Skip to main content

Blog number 1878. ದಂಡಾವತಿ ನದಿ ಆಣೆಕಟ್ಟು ವಿರೋದಿ ಹೋರಾಟ ಸಮಿತಿಯ ಅಧ್ಯಕ್ಷರು, ಎಸ್.ಆರ್.ಹಿರೇಮಠರ ಜನ ಸಂಗ್ರಾಮ ಪರಿಷತ್ ರಾಜ್ಯ ಉಪಾಧ್ಯಕ್ಷರಾದ ವಾಮದೇವ ಗೌಡರು ನನ್ನ ಕಛೇರಿಯಲ್ಲಿ.

#ದಂಡಾವತಿ_ನದಿ_ಆಣೆಕಟ್ಟು_ವಿರೋದಿ_ಹೋರಾಟದ_ದಂಡಾನಾಯಕ

#ವಾಮದೇವ_ಗೌಡರು .

#ಎಸ್_ಆರ್_ಹಿರೇಮಠರ_ರಾಜ್ಯ_ಭ್ರಷ್ಟಾಚಾರಿ_ವಿರೋದಿ_ಆಂದೋಲನದ_ಜನಸಂಗ್ರಾಮ_ಪರಿಷತ್ತಿನ

#ರಾಜ್ಯ_ಉಪಾದ್ಯಕ್ಷರು.

#ನಾವೆಲ್ಲ_ಇವರ_ಹೋರಾಟದ_ಸ್ಥಳಕ್ಕೆ_ಹೋಗಿ_ಹೋರಾಟಕ್ಕೆ_ನಮ್ಮ_ಬೆಂಬಲ_ಘೋಷಿಸಿದ್ದ_ನೆನಪುಗಳು

#ಹೋರಾಟಗಾರ_ಟಿ_ಆರ್_ಕೃಷ್ಣಪ್ಪರ_ಜೊತೆ_ನನ್ನ_ಕಛೇರಿಗೆ_ಬಂದಾಗಿನ_ಮಾತುಕಥೆ_ನೆನಪುಗಳು

  ಅವತ್ತು ಅನಿರೀಕ್ಷಿತವಾಗಿ (18-ಡಿಸೆಂಬರ್ -2016 )  ಸೊರಬದ ವಾಮದೇವ ಗೌಡರು ರಿಪ್ಪನಪೇಟೆಯ ಹೋರಾಟಗಾರರಾದ ಟಿ.ಆರ್.ಕೃಷ್ಣಪ್ಪರ ಜೊತೆ ನನ್ನ ಕಛೇರಿಗೆ ಬಂದಿದ್ದರು.     

     ಅವರು ಸೊರಬದ ದಂಡಾವತಿ ಆಣೆಕಟ್ಟು ವಿರೋದಿ ಹೋರಾಟ ಸಮಿತಿ ಅಧ್ಯಕ್ಷರು,ಹಾಲಿ ಎಸ್.ಆರ್.ಹಿರೇಮಠರ ರಾಜ್ಯ ಭ್ರಷ್ಟಾಚಾರಿ ವಿರೋದಿ ಆಂದೋಲನದ ಜನಸಂಗ್ರಾಮ ಪರಿಷತ್ ನ ರಾಜ್ಯ ಉಪಾಧ್ಯಕ್ಷರು.
 
   ಚಹಾ ಸ್ವೀಕರಿಸುತ್ತಾ "ದಂಡಾವತಿ ಆಣೆಕಟ್ಟು ವಿರೋದಿ  ಹೋರಾಟದ ಸಂದಭ೯ದಲ್ಲಿ ಅರುಣ್ ಪ್ರಸಾದ್ ನಮ್ಮ ಹೋರಾಟದ ಸ್ಥಳಕ್ಕೆ ಬಂದು ಬೆಂಬಲಿಸಿ ನಿತ್ಯದ ಊಟದ ವೆಚ್ಚಕ್ಕಾಗಿ ದೇಣಿಗೆ ನೀಡಿದ್ದನ್ನ ಮರೆತಿಲ್ಲ, ನಮ್ಮ ಖಚು೯ ವೆಚ್ಚದ ಪಟ್ಟಿ ನೋಡಿದಾಗಲೆಲ್ಲ ಅವರು ನೆನಪಾಗುತ್ತಾರೆ" ಅಂದರು.

        ನಾನು ಮರೆತು ಬಿಟ್ಟಿದ್ದೆ ...  ಆ ದಿನ ಸಾಗರದಿಂದ ನಾನು, ಕಾಗೋಡು ಹೋರಾಟದ ನೇತಾರರಾದ ಗಣಪತಿಯಪ್ಪ, ತೀ.ನಾ.ಶ್ರೀನಿವಾಸ್, ಮಾಜಿ ಶಾಸಕರಾದ ಸ್ವಾಮಿ ರಾವ್, ಕಲ್ಲೂರು ಮೇಘರಾಜ್, ಪತ್ರಕತ೯ರಾದ ಎಂ.ರಾಘು, ಚಾವಾ೯ಕ ರಾಘು ಮತ್ತು ಗೆಳೆಯರು ದಂಡಾವತಿ ಹೋರಾಟದ ಸ್ಥಳಕ್ಕೆ ಹೋಗಿದ್ದೆವು ಅದರ ಹಿಂದಿನ ದಿನ ಗೌರಿ ಗಣಪತಿ ಹಬ್ಬ ಇತ್ತು, ಹೋರಾಟಗಾರರು ಮಣ್ಣಿನ ಗಣಪತಿ ವಿಗ್ರಹ ಪೂಜೆ ಮಾಡಿ ನಿಯೋಜಿತ ಆಣೆಕಟ್ಟು ಪ್ರದೇಶದ ನೀರಲ್ಲಿ ವಿಸಜ೯ನೆ ಮಾಡಿದ್ದರು.
 
     ಮಳೆಗಾಲದ ಆ ದಿನದಲ್ಲೇ ದಂಡಾವತಿ ನದಿ ಸಣ್ಣ ಹಳ್ಳದಂತೆ ಇತ್ತು, ಹಿಂದಿನ ದಿನ ವಿಸಜ೯ನೆ ಮಾಡಿದ ಗಣಪತಿಯೇ ಮುಳುಗಿರಲಿಲ್ಲ, ಆಗ ಗಣಪತಿಯಪನವರು ಕೈ ಮುಗಿದು "ಮಹಾಗಣಪತಿ ಇಲ್ಲಿ ದಂಡಾವತಿ ಆಣೆಕಟ್ಟು ಕಟ್ಟದಂತೆ ನೋಡಿಕೊಂಡು ಈ ರೈತರ ಹೋರಾಟಕ್ಕೆ ಜಯ ತಂದು ಕೊಡು" ಅಂತ ಬೇಡಿಕೊಂಡರು, ರೈತ ಪರ ಹೋರಾಟಗಾರ ಗಣಪತಿಯಪರ ಪ್ರಾಥ೯ನೆಯಂತೆ ಮತ್ತು ವಾಮದೇವ ಗೌಡರ ಪ್ರಾಮಾಣಿಕ ಹೋರಾಟದಿಂದ ದಂಡಾವತಿ ಆಣೆಕಟ್ಟು ನಿಮಾ೯ಣ ಆಗಿಲ್ಲ ಇದೆಲ್ಲ ಅವತ್ತು ನೆನಪಾಯಿತು.
   
  
   ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಪ್ರವಹಿಸುವ ಸಣ್ಣ ನದಿ ದಂಡಾವತಿ ಉಗಮ ಸ್ಥಾನ ಸೊರಬ ಪಟ್ಟಣದ ದಕ್ಷಿಣಕ್ಕೆ 15 ಕಿ.ಮಿ.ದೂರದ ಕುಪ್ಪೆ ಗ್ರಾಮದ ಹತ್ತಿರದ ಕಟ್ಟಿನ ಕೆರೆ.

     ಮಳೆಗಾಲದಲ್ಲಿ ಕಟ್ಟಿನಕೆರೆ ತುಂಬಿದಾಗ ಈ ಕೆರೆ ಕೋಡಿ ನೀರಿನ ಜೊತೆ ಸುತ್ತ ಮುತ್ತಲಿನ ಹರಿವು ಸೇರಿ ದಂಡಾವತಿ ನದಿ ಆಗಿ ಹರಿಯುತ್ತದೆ,ಸೊರಬ ಪಟ್ಟಣದ ರಂಗನಾಥ ಸ್ವಾಮಿ ದೇವಸ್ಥಾನ ಈ ನದಿ ದಂಡೆ ಮೇಲಿದೆ.

    ಉಗಮ ಸ್ಥಳದಿಂದ 55 ಕಿ.ಮಿ. ಹರಿದು ಆನವಟ್ಟಿ ಬಳಿಯ ಬಂಕಸಾಣ ಎಂಬ ಸ್ಥಳದಲ್ಲಿ ವರದಾ ನದಿಗೆ ಸೇರುತ್ತದೆ, ನಂತರ ವರದಾ ನದಿ ತುಂಗ ಭದ್ರಾ ನದಿಗೆ ಸೇರಿ ನಂತರ ತುಂಗಾಭದ್ರ ಕೃಷ್ಣಾ ನದಿಗೆ ಸೇರಿ ಬಂಗಾಳಕೊಲ್ಲಿ ಸಮುದ್ರಕ್ಕೆ ಸೇರುತ್ತದೆ.
   
    ಸೊರಬದ ಚೀಲನೂರು ಗ್ರಾಮದ ಹತ್ತಿರ ದಂಡಾವತಿ ನದಿಗೆ ಆಣೆಕಟ್ಟು ಕಟ್ಟಿದರೆ ಸೊರಬ ಮತ್ತು ಶಿಕಾರಿಪುರದ ಸುಮಾರು 50 ಸಾವಿರ ಎಕರೆಗೆ ನೀರಾವರಿ ಆಗುತ್ತದೆ, 4 TMC ನೀರು ಶೇಖರಿಸ ಬಹುದು ಎಂಬುದು ಯೋಜನೆ.

   ದಂಡಾವತಿ ನದಿ ವಿರೋದಿ ಹೋರಾಟ ಸಮಿತಿ ಹೇಳುವುದು "ರಾಜಕೀಯ ಕಾರಣಗಳಿಂದ ಈ ಯೋಜನೆ ಜಾರಿಗೊಳಿಸುವ ಪ್ರಯತ್ನ ನಡೆಸಿದ್ದಾರೆ, ಮಳೆಕಾಡು ಮತ್ತು ಕೃಷಿ ಭೂಮಿ ಮುಳುಗಿಸಿ ಶುಷ್ಕ ಖುಷ್ಕಿ ಭೂಮಿ ನೀರಾವರಿ ಮಾಡಿಕೊಳ್ಳುವ ಯೋಜನೆ ಇದಾಗಿದೆ" ಎಂದು ಈ ಯೋಜನೆಯ ತಾರ್ಕಿಕತೆಯನ್ನು ಪ್ರಶ್ನಿಸಿದೆ.

    ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರು ವಾಮದೇವ ಗೌಡರ ನೇತೃತ್ವದ ದಂಡಾವತಿ ನದಿ ವಿರೋದಿ ಹೋರಾಟ ಸಮಿತಿಯ ಹೋರಾಟವನ್ನು ಬೆಂಬಲಿಸಿದ್ದರು.
  
    ವಾಮದೇವ ಗೌಡರು ಆ ಹೋರಾಟದ ದಿನದಲ್ಲಿ ಸಿದ್ದರಾಮಯ್ಯ ನಮ್ಮ ಜೊತೆ ಕುಳಿತು ನಮ್ಮ ಹೋರಾಟ ಬೆಂಬಲಿಸಿದ್ದರು, ಈಗ ಮುಖ್ಯಮಂತ್ರಿ ಆಗಿದ್ದಾರೆ ಆದರೆ ಸಂಪುಟ ಸಭೆಯಲ್ಲಿ ಈವರೆಗೆ ಆಣೆಕಟ್ಟು ಕಟ್ಟಬೇಕೆಂಬ ಹಿಂದಿನ ಸಕಾ೯ರದ ನಿಣ೯ಯ ಮಾತ್ರ ಎಷ್ಟು ಸಾರಿ ನೆನಪಿಸಿದರೂ ರದ್ದು ಮಾಡಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದರು.

     ಈ ಇಳಿ ವಯಸ್ಸಲ್ಲೂ ವಾಮದೇವ ಗೌಡರ ಹೋರಾಟದ ಕಿಚ್ಚು ಕೊಂಚವೂ ಕಡಿಮೆ ಆಗಿಲ್ಲ, ಅವರಿಗೆ ದೇವರು ಆರೋಗ್ಯ ಆಯಸ್ಸು ಮತ್ತು ಯಶಸ್ಸು ನೀಡಲಿ ಎಂದು ಹಾರೈಸುತ್ತೇನೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...