Skip to main content

Blog number 1861. ಗ್ರೀಸಿನಲ್ಲಿ ಜೈಲಿನ ಖೈದಿಗಳಿಗೆ ಶಿಕ್ಷೆ ನೀಡಲು ಬಳಸುತ್ತಿದ್ದ ಮ್ಯಾನ್ಯೂಯಲ್ ಕ್ಲಿಪ್ಪರ್ ಬಾಲ್ಯದಲ್ಲಿ ನಮ್ಮ ಕ್ಷೌರದಲ್ಲಿ ಆಗಿನ ನಮ್ಮ ಆನಂದಪುರಂನ ಹೈಟೆಕ್ ಸಲೂನ್ ಮಾಲಿಕ ರಾಮಣ್ಣ ಬಳಸುತ್ತಿದ್ದರು ಅದು ಆ ಕಾಲದ ಆದುನಿಕ ಸಲೂನಿನ ಶೋ ಪೀಸ್ ಆಗಿತ್ತು.

#ಮ್ಯಾನ್ಯೂಯಲ್_ಕ್ಲಿಪ್ಪರ್_ನಮ್ಮ_ಬಾಲ್ಯದಲ್ಲಿ_ಅತಿಹೆಚ್ಚು_ನೋವು_ತರಿಸಿದ_ಕ್ಷೌರಿದ_ಯಂತ್ರ.

#ಪ್ರತಿತಿಂಗಳು_ಇದನ್ನು_ಎದುರಿಸ_ಬೇಕಾದ_ಭಯ.

#ಇಂಜೆಕ್ಷನ್_ಕೊಡುವಾಗ_ಆಸ್ಪತ್ರೆಯಲ್ಲಿ_ಮಕ್ಕಳು_ಅಳುತ್ತಿದ್ದಂತೆ

#ಸಲೂನಿನಲ್ಲಿ_ರಚ್ಚೆ_ಹಿಡಿಯುತ್ತಿದ್ದರು

#ಮಕ್ಕಳ_ತಲೆಯನ್ನು_ಅಲುಗಾಡದಂತೆ_ಪೋಷಕರು_ಹಿಡಿದುಕೊಳ್ಳುತ್ತಿದ್ದರು

#ಈ_ಯಂತ್ರ_ಬಳಸಲೇ_ಬೇಕೆಂಬ_ಹಠ_ಸಲೂನ್_ಮಾಲಿಕರದ್ದು

#ಈಗಿನ_1980ರ_ನಂತರದಲ್ಲಿ_ಜನಿಸಿದ_ತಲೆಮಾರಿಗೆ_ಇದು_ಗೊತ್ತಿಲ್ಲ
   ನನ್ನ ಬಾಲ್ಯದಲ್ಲಿ ಪ್ರಬಾವ ಬೀರಿದ ಡುಮಿಂಗ್ ರೆಬೆಲೋ ಲೇಖನ ಬರೆದಿದ್ದೆ ಅದರಲ್ಲಿ ಅವರು ಪ್ರತಿ ತಿಂಗಳು ಆನಂದಪುರದ ರಾಮಣ್ಣನ ಸಲೂನಿನಲ್ಲಿ ಕಷ್ಟಪಟ್ಟು ನನ್ನ ಕ್ಷೌರ ಮಾಡಿಸಿಕೊಂಡು ಬರುತ್ತಿದ್ದ ಬಗ್ಗೆ ಅಲ್ಲಿನ ಮಿಷನ್ ಒಂದರ ಬಗ್ಗೆ ಬರೆದಿದ್ದೆ, ಆ ಕಾಲಮಾನದ ಬಾಲ್ಯದಲ್ಲಿದ್ದ ಅನೇಕರಿಗೆ ಈ ಯಂತ್ರ ಯಮಯಾತನೆ ನೀಡಿತ್ತಂತೆ.
 ಇಲ್ಲಿ ಕ್ಲಿಕ್ ಮಾಡಿ ಆ ಲೇಖನ ಓದ ಬಹುದು https://arunprasadhombuja.blogspot.com/2020/12/blog-post_7.html
  ಹಾಗಾಗಿ ನನಗೂ ಆ ಯಂತ್ರದ ಬಗ್ಗೆ ಕುತೂಹಲ ಹೆಚ್ಚಾಗಿ ಅಂತರ್ ಜಾಲದಲ್ಲಿ ಮಾಹಿತಿಗಾಗಿ ಹುಡುಕಿದಾಗ ಸಿಕ್ಕಿದ ವಿವರ ಇಲ್ಲದೆ.
  ಇದರ ಹೆಸರು ಮ್ಯಾನ್ಯೂಯಲ್ ಕ್ಲಿಪ್ಪರ್ ಇದನ್ನು ಸೆರಿಬಿಯನ್ ದೇಶದ ಬಾಬ೯ರ್ ನಿಕೋಲಾ ಬಿಜುಮಿಲ್ ಎಂಬಾತ 1850-1890 ರ ಅವದಿಯಲ್ಲಿ ತಯಾರಿಸಿ ಅದನ್ನು ಕಾಲಕಾಲಕ್ಕೆ ಅಭಿವೃದ್ದಿ ಮಾಡುತ್ತಾನೆ.
 ಈ ಮ್ಯಾನ್ಯೂಯಲ್ ಕ್ಲಿಪ್ಪರ್ ನ ಆ ಕಾಲದ ಸೈನಿಕರ ಕ್ಷೌರಕ್ಕಾಗಿ ಮಿಲಿಟರಿಗಳಲ್ಲಿ, ಜೈಲಿನ ಖೈದಿಗಳ ಕ್ಷೌರಕ್ಕಾಗಿ ಜೈಲಿನಲ್ಲಿ ನಂತರ ಶಾಲಾ ವಿದ್ಯಾಥಿ೯ಗಳಾದ ಗಂಡು ಮಕ್ಕಳ ಕ್ಷೌರಕ್ಕಾಗಿ ಬಳಸುತ್ತಿದ್ದರಂತೆ.
 ರಷಿಯಾದ ಸ್ಯೆನ್ಯದಲ್ಲಿ ಇದನ್ನ ಬಳಸಿ ಸೈನಿಕರ ಕ್ಷೌರ ಮಾಡುತ್ತಿದ್ದರಂತೆ. 
ಗ್ರೀಸ್ ನಲ್ಲಿ 1950-1960 ರಲ್ಲಿ ಶಿಕ್ಷೆಗಾಗಿ ಇದರಿಂದ ಕ್ಷೌರ ಮಾಡಿಸುತ್ತಿದ್ದರಂತ ವಿವರ ಇದೆ.
  #ಹಾಗಾದರೆ_ಬಾರತದಲ್ಲಿ_ಯಾಕಾಗಿ_ನಮ್ಮ_ಬಾಲ್ಯದಲ್ಲಿ_ಇದನ್ನು_ನಮ್ಮ_ತಲೆಗೆ_ಶಿಕ್ಷೆ_ನೀಡಿದರು?

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...