Skip to main content

Blog number 1978. ಕೆ. ಶಿವರಾಂ ನೆನಪು ಭಾಗ-1. ಕನ್ನಡದಲ್ಲಿ ಐಎಎಸ್ ಬರೆದು ಉತ್ತೀರ್ಣರಾದ ಮೊದಲ ಕನ್ನಡಿಗ ಕೆ.ಶಿವರಾಂ ಅಸ್ತಂಗತ

#ಕೆ_ಶಿವರಾಂ_ನೆನಪು_ಭಾಗ_1

#ನನ್ನ_ಅತ್ಯಂತ_ಆಪ್ತ_ಕನ್ನಡದ_ಐಎಎಸ್

#ಕೆ_ಶಿವರಾಂ_ಅಸ್ತಂಗತ

#ಅವರ_ಆತ್ಮಕ್ಕೆ_ಸದ್ಗತಿ_ಸ್ವರ್ಗ_ಪ್ರಾಪ್ತಿಗಾಗಿ_ಪ್ರಾರ್ಥಿಸುತ್ತೇನೆ

#ಸಂತಾಪ_ಸೂಚಿಸುತ್ತಾ_ಅವರ_ನೆನಪಿನ_ಕೆಲ_ಕಂತುಗಳ_ಲೇಖನ.
   ಮೊನ್ನೆ ರಾತ್ರಿ ಅವರ ಅಳಿಯ ಮಾಧ್ಯಮದವರಿಗೆ ತಿಳಿಸುತ್ತಿದ್ದದ್ದು ನೋಡಿದೆ,71 ವರ್ಷದ ಶಿವರಾಂ ಅವರು ಫೆಬ್ರವರಿ ಮೂರನೆ ತಾರೀಕು ಸಣ್ಣ ಆಪರೇಷನ್ಗಾಗಿ ಆಸ್ಪತ್ರೆಗೆ ದಾಖಲಾದವರು ಸತತ ಆರೋಗ್ಯದ ಏರುಪೇರಿನಿಂದ ಚೇತರಿಸಿಕೊಳ್ಳಲೇ ಇಲ್ಲ.
  ಅದೇ ದಿನ ಹೃದಯಾಘಾತಕ್ಕೆ ಒಳಗಾದರೂ ಅವರ ಆರೋಗ್ಯ ಸ್ಥಿತಿ ತುಂಬಾ ಕ್ರಿಟಿಕಲ್ ಎಂದಾಗಲೇ ನನಗೆ ಅನುವಾನವಾಗಿತ್ತು.
    ಕಳೆದ ಪಾರ್ಲಿಮೆಂಟ್ ಚುನಾವಣೆಯಲ್ಲಿ ಬಿಜೆಪಿಯಿಂದ ಚಾಮರಾಜನಗರದ ಅಭ್ಯರ್ಥಿಯನ್ನಾಗಿ ಮಾಡುವ ಯೋಜನೆ ಯಡಿಯೂರಪ್ಪನವರದಾಗಿತ್ತು ಆದರೆ ಕೊನೆಯ ಕ್ಷಣದಲ್ಲಿ ಬಿಜೆಪಿ ಸೇರಿದ ಶ್ರೀನಿವಾಸ್ ಪ್ರಸಾದರಿಗಾಗಿ ಶಿವರಾಂ ಟಿಕೆಟ್ ವಂಚಿತರಾದರು ಆದರೂ ಶ್ರೀನಿವಾಸ ಪ್ರಸಾದರ ಪರವಾಗಿ ದೊಡ್ಡ ಕ್ಯಾಂಪೈನ್ ಮಾಡಿದ್ದರು.
  ಆಗ ಶ್ರೀನಿವಾಸ್ ಪ್ರಸಾದರು ಅವರಿಗೆ ನೀಡಿದ ಭರವಸೆ ಮುಂದಿನ ಬಾರಿ ನಾನು ವಯಸ್ಸಿನ ಮತ್ತು ಆರೋಗ್ಯ ಕಾರಣದಿಂದ ಸ್ಪರ್ಧಿಸುವುದಿಲ್ಲ ಶಿವರಾಂ ಅವರೆ ಈ ಕ್ಷೇತ್ರದ ಮುಂದಿನ ಅಭ್ಯರ್ಥಿ ಎಂದಿದ್ದರು.
   ಆದರೆ ಇತ್ತೀಚೆಗೆ ಶ್ರೀನಿವಾಸ್ ಪ್ರಸಾದರು ತಮ್ಮ ಇಬ್ಬರೂ ಅಳಿಯಂದಿರಲ್ಲಿ ಯಾರಿಗಾದರೂ ಒಬ್ಬರಿಗೆ ತಮ್ಮ ನಂತರದ ಅಭ್ಯರ್ಥಿ ಮಾಡುವ ಯೋಜನೆ ಘೋಷಿಸಿದರು.
    ಕೆ.ಶಿವರಾಂ ಅವರಿಗೆ ಮಾಯಾವತಿ ಮುಖ್ಯಮಂತ್ರಿ ಆದಾಗ ಬಿ.ಎಸ್.ಪಿ. ಸುಪ್ರಿಮೊ ಕಾಶ್ವಿರಾಮ್ ಅವರು ರಾಜಕೀಯಕ್ಕೆ ಬರಲು ಮತ್ತು ಕರ್ನಾಟಕದಲ್ಲಿ ಬಿಎಸ್ಪಿ ಪಕ್ಷ ಕಟ್ಟಲು ನೇತೃತ್ವ ವಹಿಸಲು ಆಹ್ವಾನಿಸಿದ್ದರು.
  ಐಎಎಸ್ ಅಂತ ವೃತ್ತಿಯನ್ನು ಬಿಟ್ಟು ರಾಜಕಾರಣಕ್ಕೆ ಬರಬೇಕಾದರೆ ತನಗೆ ರಾಜ್ಯಸಭಾ ಸದಸ್ಯರನ್ನು ಮಾಡಿ ಎಂಬ ಕರಾರು ಶಿವರಾಂ ಅವರಿಗೆ ಹಾಕಿದ್ದರು.
   ಶಿವರಾಮ ಅವರು ನಿವೃತ್ತಿ ಪಡೆದ ನಂತರ ರಾಜಕಾರಣಕ್ಕೆ ಹೋಗಬಾರದಿತ್ತು.. ರಾಜಕೀಯ ಪಕ್ಷಗಳು ಅವರನ್ನು ಅವರ ಬುದ್ಧಿಶಕ್ತಿಯನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲ ಅಥವ ರಾಜಕೀಯ ಪಕ್ಷಗಳು ಇಂಥವರನ್ನು ಯಾವತ್ತು ಬಳಸಿಕೊಳ್ಳುವುದು ಇಲ್ಲ.
  ಶಿವರಾಮುರು ನಿವೃತ್ತಿ ನಂತರ ಇಡೀ ರಾಜ್ಯದ ಯುವಜನತೆಗೆ ವಿದ್ಯೆ - ಉದ್ಯೋಗ- ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಹೆಚ್ಚಿನ ಪ್ರೇರಣೆ ನೀಡುವಂತ ಸಂಸ್ಥೆಯೊಂದನ್ನು  ಕಟ್ಟಿ ಕಾರ್ಯನಿರ್ವಹಿಸುವ ಕೆಲಸ ಮಾಡಬೇಕಾಗಿತ್ತು.
   ಈಗ ಶಿವರಾಂ ಇಲ್ಲ ಆದರೆ ಅವರ ಜೀವನದ ಹೋರಾಟದ ಫಲಗಳು ಮುಂದಿನ ಯುವ ಪೀಳಿಗೆಗೆ ಒಂದು " ಛಲವಿದ್ದರೆ ಸಾಧ್ಯವಿದೆ" ಎಂಬ ಪ್ರೇರಣೆಯ ಕಥೆಯಾಗಿದೆ.
   ಶಿವರಾಂ ಅವರ ಆತ್ಮಕ್ಕೆ ಸದ್ಗತಿ ಸ್ವರ್ಗ ಪ್ರಾಪ್ತಿಗಾಗಿ ಪ್ರಾರ್ಥಿಸುತ್ತೇನೆ.

  ( ನಾಳೆ ಭಾಗ 2.. ಕೆ.ಶಿವರಾಂ ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಬಂದಾಗ.)

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...