Skip to main content

Blog number 1835. ಅನಿವಾಸಿ ಭಾರತೀಯ ಪ್ರಖ್ಯಾತ ಹವ್ಯಕ ಕನ್ನಡಿಗ ಶಾಂತಾರಾಮ ಹೆಗಡೆ ಕಟ್ಟೆ ಮಾತುಗಳು ಭಾಗ - 2

#ಭಾಗ_2.

#ಅನಿವಾಸಿ_ಭಾರತೀಯ

#ಪ್ರಖ್ಯಾತ_ಹವ್ಯಕ_ಕನ್ನಡಿಗ

#ಶಾಂತಾರಾಮಹೆಗಡೆಕಟ್ಟೆ.

#ಹಿಂದಿನ_ಸ್ವರ್ಣವಲ್ಲಿ_ಮಠಾದೀಶರ_ಮಂತ್ರಾಕ್ಷತೆ_ನೀಡುವಾಗ

#ತಮ್ಮಾ_ಮಂತ್ರಾಕ್ಷತೆಯಿಂದ_ಏನೂ_ಆಗುವುದಿಲ್ಲ_ನಿನ್ನ_ಪ್ರಯತ್ನದಲ್ಲಿ_ಫಲ_ಪಡೆಯಲು_ಮಂತ್ರಾಕ್ಷತೆ_ಬೇಕು

#ಎಂಬ_ಆಶ್ರೀವಾದದ_ನುಡಿಗಳ_ಮರೆಯದ_ಶಾಂತರಾಮರು.

#ಸ್ವಜಾತಿ_ಮಠದ_ಅನಾಚಾರ_ವಿರೋದಿಸದ_ಭಯಪಡದವರ_ಪಟ್ಟಿಯಲ್ಲಿ_ನಾನಿಲ್ಲ.

#ವಿದ್ಯಾರ್ಜನೆಗಾಗಿ_ಬರುವ_ಬಡ_ಹೆಣ್ಣು_ಮಕ್ಕಳಿಗೆ_ಸ್ವಜಾತಿ_ಮಠದಲ್ಲಿ_ರಕ್ಷಣೆ_ಇಲ್ಲವೆಂದರೆ_ಅದು_ನಂಬಿಕೆದ್ರೋಹ.

https://youtu.be/3HN0tE0ABsk?feature=shared


    ತಾಯ್ನೆಲದಿಂದ ಪ್ರತಿಬಾವಂತರು ವಿದೇಶಕ್ಕೆ ಹೋಗಿ ನೆಲೆಸಿ ಕಷ್ಟಪಟ್ಟು ಹಣ ಆಸ್ತಿಗಳಿಸುತ್ತಾರೆ ಅಂತವರೆಲ್ಲರಿಗೂ ತನ್ನ ನೆರೆಹೊರೆಯವರಿಗೆ ದೇಶವಾಸಿಗಳಿಗೆ ಏನಾದರೂ ಒಳಿತು ಮಾಡುವ ತವಕ ಇರುತ್ತದೆ ಅಂತವರ ಸಾಲಿನ ಕುಮುಟಾದ ಹೆಗಡೆ ಊರಿನ ಶಾಂತಾರಾಮ ಹೆಗಡೆಕಟ್ಟೆ ಒಬ್ಬರು.
  ಹಿಂದೂ ಧರ್ಮದ ಮಠ ಮಂದಿರಗಳು ಜನರ ನಂಬಿಕೆ ದುರುಪಯೋಗ ಮಾಡಿಕೊಂಡು ವಾಮ ಮಾರ್ಗದಲ್ಲಿ ಸಹಸ್ರಾರು ವರ್ಷದ ಭಕ್ತಿಮಾರ್ಗದ ನಿಯಮಗಳನ್ನು ಉಲ್ಲಂಘಿಸಿ ಹಿಂದೂ ಧರ್ಮದ ಬಗ್ಗೆ ಸಾರ್ವಜನಿಕವಾಗಿ ತಪ್ಪು ಅಭಿಪ್ರಾಯ ರೇಜಿಗೆ ಹುಟ್ಟಿಸುವುದನ್ನು ಸ್ವದಮಿ೯ಯರು ತಮ್ಮ ವಿರೋದ ದಾಖಲಿಸಲು ಹೆದರಿದರೆ !? ....
    ಅನಾಚಾರ ನಡೆಸುವ ದಾರ್ಮಿಕ ಮುಖಂಡ,ಅವನ ಸುತ್ತ ಹಾಡಿ ಹೊಗಳುವ ಕ್ಯಾಕ್ಟಸ್ ನಂತ ದುಷ್ಟಕೂಟ ಮತ್ತು ಅವರ ಭಕ್ತರ ರೂಪದ ಅಘೋಷಿತ ಸೈನ್ಯದ ಪ್ರಹಾರ ಎದುರಿಸುವುದು ಸುಲಭವಲ್ಲ.
   ಬ್ರಾಹ್ಮಣ ಮಠದ ಅನಾಚಾರದ ದಾಖಲೆ ಸ್ವತಃ ಓದಿ ವಿರೋದ ಮಾಡಿದ್ದರಿಂದ ಶಾಂತರಾಮರ ಇಡೀ ಕುಟುಂಬದ ಗೌರವಾನ್ವಿತ ಸ್ತ್ರೀಯರ ವಿರುದ್ಧ ಅವಮಾನಕರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬರೆಯುವ ಬೈಯುವ ಬ್ರಾಹ್ಮಣರ ಬಗ್ಗೆ ಶಾಂತರಾಮರ ಅಭಿಪ್ರಾಯ....
   ಸ್ವಜಾತಿಯರನ್ನೆ ಹೊಡಿ-ಬಡಿ - ಮಯಾ೯ದೆ ಹರಾಜು ಮಾಡು ಎಂದು ಪ್ರೇರೇಪಿಸುವುದು ಯಾವ ಸಂಸ್ಕಾರ ?.
   ವಿದ್ಯಾರ್ಜನೆಗಾಗಿ ಬಂದ ಬಡ ಹೆಣ್ಣು ಮಕ್ಕಳಿಗೆ ಅವರ ಜಾತಿಯ ಮಠದಲ್ಲಿ ರಕ್ಷಣೆ ಸಿಗಬೇಕಾಗಿತ್ತು ಆದರೆ ...


   

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...