Skip to main content

Blog number 1894. ಸಂಪ್ರದಾಯಿಕ ಮಲೆನಾಡಿನ ವಿಶಿಷ್ಟ ಖಾದ್ಯ ಹಲಸಿನ ಎಲೆ ಕೊಟ್ಟೆ ಕಡಬು ಗ್ರಾಹಕರಿಗೆ ಕಳೆದ 2 ವರ್ಷದಿಂದ ನಿರಂತರವಾಗಿ ಆನಂದಪುರಂ ಮಲ್ಲಿಕಾ ವೆಜ್ ನಲ್ಲಿ ಸಿಗುತ್ತಿದೆ.

https://youtu.be/FKhBKZi0X7g?feature=shared

#ನಮ್ಮ_ಮಲ್ಲಿಕಾ_ವೆಜ್_ಹಲಸಿನ_ಎಲೆ_ಕೊಟ್ಟೆ_ಕಡಬು

#ಎರೆಡು_ವರ್ಷದಿಂದ_ನಿರಂತರವಾಗಿ_ಕೊಟ್ಟೆ_ಕಡಬು,

#ಮಲೆನಾಡಿನ_ಸಂಪ್ರದಾಯಿಕ_ಉಪಹಾರ

#ಗಣಪತಿಗೆ_ನೈವೇದ್ಯಕ್ಕೆ_ಬಳಕೆ.

#ಇಡ್ಲಿ_ಪಾತ್ರೆಯಲ್ಲಿನ_ಹಬೆಯು_ಹಲಸಿನ_ಎಲೆಯ_ಹಾಯ್ದು_ಕಡುಬಿಗೆ

#ಹಲಸಿನ_ಎಲೆಯ_ಅರೋಮ_ರುಚಿ_ಅವರಿಸುವುದರಿಂದ_ಇದು_ವಿಶೇಷವಾಗಿದೆ.

   ನಮ್ಮ ಮಲ್ಲಿಕಾ ವೆಜ್ ಪ್ರಾರಂಬಿಸಲು ಕಾರಣ ನಮ್ಮ ಹೊಂಬುಜ ರೆಸಿಡೆನ್ಸಿ ಲಾಡ್ಜ್ ಅತಿಥಿಗಳಿಗಾಗಿ ಅವರ ಉಪಹಾರ ಊಟದ ವ್ಯವಸ್ಥೆಗಾಗಿ, ಅದೂ ಯಾರೂ ರೆಸ್ಟೋರೆಂಟ್ ಪ್ರಾರಂಬಿಸಲು ಮುಂದೆ ಬರದಿದ್ದಾಗ ನಾವೇ ಅನಿವಾರ್ಯವಾಗಿ ಪ್ರಾರಂಬಿಸಿ ನಂತರ ಎಲ್ಲಾ ಕಲಿತದ್ದು ಅದು 11 ವರ್ಷದ ಹಿಂದೆ.
   ಸ್ಥಳಿಯವಾದ ವಿಶೇಷ ಖಾದ್ಯ ಯಾವುದು? ಎಂಬ ಆಹಾರ ಪ್ರಿಯ ಪ್ರವಾಸಿಗಳ ಪ್ರಶ್ನೆಗೆ ಉತ್ತರ ನಮ್ಮಲ್ಲಿರಲಿಲ್ಲ, ನಾವು ತಯಾರಿಸುವ ಇಡ್ಲಿ-ವಡೆ- ದೋಸೆ - ಪಲಾವ್ - ಬಿಸಿಬೇಳೆಬಾತ್ - ಉಪ್ಪಿಟ್ಟು - ಕೇಸರಿ ಬಾತ್ - ಬನ್ಸ್ - ಅವಲಕ್ಕಿ -ಅವಲಕ್ಕಿ ಮೊಸರು - ಪಿಲ್ಟರ್ ಕಾಫಿ-ಟೀ - ದಕ್ಷಿಣ ಭಾರತೀಯ ಊಟ-ಉತ್ತರ ಭಾರತೀಯ ಊಟ ಎಲ್ಲಾ ರೆಸ್ಟೋರೆಂಟ್ ಗಳಲ್ಲಿ ಇರುತ್ತದೆ.
  ಆದ್ದರಿಂದ ಮಲೆನಾಡಿನ ವಿಶಿಷ್ಟ ಉಪಹಾರವಾದ ಹಲಸಿನ ಎಲೆ ಕೊಟ್ಟೆ ಕಡಬು 2021 ರ ಡಿಸೆಂಬರ್ ಅಂತ್ಯದಲ್ಲಿ ಪ್ರಾರಂಬಿಸಿದೆವು ಇದರ ಜೊತೆಗೆ ಹಸಿಗಡಲೆ ಗಸಿ, ಕಾಯಿ ಚಟ್ನಿ ಮತ್ತು ಕೆಂಪು ಮೆಣಸಿನ ಚಟ್ನಿ ಜೊತೆ ನೀಡಲು ಪ್ರಾರಂಬಿಸಿ ಎರೆಡು ವರ್ಷ ದಾಟಿದೆ.
  ನಿರಂತರವಾಗಿ ಹಲಸಿನ ಎಲೆ ಕಡಬು ಗ್ರಾಹಕರಿಗೆ ನೀಡುವ ಶಿವಮೊಗ್ಗ ಜಿಲ್ಲೆಯ ಏಕೈಕ ಹೋಟೆಲ್ ನಮ್ಮದಾಗಿದೆ.
  ಇವತ್ತು ಪ್ರತಿನಿತ್ಯದ ಬೆಳಿಗ್ಗೆಯ ನಮ್ಮ ಮಲ್ಲಿಕಾ ವೆಜ್ ನ ಉಪಹಾರದ ಸ್ಯಾಂಪಲ್ ತಪಾಸಣೆ ಮಾಡುವಾಗ ನನಗೆ ನೆನಪಾಯಿತು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...