Skip to main content

Blog number 1864. ಸಜ್ಜನ ಸಂಪನ್ನ ಸಾಹುಕಾರ್ ಅಬ್ದುಲ್ ಯಾಹ್ಯಾ ಸಾಹೇಬರ ನೆನಪುಗಳು.

#ನಮ್ಮ_ಊರಿನ_ಸಜ್ಜನ_ಉಪಕಾರಿ_ಸಾಹುಕಾರರಾದ_ಯಾಹ್ಯಾ_ಸಾಹೇಬ್.

#ಅರವತ್ತರ_ದಶಕದಲ್ಲಿ_ಇಡೀ_ಆನಂದಪುರಂ_ಹೋಬಳಿಗೆ_ದೊಡ್ಡ_ವರ್ತಕರು

#ಆ_ಕಾಲದ_ಕೌಬಾಯ್_ಫ್ಯಾಷನ್_ಇವರದ್ದು

#ಆ_ಕಾಲದ_ಹಿಂದಿ_ನಟ_ರಾಜೇಶ್_ಖನ್ನಾ_ರೀತಿ

#ಕುದುರೆ_ಸವಾರಿ_ಶಿಕಾರಿ_ಜೀಪ್_ಬೈಕ್_ಸವಾರಿ_ಕೃಷಿ_ವ್ಯಾಪಾರ_ಇವರದ್ದು

#ರೈಪಲ್_ತೋಟಾ_ಬಂದೂಕು_ರಿವಾಲ್ವಾರ್_ಸಂಗ್ರಹಣೆಯ_ಶೋಕಿ_ಅವರದ್ದು

#ಇವರ_ಅಂಗಡಿಯ_ಕಡು_ನೀಲಿ_ಬಣ್ಣದ_ಸಾಲದ_ಪುಸ್ತಕ_ಸಿಕ್ಕರೆ_ಈಕಾಲದ_ಬ್ಯಾಂಕ್_ಒಡಿ_ಸಿಕ್ಕಿದಂತೆ

#ಸಾಗರ_ಶಿವಮೊಗ್ಗ_ತಾಲ್ಲೂಕು_ಅಂಚಿನ_ಕುಣೇಹೊಸೂರು_ಸಮೀಪದಲ್ಲಿ_ನೂರು_ಎಕರೆ_ಅಡಿಕೆ_ತೋಟ

#ಯಡೇಹಳ್ಳಿಯ_ಆರ್_ಆರ್_ರೈಸ್_ಮಿಲ್_ಇವರದ್ದೆ.


1970 ರಲ್ಲಿ ಅವರಿಗೆ 50 ವಷ೯ ಇರಬಹುದು ನಮಗೆಲ್ಲ 5 ವಷ೯ ಅವರ ದಿನಸಿ ಅಂಗಡಿ ಇಡೀ ಊರಿಗೆ ದೊಡ್ಡದು, ಆ ಕಾಲದಲ್ಲಿ ಹುಬ್ಬಳ್ಳಿಯಿಂದ ಇವರ ಸ್ವಂತ ಲಾರಿಗಳಲ್ಲಿ ದಿನಸಿ ತರಿಸುತ್ತಿದ್ದರು.
   ಪೊಟ್ಟಣ ಕಟ್ಟಲು ಹತ್ತಾರು ಸಹಾಯಕರು. ದಿನಸಿ ಪಟ್ಟಿ ಬರೆಯಲು ನಾಕಾರು ರೈಟರು, ಹಣ ಪಡೆಯಲು ಮತ್ತಿಬ್ಬರು ಹೀಗೆ ದೊಡ್ಡ ಪ್ರಮಾಣದಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದ ಮಾಲಿಕರು ಮಿರ, ಮಿರ ಮಿಂಚುವ ಜೀಪಿನಲ್ಲಿ ಬರುತ್ತಿದ್ದರು, ನೈಲಾನ್ ಬಟ್ಟಿಯ ಬಣ್ಣದ ಶಟ್೯ ಆ ಕಾಲದ ರಾಜೇಶ್ ಖನ್ನರ ಸ್ಟೈಲ್ ನ ಟೈಟ್ ಪ್ಯಾಂಟ್, ಚೂಪು ಬೂಟು, ಸೊ೦ಟದಲ್ಲಿ ರಿವಾಲ್ವರ್, ಗಮ ಗಮ ಎನ್ನಿಸುವ ಪರಿಮಳ ಸಿಂಪಡಿಸಿಕೊಂಡು ಟಕ್ ಟಕ್ ಎನ್ನುವ ಚೂಪು ತುದಿಯ ಬೂಟಿನ ಸದ್ದಿನೊಂದಿಗೆ ಬಂದು ತಿರುಗುವ ಕುಚಿ೯ಯಲ್ಲಿ ಕುಳಿತು ಪಕ್ಕದಲ್ಲಿನ ದೊಡ್ಡ ಟ್ರಿಜರಿಯ ಬಾಗಿಲು ತೆಗೆದರೆ ಅದರಲ್ಲಿ ಕಂತೆ ಕಂತೆ ನೋಟುಗಳು.
      ಅವರಿಗೆ ಶಿವಮೊಗ್ಗ ಸಾಗರ ತಾಲೂಕಿನ ಗಡಿಯಾದ ಕುಣೇಹೊಸೂರು ಸಮೀಪದ ದಟ್ಟ ಕಾಡಿನ ಮಧ್ಯದ ಬೆಟ್ಟಗಳ ಪ್ರದೇಶವಾದ ಉದನೂರು ಎಂಬಲ್ಲಿ ನೂರಾರು ಎಕರೆ ಜಮೀನು, ಅಲ್ಲಿ ಕಾಡು ಪ್ರಾಣಿ ಶಿಕಾರಿ ಮಾಡುವ ಹವ್ಯಾಸ ಅದಕ್ಕಾಗಿ ತರಹೇವಾರಿ ಬಂದೂಕುಗಳು, ತಿರುಗಾಡಲು ಅತ್ಯುತ್ತಮ ತಳಿಯ ಕುದುರೆ ಮತ್ತು ಕುದುರೆ ಗಾಡಿ, ಆ ಕಾಲದ ಕೆಂಪು ಬುಲೆಟ್ ಬೈಕ್, ಮಿಲ್ಟ್ರಿ ಜೀಪ್, ಅತ್ಯುತ್ತಮ ದರ್ಜೆಯ ಉಡುಪು, ಬೂಟು, ಕೈ ಗಡಿಯಾರ, ಪರಿಮಳ ದ್ರವ್ಯಗಳು ಅವರನ್ನು ಆ ಕಾಲದ ಯಂಗ್ ಅಂಡ್ ಎನಜ೯ಟಿಕ್ ಹೀರೋ ಮಾಡಿತ್ತು, ಹೀಗೆ ಯಾಹ್ಯಾ ಸಾಹೇಬರದ್ದು ರಾಜಾ ಠೀವಿ.
  ಯಾರ ಜೊತೆಯೂ ಜಗಳವಿಲ್ಲ, ಎಲ್ಲರ ಜೊತೆ ಬೆರೆಯುತ್ತಿರಲಿಲ್ಲ ಅವರ ಸಿಬ್ಬಂದಿಗಳ ಮೂಲಕವೆ ಇವರನ್ನು ಸಂಪರ್ಕಿಸ ಬೇಕಾಗಿತ್ತು.
    ಇವರ ಅಂಗಡಿಯಲ್ಲಿ ನೀಲಿ ಬಣ್ಣದ ಸಾಲದ ಪುಸ್ತಕ ಸಿಕ್ಕಿದವರ ಮನೆಯಲ್ಲಿ ಆ ಕಾಲದಲ್ಲಿ ಹಸಿವು ಇರುತ್ತಿರಲಿಲ್ಲ, ಆದರೆ ಅದು ಸುಲಭವಾಗಿ ಸಿಗುವುದಲ್ಲ ಈಗೆಲ್ಲ ಬ್ಯಾಂಕಿನಲ್ಲಿ OD ಸಿಕ್ಕ೦ತೆ, ಆಗ ಬಡತನ ಹೆಚ್ಚು ಒಂದು ಹೊತ್ತು ಇದ್ದರೆ ಇನ್ನೊಂದು ಹೊತ್ತು ಇಲ್ಲ. 
   ನಮ್ಮ ತಂದೆ ಇವರ ಅಂಗಡೀಯಲ್ಲಿ ಸಾಲದ ಖಾತೆ ಹೊಂದಿದ್ದರು ಹಾಗಾಗಿ ನಮ್ಮ ಮನೇಲೂ ಒಂದು ನೀಲಿ ಬಣ್ಣದ ಸಾಲದ ಪುಸ್ತಕ ಇತ್ತು ಅದನ್ನ ತೆಗೆದುಕೊಂಡು ದಿನಸಿ ತರಲು ನಮ್ಮ ಅಣ್ಣನೊಂದಿಗೆ ಇವರ ಅಂಗಡಿಗೆ ಹೋಗುತ್ತಿದ್ದೆ ಆಗೆಲ್ಲ ಯಾಹ್ಯಾ ಸಾಹೇಬರನ್ನೆ ಅಚ್ಚರಿಯಿ೦ದ ನೋಡುವುದೇ ನಮಗೆಲ್ಲ ಸಂಭ್ರಮ ಆಗಿತ್ತು.
   ಅಬ್ಬುಲ್ ಯಾಹ್ಯಾ ಸಾಹೇಬರು ಇಹ ಲೋಕ ತ್ಯಜಿಸಿ ಏಳು ವರ್ಷಗಳಾಯಿತು (13 - ಡಿಸೆಂಬರ್ -2016) ಇವರ ಮೊದಲ ಪುತ್ರ ಅಬೀಬುಲ್ಲಾ ಸಾಹೇಬರೂ ಈಗಿಲ್ಲ, ಎರಡನೆ ಪುತ್ರ ರಹಮತುಲ್ಲಾ ಮತ್ತು ಕೊನೆಯ ಪುತ್ರರು ರೈಸ್ ಮಿಲ್ ಮತ್ತು ತೋಟ ನೋಡಿಕೊಳ್ಳುತ್ತಿದ್ದಾರೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...