Skip to main content

Blog number 1863. ನನ್ನ ಕಾದಂಬರಿ ಬೆಸ್ತರ ರಾಣಿ ಚಂಪಕಾ ಖ್ಯಾತ ಸಾಹಿತಿ ಅಂಕಣಕಾರ ಶಿಕ್ಷಣ ತಜ್ಞ ಅರವಿಂದ ಚೊಕ್ಕಾಡಿ ಅವರಿಂದ ಅವಲೋಕನ ಕಳೆದ ವರ್ಷ ನಡೆದ ನೆನಪುಗಳು

https://youtu.be/7iVgJRaPlZA?feature=shared

#ಕಳೆದ_ವರ್ಷ_ಖ್ಯಾತ_ಸಾಹಿತಿ_ಅಂಕಣಕಾರ_ಶಿಕ್ಷಣ_ತಜ್ಞ

#ಅರವಿಂದ_ಚೊಕ್ಕಾಡಿಯವರು

#ನನ್ನ_ಎರೆಡು_ಪುಸ್ತಕಗಳ_ಅವಲೋಕನ_ಮಾಡಿದರು

#ಕೆಳದಿ_ಸಾಮ್ರಾಜ್ಯ_ಇತಿಹಾಸ_ಮರೆತಿರುವ_ಬೆಸ್ತರ_ರಾಣಿ_ಚಂಪಕಾ

#ಅವಲೋಕನ_ಈ_ಭಾಗದಲ್ಲಿದೆ.

  ಸ್ಟಾರ್ ವ್ಯಾಲ್ಯೂ ಇರುವ ಲೇಖಕರ ಪುಸ್ತಕಗಳಿಗೆ ಅವಲೋಕನದ ಭಾಗ್ಯ ಇರುವುದು ಸಹಜ ಆದರೆ ಸಾಹಿತಿ ಅಲ್ಲದ ಹವ್ಯಾಸಿ ಬರಹಗಾರನಾದ ನನ್ನ ಪುಸ್ತಕದ ಅವಲೋಕನ ಮಾಡಿಸಬೇಕೆಂಬ ಒತ್ತಾಸೆ ತಂದವರು ನನ್ನ ಊರಾದ ಆನಂದಪುರಂ ಹೋಬಳಿ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ.ಡಿ.ರವಿಕುಮಾರ್ ಮತ್ತು ಸಾಗರ ತಾಲ್ಲೂಕ್ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ವಿ.ಟಿ. ಸ್ಟಾಮಿಯವರು ಅವರಿಗೆ ಪ್ರೋತ್ಸಾಹಿಸಿ ಭಾಗವಹಿಸಿದ ಶಿವಮೊಗ್ಗ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಮಂಜುನಾಥ್.
   ವಿಶ್ವದಾಖಲೆಯ ಹಬ್ಬು ಸಾಹಿತ್ಯ ಕುಟುಂಬದ ಜೊತೆ ಸಂವಾದ ಸನ್ಮಾನದ ಜೊತೆ ನಡೆದ ನನ್ನ ಪುಸ್ತಕಗಳ ಅವಲೋಕನ ಮಾಡಿದವರು ಖ್ಯಾತ ಸಾಹಿತಿ, ಅಂಕಣಕಾರ, ಶಿಕ್ಷಣ ತಜ್ಞ ಅರವಿಂದ ಚೊಕ್ಕಾಡಿಯವರು ಇದಕ್ಕಿಂತ ಹೆಚ್ಚಿನ ಸಂತೋಷ ತೃಪ್ತಿ ನನಗೆ ಬೇಕಾಗಿಲ್ಲ ಇದಕ್ಕಾಗಿ ಕಾರಣಕರ್ತರಾದ ಎಲ್ಲರಿಗೂ ಕೃತಜ್ಞತೆ ಅರ್ಪಿಸುತ್ತೇನೆ.
  ಅರವಿಂದ ಚೊಕ್ಕಾಡಿ ಇತಿಹಾಸ - ಸಾಹಿತ್ಯದ ನಡೆದಾಡುವ ವಿಶ್ವಕೋಶ ಅವರು #ಬೆಸ್ತರ_ರಾಣಿ_ಚಂಪಕಾ ದ ಪ್ರೇಮ ಸಂಕೇತವಾದ ರಂಗೋಲಿ ಬಗ್ಗೆ, ಸವತಿ ಬಂದರೆ ಬೇಸರ ಆದರೆ ಇಲ್ಲಿ ಸವತಿಯ ಆಹಾರ ಬೇಸರಕ್ಕೆ ಕಾರಣ - ನವ್ಯ ಮತ್ತು ನವೋದಯದಲ್ಲಿ ಜನರಿಗೆ ತಲುಪುವುದು ಯಾವುದು? .......ಮಾತಾಡಿದ್ದಾರೆ ಕೇಳಿ.
https://youtu.be/7iVgJRaPlZA?feature=shared

  ಪ್ರೇಮ ಸಂಕೇತವಾಗಿ ಬಳಕೆ ಆದ ರಂಗೋಲಿ ಬಗ್ಗೆ ನಾನು ಬರೆದ ಆ ಒಂದು ಅಧ್ಯಾಯ ಅರವಿಂದ ಚೊಕ್ಕಾಡಿ ಅವರಿಗೆ ಇಷ್ಟವಾಗಲು ಕಾರಣ ..... ನಿಮಗಾಗಿ.
    #ರOಗೋಲಿ_ಏನಿದರ_ಮಹತ್ವ?
 ನಾನು ಬರೆದಿರುವ ಬೆಸ್ತರ ರಾಣಿ ಚಂಪಕಾ ಪುಸ್ತಕದಲ್ಲಿ ಚಂಪಕಾ ರಂಗೋಲಿ ಪ್ರವೀಣೆ, ರಾಜ ವೆಂಕಟಪ್ಪ ನಾಯಕರು ಅವಳು ಬಿಡಿಸುವ ರಂಗೋಲಿ ನೋಡಿಯೇ ಅವಳ ಮೇಲೆ ವ್ಯಾಮೋಹಗೊ೦ಡು ವಿವಾಹ ಆಗುತ್ತಾರೆ.
     ಈ ಕಾದಂಬರಿಯಲ್ಲಿ ರಂಗೋಲಿಯ ಬಗ್ಗೆ ಒಂದು ಅಧ್ಯಾಯದಲ್ಲಿ .....
  "ಚಂಪಕಾಳ ರಂಗೋಲಿಯಲ್ಲಿ ಅದೆಂತಹ ಆಕಷ೯ಣೆ ಇದೆ"
 ರಂಗೋಲಿಯ ಬಗ್ಗೆ ಆಸ್ಥಾನದ ಪಂಡಿತರ ಹತ್ತಿರ ಒಮ್ಮೆ ಚಚಿ೯ಸಿದಾಗ ಅವರು ಹೇಳಿದ್ದು ಅರುಣೋದಯದಲ್ಲಿ ಲಲನೆಯರು ತಮ್ಮ ಮನೆಯಂಗಳದಲ್ಲಿ ವಿವಿದ ರೀತಿಯ ರಂಗೋಲಿಯನ್ನ ರಚಿಸುವುದು ಭಾರತೀಯ ಸಂಸ್ಕೃತಿಯ ಒಂದು ಪ್ರಾಚೀನ ಸಂಪ್ರದಾಯವಾಗಿದೆ.ರಂಗೋಲಿಯು ಶಿಲ್ಪ ಕಲೆಗೂ ಆದಾರವಾಗಿತ್ತೆ೦ದು ತಿಳಿದು ಬಂದಿದೆ, ದೇವಾಲಯಗಳಲ್ಲಿ ದಾಮಿ೯ಕ ವಿಧಿ ವಿಧಾನಗಳಲ್ಲಿ ರಂಗೋಲಿ ಬಿಡಿಸುತ್ತಾರೆ.ಇದರಲ್ಲಿ ನಾನಾ ರೀತಿಯ ಕೋನಗಳು, ಆಕೃತಿಗಳು, ಆಯತಗಳು, ಮಂಡಲಗಳು ಇದೆ. ಸಮೂಹ ಚುಕ್ಕಿಗಳನ್ನ ಹಾಕಿ ಅದಕ್ಕೆ ರೇಖೆಗಳನ್ನ ಕೂಡಿಸಿ ಪ್ರಮಾಣಬದ್ಧವಾದ ರಂಗೋಲಿ ಹಾಕಿದರೆ ಮಾತ್ರ ರಂಗೋಲಿ ಸುಂದರವಾಗುತ್ತದೆ. ರಂಗೋಲಿಯಲ್ಲಿ ಆಧಿಕೃತ ಅಳತೆಗಳಿದೆ, ಈ ಕಲೆಯ ಪ್ರಾಚೀನತೆ ನಿಖರವಾಗಿ ತಿಳಿದಿಲ್ಲ, ವಿನ್ಯಾಸಗಳಂತೂ ಲೆಖ್ಖಕ್ಕೆ ಸಿಗುವುದಿಲ್ಲ.
  ರಂಗೋಲಿಯು ದೇವರನ್ನ ಒಲಿಸಿಕೊಳ್ಳುವ ಒಂದು ಆರಾದನಾ ಸಂಪ್ರದಾಯವೂ ಆಗಿದೆ, ಬಣ್ಣ ಬಣ್ಣದ ಹಿಟ್ಟುಗಳಿ೦ದ, ಕಲ್ಲಿನ ಪುಡಿಗಳಿಂದ ರಂಗೋಲಿಯನ್ನ ರಂಗು ರOಗಾಗಿಸುವ ಕಲೆ ಹೆಣ್ಣು ಮಕ್ಕಳು ಕಲಿತಿದ್ದಾರೆ, ಇದಕ್ಕೆ ಗೋದಿ, ಜವೆಗೋದಿ, ಅಕ್ಕಿ ಹಿಟ್ಟು, ಕುಂಕುಮ, ಅರಿಶಿಣ ಪುಡಿ, ಶಿಲಾ ಚುಣಾ೯ ಮತ್ತು ನವರತ್ನಪುಡಿಯನ್ನ ತುಂಬಿಸುವುದು ಒಂದು ಕಲೆ. ಹೋಮ ಹವನದಲ್ಲಿ ಮದುವೆಯ ಹಸೆಮಣೆಯಲ್ಲಿ ದೇವರ ಮಂಟಪಗಳಲ್ಲಿ ಪುರೋಹಿತರು ರಂಗೋಲಿ ಬಿಡಿಸುತ್ತಾರೆ, ತಾಂತ್ರಿಕ ಪೂಜೆಯಲ್ಲಿ ಮಂಡಲಗಳನ್ನು ರಂಗೋಲಿಯಲ್ಲೇ ಬಿಡಿಸಲೇ ಬೇಕು. ಎಲ್ಲರೂ ರಂಗೋಲಿಯಲ್ಲಿ ಪರಿಣಿತರಾಗಲು ಸಾಧ್ಯವಿಲ್ಲ. ರಂಗೋಲಿ ಬಿಡಿಸುವುದರಲ್ಲಿ ತಾಳ್ಮೆ ಇರಬೇಕು, ದೂರಾಲೋಚನೆ ಇರಬೇಕು, ಕಲ್ಪನೆ ಇರಬೇಕು, ಚುರುಕುತನ ಇರಬೇಕು ಹಾಗಿದ್ದರೆ ಮಾತ್ರ ಜನಾಕಷ೯ಕ ರಂಗೋಲಿ ರಚಿಸಲು ಸಾಧ್ಯ.ಹುಟ್ಟಿನಿಂದಲೇ ಈ ಚಾಕಚಕ್ಯತೆಯನ್ನ ಕೆಲವರು ತನ್ನ ಹಿಂದಿನ ಜನ್ಮದ ಫಲವಾಗಿ ಪಡೆದಿರುತ್ತಾರೆ.
  ನಿದಿ೯ಷ್ಟವಾದ ಆಳತೆಯ ಸ್ಪಷ್ಟವಾದ ಗೆರೆಗಳು ಹೊಂದಿರುವ ರಂಗೋಲಿಗೆ ಸೂಕ್ತ ಬಣ್ಣ ತುಂಬುವುದು ಕಲಾಕಾರಿಕೆ, ತಂತ್ರ ವಿದ್ಯೆಯಲ್ಲಿ ಇಂತಹ ರಂಗೋಲಿಗಳು ಸಾಧಕರ ಮನೋಸ್ಥಿಮಿತ ಉ೦ಟು ಮಾಡುತ್ತದೆ, ಅವರನ್ನ ಸಮಾದಿ ಸ್ಥಿತಿಗೂ ಒಯ್ಯುತ್ತದೆ, ತಂತ್ರ ವಿದ್ಯೆಯಿಂದ ಸಾದನೆ ಮಾಡಬೇಕಾದರೆ ಮಂಡಲಗಳು, ರಂಗೋಲಿಗಳು ಬಹುಮುಖ್ಯ.
  ಸುOದರವಾದ ಸಮಯೋಚಿತವಾದ ರಂಗೋಲಿಯಿಂದ ದೇವರು ಒಲಿಯಲೇ ಬೇಕು ಹಾಗಾಗಿ ರಂಗೋಲಿ ಎಂದರೆ ಅದು ಸಣ್ಣ ಚಿತ್ರವಲ್ಲ ಎಂತಹದೊ ಒಂದು ರೇಖೆಯಲ್ಲ ಯಾವುದೋ ಒಂದು ಪುಡಿಯಲ್ಲ ಇದಕ್ಕೆ ಪ್ರಾಚಿನತೆ ಸ್ಪಶ೯ವಿದೆ, ದೈವ ಶಕ್ತಿಯ ಬಲವಿದೆ, ತಂತ್ರ ವಿದ್ಯೆಯ ಒಲವಿದೆ, ಸಂಸ್ಕೃತಿಯ ಹಿನ್ನೆಲೆಯಿದೆ, ದಾಮಿ೯ಕ ಭಾವನೆಯ ಸೆಳಕಿದೆ, ಸೌ೦ದಯ೯ದ ತಳುಕಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.
  ಹಾಗಾಗಿ ಸುಂದರವಾದ ರಂಗೋಲಿ ಬಿಡಿಸುವ ಚಂಪಕಾಳ ಮೇಲೆ ರಾಜರ ವ್ಯಾಮೋಹವೂ ಇಮ್ಮಡಿಯಾಯಿತು, ಚಂಪಕಾ ನನ್ನವಳಾಗಿರಬೇಕು ಎಂಬ ಭಾವನೆ ರಾಜರಲ್ಲಿ ಉ೦ಟಾಯಿತು.
 ಹಾಗಾಗಿ ಚಂಪಕಾಳ ಬೇಟಿ ಮಾಡುವ ಗುರು ಪೂಣಿ೯ಮೆ ಎ೦ಬ ಪವಿತ್ರ ದಿನಕ್ಕಾಗಿ ರಾಜರು ಚಡಪಡಿಸಲು ಶುರು ಮಾಡಿದರು.
(ಮುಂದಿನ ಭಾಗದಲ್ಲಿ ನನ್ನ ಕಥಾ ಸಂಕಲನ #ಭಟ್ಟರ_ಬೊಂಡಾ_ಬಾಂಡ್ಲಿಯಲ್ಲಿ_ಬಿಲಾಲಿ_ಬಿಲ್ಲಿ_ಅಭ್ಯಂಜನದ_ಬಗ್ಗೆ_ಅವರ_ಅವಲೋಕನ)

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ