Skip to main content

Blog number 2006. ಮಾಜಿ ಮುಖ್ಯಮಂತ್ರಿ ಬಂಗಾರಪ್ಪರ ಒಡನಾಟದ ಆನಂದಪುರಂನ ಮಧ್ಯ ಕಣ್ಣೂರಿನ ಅಡುಗೆ ಮನೆ ಮನೆತನದ ಕುಪ್ಪ ನಾಯಕರ ಮರಿ ಮೊಮ್ಮಗ ಯುವ ವಕೀಲ ಮಾಜಿ ಸಾಗರ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಚೇತನ್ ರಾಜ್ ಕಣ್ಣೂರು ನನ್ನ ಅತಿಥಿ

#ನನ್ನ_ಇವತ್ತಿನ_ಅತಿಥಿ_ವಕೀಲರಾದ_ಕಣ್ಣೂರು_ಚೇತನರಾಜ್

#ಸಣ್ಣ_ವಯಸ್ಸಲ್ಲೇ_ಸಾಗರ_ತಾಲ್ಲೂಕ್_ಬಿಜೆಪಿ_ಅಧ್ಯಕ್ಷರಾಗಿದವರು

#ಕೃಷಿ_ಉತ್ಪನ್ನ_ಮಾರುಕಟ್ಟೆ_ಅಧ್ಯಕ್ಷರಾಗಿದ್ದವರು

#ಇವರ_ಮುತ್ತಜ್ಜ_ಕುಪ್ಪನಾಯಕರು_ಬಂಗಾರಪ್ಪರಿಗೆ_ಈ_ಭಾಗದಲ್ಲಿ_ಅತಿಥ್ಯ_ನೀಡಿದವರು

#ಇವರ_ಕಿರಿಯಜ್ಜ_ಡಾಕ್ಟರ್_ಬೋರಪ್ಪನವರು_ಧೀವರ_ಸಮಾಜ_ಮೊದಲ_ವೈದ್ಯರು.

https://youtu.be/xxIQou5hOPk?feature=shared


   ಇವತ್ತು ವಕೀಲರು ಮತ್ತು ಮಾಜಿ  ಸಾಗರ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾಜಿ ಅಧ್ಯಕ್ಷರಾಗಿದ್ದ ಚೇತನ್ ರಾಜ್ ಕಣ್ಣೂರು ಬಂದಿದ್ದರು.
  ಇವರು ಸಾಗರ ತಾಲೂಕಿನ ಬಿಜೆಪಿ ಪಕ್ಷದ ಅಧ್ಯಕ್ಷರಾಗಿದ್ದವರು ವಿಷೇಷ ಎಂದರೆ ಅತಿ ಸಣ್ಣ ವಯಸ್ಸಿನಲ್ಲೇ ಇವರು ದೊಡ್ಡ ದೊಡ್ಡ ಹುದ್ದೆ ಪಡೆದದ್ದು.
  ಇವರ ತಂದೆಯ ಸಹೋದರಿ ಶ್ರೀಮತಿ ಭೂದೇವಿ ಪರುಶರಾಮ್ ನಾನು ಜಿಲ್ಲಾ ಪಂಚಾಯತ್ ಸದಸ್ಯನಾದಾಗಿದ್ದಾಗ ನನ್ನ ಜೊತೆ  ಬರೂರು ತಾಲ್ಲೂಕು ಪಂಚಾಯಿತಿ ಕ್ಷೇತ್ರದ ಸದಸ್ಯರಾಗಿದ್ದರು.
  ಇವರ ಕಿರಿಯಜ್ಜ ಡಾಕ್ಟರ್ ಬೋರಪ್ಪ ದೀವರ ಸಮಾಜದ ಪ್ರಥಮ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡಿ ವೈದ್ಯರಾದ ದಾಖಲೆ ಮಾಡಿದವರು, ನಾನು ಅವರನ್ನು ಸಾಗರ ತಾಲೂಕಿನ ಈಡಿಗರ ಸಮಾಜದ ಅಧ್ಯಕ್ಷರಾದ ಟಿ.ವಿ. ಪಾಂಡುರಂಗರ ಮನೆಯಲ್ಲಿ ಬೇಟಿ ಮಾಡಿದ್ದೆ, ನನ್ನ ತಂದೆಯ ನೆನಪು ಅವರು ಆ ದಿನ ಮಾಡಿದ್ದರು.
  ಈ ಬಗ್ಗೆ ಹೊಸನಗರ ತಾಲೂಕಿನ ಮಾಜಿ ಶಾಸಕರಾದ ಡಾಕ್ಟರ್ ನಾರಾಯಣಪ್ಪ ತಮ್ಮ ಸಮಾಜದ ಮೊದಲ ವೈದ್ಯರು ಕಣ್ಣೂರಿನ ಡಾಕ್ಟರ್ ಬೋರಪ್ಪ ಅಂದಿದ್ದರು.
  1997 ರಲ್ಲಿ ಶಿವಮೊಗ್ಗ ಜಿಲ್ಲಾ ಯುವ ಜನ ಮೇಳವನ್ನು ಆನಂದಪುರಂನಲ್ಲಿ ಆಗಿನ ಶಿವಮೊಗ್ಗ ಸಂಸದರಾಗಿದ್ದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪರಿಂದ ಉದ್ಘಾಟನೆ ಮಾಡಿಸಿದ್ದೆ ಆಗ ನಾನು ಆನಂದಪುರಂ ಜಿಲ್ಲಾ ಪಂಚಾಯತ್ ಸದಸ್ಯ.
  ಉದ್ಘಾಟನಾ ಸಮಾರಂಭದ ನಂತರ ರಾತ್ರಿ ಬೋಜನ ಸಂಸದ ಬಂಗಾರಪ್ಪರಿಗೆ ನಮ್ಮ ಯಡೇಹಳ್ಳಿಯ ಬ್ರಿಟೀಶ್ ಬಂಗ್ಲೆ ( ಪ್ರವಾಸಿ ಮಂದಿರದಲ್ಲಿ) ಯಲ್ಲಿ ವ್ಯವಸ್ಥೆ ಮಾಡಿದ್ದೆ ಅಲ್ಲಿ ರಾತ್ರಿ ಊಟ ಮಾಡುವಾಗ ಬಂಗಾರಪ್ಪನವರು ಈ ಬ್ರಿಟೀಶ್ ಬಂಗಲೆಯಲ್ಲಿ ಶರಾವತಿ ಮುಳುಗಡೆ ಸಂತ್ರಸ್ಥರ ಪರಿಹಾರದ ಕೋರ್ಟ್ ನಡೆಯುತ್ತಿದ್ದ ಬಗ್ಗೆ ನೆನಪು ಮಾಡಿಕೊಂಡಿದ್ದರು.  
  ಆಗ ಅವರ ವಾಸ್ತವ್ಯ ಈ ಚೇತನ್ ರಾಜ್ ಕಣ್ಣೂರಿನ ಮುತ್ತಜ್ಜ ಕುಪ್ಪ ನಾಯಕರ ಮನೆ ಆನಂದಪುರಂ ಸಮೀಪದ ಮಧ್ಯಕಣ್ಣೂರಿನ ಅಡುಗೆ ಮನೆ ಮನೆತನದ್ದು ಅವರ ಮನೆಯ ಹೊಸ ರ್ಯಾಲಿ ಸೈಕಲ್ ನಲ್ಲಿ ನಿತ್ಯ ಕೋಟ್೯ ಕಲಾಪಕ್ಕೆ ಬಂಗಾರಪ್ಪನವರು ಬರುತ್ತಿದ್ದರಂತೆ.
  ಇವತ್ತು ಈ ಎಲ್ಲಾ ವಿಚಾರಗಳ ಚರ್ಚಿಸಿದೆವು ಇವರು ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ತೊರೆದು ಕಾಂಗ್ರೇಸ್ ಸೇರಿ ಗೋಪಾಲ ಕೃಷ್ಣ ಬೇಳೂರು ಗೆಲುವಿಗೆ ಶ್ರಮಿಸಿದ್ದಾರೆ.
  ರಾಜಕಾರಣ ಮತ್ತು ಪಕ್ಷ ಸಂಘಟನೆಯಲ್ಲಿ ನುರಿತವರು ಮತ್ತು ಒಳ್ಳೆಯ ಕುಟುಂಬದ ಹಿನ್ನೆಲೆಯ ಯುವ ವಕೀಲರಾದ ಚೇತನ್ ರಾಜ್ ಕಣ್ಣೂರು ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಭಲ ಆಕಾಂಕ್ಷೆ ಹೊಂದಿದ್ದಾರೆ ಇವರಿಗೆ ಶುಭ ಹಾರೈಸಿ ಬಿಳ್ಕೊಟ್ಟೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...