Skip to main content

Blog number 2001. ನನ್ನ ಬ್ಲಾಗ್ ಲೇಖನ ಕನ್ನಡದಲ್ಲಿ ಎರೆಡು ಸಾವಿರ ದಾಟಿದೆ.

#ನನ್ನ_ಬ್ಲಾಗ್_ಲೇಖನಗಳ_ಸಂಖ್ಯೆ_ಇವತ್ತಿಗೆ_2000

#ಕನ್ನಡದ_ಐಎಎಸ್_ಶಿವರಾಂ_ನೆನಪು_ಭಾಗ_5_ಎರಡು_ಸಾವಿರದ_ಲೇಖನ

#ನನ್ನ_ಬರವಣಿಗೆ_ನನ್ನ_ಸೀಮಿತ_ಕ್ಷೇತ್ರ_ವ್ಯಾಪ್ತಿಗೆ_ಸೇರಿದೆ

#ಕನ್ನಡದಲ್ಲಿರುವ_ಅನೇಕ_ಬ್ಲಾಗರ್_ಗಳ_ಮಧ್ಯದಲ್ಲಿ_ನಾನು_ಬರೆಯುವ_ಬ್ಲಾಗ್

#ನನ್ನದೇ_ಕೆಲವು_ಓದುಗರ_ಸಮೂಹ_ಸೃಷ್ಟಿಗೆ_ಕಾರಣವಾಗಿದೆ.


  ಬರವಣಿಗೆ ನನ್ನ ಹವ್ಯಾಸ ಅದರಲ್ಲಿ ಹೆಚ್ಚು ಸಮಯ ಕಳೆಯುತ್ತೇನೆ ಇದು ನನಗೆ ಹೆಚ್ಚು ತೃಪ್ತಿ ತಂದಿದೆ.
   2010 ರಿಂದ ಪೇಸ್ ಬುಕ್ ಲ್ಯಾಪ್ ಟ್ಯಾಪ್ ಮೂಲಕ ಬಳಕೆ ಪ್ರಾರಂಬಿಸಿದೆ ನಂತರ ಸ್ಮಾರ್ಟ್ ಪೋನ್ ಗಳು ಅದನ್ನು ಅಕ್ರಮಿಸಿತು.
  2017ರಿಂದ ಗೂಗಲ್ ನ ಬ್ಲಾಗ್ ನಲ್ಲಿ ಬರೆಯಲು ಪ್ರಾರಂಭಿಸಿದೆ ಇವತ್ತಿಗೆ ನನ್ನ ಕನ್ನಡದ ಬ್ಲಾಗ್ ಲೇಖನಗಳ ಸಂಖ್ಯೆ 2000.
   ಪ್ರಾರಂಭದಲ್ಲಿ 500 ಲೇಖನ ದಾಖಲಿಸುವ ಗುರಿ ಹೊಂದಿದ್ದು ನಂತರ 1000 ಅನಂತರ 1500 ಇವತ್ತು 2000 ತಲುಪಿದೆ ಇದಕ್ಕೆ ಎಂಟು ವರ್ಷ ಬೇಕಾಯಿತು.
  ನನ್ನ ಮಾತೃ ಭಾಷೆ ಕನ್ನಡದ ಬ್ಲಾಗ್ ನಲ್ಲಿ ನಾನು ಆಹಾರ-ಸಂದರ್ಶನ - ಹಳೆ ನೆನಪು - ವ್ಯಕ್ತಿ ವಿಶೇಷ - ನನ್ನ ಅತಿಥಿಗಳು - ನನ್ನ ಜೀವನದ ಅನುಭವ - ನನ್ನ ಅಡುಗೆ- ಸಾಹಿತ್ಯ-ರಾಜಕಾರಣ - ಇತಿಹಾಸ -ತರಕಾರಿ-ಹಣ್ಣು-ತಂಪು ಪಾನಿಯ-ರೆಸಿಪಿ ಹೀಗೆ ನನಗೆ ಸಂಬಂಧಿಸಿದ ನನ್ನ ವ್ಯಾಪ್ತಿಯ ನನ್ನ ಲೇಖನಗಳನ್ನು ದಾಖಲಿಸುತ್ತಾ ಬಂದೆ.
  ಯಾರಿಗೂ ಅವಮಾನ ಮಾಡಬಾರದು, ನೋಯಿಸಬಾರದು, ಕೆಟ್ಟ ಪದ ಬಳಸಬಾರದು ಮತ್ತು ಪ್ರತಿ ಲೇಖನದಲ್ಲಿ ನೀತಿ ಪಾಠದ ಸಾರಂಶ ಇರಬೇಕು ಎಂಬುದು ನನ್ನ ಬರವಣಿಗೆಯ ಚೌಕಟ್ಟು.
  ನಾನು ಬರೆದ ಎಲ್ಲಾ ಲೇಖನಗಳು ಸಾರ್ವಜನಿಕರಿಗೆ ಮುಕ್ತ ಇದನ್ನು ಯಾರೂ ಬೇಕಾದರೂ ಎಷ್ಟು ಸಾರಿ ಬೇಕಾದರೂ ಮರುಪ್ರಕಟಿಸಿಕೊಳ್ಳಲು ನನ್ನ ಅನುಮತಿ ಬೇಕಾಗಿಲ್ಲ ಅಷ್ಟೇ ಅಲ್ಲ ಮರು ಪ್ರಕಟನೆಯಲ್ಲಿ ಮೂಲ ಲೇಖಕನಾದ ನನ್ನ ಹೆಸರು ನಮೂದಿಸದಿದ್ದರೂ ಅಭ್ಯಂತರ ಇರುವುದಿಲ್ಲ.
  ಈ  ಲಿಂಕ್ ಕ್ಲಿಕ್ ಮಾಡಿ ನನ್ನ ಬ್ಲಾಗ್ ನ 2000 ಲೇಖನ ಓದಬಹುದು https://arunprasadhombuja.blogspot.com/2024/03/blog-number-2000-5.html

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...