Skip to main content

Blog number 1960. ಸುವರ್ಣ ಸ್ವಾತಂತ್ರ್ಯೋತ್ಸವದ ಸವಿನೆನಪಿನ ಪ್ರಾಥಮಿಕ ಶಾಲೆಗಳ ಕೊಡುಗೆಯ ಬಹುಪಾಲು ಆನಂದಪುರಂ ಜಿಲ್ಲಾ ಪಂಚಾಯತ್ ಕ್ಷೇತ್ರಕ್ಕೆ ತಂದಿದ್ದೆ ಆದರೆ ಆ ಸಂಭ್ರಮ ಸ್ವಾತಂತ್ರ್ಯೋತ್ಸವದ ವಜ್ರ ಮಹೋತ್ಸವ ಆಚರಣೆ ಸಂದರ್ಭದಲ್ಲಿ ಇರಲಿಲ್ಲ ಇಂತಹ ಅನೇಕ ಶಾಲೆಗಳು ಬಾಗಿಲು ಮುಚ್ಚಿದೆ.

#25ವಷ೯ದ_ಹಿಂದಿನ_ನೆನಪು_ತರಿಸಿತು.

#ಸ್ವಾತಂತ್ತ್ಯೋತ್ಸವದ_ಸುವರ್ಣಮಹೋತ್ಸವದ_ಪ್ರಾಥಮಿಕ_ಶಾಲೆಗಳು

#ಸ್ವಾತಂತ್ರ್ಯೋತ್ಸವದ_ವಜ್ರಮಹೋತ್ಸವದಲ್ಲಿ_ಬಾಗಿಲು_ಹಾಕುತ್ತಿದೆ

#ಏಕೆ...


  1997 ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದು 50 ನೇ ವರ್ಷದ ಆಚರಣೆ ಆಗಿದ್ದರಿಂದ #ಸುವರ್ಣ_ಸ್ವಾತಂತ್ಯೋತ್ಸವದ ಸಡಗರವೇ ಆಗಿತ್ತು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿಶೇಷ ಕಾಯ೯ಕ್ರಮಗಳು ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್ ಗಳಿಗೂ ಪ್ರೇರಣೆ ನೀಡಿತ್ತು.
  ಆಗ ಉತ್ಸಾಹಿ ಜಿಲ್ಲಾ ಪಂಚಾಯತನ ಸದಸ್ಯರಾಗಿದ್ದ ನಾವೆಲ್ಲ ಸೇರಿ ಜಿಲ್ಲಾ ಪಂಚಾಯತ್ ನಲ್ಲಿ ರಾತ್ರಿ 12ಕ್ಕೆ ವಿಶೇಷ ಸಭೆ ಆಯೋಜಿಸಿದ್ದೆವು, ಈಸೂರಿನಿಂದ ಸ್ವಾತಂತ್ರ ಜ್ಯೋತಿಯನ್ನು ತಂದಿದ್ದೆವು.
  ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆ ಸುವರ್ಣ ಸ್ವಾತಂತ್ಯೋತ್ಸವದ ಸವಿ ನೆನಪಿಗಾಗಿ ಪ್ರಾಥಮಿಕ ಶಾಲಾ ಸೌಲಭ್ಯವಿಲ್ಲದ ಹಳ್ಳಿಗೆ ಹೊಸ ಶಾಲೆ ಮತ್ತು ಅದಕ್ಕೆ ಏಕ ಕೊಠಡಿ ಕಟ್ಟಡ ಮಂಜೂರು ಮಾಡಲು ಮುಂದಾಗಿತ್ತು.
  ಶಿವಮೊಗ್ಗ ಜಿಲ್ಲಾ ಪಂಚಾಯತ್ ನ ಅವತ್ತಿನ 27 ಸದಸ್ಯರ ಕ್ಷೇತ್ರಕ್ಕೆ ಒಂದರಂತೆ 27 ಹೊಸ ಶಾಲೆಗೆ ಪ್ರಸ್ತಾವನೆ ಕೇಳಿದ್ದರು.
  ಆದರೆ ಹಳ್ಳಿಗಳಲ್ಲಿ ಶಾಲೆಗೆ ಜಾಗ ಹೊಂದಿಸುವುದು, ಖಾಸಾಗಿ ಶಾಲಾ ಪೈಪೋಟಿಯಲ್ಲಿ ಸರ್ಕಾರಿ ಶಾಲೆಗೆ ಜನ ಆಸಕ್ತಿ ವಹಿಸುವುದಿಲ್ಲ ಎಂದು ಈ ಯೋಜನೆ ಟೇಕ್ ಆಫ್ ಆಗಲಿಲ್ಲ ಆದರೆ ನನ್ನ ಕ್ಷೇತ್ರದಲ್ಲಿ ಹೊಸ ಶಾಲೆ ಕಾರ್ಯಾರಂಭ ಮಾಡಿದ್ದ ಯಶಸ್ಸಿನಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಉಳಿದ ಶಾಲೆಗಳನ್ನು ನನ್ನ ಕ್ಷೇತ್ರಕ್ಕೆ ನೀಡಿದರು.
  ಇಡೀ ಜಿಲ್ಲಾ ಪಂಚಾಯತ್ ಕ್ಷೇತ್ರಗಳಲ್ಲಿ ಗ್ರಾಮಸ್ಥರ ಜೊತೆ ಪಾದಯಾತ್ರೆಗಳ ಮಾಡುತ್ತಾ ಆಯಾ ಭಾಗದ ಬೇಡಿಕೆ ತಲೆಯಲ್ಲೇ ದಾಖಲಾಗಿದ್ದರಿಂದ ನನ್ನ ಕ್ಷೇತ್ರದಲ್ಲಿನ
*1. #ಕೆಳಗಿನ_ಘಂಟಿನಕೊಪ್ಪ*(ಯಡೇಹಳ್ಳಿ ಗ್ರಾ.ಪಂ)
*2. #ಸೊರಗುಂದ.*(ಯಡೇಹಳ್ಳಿ ಗ್ರಾ.ಪಂ)
*3. #ಮದ್ಲೇಸರ.* ( ಹೊಸೂರು ಗ್ರಾ.ಪಂ)
*4. #ಮೂಡಾಹಗಲು* (ಆಚಾಪುರ ಗ್ರಾ.ಪಂ)
*5. #ಜೇಡಿಸರ.* ( ಆನಂದಪುರಂ ಗ್ರಾ.ಪಂ)
*6. #ಕಲ್ಲೊಡ್ಡು (ಸಂಗಣ್ಣನ ಕೆರೆ ಹತ್ತಿರದ ಊರು)*(ಗೌತಮಪುರ ಗ್ರಾ.ಪಂ)
*7. #ಮಡಿವಾಳನಕಟ್ಟೆ (ಕುಂದೂರು)*(ಬರೂರು ಗ್ರಾ.ಪಂ)...
ಇನ್ನು ಮೂರು ಕಡೆ ಊರ ಹೆಸರು ಮರೆತಿದ್ದೇನೆ ಹೊಸ ಶಾಲೆ ಪ್ರಾರಂಭ ಆಯಿತು.
  ನೂತನ ಶಾಲಾ ಕಟ್ಟಡ ಮಂಜೂರಾಗುವುದಕ್ಕೂ ಮತ್ತು ನೂತನ ಶಾಲೆ ಮಂಜೂರಾಗಲು ವ್ಯತ್ಯಾಸ ಇದೆ ಅದೇನೆಂದರೆ ಯಾವುದೇ ಅನುದಾನದಲ್ಲಿ ಶಾಲಾ ಕಟ್ಟಡ ನಿಮಿ೯ಸಬಹುದು ಆದರೆ ಹೊಸ ಶಾಲೆಗೆ ಶಿಕ್ಷಕರು, ಶಿಕ್ಷಕರ ವೇತನ, ಶಿಕ್ಷಣ ಪರಿಕರಣ ಇತ್ಯಾದಿಗಳು ಬಡ್ಜೆಟ್ ನಲ್ಲಿ ಮಂಜೂರಾಗಬೇಕು ಹಾಗೆ ಮಂಜೂರಾದರೇ ನಿರಂತರ ಶಾಲೆ ನಡೆಯುತ್ತದೆ ಆದ್ದರಿಂದ ನೂತನ ಶಾಲೆ ಪ್ರಾರಂಭ ಆಗಲು ತುಂಬಾ ಅಡೆತಡೆಗಳು ಆಡಳಿತದಲ್ಲಿ ಇರುತ್ತದೆ.

  25 ವರ್ಷದ ಹಿಂದಿನ ಹಳ್ಳಿಯ ಪೋಷಕರ ಶಾಲಾ ಬೇಡಿಕೆ ಈಗ ಶಾಲೆ ಬಾಗಿಲು ಹಾಕಲು ಕಾರಣ ನೋಡಿದರೆ ಖಾಸಾಗಿ ಶಾಲಾಗಳು ಇಂಗ್ಲೀಷ್ ಮೀಡಿಯಂ ವಿದ್ಯಾಬ್ಯಾಸ ಮಕ್ಕಳನ್ನು ಅವರ ಮನೆಯಿಂದಲೇ ಕರೆದೊಯ್ದು ವಾಪಾಸ್ ತಂದು ಬಿಡುವ ಶಾಲಾ ವಾಹನ ವ್ಯವಸ್ಥೆ, ಹಳ್ಳಿಗಳ ತಲಾ ಆದಾಯ ವಾಣಿಜ್ಯ ಕೃಷಿಗಳಿಂದ ಹೆಚ್ಚು ಆಗಿರುವುದು ಮತ್ತು ಸರ್ಕಾರಿ ಶಾಲೆ ಎಂಬ ಅಸಡ್ಡೆಯೂ ಸೇರಿದೆ.
  ಆನಂದಪುರಂ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಆಚಾಪುರ ಗ್ರಾಮಪಂಚಾಯತ್ ನ ಮೂಡಾಹಗಲು ಎ೦ಬ ಸಣ್ಣ ಗ್ರಾಮ ಹೊಸನಗರ ತಾಲ್ಲೂಕಿನ ಬಾರ್ಡರ್ ನಲ್ಲಿದೆ ಈ ಊರಿನ ದೊಡ್ಡ ಕೆರೆ ಈ ಹಳ್ಳಿಯನ್ನು ಎರೆಡು ಭಾಗ ಮಾಡಿದೆ ಬೇಸಿಗೆಯಲ್ಲಿ ಕೆರೆ ಬತ್ತಿದಾಗಲೇ ಇವರಿಗೆ ಸರಕು ಸಾಗಾಣಿಕೆಗೆ ಅವಕಾಶ ಆಗಿತ್ತು ಆದ್ದರಿಂದ ಕೆರೆ ದಂಡೆ ಅಗಲ ಮಾಡಿ ಕೆರೆ ಕೊಡಿಗೆ ಪೈಪ್ ಅಳವಡಿಸಿ ಎರೆಡೂ ಭಾಗಕ್ಕೆ ಸಂಪಕ೯ ಮಾಡಿಸಿದ್ದೆ ಕೆರೆ ಕೆಳಗಿನ ಭೂ ಮಾಲಿಕರಾಗಿದ್ದ ಮೂಡಾಹಗಲು ನಾಗಪ್ಪ (ಸಂಗಣ್ಣನ ಕೆರೆ) ತಮ್ಮ ಖಾತೆ ಜಮೀನು ನಮ್ಮ ಮನವಿಗಾಗಿ ಬಿಟ್ಟುಕೊಟ್ಟಿದ್ದರು.
  ಈ ಹಳ್ಳಿಗೆ ಕುಡಿಯುವ ನೀರಿನ ಬಾವಿ, ವಿದ್ಯುತ್ ಸಂಪರ್ಕ, ರಸ್ತೆ ಜಲ್ಲಿ ಬಿಚಾವಣೆ ಮತ್ತು ಪ್ರಾಥಮಿಕ ಶಾಲೆ ಜಿಲ್ಲಾ ಪಂಚಾಯತ್ ನಿಂದ ಮಾಡುವಾಗ ಸ್ಥಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸಜ್ಜನ ಸಣ್ಣ ವೀರಪ್ಪ, ಸದಸ್ಯರಾಗಿ ಶ್ರೀ ಮತಿ ಚೌಡಮ್ಮ ಕೃಷ್ಣಪ್ಪ, ಇಕ್ಬಾಲ್ ಬೇಗ್ ಮತ್ತಿತರು ಸದಾ ಬೆಂಬಲಿಕ್ಕಿದ್ದರು.
   15 ವರ್ಷದಿಂದ ಶಾಲೆ ಬಂದಾಗಿದೆ, ಕೆರೆ ದಂಡೆ ಕುಸಿದಿದೆ, ರಸ್ತೆ ಇತ್ಯಾದಿ ಇಲ್ಲದ ವರದಿ ನೋಡಿ ಬೇಸರ ಆಯಿತು ಮತ್ತು ಅವತ್ತಿನ ದಿನಗಳ ನೆನಪಾಯಿತು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...