Skip to main content

Blog number 1982.ಶ್ರೀವರಸಿದ್ದಿ ವಿನಾಯಕ ಸ್ವಾಮಿ ರಥ ರಾಜ ಬೀದಿ ಉತ್ಸವಕ್ಕೆ ತಡೆಯಾದ ರೈಲ್ವೇ ಬ್ಯಾರಿಕೇಡ್ ಮತ್ತು ಅದರ ನಿವಾರಣೆಗಾಗಿ ರಥ ಮಾರ್ಪಾಡು.

#ನಮ್ಮ_ಊರಿನ_ಜಾತ್ರೆಯ_ಝಲಕ್_ಗಳು

#ರಥ_ರಾಜ_ಬೀದಿ_ಉತ್ಸವಕ್ಕೆ_ತಡೆ_ತಂದ_ರೈಲ್ವೆ_ಬ್ಯಾರಿಕೇಡ್

#ಹದಿನೇಳು_ವರ್ಷದಿಂದ_ನಿಗದಿಪಡಿಸಿದ_ರಥ_ರಾಜ_ಬೀದಿ_ಉತ್ಸವ

#ಯಶಸ್ವಿ_18ನೇ_ವರ್ಷದ_ರಥ_ರಾಜ_ಬೀದಿ_ಉತ್ಸವಕ್ಕಾಗಿ_ರಥ_ವಿನ್ಯಾಸ_ಮಾರ್ಪಾಡು.

#ಬ್ರಾಡ್_ಗೇಜ್_ವಿದ್ಯುದೀಕರಣದಿಂದ_ರೈಲ್ವೇ_ಗೇಟ್_ನಲ್ಲಿ

#ನಿಗದಿತ_ಎತ್ತರದ_ವಾಹನಕ್ಕೆ_ಮಾತ್ರ_ಅವಕಾಶ_ನೀಡುವ_ಬ್ಯಾರಿಕೇಡ್_ಅಳವಡಿಸಿದ್ದಾರೆ.

https://youtu.be/2zBvgStBD8U?feature=shared
   ಈ ವರ್ಷದ ನಮ್ಮ ಊರಿನ ಶ್ರೀವರಸಿದ್ದಿ ವಿನಾಯಕ ಸ್ವಾಮಿ ಬ್ರಹ್ಮರಥೋತ್ಸವ ಕಳೆದ ತಿಂಗಳು (13- ಪೆಬ್ರವರಿ - 2024 ಮಂಗಳವಾರ) ಭಕ್ತಿಪೂರ್ವಕವಾಗಿ ನೆರವೇರಿತು.
   ದೇವಾಲಯ ಪ್ರಾರಂಭದ ವರ್ಷದಿಂದ ದೇವಾಲಯದ ಟ್ರಸ್ಟ್ ನ ಗೌರವಾಧ್ಯಕ್ಷರಾದ #ಡಾ_ಎನ್_ಎಸ್_ವಿಶ್ವಪತಿ_ಶಾಸ್ತ್ರಿಗಳು ದೇವಾಲಯದ ಎಲ್ಲಾ ಆಚರಣೆಗಳನ್ನು ನಿಗದಿ ಮಾಡಿದ್ದಾರೆ ಅದರಂತೆ ದೇವಾಲಯದ ನಿತ್ಯಪೂಜೆ, ಪ್ರತಿ ತಿಂಗಳ ಸಂಕಷ್ಟಹರ ಚತುರ್ಥಿ, ವಾರ್ಷಿಕೋತ್ಸವ ಮತ್ತು ರಥೋತ್ಸವ ಜರುಗುತ್ತದೆ.
   ರಥ ರಾಜಬೀದಿ ಉತ್ಸವ ದೇವಾಲಯ ಇರುವ ಹೊಸನಗರ ರಸ್ತೆಯಿಂದ ಯಡೇಹಳ್ಳಿ ವೃತ್ತ ಇರುವ ರಾ.ಹೆ 69 ರವರೆಗೆ ನೆರವೇರುತ್ತದೆ ಮಾರ್ಗ ಮಧ್ಯದಲ್ಲಿ ಶಿವಮೊಗ್ಗ ತಾಳಗುಪ್ಪದ ರೈಲ್ವೆ ಬ್ರಾಡ್ ಗೇಜ್ ಮಾರ್ಗದ ಗೇಟು ಇದೆ ಈ ವರ್ಷ ಈ ಮಾರ್ಗ ವಿದ್ಯುದೀಕರಣಗೊಳಿಸಿದ್ದರಿಂದ ನಿಗದಿತ ಎತ್ತರದ ವಾಹನ ಮಾತ್ರ ಸಂಚರಿಸುವಂತೆ ಬ್ಯಾರಿಕೇಡ್ ನಿಮಿ೯ಸಿದ್ದಾರೆ.
    ಇದರಲ್ಲಿ 15 ಅಡಿಗಿಂತ ಎತ್ತರದ ವಾಹನ ಸಂಚಾರ ಸಾಧ್ಯವಿಲ್ಲ ಆದರೆ ನಮ್ಮ ರಥ 21 ಅಡಿ ಎತರ ಇದೆ ಮತ್ತು ರಥದ ಕಲಶ ಎರೆಡು ಅಡಿ ಸೇರಿದರೆ 23 ಅಡಿ ಇದೆ.
   ಇದರಿಂದ ನಿಗದಿಪಡಿಸಿದ ರಥ ರಾಜ ಬೀದಿ ಉತ್ಸವ ನಡೆಯುವ ಬಗ್ಗೆ ಗೊಂದಲ ಇತ್ತು ಇದನ್ನು ಸರಾಗವಾಗಿ ಬಗೆ ಹರಿಸಿ ಕೊಟ್ಟವರು ಆನಂದಪುರಂನ #ನರಸಿಂಹಾಚಾರ್ ಮತ್ತು ನಮ್ಮ ದೇವಾಲಯದ ರಥ ಶಿಲ್ಪಿ #ವೆಂಕಟ್ರಮಣ_ಆಚಾರ್,
    ಸುಮಾರು ಆರು ಅಡಿ ರಥ ಎತ್ತರ ಕಡಿತ ಗೊಳಿಸಿದರೂ ರಥದ ಎರೆಡು ಅಡಿ ಎತ್ತರದ ಕಲಶ ರೈಲ್ವೆ ಬ್ಯಾರಿಕೇಡ್ ದಾಟಿಸಲು ತಡೆಯುವ ಸಮಸ್ಯೆಗೆ ನನ್ನದೊಂದು ಸಲಹೆ ಅವರಿಗೆ ಸಮಾದಾನ ಆಯಿತು ಅವರಂತೆ ರಥದ ಕಲಶ ಏರಿಸುವ ಮತ್ತು ಇಳಿಸುವ ಸುಲಭ ವ್ಯವಸ್ಥೆ ಮಾಡಿದರು.
  ದೇವಾಲಯದಿಂದ ರಥ ರಾಜ ಬೀದಿ ಉತ್ಸವ ರೈಲ್ವೆ ಗೇಟ್ ಗೆ ಸಮೀಪಿಸಿದಾಗ ರಥದಲ್ಲಿರುವ ಅರ್ಚಕರು ಕಳಶ ಅಳವಡಿಸಿದ ಪೈಪ್ ಸುಲಭವಾಗಿ ಇಳಿಸಿ ರೈಲ್ವೆ ಗೇಟಿನ ಬಾರಿಕೇಡ್ ದಾಟಿದ ಮೇಲೆ ಯಥಾ ಸ್ಥಿತಿಗೆ ಏರಿಸುವಂತೆ ವ್ಯವಸ್ಥೆ ಅಳವಡಿಸಿದ್ದಾರೆ.
   ಇದರಿಂದ ಈ ವಷ೯ದ ರಥೋತ್ಸವ ಸಾಂಗವಾಗಿ ನೆರವೇರಿತು, ಮುಂದಿನ ವರ್ಷಗಳಲ್ಲಿ ಯಾವುದೇ ರೀತಿಯ ತೊಂದರೆ ಉಂಟಾಗದೆ ನಿರಾತಂಕವಾಗಿ ರಥೋತ್ಸವ ನಡೆಯಲಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...