Skip to main content

Blog number 1853. ಮನುಷ್ಯ ಮತ್ತು ವನ್ಯಜೀವಿ ಸಂಘರ್ಷದ ಪರಕಾಷ್ಟೆಗೆ ಕಾರಣ ಏನು? ಪ್ರಸಕ್ತ ಸಾಲಿನ ವನ್ಯಜೀವಿ ಸಂರಕ್ಷಣಾ ಕಾಯ್ದೆ ಕಾನೂನು ಪುನರ್ ವಿಮರ್ಶೆ ಅನಿವಾರ್ಯವಾ?

#ಕಾಡು_ಪ್ರಾಣಿಗಳು_ಜನವಸತಿ_ಕೇಂದ್ರಗಳಿಗೆ_ಬರುತ್ತಿರುವುದು_ಏಕೆ

#ಹೆಚ್ಚುತ್ತಿರುವ_ಜನಸಂಖ್ಯೆ_ಕ್ಷೀಣಿಸುತ್ತಿರುವ_ಅರಣ್ಯ

#ಜನವಸತಿ_ಕೃಷಿ_ಜಮೀನುಗಳಲ್ಲಿ_ಲಗ್ಗೆ_ಇಡುತ್ತಿರುವ_ವನ್ಯಜೀವಿಗಳು.

#ಚಿಕ್ಕಮಗಳೂರಿನಲ್ಲಿ_ದಸರಾ_ಅಂಭಾರಿ_ಹೊರುವ_ಆನೆ_ಅರ್ಜುನದ_ಸಾವು.

#ಶಿವಮೊಗ್ಗ_ಜಿಲ್ಲೆ_ಪಶ್ಚಿಮಘಟ್ಟದ_ಕರ್ನಾಟಕ_ರಾಜ್ಯದ_ಪ್ರಮುಖ_ಜಿಲ್ಲೆ.

#ಕಸ್ತೂರಿ_ರಂಗನ್_ವರದಿಯಲ್ಲಿ_ಅತಿ_ಹೆಚ್ಚು_ಭೂಪ್ರದೇಶ_ಅರಣ್ಯಕ್ಕೆ_ಸೇರಿದೆ

#ಶಿವಮೊಗ್ಗ_ಜಿಲ್ಲೆಯಲ್ಲಿ_ನಡೆದ_ಈ_ಎರೆಡು_ಘಟನೆ_ನೀಡುವ_ಸಂದೇಶ_ಏನು?

#ಕಳೆದ_ವರ್ಷ_ಕಾಡಾನೆ_ರೈತರು_ಪಸಲು_ರಕ್ಷಣೆಗೆ_ಬೇಲಿಗೆ_ವಿದ್ಯುತ್_ನೀಡಿದ್ದರಿಂದ_ಮೃತ_ಪಟ್ಟಿದ_ಘಟನೆ.

#ನಮ್ಮ_ಊರಿನ_ಸಮೀಪದ_ಕುಣೆಹೊಸೂರಿನಲ್ಲಿ_ಉರುಳಿಗೆ_ಸಿಲುಕಿ_ಸತ್ತ_ಚಿರತೆ.
   ದಸರಾ ಅಂಬಾರಿ ಹೊರುವ ಆನೆ ಅರ್ಜುನದ ಸಾವಿಗೆ ಕಾರಣ ನಾನಾ ರೀತಿಯಲ್ಲಿ ಬರುತ್ತಿದೆ ....
    70 ವಷ೯ದ ಹಿಂದಿನ ದಟ್ಟ ಅರಣ್ಯ ಶಿವಮೊಗ್ಗ ಜಿಲ್ಲೆಯಲ್ಲಿದ್ದಾಗ ಕಾಡಾನೆ , ನರಭಕ್ಷಕಗಳ ಹಾವಳಿ ಇದ್ದಿತ್ತೆಂಬ ಅನೇಕ ಘಟನೆಗಳು ದಾಖಲಾಗಿದೆ ಆದರೆ ಈಗ ಅರಣ್ಯ ಪ್ರದೇಶವನ್ನೆಲ್ಲ ಜನವಸತಿ ಕೇಂದ್ರಗಳಾಗಿಸಿ ಆಗಿದೆ.
  ಆದರೆ ಈಗ ಮತ್ತೆ ಕಾಡಾನೆ, ಹುಲಿ, ಚಿರತೆ, ಕಾಳಿಂಗ ಸರ್ಪ, ಕಾಡುಕೋಣಗಳು ಊರೊಳಗೆ ಬರುತ್ತಿರುವುದು ಏಕೆ?
  ಸಂರಕ್ಷಿತ ಅರಣ್ಯದ ಗಡಿ ನಿಗದಿ ಆಗಿದೆ, ವನ್ಯ ಪ್ರಾಣಿಗಳ ಸಂರಕ್ಷಣೆಗಾಗಿ ಹಂದಿಯಂತ ಪ್ರಾಣಿಗಳನ್ನೂ ರೈತರು ಪಸಲು ಸಂರಕ್ಷಣೆಗಾಗಿ ಕೊಂದರೆ ಜೈಲಿಗೆ ಹಾಕುವ ಕಾನೂನಿದ್ದರೂ ಕಾಡಾನೆ, ಚಿರತೆಗಳು ಜೀವ ಕಳೆದ ಎರೆಡು ಘಟನೆಗೆ ಕಾರಣ ಏನು?
  ಪಸಲು ರಕ್ಷಣೆಗಾಗಿ ಬೇಲಿಗೆ ವಿದ್ಯುತ್ ಹರಿಸಿದ ರೈತರಿಂದ ಆನೆ ಹತ್ಯೆ ಅಂತ ಜೈಲು ಕೇಸು ಮಾಡಬಹುದು ಅದೇ ರೀತಿ ಚಿರತೆ ಮೊಲ ಅಥವ ಕಾಡು ಹಂದಿಯ ಬೇಟೆಗಾಗಿ ಹಾಕಿದ್ದ ತಂತಿಯ ಉರುಳಿನಲ್ಲಿ ಸಿಲುಕಿ ನರಳಿ ಸತ್ತದ್ದಕ್ಕೆ ಕಾರಣರಾದವರನ್ನು ಬಂದಿಸಬಹುದು.
  ಆದರೆ ಇಲ್ಲಿ ಸರಿಯಾದ ರೀತಿಯಲ್ಲಿ ಸಂಶೋದನೆ ಆಗಬೇಕು ಕಾಡು ಪ್ರಾಣಿಗಳು ಜನವಸತಿ ಕೇಂದ್ರದ ಒಳಗೆ ಬರಲು ಕಾರಣ ಏನು?
  ವನ್ಯ ಸಂರಕ್ಷಣಾ ಕಾನೂನು ಕಠಿಣವಾದರೂ ರೈತರ ಪಸಲು ವನ್ಯ ಪ್ರಾಣಿಗಳ ಸಂರಕ್ಷಣೆಗೆ ಯಾವ ಮಾನದಂಡ ಜಾರಿ ಇದೆ?.. ರೈತರ ಪಸಲು ಉಳಿಯಬೇಕು ವನ್ಯ ಪ್ರಾಣಿಗಳೂ ಉಳಿಯಬೇಕೆಂಬ ರೀತಿಯ ಕಾನೂನು ಜಾರಿ ಆಗದಿದ್ದರೆ ಮು೦ದಿನ ದಿನಗಳಲ್ಲಿ ಇನ್ನೂ ಎಷ್ಟು ಇಂತಹ ಘಟನೆಗಳಿಗೆ ನಾವೆಲ್ಲ ಪ್ರತ್ಯಕ್ಷ ದರ್ಶಿಗಳಾಗಬೇಕೋ?
  ರೈತರ ಅನದಿಕೃತ ವಿದ್ಯುತ್ ಹರಿಸಿದ ಬೇಲಿಗೆ ಸಿಲುಕಿ ಕೆಲ ತಿಂಗಳ ಹಿಂದೆ ಶಿವಮೊಗ್ಗ ಸಮೀಪದಲ್ಲಿ ಮೃತ ಪಟ್ಟ ಕಾಡಾನೆಗಳ ಮಾಹಿತಿ ಈ ಕೆಳಗಿನ ಬ್ಲಾಗ್ ಕ್ಲಿಕ್ ಮಾಡಿ ನೋಡಬಹುದು
https://arunprasadhombuja.blogspot.com/search?q=%E0%B2%95%E0%B2%BE%E0%B2%A1%E0%B2%BE%E0%B2%A8%E0%B3%86

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ