Skip to main content

Blog number 1923. ಅಯೋಧ್ಯಯಲ್ಲಿ ದಿನಾಂಕ 22 ಜನವರಿ 2024ರಂದು ಬಾಲರಾಮನ ವಿಗ್ರಹದ ಪ್ರತಿಷ್ಟಾಪನೆಯ ದಿನ ಭಾರತ ದೇಶವನ್ನ ಭ್ರಷ್ಟಾಚಾರ ಮುಕ್ತ ರಾಮರಾಜ್ಯವಾಗಿ ನಿರ್ಮಾಣ ಮಾಡುವ ಸಂಕಲ್ಪ ದಿನವಾಗಿ ಆಚರಿಸಲಿ

#ಚರ್ಚೆಯ_ಮುನ್ನಲೆಗೆ_ಬಂದ_ರಾಮರಾಜ್ಯ.

#ಮಹಾತ್ಮಾಗಾಂಧೀಜಿ_1921ರಲ್ಲಿ_ಅಯೋಧ್ಯೆಗೆ_ಬೇಟಿ_ನೀಡಿದ್ದರು.

#ನವಜೀವನ್_ಪತ್ರಿಕೆಯಲ್ಲಿ_ದಾಖಲಿಸಿದ್ದಾರೆ

#ಹಿಂದ್_ಸ್ಟರಾಜ್_ಪತ್ರಿಕೆಯಲ್ಲಿ_ರಾಮರಾಜ್ಯದ_ಬಗ್ಗೆ_ಬರೆದಿದ್ದಾರೆ.

#ಇಂದಿನ_ಯುವ_ಜನಾಂಗ_ಭ್ರಷ್ಟಾಚಾರ_ಮುಕ್ತ_ಭಾರತ_ನಿರ್ಮಾಣಕ್ಕೆ_ಮುಂದಡಿ_ಇಡಲಿ

#ಬಾಲರಾಮನನ್ನ_ಅಯೋಧ್ಯಯಲ್ಲಿ_ಪ್ರತಿಷ್ಟಾಪನೆ_ಮಾಡಿದ_ದಿನವೇ_ರಾಮರಾಜ್ಯ_ಸಂಕಲ್ಪ_ದಿನವಾಗಲಿ.


   ಅಯೋಧ್ಯದಲ್ಲಿ ರಾಮ ಮಂದಿರ ನಿರ್ಮಾಣ ಬಾಲ ರಾಮನ ವಿಗ್ರಹದ ಪ್ರತಿಷ್ಟಾಪನೆ ನಾಳೆ 22- ಜನವರಿ- 2024 ರ ಸೋಮವಾರ ನಡೆಯುವ ಸುಸಂದರ್ಭದಲ್ಲಿ ಭಾರತೀಯರ ಮನಸ್ಸಿನಲ್ಲಿ ರಾಮ ರಾಜ್ಯದ ಚರ್ಚೆ ಮುನ್ನಲೆಗೆ ಬರುತ್ತಿರುವುದು ತಪ್ಪೇನಲ್ಲ.
   ಇವತ್ತು ಭಾರತ ದೇಶದ ಸರ್ಕಾರದ ಆದಾಯ ಸಮರ್ಪಕ ವಿನಿಯೋಗ ಆಗುತ್ತಿದೆಯಾ? ಸರ್ಕಾರಿ ಉದ್ಯೋಗಗಳು ಅರ್ಹರಿಗೆ ದೊರೆಯುತ್ತಿದೆಯಾ? ಸ್ವಾತಂತ್ರ್ಯ ಬಂದು 75 ವರ್ಷದಲ್ಲಿ ಭ್ರಷ್ಟಾಚಾರ ಕಡಿಮೆ ಆಗಿದೆಯಾ? ಬಡವರಿಗೆ ಇಂಜಿನಿಯರಿಂಗ್ ವೈದ್ಯಕೀಯ ಶಿಕ್ಷಣಗಳು ಸುಲಭವಾ? ಊಚಿತ ವೈದ್ಯಕೀಯ ಚಿಕಿತ್ಸೆ ಎಲ್ಲರಿಗೂ ಸಿಗುತ್ತಿದೆಯಾ? ಜನಸಾಮಾನ್ಯರಿಗೆ ನ್ಯಾಯ ಸುಲಭವಾ?....ಇಂತಹ ನೂರಾರು ಪ್ರಶ್ನೆಗಳು ಭಾರತೀಯ ಯುವ ಜನತೆಯ ಮನಸ್ಸಿನಲ್ಲಿ ಸುಪ್ತವಾಗಿ ಉಳಿದ ಪ್ರಶ್ನೆಗಳು.
  ಸಾವಿರಾರು ಕೋಟಿ ಹಣ ರಾಮಮಂದಿರ ನಿರ್ಮಾಣಕ್ಕೆ ಹರಿದು ಬಂದಿರುವ ಹಿಂದಿನ ಉದ್ದೇಶವೇ ರಾಮ ರಾಜ್ಯದಂತ ಆಡಳಿತ ಭಾರತದೇಶದಲ್ಲಿ ಬರಲಿ ಎಂಬ ಅಂತರ್ಯದ ಬಯಕೆಯ ಒಂದು ರೂಪವಾಗಿದೆ.
  ರಾಜಕೀಯ ಪಕ್ಷಗಳು ರಾಮ ಮುಂದಿರದ ವಿಷಯವನ್ನು ರಾಜಕೀಯವಾಗಿ ಲಾಭ ಪಡೆಯಲು ಬಳಸಿಕೊಳ್ಳುವುದು ಅವುಗಳ ಬುದ್ಧಿವಂತಿಕೆ ಮಾತ್ರ ಆದರೆ ಭಾರತೀಯರ ಮನಸ್ಸಿನ ಬಯಕೆಯ ಆಂತರ್ಯ ಗಾಂಧೀಜಿ ಕನಸಿನ ರಾಮರಾಜ್ಯ ಮಾತ್ರ.
 1921ರಲ್ಲಿ ಮಹಾತ್ಮಾ ಗಾಂಧೀಜಿ ಅಯೋಧ್ಯೆಗೆ ಭೇಟಿ ನೀಡುತ್ತಾರೆ ಈ ಬಗ್ಗೆ 1921ರ ಮಾರ್ಚ್ 20ರ ನವ ಜೀವನ ಪತ್ರಿಕೆಯಲ್ಲಿ ಬರೆಯುತ್ತಾರೆ ರಾಮ ಸೀತೆಯರ ವಿಗ್ರಹಗಳು ಮಸ್ಲೀನ್ ಬಟ್ಟೆಗಳಿಂದ ಅಲಂಕರಿಸಿದ್ದನ್ನು ನೋಡಿ ಅವರ ಸ್ವದೇಶಿ ಚಳವಳಿಯ ಶುದ್ಧ ಖಾದಿ ಬಟ್ಟೆಯಲ್ಲಿ ಅಲಂಕರಿಸಲು ವಿನಂತಿಸುತ್ತಾರೆ ಅದು ಆಚರಣೆಗೆ ಬರುವ ಬಗ್ಗೆ ಅನುಮಾನವಿದೆ ಎಂದು ಬರೆಯುತ್ತಾರೆ. 
  1929 ರ ಹಿಂದ್ ಸ್ವರಾಜ್ ಪತ್ರಿಕೆಯಲ್ಲಿ ಅವರ ಕನಸಿನ #ರಾಮ_ರಾಜ್ಯ ದ ಬಗ್ಗೆ ವಿವರಿಸಿದ್ದಾರೆ... ರಾಮ ರಾಜ್ಯವೆಂದರೆ ಒಂದು ಧರ್ಮದ ರಾಜ್ಯವಲ್ಲ ಅದು ದೇವರ ರಾಜ್ಯ - ದೇವರ ರಾಜದಾನಿ ರಾಮ-ರಹೀಮರು ಇಬ್ಬರೂ ಒಂದೇ ಅಲ್ಲಿ ಸರ್ವರಿಗೂ ನ್ಯಾಯ ಸಮಾನತೆಗಳು ಇರುವ ಬಡವ ಬಲ್ಲಿದ ಎನ್ನದ ಭ್ರಷ್ಟಾಚಾರ ಮುಕ್ತವಾದ ಆಡಳಿತದ ರಾಜ್ಯ ಎಂದಿದ್ದಾರೆ.
  ಅಯೋಧ್ಯಯ ಬಾಲರಾಮನ ಪ್ರತಿಷ್ಟಾಪನೆಯ ನಾಳೆಯ ದಿನ (22- ಜನವರಿ-2024) ರಾಮ ರಾಜ್ಯ ನಿರ್ಮಾಣದ ಸಂಕಲ್ಪ ದಿನವಾಗಲಿ ಇದಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳಲ್ಲಿರುವ ರಾಮ ರಾಜ್ಯದ ಕನಸು ಕಾಣುತ್ತಿರುವ ಸಜ್ಜನರು, ರಾಮ ಮುಂದಿರದ ನಿರ್ಮಾಣದ ಹೊಣೆ ಹೊತ್ತಿರುವ ವಿಶ್ವ ಹಿಂದೂ ಪರಿಷತ್ ಈ ಎಲ್ಲಾ ರಾಮ ಮುಂದಿರದ ಹೋರಾಟದ ಹಿಂದಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಈ ಬಗ್ಗೆ ರಾಮ ರಾಜ್ಯದಂತಾ ಭ್ರಷ್ಟಾಚಾರ ಮುಕ್ತವಾದ ಸರ್ವರಿಗೂ ನ್ಯಾಯ ಸಮಾನತೆಯ ಆಡಳಿತದ ಕನಸು ನನಸು ಮಾಡಲು ಮುಂದಡಿ ಇಡಬೇಕು.
   ಹಳ್ಳಿಯಿಂದ ಡೆಲ್ಲಿವರೆಗೆ ಹೆಜ್ಜೆ ಹೆಜ್ಜೆಗೂ ಲಂಚಾವತಾರ - ಅನ್ಯಾಯ- ಅಸಮಾನತೆಗಳಿಂದ ಜನ ರೋಸಿ ಹೋಗುತ್ತಿದ್ದಾರೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...