Skip to main content

Blog number 1942. ನಮ್ಮ ಮನೆ ಪಕ್ಕದ ರಾಮಾಚಾರರ ಕುಲುಮೆಯ ಕ್ಯಾಷ್ಟನ್ ಬಚ್ಚಾಚಾರ್ ಮಗಳು ಲಲಿತಕ್ಕ ಇವತ್ತು ಸುಮಾರು 28 ವರ್ಷದ ನಂತರ ನನ್ನ ಅತಿಥಿ ಅವರಿಗೆ ಅವರ ತಂದೆಯ ಪೋಟೋದ ಉಡುಗೊರೆ ನೀಡಿದಾಗ....

https://youtu.be/ibBu1IBHkEU?feature=shared

https://youtu.be/Nlum8Ubn58g?feature=shared

#ನಮ್ಮೂರಿನ_ಕುಲುಮೆ_ಬಚ್ಚಾಚಾರ್_ಮಗಳು_ಲಲಿತಕ್ಕ_ನನ್ನ_ಅತಿಥಿ

#ಇವರು_ಹದ_ಹಾಕಿದ_ಕತ್ತಿ_ಕುಡುಗೋಲು_ಕೊಡಲಿ_ಎತ್ತಿನಗಾಡಿ_ಹಳಿ_ಈ_ಭಾಗದ_ರೈತರು_ಈಗಲೂ_ಸ್ಮರಿಸುತ್ತಾರೆ.

#ಮುವತ್ತೈದು_ವರ್ಷದ_ಹಿಂದೆ_ಬಚ್ಚಾಚಾರ್_ಇಹಲೋಕ_ತ್ಯಜಿಸಿದ್ದರು.

#ಅವರ_ಒಂದು_ಪೋಟೋ_ಕೂಡ_ತನ್ನ_ಹತ್ತಿರ_ಇಲ್ಲ_ಅಂದಾಗ....

#ಬಚ್ಚಾಚಾರ್_ಪೋಟೋ_ಪ್ರಿಂಟ್_ಹಾಕಿಸಿ_ಪ್ರೇಂ_ಹಾಕಿಸಿ_ಉಡುಗೊರೆ_ನೀಡಿದಾಗ.....
  ತನ್ನ ತಂದೆ ಪೋಟೋ ತನ್ನ ಜೀವಮಾನದಲ್ಲೇ ನೋಡುತ್ತೇನೆ ಅಂದು ಕೊಂಡಿರಲಿಲ್ಲ... 35 ವರ್ಷದ ಹಿಂದೆ ಮೃತರಾದರು ಅವರ ಒಂದೇ ಒಂದು ಪೋಟೋ ಇರಲಿಲ್ಲ.... ಅಂತ ಸುಮಾರು 27 ವಷ೯ದ ನಂತರ ನನ್ನ ಕಛೇರಿಗೆ ಬಂದಿದ್ದ ಗೌತಮಪುರದ ಲಲಿತಕ್ಕ ಕಣ್ಣೀರಾಗಿದ್ದಳು.
   ಇವರ ತಂದೆ ಬಚ್ಚಾಚಾರ್ ತಾಯಿ ಪದ್ದಮ್ಮ ಕುಂದಾಪುರ ಮೂಲದವರು, ಬಚ್ಚಾಚಾರ್ ರನ್ನು ನಮ್ಮ ಪಕ್ಕದ ಮನೆಯ ರಾಮಾಚಾರ್ ಕುಲುಮೆ ಕೆಲಸಕ್ಕೆ ಕರೆತಂದಿದ್ದು.
   ನನ್ನ ಕಥಾ ಸಂಕಲನ #ಬಿಲಾಲಿ_ಬಿಲ್ಲಿ_ಅಭ್ಯಂಜನ ದಲ್ಲಿ ಬರುವ ಒಂದು ಕಥೆಯಾದ #ಮಂಜ_ಬ್ರಹ್ಮ_ರಾಕ್ಷಸನಾದರೆ... ಕಥೆಯಲ್ಲಿ ಬಚ್ಚಾಚಾರ್ ಮತ್ತು ಆ ಕಾಲದ ಕುಲಿಮೆ ನನ್ನ ಕಣ್ಣಲ್ಲಿ ಗ್ರಹಿಸಿದ ವರ್ಣನೆ ದಾಖಲಿಸಿದ್ದೇನೆ.
  1984ರಲ್ಲಿ ನಾನು ಖರೀದಿಸಿದ್ದ ನಿಕಾನ್ ಕ್ಯಾಮೆರಾದಲ್ಲಿ ಬ್ಲಾಕ್ & ವೈಟ್ ಪೋಟೋದಲ್ಲಿ ನಾನು ಬಚ್ಚಾಚಾರ್ ಫೋಟೋ ನನ್ನಣ್ಣ ಮತ್ತು ನಮ್ಮ ಊರಿನ ಅಮ್ಜಾದ್ ಸಾಹೇಬರ ಜೊತೆ ಸೆರೆ ಹಿಡಿದಿದ್ದೆ.
   ಇವತ್ತು ಅವರ ಮಗಳು ತಂದೆಯ ಪೋಟೋ ಇಲ್ಲ ಅಂತ ರೋದಿಸಿದಾಗ ಬಚ್ಚಾಚಾರ್ ಪೋಟೋ ನೆನಪಾಗಿ ಮಗನಿಗೆ ಹೇಳಿ ಎಡಿಟ್ ಮಾಡಿಸಿ ನಮ್ಮದೇ ಪ್ರಿಂಟರ್ ನಲ್ಲಿ ಪ್ರಿಂಟ್ ತೆಗೆದು ನನ್ನಣ್ಣನ ಮಗನಿಗೆ ಆನಂದಪುರOಗೆ ಕಳಿಸಿ ಪೋಟೋ ಪ್ರೇಂ ಹಾಕಿಸಿ ತರಿಸಿ ಲಲಿತಕ್ಕನಿಗೆ ನೀಡಿದಾಗ ಅವರ ಮುಖದಲ್ಲಿ ವ್ಯಕ್ತವಾದ ಸಂತೋಷಕ್ಕೆ ಬೆಲೆ ಕಟ್ಟಲಾಗಲಿಲ್ಲ ಈ ಸಂದರ್ಭದಲ್ಲಿ ಲಲಿತಕ್ಕ ಜೀವಮಾನದಲ್ಲೂ ನಿರೀಕ್ಷಿಸದ ತಂದೆಯ ಪೋಟೋದ ಬೆಲೆ ಲಕ್ಷ ರೂಪಾಯಿ ಕೊಟ್ಟರೂ ಕಡಿಮೆ ಅಂದರು.
   ಇವರ ತಾಯಿಗೆ ತೀವ್ರ ಅನಾರೋಗ್ಯವಾಗಿದ್ದಾಗ ನನ್ನ ತಾಯಿ ನಮ್ಮ ಮನೆಯಲ್ಲೇ ಎರೆಡು ತಿಂಗಳು ಇಟ್ಟುಕೊಂಡು ಸಲಹಿದ್ದು...ನಮ್ಮ ತಂದೆ ಚಿಕಿತ್ಸೆ ನೀಡಿದ್ದು... ಆಗ ನನ್ನ ದೊಡ್ಡಕ್ಕ ಜಲಜಕ್ಕನ ಕೈ ಬಳೆಗಳ ದೊಡ್ಡ ಪೆಟ್ಟಿಗೆ ಅಷ್ಟು ಸಂಗ್ರಹ..., ಪ್ರತಿ ವರ್ಷ ದೀಪಾವಳಿಯಲ್ಲಿ ಲಲಿತಕ್ಕ ತನ್ನ ತಂದೆ ಬಚ್ಚಾಚಾರ್ ಗೆ ಪಿತೃ ತರ್ಪಣದ ಎಡೆ ತಪ್ಪದೆ ಇಡುವುದು... ಎಲ್ಲಾ ನೆನಪಿಸಿಕೊಂಡರು.
   ಗೌತಮಪುರದಲ್ಲಿ ಇವರು ನೆಲೆನಿಲ್ಲಲು ಕಾರಣರಾದ #ಕೊಗ್ಗಾಚಾರ್.... ಹಾಲಿ ಗೌತಮಪುರದ ಜನತಾ ಕಾಲೋನಿಯಲ್ಲಿ ಜಾಗ ಮತ್ತು ಮನೆ ಮಂಜೂರಿ ಮಾಡಿಸಿಕೊಟ್ಟ ಸ್ಥಳಿಯ ಮುಖಂಡರಾದ #ಕಲ್ಲಪ್ಪರನ್ನು ಸ್ಮರಿಸಿದರು
   ಬಚ್ಚಾಚಾರ್ ಪೋಟೋ, ಅವರ ಉಲ್ಲೇಖಗಳು ಇರುವ ನನ್ನ ಕಥಾ ಸಂಕಲನ, ಒಂದು ಸಾವಿರ ರೂಪಾಯಿ ಉಡುಗೊರೆಯೊಂದಿಗೆ ನೀಡಿ ಊಟ ಮಾಡಿಸಿ ಬೀಳ್ಕೊಡಿಗೆ ಮಾಡಿದೆ ಅವರ ಮುಖದಲ್ಲಿ-ಕಣ್ಣಿನಲ್ಲಿ ಅಲೌಕಿಕವಾದ ತೃಪ್ತಿಯ ಪ್ರತಿಫಲನವಿತ್ತು.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ