Skip to main content

Blog number 1982.ಶ್ರೀವರಸಿದ್ದಿ ವಿನಾಯಕ ಸ್ವಾಮಿ ರಥ ರಾಜ ಬೀದಿ ಉತ್ಸವಕ್ಕೆ ತಡೆಯಾದ ರೈಲ್ವೇ ಬ್ಯಾರಿಕೇಡ್ ಮತ್ತು ಅದರ ನಿವಾರಣೆಗಾಗಿ ರಥ ಮಾರ್ಪಾಡು.

#ನಮ್ಮ_ಊರಿನ_ಜಾತ್ರೆಯ_ಝಲಕ್_ಗಳು

#ರಥ_ರಾಜ_ಬೀದಿ_ಉತ್ಸವಕ್ಕೆ_ತಡೆ_ತಂದ_ರೈಲ್ವೆ_ಬ್ಯಾರಿಕೇಡ್

#ಹದಿನೇಳು_ವರ್ಷದಿಂದ_ನಿಗದಿಪಡಿಸಿದ_ರಥ_ರಾಜ_ಬೀದಿ_ಉತ್ಸವ

#ಯಶಸ್ವಿ_18ನೇ_ವರ್ಷದ_ರಥ_ರಾಜ_ಬೀದಿ_ಉತ್ಸವಕ್ಕಾಗಿ_ರಥ_ವಿನ್ಯಾಸ_ಮಾರ್ಪಾಡು.

#ಬ್ರಾಡ್_ಗೇಜ್_ವಿದ್ಯುದೀಕರಣದಿಂದ_ರೈಲ್ವೇ_ಗೇಟ್_ನಲ್ಲಿ

#ನಿಗದಿತ_ಎತ್ತರದ_ವಾಹನಕ್ಕೆ_ಮಾತ್ರ_ಅವಕಾಶ_ನೀಡುವ_ಬ್ಯಾರಿಕೇಡ್_ಅಳವಡಿಸಿದ್ದಾರೆ.

https://youtu.be/2zBvgStBD8U?feature=shared
   ಈ ವರ್ಷದ ನಮ್ಮ ಊರಿನ ಶ್ರೀವರಸಿದ್ದಿ ವಿನಾಯಕ ಸ್ವಾಮಿ ಬ್ರಹ್ಮರಥೋತ್ಸವ ಕಳೆದ ತಿಂಗಳು (13- ಪೆಬ್ರವರಿ - 2024 ಮಂಗಳವಾರ) ಭಕ್ತಿಪೂರ್ವಕವಾಗಿ ನೆರವೇರಿತು.
   ದೇವಾಲಯ ಪ್ರಾರಂಭದ ವರ್ಷದಿಂದ ದೇವಾಲಯದ ಟ್ರಸ್ಟ್ ನ ಗೌರವಾಧ್ಯಕ್ಷರಾದ #ಡಾ_ಎನ್_ಎಸ್_ವಿಶ್ವಪತಿ_ಶಾಸ್ತ್ರಿಗಳು ದೇವಾಲಯದ ಎಲ್ಲಾ ಆಚರಣೆಗಳನ್ನು ನಿಗದಿ ಮಾಡಿದ್ದಾರೆ ಅದರಂತೆ ದೇವಾಲಯದ ನಿತ್ಯಪೂಜೆ, ಪ್ರತಿ ತಿಂಗಳ ಸಂಕಷ್ಟಹರ ಚತುರ್ಥಿ, ವಾರ್ಷಿಕೋತ್ಸವ ಮತ್ತು ರಥೋತ್ಸವ ಜರುಗುತ್ತದೆ.
   ರಥ ರಾಜಬೀದಿ ಉತ್ಸವ ದೇವಾಲಯ ಇರುವ ಹೊಸನಗರ ರಸ್ತೆಯಿಂದ ಯಡೇಹಳ್ಳಿ ವೃತ್ತ ಇರುವ ರಾ.ಹೆ 69 ರವರೆಗೆ ನೆರವೇರುತ್ತದೆ ಮಾರ್ಗ ಮಧ್ಯದಲ್ಲಿ ಶಿವಮೊಗ್ಗ ತಾಳಗುಪ್ಪದ ರೈಲ್ವೆ ಬ್ರಾಡ್ ಗೇಜ್ ಮಾರ್ಗದ ಗೇಟು ಇದೆ ಈ ವರ್ಷ ಈ ಮಾರ್ಗ ವಿದ್ಯುದೀಕರಣಗೊಳಿಸಿದ್ದರಿಂದ ನಿಗದಿತ ಎತ್ತರದ ವಾಹನ ಮಾತ್ರ ಸಂಚರಿಸುವಂತೆ ಬ್ಯಾರಿಕೇಡ್ ನಿಮಿ೯ಸಿದ್ದಾರೆ.
    ಇದರಲ್ಲಿ 15 ಅಡಿಗಿಂತ ಎತ್ತರದ ವಾಹನ ಸಂಚಾರ ಸಾಧ್ಯವಿಲ್ಲ ಆದರೆ ನಮ್ಮ ರಥ 21 ಅಡಿ ಎತರ ಇದೆ ಮತ್ತು ರಥದ ಕಲಶ ಎರೆಡು ಅಡಿ ಸೇರಿದರೆ 23 ಅಡಿ ಇದೆ.
   ಇದರಿಂದ ನಿಗದಿಪಡಿಸಿದ ರಥ ರಾಜ ಬೀದಿ ಉತ್ಸವ ನಡೆಯುವ ಬಗ್ಗೆ ಗೊಂದಲ ಇತ್ತು ಇದನ್ನು ಸರಾಗವಾಗಿ ಬಗೆ ಹರಿಸಿ ಕೊಟ್ಟವರು ಆನಂದಪುರಂನ #ನರಸಿಂಹಾಚಾರ್ ಮತ್ತು ನಮ್ಮ ದೇವಾಲಯದ ರಥ ಶಿಲ್ಪಿ #ವೆಂಕಟ್ರಮಣ_ಆಚಾರ್,
    ಸುಮಾರು ಆರು ಅಡಿ ರಥ ಎತ್ತರ ಕಡಿತ ಗೊಳಿಸಿದರೂ ರಥದ ಎರೆಡು ಅಡಿ ಎತ್ತರದ ಕಲಶ ರೈಲ್ವೆ ಬ್ಯಾರಿಕೇಡ್ ದಾಟಿಸಲು ತಡೆಯುವ ಸಮಸ್ಯೆಗೆ ನನ್ನದೊಂದು ಸಲಹೆ ಅವರಿಗೆ ಸಮಾದಾನ ಆಯಿತು ಅವರಂತೆ ರಥದ ಕಲಶ ಏರಿಸುವ ಮತ್ತು ಇಳಿಸುವ ಸುಲಭ ವ್ಯವಸ್ಥೆ ಮಾಡಿದರು.
  ದೇವಾಲಯದಿಂದ ರಥ ರಾಜ ಬೀದಿ ಉತ್ಸವ ರೈಲ್ವೆ ಗೇಟ್ ಗೆ ಸಮೀಪಿಸಿದಾಗ ರಥದಲ್ಲಿರುವ ಅರ್ಚಕರು ಕಳಶ ಅಳವಡಿಸಿದ ಪೈಪ್ ಸುಲಭವಾಗಿ ಇಳಿಸಿ ರೈಲ್ವೆ ಗೇಟಿನ ಬಾರಿಕೇಡ್ ದಾಟಿದ ಮೇಲೆ ಯಥಾ ಸ್ಥಿತಿಗೆ ಏರಿಸುವಂತೆ ವ್ಯವಸ್ಥೆ ಅಳವಡಿಸಿದ್ದಾರೆ.
   ಇದರಿಂದ ಈ ವಷ೯ದ ರಥೋತ್ಸವ ಸಾಂಗವಾಗಿ ನೆರವೇರಿತು, ಮುಂದಿನ ವರ್ಷಗಳಲ್ಲಿ ಯಾವುದೇ ರೀತಿಯ ತೊಂದರೆ ಉಂಟಾಗದೆ ನಿರಾತಂಕವಾಗಿ ರಥೋತ್ಸವ ನಡೆಯಲಿದೆ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ