲ್ಲಿ ತಿರುಗಿಸಿದ್ದಾರೆ ಇವರ ಮಗ 20 ಸೆಕೆಂಡ್ ಎಕ್ಸ್ ಪ್ಲೋಷರ್ ನಲ್ಲಿ ಕ್ಯಾಮೆರಾದಲ್ಲಿ ಸೆರೆಹಿಡಿದದ್ದೆಂದು ಅವರು ಬರೆದಿದ್ದಾರೆ.
  ಮಲೆನಾಡಿನ ಶೃಂಗೇರಿಯ ಕಾಡಿನಲ್ಲಿರುವ ಇವರ ಕೃಷಿ ಭೂಮಿಯಲ್ಲಿ ದೀಪಾವಳಿ ಹಬ್ಬದಲ್ಲಿ ದೊಂದಿಯಲ್ಲಿ ದೀಪಾವಳಿ ಅರಳಿಸಿದ ಚಿತ್ರ ಮಾತ್ರ ವಿಶೇಷವಾಗಿದೆ.
   ಗುರುಮೂರ್ತಿ ಜೋಗಿಬೈಲು ಅವರನ್ನು ಎರೆಡು ವರ್ಷದ ಹಿಂದೆ ನನ್ನ ಕಛೇರಿಯಲ್ಲಿ ಅವರ ಪ್ರಾಣ ಮಿತ್ರ ಶೃಂಗೇಶ್ ಪರಿಚಯ ಮಾಡಿ ಕೊಟ್ಟಿದ್ದರು, ಇವರಿಬ್ಬರೂ ಕೆಲವು ತತ್ವ ಸಿದ್ಧಾಂತಗಳನ್ನು ವಿದ್ಯಾರ್ಥಿ ದೆಸೆಯಿಂದ ಅನುಸರಿಸಿದ್ದು, ಪ್ರಕೃತಿ - ಪರಿಸರದ ಕಾಳಜಿ, ಸಮಾಜದ ಆಸಮಾನತೆ ವಿರುದ್ಧ ಧ್ವನಿಯಾಗಿದ್ದವರು, ಬಹುಶಃ ಜನಪರ ಹೋರಾಟದ ಅಗ್ನಿ ಪರ್ವತದ ಬಾವಿಯಲ್ಲಿಳಿದು ಸುರಕ್ಷಿತವಾಗಿ ಬಂದವರು.
   ಈಗ ಗುರುಮೂರ್ತಿ ತಮ್ಮ ಜೋಗಿಬೈಲು ನಲ್ಲಿ BEAS ಎಂಬ ಬಯೋಡೈವರ್ಸಿಟಿ - ಎನ್ವಿರಾನ್ಮೆಂಟ್ ಅಂಡ್ ಅಗ್ರಿಕಲ್ಚರ್ ಸ್ಟಡಿ ಸೆಂಟರ್ ಪ್ರಾರಂಬಿಸಿದ್ದಾರೆ, ಈ ಸಂಸ್ಥೆ ಪಶ್ಚಿಮ ಘಟ್ಟ ಪ್ರದೇಶದಲ್ಲಿನ ಶಾಲಾ ಮಕ್ಕಳಿಗೆ ಪರಿಸರದ ಬಗ್ಗೆ ವಿಶೇಷವಾಗಿ ಜನ ಜಾಗೃತಿ ಅಭಿಯಾನ ಮಾಡುತ್ತಿದ್ದಾರೆ, ಮುಂದಿನ ದಿನಗಳಲ್ಲಿ ಈ ಸಂಸ್ಥೆ ಈ ಪ್ರದೇಶದ ರೈತ ಸಮೂದಾಯದ ಜೊತೆ  ಪರಿಸರ ಕೃಷಿ ಬಗ್ಗೆ ಸಮಾಲೋಚನೆ ನಡೆಸಲಿದೆ.
  ಮಲೆನಾಡ ಪರಿಸರದಲ್ಲಿ ದೀಪಾವಳಿ ಹಬ್ಬದ ದೊಂದಿಯಿಂದ ಅರಳಿಸಿದ ದೀಪಾವಳಿ ಸುಂದರವಾಗಿ ಕ್ಯಾಮೆರಾದಲ್ಲಿ ಸೆರೆ ಹಿಡಿದ ಚಿತ್ರ ನೋಡಿ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...