Skip to main content

Blog number 1936. ನಮ್ಮೂರ ರಥ ಶಿಲ್ಪಿಗಳೊಂದಿಗೆ

#ನಮ್ಮೂರ_ವರಸಿದ್ದಿ_ವಿನಾಯಕ_ಸ್ವಾಮಿ_18ನೇ_ವರ್ಷದ_ರಥೋತ್ಸವ.

#ರೈಲ್ವೆ_ಬ್ರಾಡ್_ಗೇಜ್_ಮಾಗ೯_ವಿದ್ಯುದೀಕರಣದಿಂದ

#ರಥದ_ಎತ್ತರ_ಕಡಿಮೆಗೊಳಿಸ_ಬೇಕಾದ_ಅನಿವಾರ್ಯತೆ

#ನಮ್ಮೂರ_ರಥ_ಶಿಲ್ಪಿ_ವೆಂಕಟರಮಣ_ಆಚಾರ್

#ನಮ್ಮೂರ_ರಥ_ದಾನಿ_ಕೆಂಜಿಗಾಪುರ_ಶ್ರೀಧರ_ಭಟ್ಟರು

#ರಥದ_ಗೋಪುರದ_ಮೇಲ್ಚಾವಣೆ_ಮಾಡಿದವರು_ಆನಂದಪುರಂ_ನರಸಿಂಹಾಚಾರ್

https://youtu.be/cuRSj3DxAkE?feature=shared

   ಇದೇ ಫೆಬ್ರುವರಿ 13ರ ಮಂಗಳವಾರ ನಮ್ಮ ಊರಿನ ಶ್ರೀ ವರಸಿದ್ದಿ ವಿನಾಯಕ ದೇವರ 18ನೇ ವರ್ಷದ ಬ್ರಹ್ಮ ರಥೋತ್ಸವ ನಡೆಯಲಿದೆ ಈ ಸಂದರ್ಭದಲ್ಲಿ ಒಂದು ಸಮಸ್ಯೆ ಉದ್ಭವಾಯಿತು ಅದೇನೆಂದರೆ ರಥ ರಾಜಭೀದಿ ಉತ್ಸವ ದೇವಾಲಯದಿಂದ ರಾಷ್ಟ್ರೀಯ ಹೆದ್ದಾರಿಯ ಯಡೇಹಳ್ಳಿ ವೃತ್ತದ ವರೆಗೆ ಪ್ರತಿ ವರ್ಷ ಬರುತ್ತದೆ ಆದರೆ ಈ ಎರ್ಷ ಶಿವಮೊಗ್ಗ ತಾಳಗುಪ್ಪ ಬ್ರಾಡ್ ಗೇಜ್ ರೈಲು ಮಾರ್ಗ ವಿದ್ಯುದೀಕರಣಗೊಳಿಸಿದ್ದರಿಂದ ರೈಲ್ವೆ ಇಲಾಖೆ ರೈಲ್ವೆ ಗೇಟ್ ಸಮೀಪ ಎರಡು ಕಡೆ 15 ಅಡಿಗಿಂತ ಎತ್ತರದ ವಾಹನ ಸಂಚರಿಸದಂತೆ ಬ್ಯಾರಿಕೇಡ್ ಹಾಕಿದೆ.
   ಇದರಿಂದ ನಮ್ಮ ದೇವಾಲಯದ ರಥ 22 ಅಡಿ ಎತ್ತರ ಇರುವುದರಿಂದ ರಥ ರಾಜಭೀದಿ ಉತ್ಸವಕ್ಕೆ ತಡೆಯಾಗಿದೆ ಆದರೆ ಪ್ರತಿ ವರ್ಷದಂತೆ ರಥ ರಾಜಭೀದಿ ಉತ್ಸವ ಈ ಮಾರ್ಗದಲ್ಲಿ ನಡೆಸಲೇಬೇಕೆಂದರೆ ನಮ್ಮ ದೇವಾಲಯದ ರಥದ ಎತ್ತರ ಕಡಿಮೆಗೊಳಿಸುವುದು ಅನಿವಾರ್ಯವಾಗಿದೆ.
  ಆದ್ದರಿಂದ ನಿನ್ನೆ ಈ ರಥ ನಿರ್ಮಿಸಿದ್ದ ರಥ ಶಿಲ್ಪಿ ವೆಂಕಟರಮಣ ಆಚಾರ್ ಮತ್ತು ಈ ರಥದ ಕಬ್ಬಿಣದ ಗೋಪುರ ಮೇಲ್ಚಾವಣಿ ನಿರ್ಮಿಸಿದ್ದ ಆನಂದಪುರದ ನರಸಿಂಹಾಚಾರ್ ಅವರನ್ನು ಕರೆಸಿಕೊಂಡು ಚರ್ಚಿಸಿದೆವು.
18 ವರ್ಷದ ಹಿಂದೆ ಈ ರಥ ದಾನಿಗಳು ಕೇಂಜಿಗಾಪುರದ ಪುರೋಹಿತರಾದ ಶ್ರೀಧರ ಭಟ್ಟರು,ರಥೋತ್ಸವ ನಡೆಸಲೇಬೇಕೆಂಬ ಸಂಕಲ್ಪ ಮಾಡಿದವರು ನಮ್ಮ ದೇವಾಲಯದ ಟ್ರಸ್ಟಿನ ಗೌರವ ಅಧ್ಯಕ್ಷರಾದ ಬೆಂಗಳೂರಿನ ಡಾಕ್ಟರ್ ಎನ್ ಎಸ್ ವಿಶ್ವಪತಿ ಶಾಸ್ತ್ರಿಗಳು,ಈ ರಥದ ನಾಲ್ಕು ಗಾಲಿಗಳು ಶತಮಾನಕ್ಕಿಂತ ಹಿಂದಿನ ಬಂಡಿ ಗಾಲಿಗಳು ಇದರ ಧಾನಿಗಳು ಶಿವಮೊಗ್ಗ ತಾಲೂಕಿನ ಸಿರಿಗೆರೆಯ ಕಾಚಿನಕೊಪ್ಪದ ಶಿವಪ್ಪ ಮಲ್ಲೇನಹಳ್ಳಿ ಮತ್ತು ಲಿಂಗಪ್ಪ ಬಿನ್ ಈರಪ್ಪ ಮಲ್ಲೇನಹಳ್ಳಿ, ಕುಟುಂಬದವರು.
  ಪ್ರತಿವರ್ಷ ದೇವಾಲಯದ ರಥೋತ್ಸವದಂದು ಈ ಮಹಾನುಭಾವರುಗಳನ್ನು ಜಾತ್ರಾ ಸಮಿತಿ ಸ್ಮರಿಸುತ್ತದೆ.
   ಅಂತಿಮವಾಗಿ ಈ ರಥದ ಏಳು ಅಡಿ ಎತ್ತರವನ್ನು ಕಡಿಮೆಗೊಳಿಸುವ ತೀರ್ಮಾನವನ್ನು ಮಾಡಿ ನಾಳೆಯಿಂದ ರಥದ ದುರಸ್ತಿ ಕೆಲಸ ಪ್ರಾರಂಭಿಸಲಿದ್ದಾರೆ.
   ರೈಲು ಮಾರ್ಗದ ನವೀಕರಣ ಆಧುನೀಕರಣಗಳು ಊರಿನ ಆಗು ಹೋಗುವ ಮೇಲೆ ಬೀರುವ ಪರಿಣಾಮಗಳಲ್ಲಿ ಇದು ಒಂದು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...