Skip to main content

Blog number 1929. ಶೃಂಗೇಶ್ ಸಂಪಾದಕತ್ವದ ಜಿಲ್ಲಾ ದೈನಿಕ ಪತ್ರಿಕೆಗೆ 20 ನೇ ವಾರ್ಷಿಕೊತ್ಸವ, ನಮ್ಮಿಬ್ಬರ ಗೆಳೆತನಕ್ಕೆ ಮೂರು ದಶಕ.

#ಶೃ೦ಗೇಶರ_ಜನಹೋರಾಟ_ದಿನ_ಪತ್ರಿಕೆಯ_ವಾರ್ಷಿಕೋತ್ಸವ

#ಇವತ್ತಿನ_ಪತ್ರಿಕೆ_20ನೇ_ವಷ೯ದ_ಮೊದಲ_ಪತ್ರಿಕೆ 

#ಸಂಪಾದಕರಾದ_ಶೃಂಗೇಶ್_ಮತ್ತು_ಅವರ_ಪತ್ರಿಕಾ_ಬಳಗಕ್ಕೆ_ಅಭಿನಂದನೆಗಳು.

#ರವಿಬೆಳೆಗೆರೆ_ಅವರ_ಹಾಯ್_ಬೆಂಗಳೂರ್_ರೋವಿಂಗ್_ರಿಪೋರ್ಟರ್

#ನನ್ನ_ಎರೆಡು_ಪ್ರಸ್ತಕದ_ಮುದ್ರಕರು

#ನಮ್ಮ_ಸಂಸ್ಥೆಯ_ಎಲ್ಲಾ_ಮುದ್ರಣ_ಆಗುವುದು_ಇವರ_ಜನಹೋರಾಟಾ_ಪ್ರಿಂಟರ್ಸ್
   ಶೃಂಗೇಶ್ ಸಂಪಾದಕತ್ವದ ಜಿಲ್ಲಾ ದಿನಪತ್ರಿಕೆ #ಜನಹೋರಾಟಕ್ಕೆ 19 ವರ್ಷ ತುಂಬಿತು ಇವತ್ತಿನ ಪತ್ರಿಕೆ ಇಪ್ಪತ್ತನೇ ವರ್ಷದ ಮೊದಲ ಪತ್ರಿಕೆ ಆಗಿದೆ.
    ಗಣ ರಾಜ್ಯೋತ್ಸವದ ಜನವರಿ 26 ನೇ ತಾರೀಖು 20 ವರ್ಷದ ಹಿಂದೆ ಶಿವಮೊಗ್ಗದಲ್ಲಿ ಇವರ ಜನ ಹೋರಾಟ ಪತ್ರಿಕೆ ಪ್ರಾರಂಭ ಆಯಿತು.
   ರವಿ ಬೆಳಗೆರೆ ಅವರ ಹಾಯ್ ಬೆಂಗಳೂರ್ ಪತ್ರಿಕೆಯ ರೋವಿಂಗ್ ರಿಪೋರ್ಟರ್ ಎಂದೇ ಸ್ವತಃ ರವಿ ಬೆಳೆಗೆರೆ ಇವರಿಗೆ ಬಿರುದು ನೀಡಿದ್ದರು.
    ಜಿಲ್ಲಾ ಮಟ್ಟದ ಜನ ಹೋರಾಟ ಪತ್ರಿಕೆ ಜೊತೆ ಇವರು ಪ್ರಾರಂಬಿಸಿದ ಪ್ರಿಂಟಿಂಗ್ ಉದ್ಯಮ ಇವರ ಕೈ ಹಿಡಿದಿದೆ ಪ್ರತಿಷ್ಟಿತ ಸಂಸ್ಥೆಗಳ ಮುದ್ರಣ ಗುತ್ತಿಗೆ ಇವರದ್ದೇ ಸಂಸ್ಥೆ ನಡೆಸುತ್ತಿದೆ.
    ನಮ್ಮ ಸಂಸ್ಥೆಯ ಎಲ್ಲಾ ಮುದ್ರಣದ ಕೆಲಸ ಇವರದ್ದೇ ನನ್ನ ಎರೆಡು ಪುಸ್ತಕ ಮುದ್ರಿಸಿ ಕೊಟ್ಟಿದ್ದು ಇವರದ್ದೇ ಸಂಸ್ಥೆ,
  ಕಳೆದ 30 ವರ್ಷದಿಂದ ನನ್ನ ಮತ್ತು ಇವರ ಗೆಳೆತನ ನವನವೀನವಾಗಿ ಉಳಿದಿರುವುದು ನನಗೇ ಆಶ್ಚರ್ಯ ಹೆಚ್ಚಿನ ಗೆಳೆತನ ವ್ಯವಹಾರ ನಾನಾ ಕಾರಣಗಳಿಂದ ಹಳಸಿ ಹೋಗುವುದು ಸಾಮಾನ್ಯ.
   ನನ್ನ ಸಂಸ್ಥೆಗೆ ಪ್ರಿಂಟಿಂಗ್ ಮಾಡಿ ಕೊಟ್ಟ ಬಿಲ್ ಹತ್ತಿರ ಹತ್ತಿರ ಒಂದು ಲಕ್ಷ ರೂಪಾಯಿ ನಾನು ಇವರಿಗೆ ಬಾಕಿದಾರ ಆದರೂ ಗೆಳೆತನ ನವ ನವೀನ.
   ಸ್ವಂತ ಕೃಷಿಯಲ್ಲಿ ಹೆಚ್ಚು ಸಮಯ ಕಳೆಯುತ್ತಾರೆ, ನನಗೆ ಅವರ ಪತ್ರಿಕೆಗೆ ಬರೆಯಲು ಒತ್ತಾಯಿಸಿ ನನಗೊಂದು ಕಾಲಂ ಕೊಟ್ಟು ಅವಕಾಶ ನೀಡಿದ್ದು ಮರೆಯಲಾರೆ, ಅವರ ಪ್ರೋತ್ಸಾಹವೇ ನನಗೆ ಹೆಚ್ಚು ಬರವಣಿಗೆ ಮಾಡಲು ಪ್ರೇರಣೆ ಆಯಿತು.
 ಶೃ೦ಗೇಶ್ ಶಿವಮೊಗ್ಗ ಪತ್ರಿಕೋದ್ಯಮದಲ್ಲಿ ಒಂದು ಹೊಸ ಆಯಾಮ ತಂದವರು ಅವರ ಜನ ಹೋರಾಟ ದಿನಪತ್ರಿಕೆಯ 20 ನೇ ವಾಷಿ೯ಕೋತ್ಸವಕ್ಕೆ ಶುಭ ಹಾರೈಕೆಗಳು.
9448127375 ಅವರ ಸೆಲ್ ನಂಬರ್

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...