Skip to main content

Blog number 1873. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರಂ ಹೋಬಳಿ ಸಮೀಪದ ಆಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಹಿತ್ತಿಲು ಗ್ರಾಮದಲ್ಲಿ ಕಾಡಾನೆ ಬಂದಿತ್ತು (19- ಡಿಸೆಂಬರ್ - 2023)

#ನಿನ್ನೆ_ರಾತ್ರಿ_ಕಾಡಾನೆಗಳು_ಬಂದ_ಸುದ್ದಿ

#ಆಚಾಪುರ_ಗ್ರಾಮಪಂಚಾಯತಿ_ಗಿಳಾಲಗುಂಡಿ_ಕೆರೆಹಿತ್ತಲಲ್ಲಿ

#ಸಾಗರ_ತಾಲೂಕಿನ_ಆನಂದಪುರ೦_ಹೋಬಳಿ_ಕೇಂದ್ರಕ್ಕೆ_4_ಕಿಲೋ_ಮೀಟರ್_ಸಮೀಪಕ್ಕೆ.

#ಐವತ್ತು_ವರ್ಷದ_ಹಿಂದೆ_ಇಲ್ಲಿಗೆ_ಕಾಡಾನೆ_ಬಂದಿತ್ತು.
  ನಿನ್ನೆ ಮಧ್ಯ ರಾತ್ರಿ 2 ರ ಸಮಯದಲ್ಲಿ ಆನಂದಪುರಂ ಹೋಬಳಿ ಆಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಹಿತ್ತಲು ಗ್ರಾಮದಲ್ಲಿನ ದಿವಂಗತ ಲಿಂಗಾರ್ಜುನ ಗೌಡರ ಪುತ್ರ ಗಿರೀಶ್, ಸಹೋದರ ಮನೋಹರ್, ದಾನೇಂದ್ರಪ್ಪ, ಮಾಜಿ ಗ್ರಾ.ಪಂ. ಸದಸ್ಯ ಷಣ್ಮುಖಪ್ಪ, ಮಲ್ಲಿಕಾರ್ಜುನಪ್ಪ, ದೇವರಾಜ್ ಬಿನ್ ಕೃಷ್ಣಪ್ಪ ಇವರ ಜಮೀನಿಗೆ ಕಾಡಾನೆ ಬಂದ ಸುದ್ದಿ ಆಗಿದೆ.
   ಕಾಡಾನೆಗಳು ಈ ಊರಿಗೆ ಕಳೆದ 15 ದಿನಗಳಲ್ಲಿ ಮೂರನೆ ಸಾರಿ ಬಂದಿದೆ, ದೊಡ್ಡ ರೀತಿಯಲ್ಲಿ ಬೆಳೆ ನಾಶ ಮಾಡಿಲ್ಲವಾದರೂ ಕಾಡಾನೆ ಆಗಮನ ಈ ಪ್ರದೇಶದಲ್ಲಿ ಜನರಲ್ಲಿ ಭಯ ಉಂಟು ಮಾಡಿದೆ ಇವತ್ತು ಅರಸಾಳಿನಿಂದ ಅರಣ್ಯ ಇಲಾಖಾ ಸಿಬ್ಬಂದಿಗಳು ಸ್ಥಳ ಪರಿಶೀಲನೆ ಮಾಡಿ ತೆರಳಿದ್ದಾರೆ.
   ಕೆರೆಹಿತ್ತಲು ಮತ್ತು ಗಿಳಾಲಗುಂಡಿ ಹಿಂಭಾಗದ ಗಾಳಿಮರಡಿ ಮತ್ತು ಸೀಗೆಮರಡಿ ಗುಡ್ಡದಿಂದ ಈ ಆನೆಗಳು ಇಳಿದು ಬಂದಿದೆ ಮತ್ತು ಪುನಃ ಇದೇ ಮಾರ್ಗದಲ್ಲಿ ವಾಪಾಸು ಹೋಗಿರಬಹುದೆಂದು ಗ್ರಾಮಸ್ಥರ ಅಂದಾಜು.
   ಈ ಗುಡ್ಡದ ಹಿಂದೆ ತೋಟದಕೆರೆ ಮತ್ತು ಈಟಿಕೆರೆ ಪ್ರದೇಶದಿಂದ ಆ ಭಾಗದಲ್ಲಿನ ಒಂದು ಕಾಲದ ಮ್ಯಾಂಗನೀಸ್ ಗಣಿ ಪ್ರದೇಶಗಳಿಂದ ಈ ಕಾಡಾನೆ ಬಂದಿರ ಬಹುದೆಂಬ ಗುಮಾನಿ. 
  ಆರಸಾಳು-ಮಸರೂರು - ಆಲವಳ್ಳಿ -ಕಮ್ಮದೂರು - ತೋಟದಕೆರೆ - ಕೆರೆಹಿತ್ತಲು ಮಾರ್ಗದಲ್ಲಿ ಸಂಚರಿಸುವ ಈ ಕಾಡಾನೆಗಳ ಅಂತಿಮ ಗಮ್ಯ ಸ್ಥಳ ಯಾವುದು? ಈ ಪ್ರದೇಶ ದಾಟಿ ಶರಾವತಿ ಹಿನ್ನೀರಿನ ಪ್ರದೇಶಕ್ಕೆ ತಲುಪುವುದಾ? ಅಥವ  ಬಂದ ದಾರಿಯಲ್ಲಿ ತಿರುಗಿ ಹೋಗುತ್ತದಾ? ಗೊತ್ತಿಲ್ಲ.
    ಇದೇ ಕೆರೆಹಿತ್ತಲು ಗ್ರಾಮಕ್ಕೆ 50 ವರ್ಷದ ಹಿಂದೆ 1972 ರಲ್ಲಿ ಕಾಡಾನೆ ಬಂದು ಸ್ಥಳಿಯ ಗುಮ್ಮಿ ನಾಗಣ್ಣರ ಬತ್ತದ ಗದ್ದೆ ತುಳಿದು ಹೋಗಿದ್ದು ಹಳೆಯ ನೆನಪು.
   ಆನಂದಪುರಂ ಕೇಂದ್ರದಿಂದ ಕೆರೆಹಿತ್ತಲು ರಸ್ತೆ ಮಾರ್ಗದಲ್ಲಿ 6 ಕಿ.ಮಿ. ಆಕಾಶ ಮಾರ್ಗದಲ್ಲಿ 3 ರಿಂದ 4 ಕಿ.ಮಿ. ಬಹುಶಃ ಇಷ್ಟು ಸಮೀಪದಲ್ಲಿ ಕಾಡಾನೆ ಸಂಚಾರ ಆಶ್ಚರ್ಯವೇ ಸರಿ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...