Skip to main content

Blog number 1877. ಹಳೇ ಬೇರು ಹೊಸ ಚಿಗುರಿನ ಜುಗಲ್ಬಂದಿಯ ಗೆಳೆತನದ ಜಿಗಳೆಮನೆ ಗಣಪತಿ ಭಟ್ಟರು ಮತ್ತು ಚಿತ್ರ ಕಲಾವಿದ ನಿರಂಜನ ಕುಗ್ವೆ ಅವರನ್ನು ಜೈಲಿಗೆ ಕಳಿಸಿ ಹೆದರಿಸುವ ಪ್ರಯತ್ನದ ಪ್ರಕರಣಕ್ಕೆ ಆರು ವರ್ಷ ಆಯಿತು ಆದರೆ ಇವರಿಬ್ಬರೂ ಹೆದರಲೇ ಇಲ್ಲ....

#ಸುದ್ದಿಯನ್ನ_ಸುದ್ದಿ_ಮಾಡದ_ಈ_ಸುದ್ದಿ

#ಆರು_ವರ್ಷದ_ಹಿಂದಿನ_ನೆನಪು

#ಜಿಗಳೆಮನೆ_ಗಣಪತಿಭಟ್ಟರು_ಮತ್ತು_ನಿರಂಜನಕುಗ್ವೆ_ಜೈಲಿಗೆ_ಕಳಿಸಿದ_ಪ್ರಕರಣ

#ಇವರದ್ದೇ_ಜಾತಿಯ_ಮಠದವರು_ಇವರಿಗೆ_ಜೈಲಿಗೆ_ಕಳಿಸಿದ್ದು

#ಇವರು_ಮಾಡಿದ_ತಪ್ಪು_ಮಠದ_ಅತ್ಯಾಚಾರ_ಅನಾಚಾರ_ವಿರೋದಿಸುವ_ಕೆಲಸ.

#ಇವರ_ವಿರುದ್ದ_ಹಾಕಿದ_ಕೇಸು_ನಿಲ್ಲುವುದಿಲ್ಲ_ಅಂತ_ಅವರಿಗೂ_ಗೊತ್ತು

#ಆದರೆ_ವಿಚಾರಣೆಗೆ_ಮುನ್ನ_ಜೈಲಿಗೆ_ಕಳಿಸಿ_ಸೇಡು_ತೀರಿಸಿ_ಕೊಳ್ಳುವುದು.


   ಇವರಿಬ್ಬರ ಹೆಸರು ಗಣಪತಿ ಭಟ್ಟರು ಜಿಗಳೆಮನೆ ಮತ್ತು ನಿರಂಜನ ಕುಗ್ವೆ ಹಳೆ ಬೇರು ಹೊಸ ಚಿಗುರಿನಂತ ಇವರಿಬ್ಬರ ಜುಗಲ್ ಬಂದಿ.
   ಇವರಿಬ್ಬರನ್ನ ಪೇಸ್ ಬುಕ್ನಲ್ಲಿ ಮಾನಹಾನಿ ಮಾಡಿದ್ದಾರಂತ ದೂರು ನೀಡಿಸಿ, ಒಂದು ಶನಿವಾರ ಬಂದಿಸಿ ಭಾನುವಾರದ ಕೋಟ್೯ ರಜಾ ದಿನದ ಲಾಭ ಪಡೆದು ಜೈಲಿಗೆ ಕಳಿಸಿ ತಮ್ಮ ದುರುದ್ದೇಶ ಈಡೇರಿಸಿಕೊಂಡ ಈ ಪ್ರಕರಣದ ಹಿಂದೆ ಇವರ ಸಮಾಜದ ಮಠ ಒಂದರ ಕಾಣದ ಕೈಗಳು ಎನ್ನುವುದು ಬಹಿರಂಗ ಸತ್ಯ.
  ಹಿರಿಯರಾದ ಗಣಪತಿ ಭಟ್ಟರು RSS ಪ್ರಚಾರಕರಾಗಿದ್ದವರು, ತುತು೯ ಪರಿಸ್ಥಿತಿ ವಿರೋದಿಸಿ ಜೈಲಿಗೆ ಹೋದವರು, ಇವತ್ತಿನವರೆಗೆ ರಾಜಕೀಯಕ್ಕೆ ಬರದವರು, ಸಾತ್ವಿಕರು, ವರದಳ್ಳಿಯ ಪವಾಡ ಪುರುಷ ಶ್ರೀಧರ ಸ್ವಾಮಿಯವರ ಶಿಷ್ಯರು ಮತ್ತು ವರದಳ್ಳಿ ಶ್ರೀದರ ಆಶ್ರಮದ ಅತೀ ಸಮೀಪದ ಜಿಗಳೆ ಮನೆಯವರು.
  ನಿರಂಜನ ಕುಗ್ವೆ ಉದಯೋನ್ಮುಖ ವ್ಯಂಗ್ಯಚಿತ್ರಗಾರರು, ಕಲಾ ಶಿಕ್ಷಕರು ಸಾಗರ ಸಮೀಪದ ಕುಗ್ವೆಯವರು ಇವರ ಊರಿನ ದೇವಾಲಯದ ಪ್ರಮುಖರು, ಇವರ ವ್ಯಂಗ್ಯಚಿತ್ರಗಳನ್ನ ಖ್ಯಾತ ಚಿತ್ರ ಕಲಾವಿದ ಪಂಜು ಗಂಗೋಲೀಯವರು ಅಭಿನಂದಿಸಿದ್ದಾರೆ.
  ಇವರಿಬ್ಬರು ಮಾಡಿದ ಅಪರಾದ ಇವರ ಜಾತಿಗೆ ಸಂಬಂದಪಟ್ಟ ಸ್ವಾಮಿ ಒಬ್ಬರ  ಅತ್ಯಾಚಾರ ಪ್ರಕರಣ ಮತ್ತು ಆ ಮಠದಲ್ಲಿ ಆ ಸಮಾಜದ ಹೆಣ್ಣು ಮಕ್ಕಳಿಗೆ ದೇವರ ಹೆಸರಲ್ಲಿ ಭಕ್ತಿ ಮತ್ತು ಸಂಸ್ಕಾರದ ಭಯ ಬಿತ್ತಿ ಕನ್ಯಾ ಸಂಸ್ಕಾರ ಎಂಬ ಸ್ವಾಮಿಗಳ ಏಕಾಂತಕ್ಕೆ ಅಪ್ರಾಪ್ತ ಹೆಣ್ಣು ಮಕ್ಕಳನ್ನ ಕಳಿಸುವ ಕಾಯ೯ಕ್ರಮ ವಿರೋದಿಸಿ ಪೇಸ್ ಬುಕ್ ನಲ್ಲಿ ಅಭಿಯಾನ ಪ್ರಾರಂಭಿಸಿದ್ದರು.
  ಇವರಿಗೆ ಸುಮಾರು 10 ಸಾವಿರಕ್ಕೂ ಹೆಚ್ಚು ಜನ ಬೆಂಬಲಿಸಿದ್ದಾರೆ ಆದರೆ ಪ್ರತ್ಯಕ್ಷವಾಗಿ ಬೆಂಬಲಿಸಲು ಅವರಿಗೆಲ್ಲ ಮಠದ ಕಾಳ ಹಸ್ತದ ಭಯ.
   ನಿರಪರಾಧಿಗಳನ್ನ ಸಮಾಜ ಕಂಠಕರಲ್ಲದವರನ್ನ ಅವಮಾನಿಸುವ ಶಿಕ್ಷಿಸುವ ಈ ಪ್ರಕರಣ ಪ್ರಜಾಪ್ರಭುತ್ವದಲ್ಲಿ ಸುದ್ದಿ ಮಾಡಿ ವಿರೋದಿಸುವ ಸುದ್ದಿ ಯಾವ ಪತ್ರಿಕೆ ಅಥವ ಮಾಧ್ಯಮದಲ್ಲೂ ಅವತ್ತು ಪ್ರಕಟವಾಗಲಿಲ್ಲ ಈ ಬಗ್ಗೆ ಆಶ್ಚಯ೯ ಮತ್ತು ಅನುಮಾನ ಸಾವ೯ಜನಿಕ ವಲಯದಲ್ಲಿ ವ್ಯಕ್ತವಾಗಿತ್ತು, ಇದು ದೂರದಾರರ ಪ್ರಭಾವವಲ್ಲದೆ ಬೇರೆನಲ್ಲ.
  ಅತ್ಯಾಚಾರ, ಮೂಡನಂಬಿಕೆಯ ಕನ್ಯಾ ಸಂಸ್ಕಾರ ನಡೆಸುತ್ತಿರುವವರ ಹಣ ಮತ್ತು ಅಧಿಕಾರಗಳು ಅವರ ವಿರೋಧ ಮಾಡುವವರ ಧ್ವನಿ ಅಡಗಿಸುವಲ್ಲಿ ಯಶಸ್ವಿಯಾಗುತ್ತಿರುವುದು ವಿಷಾದನೀಯ.
    ಜಿಗಳೆಮನೆ ಗಣಪತಿ ಭಟ್ಟರು ಮತ್ತು ನಿರಂಜನ ಕುಗ್ವೆ ಈ ಜೈಲಿಗೆ ಹೆದರಿ ತಮ್ಮ ವಿರುದ್ಧ ಧ್ವನಿ ಎತ್ತಬಾರದೆಂಬ ಅವರ ಉದ್ದೇಶ ಈಡೇರಲೇ ಇಲ್ಲ ಇವರಿಬ್ಬರೂ ಇನ್ನೂ ಹೆಚ್ಚು ಲೇಖನ -ವ್ಯಂಗ್ಯ ಚಿತ್ರಗಳನ್ನು ಪೇಸ್ ಬುಕ್ ಗಳಲ್ಲಿ ಬರೆಯುತ್ತಿದ್ದಾರೆ ಮತ್ತು ಉಚ್ಚ ನ್ಯಾಯಾಲಯ ಸಾಮಾಜಿಕ ಜಾಲ ತಾಣದ ಲೇಖನಗಳ ಮೇಲೆ ಅಪರಾದ ಮೊಕದ್ದಮೆ ದಾಖಲು ಮಾಡುವುದು ಸರಿಯಲ್ಲ ಎಂಬ ತೀರ್ಪು ದಾಖಲಿಸಿದ್ದ ಈ ಕೇಸ್ ಬಿದ್ದು ಹೋಗಿರ ಬಹುದು.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ