Skip to main content

Blog number 1937. ಶಿವಮೊಗ್ಗ ಸ್ಮಾರ್ಟ್ ಸಿಟಿ ಸಾವಿರ ಕೋಟಿ ರೂಪಾಯಿಗಳನ್ನು ವ್ಯಯಿಸಲಾಗಿದೆ ಆದರೆ ಪಾದಚಾರಿ ನಡೆದರೆ ಕುಸಿದು ಸಾಯುವ ಚರಂಡಿ ಸ್ಲಾಬ್, ಟ್ರೇ ಪಾರ್ಕ್ ನಲ್ಲಿ 5 ವರ್ಷದ ಮಗು ಕುಳಿತ ಜಿಂಕೆ ಪ್ರತಿಮೆ ಮುರಿದು ಬಿದ್ದು ಸಾಯುವುದಾದರೆ ....

#ಶಿವಮೊಗ್ಗದ_ಸ್ಮಾರ್ಟ_ಸಿಟಿ_ಯೋಜನೆ

#ಮುದ್ದಿನಕೊಪ್ಪದ_ಟ್ರೀ_ಪಾರ್ಕ್

#ಇನ್ನೆಷ್ಟು_ಜೀವ_ಬಲಿ_ಪಡೆದೀತು?

#ಇದಕ್ಕೆ_ಉತ್ತರದಾಯಿತ್ವ_ಯಾರು?

#ಕಳಪೆ_ಕಾಮಗಾರಿ_ಫಲಾನುಭವಿಗಳು_ಯಾರು?

#ಶಿವಮೊಗ್ಗ_ಪಾದಚಾರಿಗಳೆ_ಎಚ್ಚರ!

#ಮಕ್ಕಳನ್ನು_ಪಾರ್ಕಗೆ_ಕರೆದೊಯ್ಯುವ_ಪೋಷಕರೆ_ಎಚ್ಚರ!

#ನಿಮ್ಮ_ಜೀವಕ್ಕೆ_ಬೆಲೆಯೂ_ಇಲ್ಲ_ಗ್ಯಾರಂಟಿಯೂ_ಇಲ್ಲ.

    ಇದು ಪ್ರಜ್ಞಾವಂತರ ಜಿಲ್ಲೆ ನಾಲ್ಕು ಮುಖ್ಯಮಂತ್ರಿಗಳನ್ನು ನೀಡಿದ, ರೈತ ಚಳವಳಿ - ದಲಿತ ಚಳವಳಿ ಹುಟ್ಟಿಗೆ ಕಾರಣದ ಶಿವಮೊಗ್ಗ ಜಿಲ್ಲೆಯಲ್ಲಿ ಅನೂಷ್ಟಾನವಾಗಿರುವ ಕಳಪೆ ಗುಣಮಟ್ಟದ ಕಾಮಗಾರಿಗಳು.
   ಶಿವಮೊಗ್ಗ ಸಿಟಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೇಂದ್ರ ಸರ್ಕಾರ ಸಾವಿರ ಕೋಟಿ ರೂಪಾಯಿಗಳನ್ನು ವಿನಿಯೋಗಿಸಿದೆ ಯೋಜನೆ ರೂಪು ರೇಷೆ ಒಳ್ಳೆಯದೆ ಆದರೆ ಅನೂಷ್ಟಾನ ಅನುಮಾನವೇ ಆಗಿದೆ.
 ಶಿವಮೊಗ್ಗದ ಚರಂಡಿಗೆ ಹಾಕಿದ ಸ್ಲಾಬ್ ಕುಸಿದು ಪಾದಚಾರಿ ಮರಣ ಹೊಂದಿದ ಘಟನೆ ನಡೆದಿದೆ ಅಂದರೆ ಚರಂಡಿ ಸ್ಲಾಬ್ ಒಬ್ಬ ಮನುಷ್ಯನ ಬಾರವೂ ತಡೆದುಕೊಳ್ಳದಂತ ಸ್ಲಾಬ್ ಗಳನ್ನು ಹಾಕಿ ಎಷ್ಟು ಹಣ ಬಿಲ್ ಆಗಿರಬಹುದು?
  ಅರಣ್ಯ ಇಲಾಖೆಯ ಮುದ್ದಿನಕೊಪ್ಪದ ಟ್ರೀ ಪಾರ್ಕ್ ನಲ್ಲಿ ಸಿಮೆಂಟ್ ಜಿಂಕೆ ಏರಿದ 5 ವರ್ಷದ ಮಗು ಜಿಂಕೆ ಪ್ರತಿಮೆಯೆ ಕುಸಿದು ಸಾವಿಗೆ ಈಡಾಯಿತು ಅಂದರೆ ಟ್ರೀ ಪಾರ್ಕ್ 10 ಕೇಜಿ ಬಾರದ ಮಗುವಿನ ತೂಕ ತಾಳಲಾರದೇ ಬೀಳುವ ಸಿಮೆಂಟಿನ ಜಿಂಕೆ ವಿಗ್ರಹ ಅಳವಡಿಸಿದ್ದಾರೆಂದರೆ?
   ಶಿವಮೊಗ್ಗದ ಅನೇಕ ಕಡೆ ಸ್ಮಾರ್ಟ್ ಸಿಟಿ ಯೋಜನೆಯ ಅಂಡರ್ಗ್ರೌಂಡ್ ವಿದ್ಯುತ್ ಸಂಪರ್ಕ ಕಳಪೆ ಕಾಮಗಾರಿಯಿಂದ ಅನೇಕ ಸಾಕುಪ್ರಾಣಿಗಳು ಮರಣ ಹೊಂದುತ್ತಿದೆ ....
  ಇವರ ಸಾವಿಗೆ ಕಾರಣವಾದವರಿಗೆ ಶಿಕ್ಷೆ ಇದೆಯಾ... ಇವರಿಗೆ ನ್ಯಾಯ ದೊರಕುವುದು ಸಾಧ್ಯವಾ? ಗೊತ್ತಿಲ್ಲ....
ಆದರೆ ಜನರಿಗಾಗಿ ಜನರಿಂದ ಆಯ್ಕೆ ಆಗುವ ಸರ್ಕಾರ ಜನಪ್ರತಿನಿಧಿ, ಅಧಿಕಾರಿಗಳು ಇದಕ್ಕೆ ಉತ್ತರಿಸುತ್ತಾರಾ?
   21 ನೇ ಶತಮಾನದಲ್ಲೂ ಇಂತಹ ಭ್ರಷ್ಟಾಚಾರ ನಿಯಂತ್ರಣ ಸಾಧ್ಯವಾಗದಿದ್ದರೆ ಜನರ ತೆರಿಗೆ ಸಂಗ್ರಹಿಸುವ ಉದ್ದೇಶ ಮತ್ತು ಅಭಿವೃದ್ಧಿ ಎನ್ನುವುದಕ್ಕೆ ಅರ್ಥವೇನು?
  ಶಿವಮೊಗ್ಗದ ಪಟ್ಟಣದ ಸ್ಮಾರ್ಟ್ ಸಿಟಿ ಫಲಾನುಭವಿಗಳೆ ಮುಂದಿನ ಮಳೆಗಾಲದಲ್ಲಿ ಇನ್ನೇನು ಗಂಡಾಂತರ ಇದೆಯೋ ಗೊತ್ತಿಲ್ಲ ಎಚ್ಚರದಿಂದ ಇರಿ, ವಿಶೇಷವಾಗಿ ಪಾದಚಾರಿಗಳು ಜಾಗೃತಿ ವಹಿಸಿ.
   ಗಾರ್ಡನ್, ಟ್ರಿ ಪಾರ್ಕ್ ಗಳಿಗೆ ಮಕ್ಕಳನ್ನು ಕರೆದೊಯ್ಯುವ ಪೋಷಕರೆ ಎಚ್ಚರ.
   ಇದು ಪ್ರಜ್ಞಾವಂತರ ಜಿಲ್ಲೆ ನಾಲ್ಕು ಮುಖ್ಯಮಂತ್ರಿಗಳನ್ನು ನೀಡಿದ, ರೈತ ಚಳವಳಿ - ದಲಿತ ಚಳವಳಿ ಹುಟ್ಟಿಗೆ ಕಾರಣದ ಶಿವಮೊಗ್ಗ ಜಿಲ್ಲೆಯಲ್ಲಿ ಅನೂಷ್ಟಾನವಾಗಿರುವ ಕಳಪೆ ಗುಣಮಟ್ಟದ ಕಾಮಗಾರಿಗಳು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...