Skip to main content

Blog number 1952. ನನ್ನ ರಾಜಕಾರಣದ ನಿವೃತ್ತಿಗೆ ಒಂದು ದಶಕ, 2014 ಲೋಕ ಸಭಾ ಚುನಾವಣೆಯ ಪ್ರಚಾರ ಸಭೆಗಳು ರಾಜಕಾರಣದ ಕೊನೆಯ ದಿನಗಳ ನೆನಪು.

#ಪುಲ್ವಾಮ_ಭಾರತೀಯ_ಸೈನಿಕರ_ಹತ್ಯಾಕಾಂಡಕ್ಕೆ_ಐದು_ವರ್ಷ

#ಭಯೋತ್ಪಾದನೆ_ನಿಗ್ರಹ_ಅಷ್ಟು_ಸುಲಭವಲ್ಲ_ವಿಶ್ವದ_ಹಿರಿಯಣ್ಣ_ಅಮೇರೀಕಾವೇ_ಬಸವಳಿದಿದೆ.

#ಅಯನೂರು_ಮಂಜುನಾಥರು_2014ರ_ಲೋಕಸಭಾ_ಚುನಾವಣೆಯಲ್ಲಿ_ಜಿಲ್ಲಾ_ಭಾಜಪ_ಅಧ್ಯಕ್ಷರು

#ಅವರ_ಮಾತುಗಳು_ಪರಿಣಾಮಕಾರಿಯಾಗಿ_ಮತಗಳಾಗಿ_ಪರಿವರ್ತನೆ_ಆಯಿತು

#ಈ_ಚುನಾವಣೆಯೇ_ನನ್ನ_ರಾಜಕೀಯ_ಜೀವನದ_ಕೊನೆ

#ರಾಜಕೀಯದಿಂದ_ನಿವೃತ್ತಿ_ಫೋಷಿಸಿಕೊಂಡು_10_ವರ್ಷ_ಆಯಿತು.
   ಇವತ್ತಿಗೆ ಸರಿಯಾಗಿ 5 ವರ್ಷದ ಹಿಂದೆ ಪುಲ್ವಾಮ ಸೈನಿಕರ ಹತ್ಯಾಕಂಡ ನಡೆಯಿತು,ಇಲ್ಲಿ ಈಗ ಈ ವಿಚಾರ ರಾಜಕೀಯ ಪಕ್ಷಗಳ ಪರಸ್ಪರ ಕೆಸರೆರಾಚಟ ಸರಿ ಅಲ್ಲ, ಸೈನ್ಯದ ವಿಚಾರವನ್ನ ಚುನಾವಣ ಅಸ್ತ್ರವಾಗಿ ಬಳಸುವುದೂ ಕೂಡ ಸರಿಯಲ್ಲ, ಇದನ್ನೆಲ್ಲ ಎದುರಿಸಲು ನೈತಿಕ ಬೆಂಬಲ ಬೇಕಾಗಿದೆ, ಭಕ್ತರು V/S ಗುಲಾಮರು ಎನ್ನುತ್ತಾ ಪರಸ್ಪರ ನಿಂದನೆಯ ಸೋಷಿಯಲ್ ಮೀಡಿಯಾದ ವಚು೯ಯಲ್ ವಾರ್ ನ ಪೌರುಷಕ್ಕೆ ಯಾವುದೇ ಬೆಲೆ ಇಲ್ಲ.
  ಇದನ್ನ ಇಲ್ಲಿ ಉಲ್ಲೇಖಿಸಲು ಕಾರಣ ಇದೆ, 2013 ರ ವಿದಾನಸಭಾ ಚುನಾವಣೆಯಲ್ಲಿ ನಾನು ಸಾಗರ ತಾಲ್ಲೂಕಿನ JDS ಪಾಟಿ೯ ಅಧ್ಯಕ್ಷ ನಮ್ಮ ಅಭ್ಯಥಿ೯ 2 ಬಾರಿ ಬಿಜೆಪಿ ಶಾಸಕರಾಗಿದ್ದ ಗೋಪಾಲಕೃಷ್ಣ ಬೇಳೂರು ಆ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ನ ಕಾಗೋಡು ವಿಜಯಿ ಆದರು, ಬಿಜೆಪಿ ಅಭ್ಯರ್ಥಿ ಶ್ರೀಮತಿ ಶರಾವತಿ ಸಿ.ರಾವ್ ಐದು ಸಾವಿರ ಮತ ಪಡೆದರು, ನಮ್ಮ ಅಭ್ಯರ್ಥಿ ಗೋಪಾಲ ಕೃಷ್ಣ ಬೇಳೂರು 23 ಸಾವಿರ ಮತ ಪಡೆದರು.
  ನಂತರ 2014 ರಲ್ಲಿ ಬಂದ ಲೋಕಸಭಾ ಚುನಾವಣೆಗೆ ನನ್ನನ್ನು ಸೇರಿಸಿ ಎಲ್ಲರನ್ನೂ ಬೇಳೂರು ಗೋಪಾಲಕೃಷ್ಣ ಬಿಜೆಪಿಯ ಯಡೂರಪ್ಪರ ಪರ ಚುನಾವಣೆಗಾಗಿ ಬಿಜೆಪಿಗೆ ಸೇರಿಸಿದರು (ಅದು ನನ್ನ ರಾಜಕಾರಣದ ನಿವೃತ್ತಿ ಕೂಡ).
   ಆಗ ಸಾಗರ ತಾಲ್ಲೂಕಿನ ಮತ್ತು ಹೊಸ ನಗರ ತಾಲ್ಲೂಕಿನ ಪ್ರಚಾರ ಸಭೆಯಲ್ಲಿ ಆಗಿನ ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿದ್ದ ಮಾಜಿ ಸಂಸದ ಅಯನೂರು ಮಂಜುನಾಥ್ ರು ಮಾಡುತ್ತಿದ್ದ ಬಾಷಣ ನೆರೆದಿದ್ದವರನ್ನ ರೋಮಾಂಚನ ಮಾಡುತ್ತಿತ್ತು, UPA ಸಕಾ೯ರದ ಅವಧಿಯಲ್ಲಿ ಪಾಕಿಸ್ತಾನ ಗಡಿ ರೇಖೆ ಎಷ್ಟು ಸಾರಿ ಉಲ್ಲಂಘನೆ ಮಾಡಿದೆ, ನಮ್ಮ ದೇಶದ ಸೈನಿಕರ ಕತ್ತು ಕೊಯ್ದ ಘಟನೆ ವಿವರಿಸುವಾಗ ಸಭೆ ನಿಶ್ಯಬ್ದವಾಗಿ ಆಲಿಸುತ್ತಿತ್ತು, ಅಯನೂರು ಮಂಜುನಾಥರ ಅವತ್ತಿನ ಮಾತುಗಳು ಯಡೂರಪ್ಪರಿಗೆ ಮತಗಳಾಗಿ ಪರಿವತ೯ನೆ ಆಗಿದ್ದು ಇತಿಹಾಸ ಅವರು ಪ್ರಖರ ವಾಗ್ಮಿ,
 UPA ಸಕಾ೯ರ ಹೋಗಿ BJP ಸಕಾ೯ರ ಬಂದು ಎರೆಡು ಅವಧಿ ಮುಗಿಯುತ್ತಿದೆ ಆದರೆ ಭಯೋತ್ಪಾದಕರು ಯಾವುದೇ ಸಕಾ೯ರ ಬಂದರೂ ನಿಯಂತ್ರಿಸಲು ಅಸಾಧ್ಯ ಎಂಬುದು ಸಾಭೀತಾಗಿದೆ.
  ಹಾಗಾಗಿ ನಾವು ಇವುಗಳ ಪರಿಹಾರದ ಬಗ್ಗೆ ಬೇರೆ ದೃಷ್ಠಿಕೋನದಿಂದ ನೋಡ ಬೇಕು, ವೀರಾವೇಶದ ಬಾಷಣಗಳು ವ್ಯಥ೯ ಎಂದು ನನ್ನ ಸ್ವಂತ ಅನುಭವ.
  ಅವತ್ತಿನ 2014ರ ಲೋಕಸಭಾ ಚುನಾವಣೆಯಲ್ಲಿ ಸಾಗರ ಮತ್ತು ಹೊಸನಗರ ತಾಲ್ಲೂಕಿನ ಬಿಜೆಪಿ ಚುನಾವಣಾ ಪ್ರಚಾರ ಸಭೆಗಳಲ್ಲಿ ನಾನು, ಗೋಪಾಲಕೃಷ್ಣ ಬೇಳೂರು, ಬಿ.ಆರ್.ಜಯ೦ತ್, ಈಶ್ವರಪ್ಪ ಮತ್ತು ಆಯನೂರು ಮಂಜುನಾಥ ಜೊತೆ ಭಾಗಿಯಾಗಿದ್ದ ಚಿತ್ರಗಳು ಅವತ್ತಿನ ದಿನಮಾನ ನೆನಪಿಸುತ್ತದೆ.
   ಅವತ್ತು "ಅಬ್ ಕಾ ಬಾದ್ ಮೋದಿ ಸರ್ಕಾರ್ " ಘೋಷಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಿಟ್ಟು ಕೆಜೆಪಿ ಕಟ್ಟಿ ಪುನಃ ಬಿಜೆಪಿಗೆ ಸೇರಿ ಸ್ಪರ್ದಿಸಿದ ಯಡೂರಪ್ಪರ ಗೆಲ್ಲಿಸಲು ಪಣ ತೊಟ್ಟ ಅಯನೂರು ಮಂಜುನಾಥ್, ಬೇಳೂರು ಗೋಪಾಲಕೃಷ್ಣ, ಬಿ.ಆರ್. ಜಯಂತ್ ಈಗ ಬಿಜೆಪಿ ತೊರೆದು ಕಾಂಗ್ರೇಸಿನಲ್ಲಿದ್ದಾರೆ.
  ನಾನು 2014ರ ಲೋಕಸಭಾ ಚುನಾವಣೆ ನಂತರ ರಾಜಕೀಯ ಪಕ್ಷಗಳನ್ನು ಸೇರುವುದಿಲ್ಲ ಮತ್ತು ಚುನಾವಣಾ ಸ್ಪರ್ದೆ ಮಾಡುವುದಿಲ್ಲ ಎಂದು ತೀರ್ಮಾನಿಸಿ ಅದಕ್ಕೆ ಪೂರಕವಾಗಿ ವೇದಿಕೆ ಮೇಲೆ ಭಾಗವಹಿಸುವುದಿಲ್ಲ, ಬಾಷಣ ಮಾಡುವುದಿಲ್ಲ, ಪ್ರಶಸ್ತಿ -ಸನ್ಮಾನಗಳನ್ನು ತಿರಸ್ಕರಿಸುವ ತೀಮಾ೯ನ ಮಾಡಿ 10 ವರ್ಷ ಆಯಿತು.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ