Skip to main content

Blog number 1923. ಅಯೋಧ್ಯಯಲ್ಲಿ ದಿನಾಂಕ 22 ಜನವರಿ 2024ರಂದು ಬಾಲರಾಮನ ವಿಗ್ರಹದ ಪ್ರತಿಷ್ಟಾಪನೆಯ ದಿನ ಭಾರತ ದೇಶವನ್ನ ಭ್ರಷ್ಟಾಚಾರ ಮುಕ್ತ ರಾಮರಾಜ್ಯವಾಗಿ ನಿರ್ಮಾಣ ಮಾಡುವ ಸಂಕಲ್ಪ ದಿನವಾಗಿ ಆಚರಿಸಲಿ

#ಚರ್ಚೆಯ_ಮುನ್ನಲೆಗೆ_ಬಂದ_ರಾಮರಾಜ್ಯ.

#ಮಹಾತ್ಮಾಗಾಂಧೀಜಿ_1921ರಲ್ಲಿ_ಅಯೋಧ್ಯೆಗೆ_ಬೇಟಿ_ನೀಡಿದ್ದರು.

#ನವಜೀವನ್_ಪತ್ರಿಕೆಯಲ್ಲಿ_ದಾಖಲಿಸಿದ್ದಾರೆ

#ಹಿಂದ್_ಸ್ಟರಾಜ್_ಪತ್ರಿಕೆಯಲ್ಲಿ_ರಾಮರಾಜ್ಯದ_ಬಗ್ಗೆ_ಬರೆದಿದ್ದಾರೆ.

#ಇಂದಿನ_ಯುವ_ಜನಾಂಗ_ಭ್ರಷ್ಟಾಚಾರ_ಮುಕ್ತ_ಭಾರತ_ನಿರ್ಮಾಣಕ್ಕೆ_ಮುಂದಡಿ_ಇಡಲಿ

#ಬಾಲರಾಮನನ್ನ_ಅಯೋಧ್ಯಯಲ್ಲಿ_ಪ್ರತಿಷ್ಟಾಪನೆ_ಮಾಡಿದ_ದಿನವೇ_ರಾಮರಾಜ್ಯ_ಸಂಕಲ್ಪ_ದಿನವಾಗಲಿ.


   ಅಯೋಧ್ಯದಲ್ಲಿ ರಾಮ ಮಂದಿರ ನಿರ್ಮಾಣ ಬಾಲ ರಾಮನ ವಿಗ್ರಹದ ಪ್ರತಿಷ್ಟಾಪನೆ ನಾಳೆ 22- ಜನವರಿ- 2024 ರ ಸೋಮವಾರ ನಡೆಯುವ ಸುಸಂದರ್ಭದಲ್ಲಿ ಭಾರತೀಯರ ಮನಸ್ಸಿನಲ್ಲಿ ರಾಮ ರಾಜ್ಯದ ಚರ್ಚೆ ಮುನ್ನಲೆಗೆ ಬರುತ್ತಿರುವುದು ತಪ್ಪೇನಲ್ಲ.
   ಇವತ್ತು ಭಾರತ ದೇಶದ ಸರ್ಕಾರದ ಆದಾಯ ಸಮರ್ಪಕ ವಿನಿಯೋಗ ಆಗುತ್ತಿದೆಯಾ? ಸರ್ಕಾರಿ ಉದ್ಯೋಗಗಳು ಅರ್ಹರಿಗೆ ದೊರೆಯುತ್ತಿದೆಯಾ? ಸ್ವಾತಂತ್ರ್ಯ ಬಂದು 75 ವರ್ಷದಲ್ಲಿ ಭ್ರಷ್ಟಾಚಾರ ಕಡಿಮೆ ಆಗಿದೆಯಾ? ಬಡವರಿಗೆ ಇಂಜಿನಿಯರಿಂಗ್ ವೈದ್ಯಕೀಯ ಶಿಕ್ಷಣಗಳು ಸುಲಭವಾ? ಊಚಿತ ವೈದ್ಯಕೀಯ ಚಿಕಿತ್ಸೆ ಎಲ್ಲರಿಗೂ ಸಿಗುತ್ತಿದೆಯಾ? ಜನಸಾಮಾನ್ಯರಿಗೆ ನ್ಯಾಯ ಸುಲಭವಾ?....ಇಂತಹ ನೂರಾರು ಪ್ರಶ್ನೆಗಳು ಭಾರತೀಯ ಯುವ ಜನತೆಯ ಮನಸ್ಸಿನಲ್ಲಿ ಸುಪ್ತವಾಗಿ ಉಳಿದ ಪ್ರಶ್ನೆಗಳು.
  ಸಾವಿರಾರು ಕೋಟಿ ಹಣ ರಾಮಮಂದಿರ ನಿರ್ಮಾಣಕ್ಕೆ ಹರಿದು ಬಂದಿರುವ ಹಿಂದಿನ ಉದ್ದೇಶವೇ ರಾಮ ರಾಜ್ಯದಂತ ಆಡಳಿತ ಭಾರತದೇಶದಲ್ಲಿ ಬರಲಿ ಎಂಬ ಅಂತರ್ಯದ ಬಯಕೆಯ ಒಂದು ರೂಪವಾಗಿದೆ.
  ರಾಜಕೀಯ ಪಕ್ಷಗಳು ರಾಮ ಮುಂದಿರದ ವಿಷಯವನ್ನು ರಾಜಕೀಯವಾಗಿ ಲಾಭ ಪಡೆಯಲು ಬಳಸಿಕೊಳ್ಳುವುದು ಅವುಗಳ ಬುದ್ಧಿವಂತಿಕೆ ಮಾತ್ರ ಆದರೆ ಭಾರತೀಯರ ಮನಸ್ಸಿನ ಬಯಕೆಯ ಆಂತರ್ಯ ಗಾಂಧೀಜಿ ಕನಸಿನ ರಾಮರಾಜ್ಯ ಮಾತ್ರ.
 1921ರಲ್ಲಿ ಮಹಾತ್ಮಾ ಗಾಂಧೀಜಿ ಅಯೋಧ್ಯೆಗೆ ಭೇಟಿ ನೀಡುತ್ತಾರೆ ಈ ಬಗ್ಗೆ 1921ರ ಮಾರ್ಚ್ 20ರ ನವ ಜೀವನ ಪತ್ರಿಕೆಯಲ್ಲಿ ಬರೆಯುತ್ತಾರೆ ರಾಮ ಸೀತೆಯರ ವಿಗ್ರಹಗಳು ಮಸ್ಲೀನ್ ಬಟ್ಟೆಗಳಿಂದ ಅಲಂಕರಿಸಿದ್ದನ್ನು ನೋಡಿ ಅವರ ಸ್ವದೇಶಿ ಚಳವಳಿಯ ಶುದ್ಧ ಖಾದಿ ಬಟ್ಟೆಯಲ್ಲಿ ಅಲಂಕರಿಸಲು ವಿನಂತಿಸುತ್ತಾರೆ ಅದು ಆಚರಣೆಗೆ ಬರುವ ಬಗ್ಗೆ ಅನುಮಾನವಿದೆ ಎಂದು ಬರೆಯುತ್ತಾರೆ. 
  1929 ರ ಹಿಂದ್ ಸ್ವರಾಜ್ ಪತ್ರಿಕೆಯಲ್ಲಿ ಅವರ ಕನಸಿನ #ರಾಮ_ರಾಜ್ಯ ದ ಬಗ್ಗೆ ವಿವರಿಸಿದ್ದಾರೆ... ರಾಮ ರಾಜ್ಯವೆಂದರೆ ಒಂದು ಧರ್ಮದ ರಾಜ್ಯವಲ್ಲ ಅದು ದೇವರ ರಾಜ್ಯ - ದೇವರ ರಾಜದಾನಿ ರಾಮ-ರಹೀಮರು ಇಬ್ಬರೂ ಒಂದೇ ಅಲ್ಲಿ ಸರ್ವರಿಗೂ ನ್ಯಾಯ ಸಮಾನತೆಗಳು ಇರುವ ಬಡವ ಬಲ್ಲಿದ ಎನ್ನದ ಭ್ರಷ್ಟಾಚಾರ ಮುಕ್ತವಾದ ಆಡಳಿತದ ರಾಜ್ಯ ಎಂದಿದ್ದಾರೆ.
  ಅಯೋಧ್ಯಯ ಬಾಲರಾಮನ ಪ್ರತಿಷ್ಟಾಪನೆಯ ನಾಳೆಯ ದಿನ (22- ಜನವರಿ-2024) ರಾಮ ರಾಜ್ಯ ನಿರ್ಮಾಣದ ಸಂಕಲ್ಪ ದಿನವಾಗಲಿ ಇದಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳಲ್ಲಿರುವ ರಾಮ ರಾಜ್ಯದ ಕನಸು ಕಾಣುತ್ತಿರುವ ಸಜ್ಜನರು, ರಾಮ ಮುಂದಿರದ ನಿರ್ಮಾಣದ ಹೊಣೆ ಹೊತ್ತಿರುವ ವಿಶ್ವ ಹಿಂದೂ ಪರಿಷತ್ ಈ ಎಲ್ಲಾ ರಾಮ ಮುಂದಿರದ ಹೋರಾಟದ ಹಿಂದಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಈ ಬಗ್ಗೆ ರಾಮ ರಾಜ್ಯದಂತಾ ಭ್ರಷ್ಟಾಚಾರ ಮುಕ್ತವಾದ ಸರ್ವರಿಗೂ ನ್ಯಾಯ ಸಮಾನತೆಯ ಆಡಳಿತದ ಕನಸು ನನಸು ಮಾಡಲು ಮುಂದಡಿ ಇಡಬೇಕು.
   ಹಳ್ಳಿಯಿಂದ ಡೆಲ್ಲಿವರೆಗೆ ಹೆಜ್ಜೆ ಹೆಜ್ಜೆಗೂ ಲಂಚಾವತಾರ - ಅನ್ಯಾಯ- ಅಸಮಾನತೆಗಳಿಂದ ಜನ ರೋಸಿ ಹೋಗುತ್ತಿದ್ದಾರೆ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ