Skip to main content

Blog number 1867. ರಾಷ್ಟ್ರಪತಿಗಳಿಗೆ ದೃಷ್ಟಿ ನಿವಾಳಿಸಿದ ಕನ್ನಡತಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಂಜಮ್ಮ ಜೋಗತಿ.

https://youtu.be/vCsLsR_tzSc?feature=shared

#ಸಂದರ್ಶನ_ಭಾಗ_2

#ಪದ್ಮಪ್ರಶಸ್ತಿ_ಪುರಸ್ಕಾರ_ನೀಡುವ_ರಾಷ್ಟ್ರಪತಿ_ಅವರಿಗೇ_ದೃಷ್ಟಿ_ನಿವಾಳಿಸಿದ

#ಮಂಜಮ್ಮ_ಜೋಗತಿ

#ಹೀಗೇಕೆ_ಮಾಡಿದಿರಿ_ಎಂಬ_ಪ್ರಶ್ನೆಗೆ_ಅವರ_ಉತ್ತರ

   ಕನ್ನಡತಿ ಮಂಜಮ್ಮ ಜೋಗತಿ ಅವರಿಗೆ ಪದ್ಮಶ್ರಿ ಪ್ರಶಸ್ತಿ ಘೋಷಣೆ ಆಗಿದ್ದು ಒಂದು ರೀತಿಯ ವೈರಲ್ ಸುದ್ದಿ ಆದರೆ ಪದ್ಮಶ್ರೀ ಪ್ರಶಸ್ತಿ ರಾಷ್ಟ್ರಪತಿ ರಾಮನಾಥ ಕೋವಿಂದರಿಂದ ಸ್ವೀಕರಿಸುವಾಗ ಮಂಜಮ್ಮ ಜೋಗತಿ ಅವರ ದೃಷ್ಟಿ ನಿವಾಳಿಸಿದ್ದು ಮತ್ತೊಂದು ವೈರಲ್ ಸುದ್ದಿ ಆಗಿತ್ತು.
   ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ youtube ನಲ್ಲಿ ಆ ಘಟನೆಯ ದೃಶ್ಯ ವೀಕ್ಷಿಸಿ
https://youtube.com/shorts/-kv6mGBeBkY?feature=shared.
    ವೇದಿಕೆಗೆ ಕರೆದಾಗ ಗಂಭೀರವಾಗಿ ನಡೆದು ಬಂದು ವೇದಿಕೆ ಮೆಟ್ಟಲಿಗೆ ನಮಸ್ಕರಿಸಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲು ತಯಾರಾಗಿದ್ದ ರಾಷ್ಟ್ರಪತಿಗಳಿಗೆ ಸೆರಗಿನಿಂದ ದೃಷ್ಟಿ ನಿವಾಳಿಸಿ ತಮ್ಮ ಎರೆಡು ಕೈ ಬೆರಳುಗಳನ್ನು ನೆಲಕ್ಕೆ ಒತ್ತಿ ನೆಟಿಗೆ ತೆಗೆದರು ... ನೆರೆದ ಸಭಿಕರಿಂದ ಚಪ್ಪಾಳೆ ಸುರಿಮಳೆ ಆಯಿತು,ಆಗ ರಾಷ್ಟ್ರಪತಿಗಳು ಸ್ವಲ್ಪ ಗೊಂದಲದಿಂದ ಒಂದು ಹೆಜ್ಜೆ ಹಿಂದೆ ಇಟ್ಟರು....
   ನಂತರ ಅವರು ಮಂಜಮ್ಮ ಜೋಗತಿ ಅವರಲ್ಲಿ ಏನೋ ಕೇಳಿ ಉತ್ತರ ಪಡೆದು ಹಸನ್ಮುಖರಾಗಿ ಜೋಗತಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರ ಮಾಡಿದರು.
   ನನಗೆ ಕುತೂಹಲ ಇತ್ತು ಆದ್ದರಿಂದ ಅವರಿಗೆ ಈ ಬಗ್ಗೆ ಪ್ರಶ್ನೆ ಕೇಳಿದ್ದೆ ಅದಕ್ಕೆ ಅವರು ಉತ್ತರಿಸಿದ್ದಾರೆ ಅದೇನೆಂದರೆ ಪ್ರಶಸ್ತಿ ಸ್ವೀಕರಿಸುವ ಮುನ್ನ ಹೇಗೆ ನಡೆದು ಬರಬೇಕು, ಹೇಗೆ ನಿಲ್ಲಬೇಕು, ಹೇಗೆ ಸ್ವೀಕರಿಸಬೇಕು ಇತ್ಯಾದಿ ತಾಲೀಮು ಮಾಡಿಸಿರುತ್ತಾರೆ ಆಗ ಈ ದೃಷ್ಟಿ ತೆಗೆಯುವುದು ಇರಲಿಲ್ಲ ಅಷ್ಟೇ ಅಲ್ಲ ಇಂತದ್ದಕ್ಕೆ ಅವಕಾಶವೂ ಇರುವುದಿಲ್ಲ.
   ಕೊರಾನಾದಿಂದ ಎರೆಡು ವರ್ಷದ ಸಾಲಿನ ಪದ್ಮ ಪ್ರಶಸ್ತಿ ವಿತರಣೆ ಮಾಡಲಾಯಿತು ಆದ್ದರಿಂದ ಮೂರು ದಿನಗಳ ಕಾಲ ರಾಷ್ಟ್ರಪತಿಗಳು ಇದಕಾಗಿ ಆಯಾಸಗೊಂಡಿದ್ದು ಅವರ ಮುಖಭಾವದಿಂದ ಮಂಜಮ್ಮ ಜೋಗತಿ ಗಮನಿಸಿದ್ದರಂತೆ.
  ಆ ವಯಸ್ಸಲ್ಲಿ ಸಾಲು ಸಾಲು ಪ್ರಶಸ್ತಿ ಪ್ರದಾನ ಮಾಡುವುದು ಕುಳಿತುಕೊಳ್ಳುವುದು ನಂತರ ಎದ್ದು ನಿಲ್ಲುವುದು ಮಾಡಲೇ ಬೇಕಾಗಿತ್ತು.
  ಮಂಜಮ್ಮ ಜೋಗತಿ ಅವರ ಹೆಸರು ಕರೆದಾಗ ಎದ್ದು ಸ್ವೀಕರಿಸಲು ನಡೆದು ಹೋಗುವಾಗ ಇದ್ದಕ್ಕಿದ್ದಂತೆ ಮಂಜಮ್ಮ ಜೋಗತಿ ಅವರಿಗೆ ರಾಷ್ಟ್ರಪತಿ ಅವರ ದೃಷ್ಟಿ ನಿವಾಳಿಸ ಬೇಕೆನ್ನಿಸಿದೆ ಆಗ ಅವರಿಗೆ ಅವರ ತಾಯಿ ಮಂಜಮ್ಮ ಜೋಗತಿ ಅವರಿಗೆ ಬಾಲ್ಯದಲ್ಲಿ ದೃಷ್ಟಿ ನಿವಾಳಿಸುವುದು ನೆನಪಾಗಿದೆ, ತಕ್ಷಣ ಮಂಜಮ್ಮ ಜೋಗತಿ ದೃಷ್ಟಿ ನಿವಾಳಿಸಲು ಸೆರಗು ಮೂರು ಸಾರಿ ಬೀಸಲು ರಾಷ್ಟ್ರಪತಿಗಳು ಒಂದು ಹೆಜ್ಜೆ ಹಿಂದಡಿ ಇಟ್ಟು "ಯೇ ಕ್ಯಾ ಹೈ" ಅಂದಿದ್ದಾರೆ ಆಗ ಮಂಜಮ್ಮ ಜೋಗತಿ "ನಜರ್ ನಿಖಾಲ್ ರಾ ಹೂಂ" ಅಂದಾಗ ರಾಷ್ಟ್ರಪತಿಗಳು ನಿರಾಳರಾಗಿ ಮುಗುಳು ನಗೆ ಬೀರಿ " ಅಚ್ಚಾ " ಅಂದಿದ್ದಾರೆ.
   ಅವತ್ತು ನಂತರದ ಕಾರ್ಯಕ್ರಮ ಪೂರ್ತಿ ರಾಷ್ಟ್ರಪತಿಗಳು ಆಯಾಸ ಇಲ್ಲದೆ ನಗು ನಗುತ್ತಾ ಉತ್ಸಾಹದಿಂದ ಭಾಗವಹಿಸಿದ್ದರು ಇದು ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿರುವ ದೃಷ್ಟಿ ನಿವಾಳಿಸುವ ಕ್ರಮ ಅಂದಿದ್ದಾರೆ ಮಂಜಮ್ಮ ಜೋಗತಿ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...