Skip to main content

Blog number 1961.ಶಿವಮೊಗ್ಗದ ಯಡೂರಪ್ಪರ ಕನಸಿನ ವಿಮಾನ ನಿಲ್ದಾಣ ಉದ್ಘಾಟನೆ ಆಗಿ ಒಂದು ವರ್ಷ ಆಗಲಿದೆ.

https://youtu.be/aqp5vMnoE9w

#ಶಿವಮೊಗ್ಗ_ವಿಮಾನ_ನಿಲ್ದಾಣಕ್ಕೆ_ಒಂದು_ವರ್ಷ

#ಇದರ_ಸಂಪೂರ್ಣ_ಕ್ರೆಡಿಟ್_ಯಡೂರಪ್ಪನವರದ್ದೆ

#ಕಾಮಗಾರಿ_ನಿರ್ವಹಿಸಿದ_ಸಂಸ್ಥೆ_ತೀರ್ಥಹಳ್ಳಿ_ಷರೀಪ್_ಸಾಹೇಬರದ್ದು,

#ಕನ್ನಡಕ್ಕೆ_ಮೊದಲ_ಜ್ಞಾನಪೀಠ_ಪ್ರಶಸ್ತಿ_ತಂದ_ಕವಿ_ಕುವೆಂಪು_ಹೆಸರಿನ_ವಿಮಾನ_ನಿಲ್ದಾಣ

#ತಮ್ಮ_ಹೆಸರಿನ_ನಾಮಕರಣ_ನಯವಾಗಿ_ನಿರಾಕರಿಸಿ_ಕುವೆಂಪು_ಹೆಸರು_ಸೂಚಿಸಿದ_ಯಡೂರಪ್ಪ

#ರಾಷ್ಟ್ರಪತಿಗಳು_ಕೊಯಮತ್ತೂರು_ಪ್ರವಾಸಕ್ಕೆ_ಬಳಸಿದ್ದ_ಬೋಯಿಂಗ್_737

#ಇವತ್ತಿಗೆ_ಒಂದು_ವರ್ಷದ_ಹಿಂದೆ_ಶಿವಮೊಗ್ಗದಲ್ಲಿಳಿದ_ಮೊದಲ_ವಿಮಾನ.

#ಕಳಿದ_ವರ್ಷ_ಪೆಬ್ರುವರಿ_27_ಸೋಮವಾರ_ಪ್ರದಾನಿ_ಮೋದಿ_ಉದ್ಘಾಟಸಿದ್ಧರು.

#ಆಕಾಶದಿಂದ_ಕಮಲದ_ಆಕಾರದಲ್ಲಿ_ಕಾಣುವ_ವಿಮಾನ_ನಿಲ್ದಾಣ.

#ನಿತ್ಯ_ಬೆಂಗಳೂರು_ಗೋವಾ_ತಿರುಪತಿ_ಹೈದ್ರಾಬಾದ್_ಸಂಪರ್ಕಿಸುವ_ವಿಮಾನಗಳು_ಹಾರುತ್ತಿದೆ.
   ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣದ ಕನಸು ಕಂಡವರು ಯಡೂರಪ್ಪನವರು, 20 -ಜೂನ್ - 2008ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಯಡೂರಪ್ಪ ಉಪ ಮುಖ್ಯಮಂತ್ರಿ ಆಗಿದ್ದಾಗ ಶಿವಮೊಗ್ಗ ವಿಮಾನ ನಿಲ್ದಾಣದ ಅಡಿಪಾಯ ಹಾಕಿದ್ದರು.
  ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ತಜ್ಞರ ತಂಡ ಶಿವಮೊಗ್ಗದ ಸೋಗಾನೆ ಮತ್ತು ಅಯನೂರು ಬಳಿಯ ನಾಗರಬಾವಿ ಪ್ರದೇಶವನ್ನು ಪರಿಶೀಲಿಸಿ ಅಂತಿಮವಾಗಿ ಸೋಗಾನೆಯನ್ನು 4- ಏಪ್ರಿಲ್ -2006 ರಂದು ಅಂತಿಮಗೊಳಿಸಿತ್ತು.
  ಆದರೆ ಶಿವಮೊಗ್ಗ ವಿಮಾನ ನಿಲ್ದಾಣದ ಯೋಜನೆ ಅನೇಕ ಕಾರಣಗಳಿಂದ ಕಾರ್ಯಾರಂಭ ಸಾಧ್ಯವಾಗಲಿಲ್ಲ ಯಡೂರಪ್ಪನವರು ಮುಖ್ಯಮಂತ್ರಿ ಆದರೂ ಯೋಜನೆ ಕಾರ್ಯಾಗತವಾಗಲಿಲ್ಲ.
   ನಂತರ ಕಾಂಗ್ರೇಸ್‌ ಪಕ್ಷ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದರೂ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ.
   ಅದರ ನಂತರದ ಜೆಡಿಸ್ - ಕಾಂಗ್ರೇಸ್ ಸಮ್ಮಿಶ್ರ ಸರ್ಕಾರ ರಚನೆ ಆಗಿ ಕುಮಾರಸ್ವಾಮಿ ಮುಖ್ಯಮಂತ್ರಿ ಆದರೂ ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಟೇಕಾಪ್ ಆಗಲೇ ಇಲ್ಲ.
    ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣವಾದರೆ ಮದ್ಯ ಕರ್ನಾಟಕದ ಶಿವಮೊಗ್ಗ - ಚಿಕ್ಕಮಗಳೂರು - ದಾವಣಗೆರೆ - ಚಿತ್ರದುರ್ಗ - ಹಾಸನ ಜಿಲ್ಲೆಗಳಿಗೆ ಸುಲಭ ಸಂಪರ್ಕವಾಗುವುದರಿಂದ ಈ ಜಿಲ್ಲೆಗಳಿಗೆ ಅನೇಕ ಉದ್ಯಮಗಳು ಬರಲಿದೆ ಇದರಿಂದ ಉದ್ಯೋಗ ಸೃಷ್ಟಿ ಆಗಲಿದೆ ಈ ಬಾಗದಲ್ಲಿ ವ್ಯಾಪಾರ- ಕೈಗಾರಿಕೆ - ಪ್ರವಾಸೋದ್ಯಮದಲ್ಲಿ ದೊಡ್ಡ ಮಟ್ಟದ ಯಶಸ್ಸು ಸಾಧ್ಯವಾಗಲಿದೆ ಎಂಬುದು ಜನರ ನಿರೀಕ್ಷೆ.
     ನಂತರ ಸಮ್ಮಿಶ್ರ ಸರ್ಕಾರ ಬೀಳಿಸಿ ಮುಖ್ಯಮಂತ್ರಿ ಆದ ಯಡೂರಪ್ಪ 15- ಜೂನ್ -2020 ರಂದು ಎರಡನೆ ಬಾರಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ಮಾಡಿದರು.
  ವಿಮಾನ ನಿಲ್ದಾಣದ ಕಟ್ಟಡ - ರನ್ ವೇ - ಕಂಪೌಂಡ್ ಕಾಮಗಾರಿ ನಿವ೯ಹಿಸಿದವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಬ್ರಾಹಿಂ ಷರೀಪರ ಪ್ರಖ್ಯಾತ ನಿರ್ಮಾಣ ಸಂಸ್ಥೆ ನ್ಯಾಷನಲ್ ಕನ್ಸ್ಟ್ರಕ್ಷನ್ ಕಂಪನಿ.
 ಸೋಗಾನೆಯಲ್ಲಿ 775 ಎಕರೆ ಪ್ರದೇಶದಲ್ಲಿ 449 ಕೋಟಿ ವೆಚ್ಚದಲ್ಲಿ 3200 ಮೀಟರ್ ಉದ್ದದ 45 ಮೀಟರ್ ಅಗಲದ ರನ್ ವೇಯಲ್ಲಿ ಬೋಯಿಂಗ್ 737 ಮತ್ತು ಏರ್ ಬಸ್ A320 ಯ೦ತ ವಿಮಾನ ಏರಿಳಿಯುತ್ತದೆ.
   ಸಾಗರ ತಾಲ್ಲೂಕಿನ ಆನಂದಪುರಂ ಸಮೀಪದ ಇರುವಕ್ಕಿಯಲ್ಲಿ ಪ್ರಾರಂಬಿಸಿರುವ ಕೃಷಿ ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ 777 ಎಕರೆ ಭೂಮಿ ಮತ್ತು 180 ಕೋಟಿ ಅನುದಾನ ನೀಡಿದ್ದನ್ನು ಹೋಲಿಸಿದರೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನೀಡಿದ ಜಮೀನು ಹಣ ಹೆಚ್ಚೇನಲ್ಲ.
ಈ ವಿಮಾನ ನಿಲ್ದಾಣದ ಕಟ್ಟಡದ ವಿನ್ಯಾಸ ಆಕಾಶದಿಂದ ನೋಡಿದರೆ ರಾಷ್ರೀಯ ಪುಷ್ಪ ಕಮಲದ (ಭಾರತೀಯ ಜನತಾ ಪಕ್ಷದ ಚಿಹ್ನೆ ಕೂಡ ಕಮಲ) ಆಕೃತಿಯಲ್ಲಿದೆ.
   ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿ ಕಳೆದ ವರ್ಷ 27-ಪೆಬ್ರುವರಿ-2023 ಸೋಮವಾರ ದೇಶದ ಪ್ರದಾನಿಯಿಂದ ಉದ್ಘಾಟನೆ ಆಯಿತು ಈ ವಿಮಾನ ನಿಲ್ದಾಣ ನಿರ್ಮಾಣ ಯಡೂರಪ್ಪರ ಸತತ ಪ್ರಯತ್ನದ ಫಲವಾದ್ದರಿಂದ ಅವರ ಹೆಸರು ನಾಮಕರಣಕ್ಕೆ ರಾಜ್ಯ ಸರ್ಕಾರದ ಸಂಪುಟ ಸಭೆ ತೀರ್ಮಾನಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಿತ್ತು.
  ಆದರೆ ಸ್ಟತಃ ಯಡೂರಪ್ಪನವರೇ ನಮ್ಮ ಜಿಲ್ಲೆಯ ಹೆಮ್ಮೆಯ ಕವಿ ಕುವೆಂಪು ಹೆಸರು ಸೂಚಿಸಿದ್ದರಿಂದ ಶಿವಮೊಗ್ಗ ವಿಮಾನ ನಿಲ್ದಾಣ #ಕುವೆಂಪು_ವಿಮಾನ_ನಿಲ್ದಾಣವಾಗಿದೆ.
  ಕಳೆದ ವರ್ಷ 21- ಪೆಬ್ರುವರಿ-2023ರ ಮಂಗಳವಾರ ಮಧ್ಯಾಹ್ನ ಪ್ರಯೋಗಾರ್ಥವಾಗಿ ಮೊದಲ ವಿಮಾನ ಬೋಯಿಂಗ್ 737 ಇಳಿದು ಮತ್ತು ಪುನಃ ದೆಹಲಿಗೆ ಹಾರಿತು.    ಆ ವಿಮಾನ ಕಳೆದ ವರ್ಷ ಶಿವರಾತ್ರಿಯಂದು ರಾಷ್ಟ್ರಪತಿಯವರನ್ನು ಕೊಯಮುತ್ತೂರಿನ ಸದ್ಗುರು ಜಗ್ಗಿ ವಾಸುದೇವರ ಆದಿಯೋಗಿ ಆಶ್ರಮಕ್ಕೆ ಕರೆದೊಯ್ದ ವಿಮಾನವೇ ಇದು.
   ಶಿವಮೊಗ್ಗದ ವಿಮಾನ ನಿಲ್ದಾಣದ ಉದ್ಘಾಟನೆಗೆ ಒಂದು ವರ್ಷದ ಮೊದಲೇ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಘಟನೆ, ತನ್ನ ಹೆಸರನ್ನು ನಯವಾಗಿ ನಿರಾಕರಿಸಿ ಕವಿ ಕುವೆಂಪು ಹೆಸರು ಸೂಚಿಸಿದ ಯಡೂರಪ್ಪ ರಾಜಕಾರಣದಲ್ಲಿ ದುರಂತ ನಾಯಕರಾಗಿ-ತ್ಯಾಗಮಯರಾಗಿ ಇತಿಹಾಸದಲ್ಲಿ ಸೇರಿ ಹೋಗಿದ್ದಾರೆ.
  ಶಿವಮೊಗ್ಗ ಜಿಲ್ಲೆಯ ಜನ ಸದಾ ಸ್ಮರಿಸುವಂತಾ ಶಿವಮೊಗ್ಗದ ವಿಮಾನ ನಿಲ್ದಾಣ ನಿರ್ಮಿಸಿದ್ದರಿಂದ ಯಡೂರಪ್ಪರ ನೆನಪು ಸರ್ವಕಾಲಿಕವಾಗಿ ಉಳಿಯುತ್ತದೆ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ