Skip to main content

Blog number 1875. ನನ್ನ ಮೊದಲ ಪಾದಯಾತ್ರೆ 12 ವಯಸ್ಸಲ್ಲಿ ಸಾಗರ ಟೂ ಆನಂದಪುರಂ 25 ಕಿ.ಮಿ.

#ನನ್ನ_ಮೊದಲ_ಪಾದಯಾತ್ರೆ_ಸಾಗರ_ಟೂ_ನಮ್ಮ_ಊರು

#ಇ೦ದಿರಾಗಾಂಧಿ_ಬಂದಿಸಿದ_ಆ_ದಿನ.

#ಸಾಗರದಿಂದ_ಆನಂದಪುರಂಗೆ_25_ಕಿಮಿ_ನಡೆದು_ಬಂದಿದ್ದೆ.

#ಕಾ೦ಗ್ರೇಸ್_ಇಡೀ_ಸಾಗರ_ಪೇಟೆ_ಬಂದ್_ಮಾಡಿಸಿತ್ತು

#ಕಾಗೋಡು_ನೇತೃತ್ವದಲ್ಲಿ_ಬಂದ್_ವಿರೋದಿಸಿ_ಮೆರವಣಿಗೆ

#ಲಾಠಿ_ಚಾಜ್೯_ಕಾಗೋಡರ_ಕೈಯಿಗೆ_ಪೋಲಿಸರ_ಲಾಠಿಯಿಂದ_ಹಲ್ಲೆ_ಎಂಬ_ಸುದ್ದಿ.

#ಆಗ_ಸಾಗರದ_ಶಾಸಕರು_ಕಾಗೋಡು_ತಿಮ್ಮಪ್ಪನವರು.

#ಸಂಜಯ್_ಗಾಂಧಿ_ಯಂಗ್_ಬ್ರಿಗೇಡ್_ಪಡವಗೋಡು_ಸುಬ್ರಾವ್

#ಅವರ_ಘೋಷಣೆ_ಆದಾ_ರೋಟಿ_ಕಾಯೇoಗೆ_ಇಂದಿರಾ_ಗಾಂಧಿ_ಬಚಾಯೆಂಗೆ.

  ಪ್ರತಿದಿನ 5 ನೇ ತರಗತಿಯಿಂದ 7 ನೇ ತರಗತಿಗೆ ನಮ್ಮ ಮನೆ ಯಡೇಹಳ್ಳಿಯಿಂದ ದಾಸಕೊಪ್ಪದ ಪದವಿ ಪೂರ್ವ ಕಾಲೇಜು ಕಟ್ಟಡಕ್ಕೆ ಅಂದಾಜು 2 ಕಿ.ಮಿ. ನಡೆದು ಹೋಗುತ್ತಿದ್ದೆವು ಮಧ್ಯಾಹ್ನ ಊಟದ ಬೆಲ್ ಹೊಡೆದಾಗ 2 ಕಿ.ಮಿ. ಓಡಿ ಮನೆ ಸೇರಿ ಊಟ ಮಾಡಿ ತಿರುಗಿ ಓಡಿ ಶಾಲೆ ಸೇರಿ ಸಂಜೆ ಶಾಲೆ ಮುಗಿದ ಮೇಲೆ 2 ಕಿ.ಮಿ. ವಾಪಾಸು ಬರುವುದು ನಮ್ಮ ಎಲ್ಲಾ ಆಗಿನ ಗೆಳೆಯರ ಅಭ್ಯಾಸ ಸುಮಾರು 8 ಕಿ.ಮಿ. ಸಲೀಸಾಗಿ ಓಡಿ ನಡೆದು ಕ್ರಮಿಸುವ ಪಿಟ್ ನೆಸ್ ನಮ್ಮದು.
 ಆನಂದಪುರಂ ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ 7ನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ 600 ಅ೦ಕಕ್ಕೆ 520 ಅಂಕ ಪಡೆದದ್ದರಿಂದ ನಮ್ಮ ತಂದೆ ನನ್ನನ್ನು 8 ನೇ ತರಗತಿಗೆ ಇಂಗ್ಲೀಷ್ ಮೀಡಿಯಂಗೆ ಸಾಗರದ ಮುನ್ಸಿಪ್ ಹೈಸ್ಕೂಲ್ ಗೆ ಸೇರಿಸಿದ್ದರು.
  ಆನಂದಪುರಂನಿಂದ ಪ್ರತಿ ನಿತ್ಯ ರೈಲಿನ ಪ್ರಯಾಣ, ಮೂರು ತಿಂಗಳ ಪ್ರಯಾಣಕ್ಕೆ ವಿದ್ಯಾರ್ಥಿಗಳು ಹತ್ತೊಂಬತ್ತು ರೂಪಾಯಿ ರೈಲ್ವೆ ಇಲಾಖೆಗೆ ಪಾವತಿ ಮಾಡಿ ಪಾಸ್ ಪಡೆಯುತ್ತಿದ್ದೆವು.
   1977 ರ ಅಕ್ಟೋಬರ್ 4 ನೇ ತಾರೀಖು ಮಂಗಳವಾರ ಸಾಗರದಲ್ಲಿ ರೈಲು ಇಳಿದು ಬಸ್ ಸ್ಟಾಂಡ್ ಹತ್ತಿರ ಬ೦ದಾಗಲೇ ಗೊತ್ತಾಗಿದ್ದು ಅವತ್ತು ಸಾಗರ ಪೇಟೆ ಬಂದ್ ಅಂತ, ಎಲ್ಲಾ ಅಂಗಡಿ ಮುಂಗಟ್ಟುಗಳುಗಳು ಬಾಗಿಲು ಮುಚ್ಚಿತ್ತು, ಬಸ್ ಸಂಚಾರ ಇರಲಿಲ್ಲ, ಶಾಲೆ ಹತ್ತಿರ ಹೋದರೆ ಶಾಲೆಗೆ ರಜೆ.
  ಹಿಂದಿನ ರಾತ್ರಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಮೊರಾರ್ಜಿ ದೇಸಾಯಿ ಅವರು ಪ್ರದಾನ ಮಂತ್ರಿ ಆಗಿದ್ದ ಜನತಾ ಪಕ್ಷದ ಕೇಂದ್ರ ಸಕಾ೯ರ ಮತ್ತು ಗೃಹ ಸಚಿವ ಚೌದುರಿ ಚರಣ್ ಸಿಂಗ್ ಬಂದಿಸಿದ್ದರಿಂದ ಇದೆಲ್ಲ ಆಗುತ್ತಿದೆ ಅಂತ ಜನರ ಮಾತಿನಲ್ಲಿ ಗೊತ್ತಾಯಿತು.
  ಆನಂದಪುರಂನಿಂದ ಸಾಗರಕ್ಕೆ ಬಂದಿದ್ದ ಎಲ್ಲಾ ವಿದ್ಯಾರ್ಥಿ ವೃಂದ ರೈಲ್ವೆ ಸ್ಟೇಷನ್ ನಲ್ಲಿ ಸೇರಿ ವಾಪಾಸ್ ಊರಿಗೆ ಹೋಗುವುದು ಹೇಗೆ ಅಂತ ಚಿಂತಿಸುತ್ತಿದ್ದರು, ತಾಳಗುಪ್ಪದಿಂದ ಸಂಜೆ ವಾಪಾಸು ಬರುವ ರೈಲೂ ಪ್ರಯಾಣ ರದ್ದಾದರೆ ಎಂಬ ಭಯಕ್ಕೆ ಸ್ಟೇಷನ್ ಮಾಸ್ಟರ್ ಕೂಡ ಏನೂ ಹೇಳಲಾಗುವುದಿಲ್ಲ ಅಂತ ಅಂದದ್ದು ಎಲ್ಲರಿಗೂ ಸಂಕಷ್ಟ ತಂದಿತ್ತು.
  ಆಗಲೇ ನಾನು ಮತ್ತು ಹಿರಿಯ ಗೆಳೆಯ ಪುಪ್ಪಾ ಯಾನೆ ಸಿಲ್ವಸ್ಟರ್ ಡಿಕಾಸ್ಟ್ ಒಂದು ತೀರ್ಮಾನ ಮಾಡಿದ್ದೆವು, ಸಂಜೆ ತನಕ ಅನಿರ್ದಿಷ್ಟ ಮರು ಪ್ರಯಾಣಕ್ಕೆ ಕಾಯದೆ ನಡೆದುಕೊಂಡೇ ಆನಂದಪುರಂಗೆ ಹೋಗಬಾರದೇಕೆ ಅಂತ.
  ಪುಪ್ಪಾ ಪೀಯೂಸಿ ವಿದ್ಯಾರ್ಥಿ ನಾನು 8ನೇ ತರಗತಿ ಆದರೆ ನಮ್ಮಿಬ್ಬರದ್ದು ಗಳಸ್ಯ ಕಂಠಸ್ಯ ಗೆಳೆತನ, ನಮ್ಮಿಬ್ಬರ ತೀರ್ಮಾನಕ್ಕೆ ಆ ದಿನಗಳಲ್ಲಿ ಆನಂದಪುರಂನಿಂದ ಸಾಗರಕ್ಕೆ ಬರುತ್ತಿದ್ದ ಮುವ್ವತ್ತಕ್ಕೂ ಹೆಚ್ಚಿನ ವಿದ್ಯಾರ್ಥಿ ಬಳಗದಲ್ಲಿ ಯಾರಿಗೂ 25 ಕಿಲೋ ಮೀಟರ್ ನಡೆಯುವ ಸಾಹಸ ಪ್ರಾಯಾಸ ಅನ್ನಿಸಿ ಸಂಜೆ ರೈಲಿಗೆ ಕಾಯುವುದಾಗಿ ತಿಳಿಸಿದಾಗ ನಾವಿಬ್ಬರು ಮಾತ್ರ ನಮ್ಮ ಪಾದಯಾತ್ರೆ ಪ್ರಾರಂಬಿಸಿಯೇ ಬಿಟ್ಟೆವು.
   ನಮ್ಮ ಮದ್ಯಾಹ್ನದ ಊಟದ ಡಬ್ಬಿ ಹೇಗೂ ಇತ್ತು,ಆಗೆಲ್ಲ ಈಗಿನಂತೆ ನೀರಿನ ಬಾಟಲಿ ಯಾರೂ ಒಯ್ಯುವ ಪ್ರಮೇಯ ಇರಲಿಲ್ಲ ಎಲ್ಲಿ ಬೇಕಾದರೂ ನೀರು ಕುಡಿಯಬಹುದಾಗಿತ್ತು (ನೀರು ಕುಲಷಿತಗೊಂಡಿರಲಿಲ್ಲ).
  ಮೊದಲಿಗೆ ನಮ್ಮ ಪಾದಯಾತ್ರೆ ಯೋಜನೆ ರೈಲ್ವೇ ಹಳಿ ಮಾರ್ಗದಲ್ಲೇ ಆನಂದಪುರಂ ಸೇರುವುದು ಕಾರಣ ನಡೆಯಲಾಗದಿದ್ದರೆ ಬಾಳೆಗುಂಡಿ ಅಥವ ಅಡ್ಡೇರಿ ರೈಲು ನಿಲ್ದಾಣದಲ್ಲಿಗೆ ನಮ್ಮ ಪಾದಯಾತ್ರೆ ನಿಲ್ಲಿಸಿ ಸಂಜೆ ಬರುವ (ಗ್ಯಾರ೦ಟಿ ಇಲ್ಲ) ರೈಲಲ್ಲಿ ಊರು ತಲುಪುವುದು ಅಂತ.
  ಆದರೆ ಪುಪ್ಪಾ ಯೋಜನೆ ಬದಲಿಸಿದ ಗಂಟೆಗೆ 6 ಕಿಲೋ ಮೀಟರ್ ಅರಾಮಾಗಿ ನಡೆಯಬಹುದು 12 ಗಂಟೆಗೆ ಹೊರಟರೂ ಸಂಜೆ 4-5 ಗಂಟೆಗೆ ಊರು ತಲುಪುತ್ತೇವೆ ದಿನಾ ರೈಲಿನಲ್ಲಿ ನೋಡಿದ ಊರುಗಳಿಗಿಂತ ರಾಜ್ಯ ಹೆದ್ದಾರಿಯ ಮಂಚಾಲೆ - ಉಳ್ಳೂರು - ಕಾಸ್ಪಾಡಿ - ಹೊಸೂರು ನೋಡಬಹುದು ಅಂತ.
  ರಸ್ತೆಯ ಮಾರ್ಗದಲ್ಲೇ ನಡೆದು ಹೋಗುವಾಗ ಸಾಗರ ಪೇಟೆ ಜನರೇ ಇಲ್ಲದೆ ಸ್ಮಶಾನ ಮೌನವಾಗಿತ್ತು ಆಗ ಗಾಂದಿ ಮ೦ದಿರದಿಂದ ಇಂದಿರಾ ಗಾಂಧಿ ಬಂಧನ ವಿರೋದಿಸಿ ಹೊರಟಿದ್ದ ಮೆರವಣಿಗೆ ಹಿಂದೆ ನಾವು ಸಾಗಿದೆವು.
  ಅದು ಆಗಿನ ಸಂಜಯ್ ಬ್ರಿಗೇಡ್ (ಈಗಿನ ಯುವ ಕಾಂಗ್ರೇಸ್) ಪ್ರತಿಭಟನೆ ಅದರ ಮುಂದಾಳುಗಳಲ್ಲಿ ಆಕರ್ಷಕ ಗಡ್ಡದಾರಿ ಯುವಕ ನಮಗೆ ಹೆಚ್ಚು ನೆನಪಲ್ಲಿ ಉಳಿಯುವಂತೆ ಹಿಂದಿಯಲ್ಲಿ ಘೋಷಣೆ ಹಾಕುತ್ತಿದ್ದರು.
  "ಆದ ರೋಟಿ ಕಾಯೇಂಗೇ ... ಇಂದಿರಾ ಗಾಂಧಿ ಬಚಾಯೆಂಗೆ" ಅಂತ ಮುಂದೆ ಬುದ್ದಿ ಬಂದು ನಾನು ಜನಪರ ಹೋರಾಟ -ರಾಜಕೀಯ ಅಂತ ಬಂದಾಗ ಗೊತ್ತಾಗಿದ್ದು ಅವರು ಪಡವಗೋಡಿನ ಸುಬ್ರಾವ್ ಅನೇಕ ವರ್ಷ ಸಾಗರದ ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಾಗಿದ್ದರು ನನ್ನ ಗೆಳೆಯರೂ ಆದರು.
  ಈ ಮೆರವಣಿಗೆ ಶ್ರೀ ಟಾಕೀಸ್ ರಸ್ತೆಗೆ ತಲುಪಿದಾಗ ಆಗಿನ ಶಾಸಕರಾಗಿದ್ದ ಕಾಗೋಡು ತಿಮ್ಮಪ್ಪರ ನಾಯಕತ್ವದಲ್ಲಿ ಆಗಿನ ಕೇಂದ್ರ ಸರ್ಕಾರ ಜನತಾ ಪಕ್ಷದಲ್ಲಿ ವಿಲೀನವಾಗಿದ್ದ ಸಂಯುಕ್ತ ಸಮಾಜವಾದಿ ಪಾರ್ಟಿಯ ಮೆರವಣಿಗೆ ಅದೇ ಮಾರ್ಗದಲ್ಲಿ ಎದುರಾಯಿತು.
  ಮುಚ್ಚಿದ ಅಂಗಡಿಗಳನ್ನು ತೆರೆಸುತ್ತಾ ಇಂದಿರಾ ಗಾಂಧಿ ಜೈಲಿಗೆ ಕಳಿಸಿದ ಆಗಿನ ಪ್ರಧಾನಿ ಮೊರಾರ್ಜಿ ದೇಸಾಯಿ ಕ್ರಮ ಸಮರ್ಥಿಸುವ ಘೋಷಣೆಗಳ ಜೊತೆ ಬಂದಿತು.
  ವಿದ್ಯಾರ್ಥಿ ಬಾಲಕರಾಗಿದ್ದ ನಮಗೆ ಮುಂದೇನಾಗುತ್ತೆ ಎ೦ಬ ಕುತೂಹಲದ ಅಂತಿಮ ಘಟ್ಟದಲ್ಲಿ ಪೋಲಿಸರ ಲಾಠಿ ಚಾರ್ಜ್ ಆಯಿತು, ನಾವು ಹೇಗೋ ತಪ್ಪಿಸಿಕೊಂಡು ಆನಂದಪುರಂಗೆ ನಡೆದುಕೊಂಡು ರಾತ್ರಿ 9ಕ್ಕೆ ಊರು ಸೇರಿದೆವು, ನಮ್ಮ ಸಂಗಾತಿಗಳೆಲ್ಲ ಸಂಜೆ 7ಕ್ಕೆ ರೈಲಲ್ಲಿ ಊರು ಮುಟ್ಟಿದ್ದರು ಇದು ನನ್ನ ಜೀವನದ ಮೊದಲ 25 ಕಿ.ಮಿ. ಪಾದಯಾತ್ರೆ ನನ್ನ ವಯಸ್ಸು 12.
  ಹಾಗೆ ಸಂಜೆಯೇ ರೈಲು ಸಂಚಾರ ಪುನಾರಂಬವಾಗಲು ಕಾರಣ ನವದೆಹಲಿಯ ಚೀಪ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆರ್. ದಯಾಳ್ ತಕ್ಷಣ ಇಂದಿರಾ ಗಾಂಧಿಯವರನ್ನು ಬಿಡುಗಡೆ ಮಾಡಿದ್ದು.
   ಹಿಂದಿನ ದಿನ ಸಂಜೆ ಅಂದರೆ 3 ಅಕ್ಟೋಬರ್ 1977 ರಲ್ಲಿ ಇಂದಿರಾ ಗಾಂಧಿ ಮತ್ತು ಅವರ ಸಂಪುಟದಲ್ಲಿ ಮಂತ್ರಿಗಳಾಗಿದ್ದ ಕೆ.ಡಿ. ಮಾಳವೀಯ, ಹೆಚ್.ಆರ್.ಗೋಕಲೆ, ಪಿ.ಸಿ. ಸೇತಿ, ಡಿ.ಪಿ. ಚಟ್ಟೋಪಾಧ್ಯಯರನ್ನು ತುರ್ತು ಪರಿಸ್ಥಿತಿಯಲ್ಲಿ ಬಾರೀ ಭ್ರಷ್ಟಾಚಾರ ಮಾಡಿದ್ದಾರೆಂದು ಬಂದನ ಮಾಡಿ ಒಂದು ರಾತ್ರಿ ದೆಹಲಿಯ ನ್ಯೂ ಪೋಲಿಸ್ ಟವನ್ ಕಿಂಗ್ಸ್ ವೇ ಕ್ಯಾ೦ಪ್ ನ ಗೆಜೆಟಿಯರ್ ಆಪೀಸರ್ ಮೆಸ್ ನಲ್ಲಿ ಉಳಿಸಿದ್ದರು ಇದು ವಿಶ್ವದಾದ್ಯಂತ ಸುದ್ದಿ ಆಯಿತು ಮತ್ತು ಇಂದಿರಾ ಅಭಿಮಾನಿಗಳು ರೊಚ್ಚಿಗೆಬ್ಬಿಸಿತು ಈ ಬಂಧನ ಮು೦ದೆ ಇಂದಿರಾ ಗಾಂಧಿಗೆ ಅನುಕಂಪವೂ ದೊರಕಿತು.
  ಮರುದಿನ ನವ ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ನ ಚೀಪ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎದರು ಹಾಜರು ಪಡಿಸುತ್ತಾರೆ, ಕೋರ್ಟ್ ನ ಹೊರಗೆ ಭಾರೀ ಸಂಖ್ಯೆಯ ಜನಸ್ತೋಮ ಸೇರಿರುತ್ತಾರೆ.
   ಮರುದಿನ ಸಾಗರದಲ್ಲಿ ಹಬ್ಬಿದ ಸುದ್ದಿ ಪೋಲಿಸರಲ್ಲಿ ಒಬ್ಬ ಶಾಸಕರಾಗಿದ್ದ ಕಾಗೋಡರ ಕೈಗೆ ಲಾಠಿಯಿಂದ ಹೊಡೆದ ಎಂದು ಮತ್ತೆ ಕೆಲವರು ಇದು ಸುಳ್ಳು ಸುದ್ದಿ ಅಂತ, ಆಗ ನಮಗೆ ತುಂಬಾ ಬೇಸರದ ಸುದ್ದಿ ಕಾಂಗ್ರೇಸ್ ಯಂಗ್ ಬ್ರಿಗೇಡನ ಪಡವಗೋಡು ಸುಬ್ರಾವ್ ಮತ್ತಿತರರನ್ನು ಜೈಲಿಗೆ ಹಾಕಿದ್ದಾರೆ ಇತ್ಯಾದಿ.
   ನಂತರ ಅವರನ್ನೆಲ್ಲ ಜೈಲಿಂದ ಕೋರ್ಟಿಗೆ ಮತ್ತು ಕೋರ್ಟಿನಿಂದ ಜೈಲಿಗೆ ಪೋಲಿಸರು ಕರೆದೊಯ್ಯುವಾಗಲೂ ಅದೇ ಹಿಂದಿ ಬಾಷಾ ಘೋಷಣೆ "ಆದಾ ರೋಟಿ ಕಾಯೇಂಗೆ ... ಇಂದಿರಾ ಗಾಂಧಿ ಬಚಾಯೆಂಗೆ " ನಮಗೆಲ್ಲ ರೋಮಾಂಚನ ಉಂಟು ಮಾಡುತ್ತಿತ್ತು.
  ಈ ಘಟನೆ ನಡೆದದ್ದು 46 ವರ್ಷದ ಹಿಂದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...