Skip to main content

Blog number 1974. ನನ್ನ ಆತ್ಮೀಯ ರೈತ ನಾಯಕ ಗುಳ್ಳಳ್ಳಿ ಬಸವರಾಜ ಗೌಡರು ನಮ್ಮೂರ ಜಾತ್ರೆಯಲ್ಲಿ

#ಮಲೆನಾಡಿನ_ಎಲೆಮರೆಯ_ಕಾಯಿಯಂತೆ_ಇರುವ_ರೈತ_ನಾಯಕ

#ಗುಳ್ಳಳ್ಳಿ_ಬಸವರಾಜ_ಗೌಡರು

#ಗೆಳೆಯ_ನಾಗೇಂದ್ರಸಾಗರ್_ಇವರ_ಮನೆಗೆ_ಆಲೆಮನೆಗೆ_ಅತಿಥಿಯಾಗಿ_ಹೋಗಿದ್ದರು

#ಅವರ_ಪೋಸ್ಟ್_ನೋಡಿ_ಗುಳ್ಳಳ್ಳಿ_ಬಸವರಾಜಗೌಡರ_ಒಡನಾಟದ_ನೆನಪಿನ_ಬರಹ.

#ನಮ್ಮ_ಊರಿನ_ರಥೋತ್ಸವದಲ್ಲಿ_ಜಾತ್ರಾ_ಸಮಿತಿ_ಇವರನ್ನು_ಗೌರವಿಸಿತ್ತು.

. ಗುಳ್ಳಳ್ಳಿ ಬಸವರಾಜ ಗೌಡ ದಂಪತಿಗಳು ಅತಿಥಿ ಸತ್ಕಾರದಲ್ಲಿ ಶ್ರೀಮಂತ ಮನಸ್ಸಿನವರು, ರೈತ ಸಂಘದ ನಿಷ್ಟಾವಂತ ಕಾರ್ಯಕರ್ತರು ಪ್ರೋ ನಂಜುಂಡಸ್ವಾಮಿ ಅವರ ಅತ್ಯಾಪ್ತರು ಎಲೆ ಮರೆಯ ಕಾಯಿಯಂತೆ ಪ್ರಚಾರದಿಂದ ದೂರವಾಗಿ ಕೆಲಸ ಮಾಡುತ್ತಾರೆ.
  ಇವರ ಪತ್ನಿ ಆವಿನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದರು ಪುತ್ರ ಗಿರೀಶ್ ಮಾಜಿ ಶಾಸಕ ಹಾಲಪ್ಪರ ಜೊತೆಯ ನಿಷ್ಟಾವಂತರು.
   ನಮ್ಮ ಊರಿನ ಶ್ರೀವರಸಿದ್ದಿ ವಿನಾಯಕ ಸ್ವಾಮಿ ರಥೋತ್ಸವದಂದು ರಾಜ್ಯ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಹನುಮಗೌಡ ಬೆಳಕುರ್ಕಿ ಜೊತೆ ಬಂದಿದ್ದರು ಅವತ್ತು ಅನ್ನ ಸಂತರ್ಪಣೆಯಲ್ಲಿ ಭಾಗಿ ಆಗಿ ದೇವಾಲಯದಿಂದ ಗೌರವ ಸ್ಟೀಕರಿಸಿದ್ದರು ... ಎಂದು ಗೆಳೆಯ #ನಾಗೇಂದ್ರಸಾಗರ್ ಅವರು ಗುಳ್ಳಳ್ಳಿ ಬಸವರಾಜ ಗೌಡರ ಮನೆಗೆ ಆಲೆಮನೆಗೆ ಅತಿಥಿ ಆಗಿ ಹೋಗಿದ್ದ ಬಗ್ಗೆ ಬರೆದ ಪೋಸ್ಟ್ ನೋಡಿ ಪ್ರತಿಕ್ರಿಯಿಸಿದ್ದೆ.
   ನನ್ನ ಎಲ್ಲಾ ಜನಪರ ಹೋರಾಟಗಳಿಗೆ ಸಾಗರ ತಾಲೂಕಿನ ರೈತ ಸಂಘ ಬೆಂಬಲಿಸುತ್ತಿತ್ತು ನಾನೂ ಮತ್ತು ನನ್ನ ಗೆಳೆಯರೂ ರೈತ ಸಂಘ ಬೆಂಬಲಿಸುತ್ತಿದ್ದೆವು ಆದ್ದರಿಂದ ರೈತ ಹೋರಾಟ ವಾರಪತ್ರಿಕೆ ಸಂಪಾದಕರಾದ ವಸಂತಕುಮಾರ್, ಸೇನಾಪತಿ ಗೌಡರು, ಗುಳ್ಳಳ್ಳಿ ಬಸವರಾಜ ಗೌಡರು ಹೆಚ್ಚು ಆತ್ಮೀಯರಾದರು.
  ಗುಳ್ಳಳ್ಳಿ ಬಸವರಾಜ ಗೌಡರ ಅತಿಥಿ ಆಗಿ ಅವರ ಮನೆಯಲ್ಲಿ ಊಟ-ತಿಂಡಿ ಮತ್ತು ವಾಸ್ತವ್ಯ ಮಾಡಿದ್ದೆ ಅವರನ್ನೂ ನನ್ನ ಮನೆಗೆ ಕರೆ ತಂದು ಆತಿಥ್ಯ ನೀಡಿದ್ದೆ.
   ಗೌಡರ ಮಾತಿನ ಶೈಲಿ ಧ್ವನಿ ನನಗೆ ತುಂಬಾ ಇಷ್ಟ ಹಾಗೆ ಬಸವರಾಜ ಗೌಡರಲ್ಲಿ ಒಂದು ಶಕ್ತಿ ಇದೆ ಅದೇನೆಂದರೆ ಯಾವ ವ್ಯಕ್ತಿಯನ್ನು ನೋಡಿದರೂ ಅವರಿಗೆ ಅವನನ್ನ ಸಂಪೂರ್ಣ ಅಳೆಯುವ ಮೂರನೆ ಕಣ್ಣು ಅವರಿಗಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...