Skip to main content

Blog number 1850. ಮೇಲ್ಜಾತಿ ಬ್ರಾಹ್ಮಣ ಸಂಘಟನೆ ಬಗ್ಗೆ ಮ್ಯಾಗ್ಸೆಸ್ಸೆ ಪ್ರಶಸ್ತಿ ವಿಜೇತ ಕೆ. ವಿ. ಸುಬ್ಬಣ್ಣರ ಕರಪತ್ರದ ಬಗ್ಗೆ ಹೆಚ್ಚು ಚರ್ಚೆ ಮತ್ತು ವಿಮರ್ಶೆಗಳಾಗಲಿ.

#ಮೇಲ್ಜಾತಿ_ಸಂಘಟನೆ_ಬಗ್ಗೆ_ಕೆವಿ_ಸುಬ್ಬಣ್ಣರ_ಪ್ರತಿಭಟಿನೆ_ಕರ_ಪತ್ರ

#ಸಾಗರದಲ್ಲಿ_1982ರ_ಪೆಬ್ರುವರಿ_6_ಮತ್ತು_7ರಲ್ಲಿ_ನಡೆದ_ಅಖಿಲ_ಹವ್ಯಕ_ಮಹಾಸಮ್ಮೇಳನದಲ್ಲಿ.

#ದೇಶದ_ಖ್ಯಾತ_ಪತ್ರಕರ್ತ_ಡಿಪಿ_ಸತೀಶ್

#ನಾಡಿನ_ಖ್ಯಾತ_ವಿಮರ್ಶಕ_ಅರವಿಂದ_ಚೊಕ್ಕಾಡಿ

#ಧೀರ_ಹವ್ಯಕ_ಕನ್ನಡಿಗ_ಅನಿವಾಸಿ_ಭಾರತೀಯ_ಶಾಂತರಾಮ_ಹೆಗಡೆಕಟ್ಟೆ 

#ಜಾತಿ_ಆಚರಣೆ_ವಿರೋದಿಸಿದ್ದಾರೆ.


    ಹೆಗ್ಗೋಡಿನ ನೀನಾಸಂ - ಸಂಸ್ಥೆ ನಾಟಕ ಮತ್ತು ಸಿನಿಮಾ ಜನರಿಗೆ ಹೇಗೆ ಚಿರಪರಿಚಿತವೋ ಹಾಗೆಯೇ ಇದರ ಸಂಸ್ಥಾಪಕ ಕೆ.ವಿ.ಸುಬ್ಬಣ್ಣ ತಮ್ಮ ವಿಚಾರ ಮತ್ತು ಬರವಣಿಗೆಯಿಂದ ವಿಶ್ವವಿಖ್ಯಾತರು.
   ಅಂತರಾಷ್ಟ್ರೀಯ ಮ್ಯಾಗ್ಸೆಸೆ ಪ್ರಶಸ್ತಿ ವಿಜೇತರು ಶಿವಮೊಗ್ಗ, ಜಿಲ್ಲೆಯ ಸಾಗರ ತಾಲ್ಲೂಕಿನ ಸಣ್ಣ ಹಳ್ಳಿ ಹೆಗ್ಗೋಡಿನವರು ಮತ್ತು  ನಮ್ಮ ತಾಲ್ಲೂಕಿನವರು ಅಂತ ನಮಗೆಲ್ಲ ಕೆ.ವಿ.ಸುಬ್ಬಣ್ ಅಂದರೆ ಹೆಮ್ಮೆ.
     ಒಮ್ಮೆ ನೀನಾಸಂ ಸಭಾ0ಗಣದಲ್ಲಿ ಸುಬ್ಬಣ್ಣನವರ ಜೊತೆ ಸಭೆ ಒಂದರಲ್ಲಿ ಅತಿಥಿಯಾಗಿ ಭಾಗವಹಿಸಿದ್ದೆ, ದೇವಾಡಿಗ ಜಾತಿಯ (ವೀರಪ್ಪ ಮೊಯ್ಲಿ) ಜಾತಿ ಸಮಾವೇಶವದು, ಸಂಘಟಕರು ನನ್ನನ್ನ ಕರೆದಾಗ ನನಗೆ ನಂಬಲಿಕ್ಕೆ ಆಗಲಿಲ್ಲ, ಸಣ್ಣ ಜಾತಿ ಸಮಾವೇಶಕ್ಕೆ ಸುಬ್ಬಣ್ಣ ಬರುವುದು ಅನುಮಾನ ಅಂದೆ. ಇಲ್ಲ ಒಪ್ಪಿದಾರೆ ಮತ್ತು  ಸಬಾoಗಣ ಉಚಿತವಾಗಿ ನೀಡಿದ್ದಾರೆ ಅಂದರು.
      ಅವತ್ತಿನ ಸಭೆಯಲ್ಲಿ ಸುಬ್ಬಣ್ಣರ ಬಾಷಣ ಸಣ್ಣ ಜಾತಿಗಳ ಶೂದ್ರರಿಗೆ ಒ೦ದು ಆಶಾದಾಯಕವಾದ ದಿಕ್ಷೂತಿಯ ನೀತಿ ಪಾಠವಾಗಿತ್ತು, ರಾಮಮನೋಹರ ಲೋಹಿಯಾ ಅವರ ಸಮಾಜವಾದದ ಅನುಯಾಯಿ ಆಗಿದ್ದ ಸುಬ್ಬಣ್ಣ ಸಮಾಜವಾದದ ವಿಚಾರಧಾರೆ ಹೊಂದಿದವರು ಹಾಗಾಗಿ ಅವರ ಮಾತನ್ನ ಗಮನವಿಟ್ಟು ಆಲೈಸುತ್ತಿದ್ದೆ..........
     " ದೇಶದಲ್ಲಿ ಮೇಲ್ಜಾತಿಗಳ ಸಂಘಟನೆಗಳು ಅವಶ್ಯವಿಲ್ಲ, ಅದರಿಂದ ಸಮಾಜಕ್ಕೆ ಮಾರಕ ಆದರೆ ಅಸಂಘಟಿತ ಸಣ್ಣ ಸಣ್ಣ ಜಾತಿಗಳು ತಮ್ಮ ಹಕ್ಕು ಮತ್ತು ಸವಲತ್ತುಗಳಿಗಾಗಿ ಸಂಘಟಿತರಾಗಬೇಕು " ಎಂಬ ಮಾತು ಸ್ವತಃ ಬ್ರಾಹ್ಮಣರಾದ ಹಾಗೂ ವಿಚಾರವಾದಿ ಸುಬ್ಬಣ್ಣರ ಬಾಯಲ್ಲಿ ಬ೦ದಿದ್ದರ ತಾತ್ಪಯ೯ ಅವರಿಂದಲೆ ಕೇಳಬೇಕೆಂದುಕೊಂಡೆ.
      ಸಬೆಯ ಮಧ್ಯದಲ್ಲಿ ಅವರು ವಿರಾಮದ ಮೂಡಿನಲ್ಲಿ ಇದ್ದಾಗ, " ಸುಬ್ಬಣ್ಣ ಮೇಲ್ಜಾತಿಗಳು ಯಾಕೆ ಸಂಘಟಿತರಾಗಬಾರದು, ಸಂಘಟಿತರಾದರೆ ಸಮಾಜಕ್ಕೆ ಯಾವ ರೀತಿ ಮಾರಕ ? ನನಗೆ ಸರಿಯಾಗಿ ಅಥ೯ವಾಗಿಲ್ಲ"... ಅಂದೆ, ಅದಕ್ಕೆ ಅವರು ನೀಡಿದ ವಿವರಣೆ
   "ಬ್ರಾಹ್ಮಣರು ಸಾವಿರಾರು ವಷ೯ದಿಂದ ತಮ್ಮ ಆಚರಣೆಗಳಿಂದ ಸಂಘಟಿತರಾಗೇ ಇದ್ದಾರೆ, ಅವರಿಗೆ ಸಣ್ಣ ಜಾತಿಗಳ0ತೆ ಅವರ ಹಕ್ಕು, ಸವಲತ್ತುಗಳಿಗಾಗಿ ಹೋರಾಟ ಮಾಡುವ ಅವಶ್ಯಕತೆ ಇಲ್ಲ, ಇಂತಹ ಉದ್ದೇಶದ ಸಂಘಟನೆ ಪ್ರಾರಂಭಿಸಿದರೆ ದೇಶದ ಇತರ ಜಾತಿಗಳನ್ನ ಅವು ಶೋಷಣೆ ಮಾಡಲು ಕಾರಣವಾಗುತ್ತೆ ಆದ್ದರಿಂದ ಅದರ ಅವಶ್ಯಕತೆ ಇಲ್ಲ."
    "ಆದರೆ ಸಣ್ಣ ಸಣ್ಣ ಜಾತಿಗಳು ತಮ್ಮ ಹಕ್ಕುಗಳಿಗಾಗಿ ಸವಲತ್ತುಗಳಿಗಾಗಿ ಸಂಘಟಿತರಾಗದಿದ್ದರೆ ಸಂಘಟಿತ ದೊಡ್ಡ ಜಾತಿಗಳಿಂದ ಉಳಿಗಾಲ ಇಲ್ಲ"  ಅಂದರು.
    ಅವರ ಮಾತು ಸರಿಯಾಗಿ ಚಿಂತನೆ ಮಾಡಿದರೆ ಎಷ್ಟು ಅಥ೯ಗಬಿ೯ತ ಅಂತ ಅಥ೯ ಆಗುತ್ತೆ.
   ಇವತ್ತು ನಾನು ಪೋಸ್ಟ್ ಮಾಡಿದ ಶಾಂತಾರಾಮ ಹೆಗಡೆ ಕಟ್ಟೆ ಸಂದರ್ಶನಕ್ಕೆ ಖ್ಯಾತ ಪತ್ರಕರ್ತ ಡಿ.ಪಿ. ಸತೀಶ್ ಪ್ರತಿಕ್ರಿಯಿಸಿ ತಾವು ಜಾತಿ ಸಂಘಟನೆಗಳಿಂದ ದೂರ ಮತ್ತು ಸಮಾಜದಲ್ಲಿ ಶೋಷಿತರು ದಮನಿತರಾದ ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಮಾತ್ರ ಜಾತಿ ಸಂಘಟನೆಗಳು ಮಾತ್ರ ಜಾತಿ ಸಂಘಟನೆ ಮಾಡಲು ಹಕ್ಕು ಹೊಂದಿದ್ದಾರೆ ಎಂದಾಗ ನನಗೆ ಕೆ.ವಿ.ಸುಬ್ಬಣ್ಣರ ಜೊತೆ ಹೆಗ್ಗೋಡಿನ ನೀನಾಸಂ ಸಭಾಂಗಣದಲ್ಲಿ ದೇವಾಡಿಗ ಜಾತಿ ಸಂಘದ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿದಾಗ ಅವರಾಡಿದ ಮಾತು ಅದಕ್ಕೆ ಅವರು ನೀಡಿದ ವಿವರಣೆ ನೆನಪಾಯಿತು ಅದನ್ನು ಇಲ್ಲಿ ದಾಖಲಿಸಿದ್ದೇನೆ.
  ಖ್ಯಾತ ವಿಮರ್ಶಕ, ಬರಹಗಾರರಾದ #ಅರವಿಂದ_ಜೊಕ್ಕಾಡಿ ಅವರು ನನ್ನ ಅತಿಥಿ ಆಗಿದ್ದಾಗ ಇಂತಹದೇ ವಿಚಾರದಲ್ಲಿ ಅವರು ಹೇಳಿದ್ದು "ಅರ್ಚಕರ ಮೇಲಿನ ಲೋಪಗಳು ಆರೋಪಗಳನ್ನು ಬ್ರಾಹ್ಮಣ ಸಂಘಟನೆಗಳು ಸಮರ್ಥಿಸಿಕೊಳ್ಳಬಾರದು" ಎಂಬುದು.
   ಇಡಗುಂಜಿಯ ಮುಜರಾಯಿ ದೇವಸ್ಥಾನದ ಪಂಕ್ತಿ ಭೇದದ ಬಗ್ಗೆ ಸಾಮಾಜಿಕ ಜಾಲ ತಾಣದ ಚರ್ಚೆಯಲ್ಲಿ ಅನೇಕರು ಸಮರ್ಥಿಸಿಕೊಳ್ಳುವ ವಿಪರೀತ ಜಾತಿ ಪ್ರೇಮದ ಬಗ್ಗೆ ಪರ ವಿರೋದಗಳು ನೋಡುತ್ತಿದ್ದೇವೆ.
  1982ರ ಪೆಬ್ರುವರಿ 6 ಮತ್ತು 7 ರಂದು ಸಾಗರದಲ್ಲಿ ನಡೆದ ಅಖಿಲ ಹವ್ಯಕ ಮಹಾ ಸಮ್ಮೇಳನದಲ್ಲಿ ಕೆ.ವಿ. ಸುಬ್ಬಣ್ಣ ಮುದ್ರಿಸಿ ಹಂಚಿದ ಕರಪತ್ರ ಹವ್ಯಕ ಜಾತಿ ಸಮಾವೇಶಕ್ಕೆ ಅವರು ವ್ಯಕ್ತ ಪಡಿಸಿದ ತೀವ್ರ ಪ್ರತಿಭಟನೆ ಆಗಿತ್ತು.
  ಆ ಕರ ಪತ್ರದಲ್ಲಿ ಕೆ.ವಿ.ಸುಬ್ಬಣ್ಣ "ಜಾತಿ ಪದ್ಧತಿ ತಪ್ಪೆಂದು ಎಲ್ಲರೂ ಒಪ್ಪುತ್ತಾರೆ, ಮಠಾದೀಶರು ಬಹಿರಂಗವಾಗಿ ಧ್ವನಿ ಎತ್ತುತ್ತಾರೆ ಆದರೆ ಆಚರಣೆಯಲ್ಲಿ ಮಾತ್ರ ಹಾಗೆ ನಡೆದು ಕೊಳ್ಳುವುದಿಲ್ಲ" ಎಂದು ನಮೂದಿಸಿದ್ದಾರೆ.
  " ಆದರೆ ತಮ್ಮ ತಪ್ಪು ಮುಚ್ಚಿಕೊಳ್ಳಲು ಅನೇಕ ಸಮರ್ಥನೆ ಮತ್ತು  ಜಾತಿ ವ್ಯವಸ್ಥೆ ಸಾಕಿ ಬೆಳೆಸುವಂತ ಪ್ರಯತ್ನ ಯಾವುದೇ ರೀತಿಯಿಂದಲೂ ಸರಿ ಅಲ್ಲ " ಎಂಬ ಕರಪತ್ರ 1982 ರ ಸಂಚಿಕೆ 6 ರುಜುವಾತು ಪತ್ರಿಕೆಯಲ್ಲಿ ಪ್ರಕಟವಾದದ್ದು ಇಲ್ಲಿ ಲಗತ್ತಿಸಿದೆ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ