Skip to main content

Blog number 1927. ನಡೆಯುತ್ತಾ 18 ಸಾವಿರ ಕಿಲೋ ಮೀಟರ್ ವಿಶ್ವ ಪರ್ಯಟನೆ ಮಾಡಿದ ಶಿಕ್ಷಕ ಬರಹಗಾರ ಟಾಮ್ ಕಳೆದ ವರ್ಷ ನನ್ನ ಅತಿಥಿ ಆಗಿದ್ದರು.

#ಖಂಡಾಂತರ_18000_ಕಿಮಿ_ನಡೆದ_ಟಾಮ್_ಪ್ರೆಮಾಂಟಲ್

#ಟಾಮ್ಸ್_ವರ್ಲ್ಡ್_ವಾಕ್

#ಕಳೆದ_ವರ್ಷ_16_ಜನವರಿ_2023_ನನ್ನ_ಅತಿಥಿ

#ಸೆಪ್ಟೆಂಬರ್_2018ರಲ್ಲಿ_ಪ್ರಾರಂಭ

#ಕೊರಾನಾದಿಂದ_2_ವರ್ಷ_ಸ್ಥಗಿತವಾಗಿತ್ತು

#ಶಾಲಾ_ಶಿಕ್ಷಕ_ಬರಹಗಾರ_ಟಾಮ್_ಸಾಹಸ


  ಅಮೆರಿಕಾ- ಐರ್ಲೆಂಡ್-ಯುಕೆ - ಪ್ರಾನ್ಸ್ - ಜಮ೯ನಿ-ಆಸ್ಟ್ರೀಯ - ಸ್ಲೋವಾಕಿಯಾ - ಹಂಗೇರಿಯಾ - ಸೆರ್ಬಿಯಾ - ಬಲ್ಗೇರಿಯಾ - ಟರ್ಕಿ-ಸಿಪ್ರಸ್-ಲೆಬನಾನ್-ಸಿರಿಯಾ - ಜೋರ್ಡಾನ್-ಇಸ್ರೇಲ್ - ಪೋಲಾಂಡ್-ಯುಕ್ರೇನ್-ಇಂಡಿಯಾ- ಇಂಡೋನೇಸಿಯಾ- ಆಸ್ಟ್ರೇಲಿಯಾ - ನ್ಯೂಜಿಲಾಂಡ್-ಐಸ್ ಲ್ಯಾಂಡ್ ಈ ಎಲ್ಲಾ ದೇಶಗಳಲ್ಲಿ ಶಿಕ್ಷಕ ವೃತ್ತಿಯ ಟಾಮ್ ಪಾದಯಾತ್ರೆಯಲ್ಲಿ ಕ್ರಮಿಸಿದ್ದಾರೆ.
   2018 ಸೆಪ್ಟೆಂಬರ್ ನಲ್ಲಿ ಅವರು ಖಂಡಾಂತರ ಪಾದಯಾತ್ರೆಯ ಮೂಲಕ 18 ಸಾವಿರ ಕಿಲೋ ಮೀಟರ್ ನಡೆಯುವ ಅವರ ಉದ್ದೇಶ 2020-21 ರ ಕೊರಾನಾದಿಂದ ಮಧ್ಯದಲ್ಲಿ ತಡೆಯಾಯಿತು.
   2 ಡಿಸೆಂಬರ್ 2023 ರಂದು ಮಧ್ಯಾಹ್ನ ಐಸ್ ಲ್ಯಾಂಡ್ ನಲ್ಲಿ ಅವರ ಗುರಿ ತಲುಪಿದಾಗ ಅವರ ನಡುಗೆ 11 272 ಮೈಲು ಅಂದರೆ 18 ಸಾವಿರ ಕಿಲೋಮೀಟರ್ ದಾಟಿತ್ತು.
   ಅಲ್ಲಿಂದ ಅವರು ತೈವಾನ್ ಗೆ ಅವರ ಪ್ರಿಯತಮೆಯ ಬೇಟಿಗೆ ತೆರಳಿದರು.
   ಈ ದೀರ್ಘ ವಿಶ್ವ ಪರ್ಯಟನೆಯಲ್ಲಿ ಯುಕ್ರೇನ್ ಹ್ಯೂಮೆಟರಿಯನ್ ಸಂಸ್ಥೆಗೆ ಅಪಾರ ದೇಣಿಗೆ ಸಂಗ್ರಹಿಸಿ ನೀಡಿದ್ದಾರೆ.
   ಭಾರತದಲ್ಲಿ ಅರಬಿ ಸಮುದ್ರದ ಗೋವಾದ ತಡಿಯಿಂದ ಕಾಲ್ನಡಿಗೆಯಲ್ಲಿ ಚೆನ್ನೈ ಬಂಗಾಳಕೊಲ್ಲಿ ತನಕ ನಡೆಯುವಾಗ ಕಳೆದ ವರ್ಷ  ದಿನಾಂಕ 16 - ಜನವರಿ-2023 ನನ್ನ ಅತಿಥಿಯಾಗಿ ತಂಗಿದ್ದರು.
   ಇಲ್ಲಿ ಕ್ಲಿಕ್ ಮಾಡಿ ಆ ದಿನದ ಅವರ ಸಂದರ್ಶನ ಓದಬಹುದು.
https://youtu.be/X84PeM6eTr4?feature=shared

https://arunprasadhombuja.blogspot.com/search?q=%E0%B2%9F%E0%B2%BE%E0%B2%AE%E0%B3%8D

   ಏಕಾಂಗಿಯಾಗಿ ವಿಶ್ವದಾದ್ಯಂತ 18 ಸಾವಿರ ಕಿ.ಮಿ. ನಡೆಯುವುದು ಸಣ್ಣ ಸಾಹಸವಲ್ಲ ಇದನ್ನು ಸಾಧಿಸಿದ ಶಿಕ್ಷಕ ಬರಹಗಾರ ಟಾಮ್ ಅವರಿಗೆ ಅಭಿನಂದನೆಗಳು ಅವರು ನನ್ನ ಅತಿಥಿಗಳಾಗಿದ್ದರು ಎಂಬುದು ನನಗೆ ಹೆಮ್ಮೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...