Skip to main content

Blog number 2018. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರಂ ಹೋಬಳಿಯ ಯಡೇಹಳ್ಳಿ ಗ್ರಾಮದ ಕೆಂಜಿಗಾಪುರದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಾಲಯ 605 ವಷ೯ಗಳ ಹಿಂದೆ ಗಜ ಬೇಟೆಗಾರ ಬಿರುದಾಂಕಿತ ವಿಜಯನಗರ ಅರಸು ಪ್ರೌಡ ಪ್ರತಾಪರಾಯರಿಂದ ನಿರ್ಮಿಸಲ್ಪಟ್ಟಿದೆ ಪ್ರತಿ ವರ್ಷ ಹೋಳಿ ಹುಣ್ಣಿಮೆ ದಿನ ರಥೋತ್ಸವ ನೆರವೇರಲ್ಪಡುತ್ತದೆ.

#ನಮ್ಮ_ಊರಿನ_ಕೆಂಜಿಗಾಪುರದ

#ಶ್ರೀವೀರಭದ್ರ_ಸ್ವಾಮಿ_ದೇವರ_ಜಾತ್ರೆ_ರಥೋತ್ಸವ

#ಪ್ರತಿ_ವರ್ಷ_ಹೋಳಿ_ಹುಣ್ಣಿಮೆಗೆ_ರಥೋತ್ಸವ

#ವಿಜಯನಗರದ_ಅರಸು_ಪ್ರೌಡ_ಪ್ರತಾಪ_ರಾಯ_600_ವರ್ಷದ_ಹಿಂದೆ_ನಿರ್ಮಿಸಿದ_ದಾಖಲೆ

#ಪ್ರೌಡ_ಪ್ರತಾಪರಿಗೆ_ಗಜ_ಬೇಟೆಗಾರ_ಎಂಬ_ಬಿರುದು_ಇತ್ತು.

#ಸಾಗರದ_ವಕೀಲರಾದ_ಶಶಿಭೂಷಣರ_ತಂದೆ_ವಕೀಲ್_ಮರಿಯಪ್ಪನವರು_ಸ್ವಾತಂತ್ರ್ಯ_ಪೂರ್ವದಲ್ಲಿ

#ಆನಂದಪುರಂನ_ದೊಡ್ಡ_ಜಮೀನ್ದಾರರು_ಲೇವಾದೇವಿದಾರರು_ಆಗಿದ್ದರು.

#ಅವರ_ಮನೆದೇವರು_ಕೆಂಜಿಗಾಪುರದ_ಶ್ರೀ_ವೀರಭದ್ರ_ದೇವರು.
  ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರಂ ಹೋಬಳಿಯ ಕೆಂಜಿಗಾಪುರ ಈಗ ಯಡೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಡಳಿತಕ್ಕೆ ಒಳಪಟ್ಟಿದೆ.
  ಈ ದೇವಾಲಯ ಮುಜರಾಯಿ ಇಲಾಖೆಗೆ ಸೇರಿದೆ, ಪ್ರತಿ ವರ್ಷ ಹೋಳಿ ಹುಣ್ಣಿಮೆಯಂದು ಕೆಂಜಿಗಾಪುರದ ಶ್ರೀ ವೀರಭದ್ರೇಶ್ವರ ದೇವರ ರಥೋತ್ಸವ ನಡೆಯುತ್ತದೆ.
  ಈ ದೇವಾಲಯ ವಿಜಯನಗರ ಸಾಮ್ರಾಜ್ಯದ ಅರಸು ಪ್ರೌಡ ಪ್ರತಾಪ ರಾಯ 1419 ರಲ್ಲಿ ನಿರ್ಮಿಸಿದ ಶಾಸನವಿದೆ (ಪ್ರೌಢಪ್ರತಾಪರಾಯ ಆಡಳಿತ ಅವಧಿ 1422-1446).
  ವಿಜಯನಗರದ ಅರಸು ಪ್ರೌಡ ಪ್ರತಾಪ ರಾಯ ಆ ಕಾಲದಲ್ಲಿ ಅರಣ್ಯದಲ್ಲಿನ ಕಾಡಾನೆಗಳನ್ನು ಹಿಡಿದು ಪಳಗಿಸಿ ಅದನ್ನು ತನ್ನ ಸೈನ್ಯದಲ್ಲಿ ಬಳಸುತ್ತಿದ್ದಂತ ಸಾಹಸಿ ಆದ್ದರಿಂದ ಪ್ರೌಢ ಪ್ರತಾಪ ರಾಯರಿಗೆ #ಗಜ_ಬೇಟೆಗಾರ ಎಂಬ ಬಿರುದು ಇತ್ತು.
   ಆರುನೂರು ವರ್ಷಗಳ ಹಿಂದೆ ಈ ಪ್ರದೇಶ ದೊಡ್ಡ ಜನ ವಸತಿ ಪ್ರದೇಶ ಆಗಿರಬೇಕು.
  ಈ ದೇವಾಲಯ ನಿರ್ಮಾಣವಾಗಿ ಶಾಸನಗಳ ಪ್ರಕಾರ 605 ವರ್ಷಗಳಾಗಿದೆ, ಪ್ರತಿ ವರ್ಷ ಹೋಳಿ ಹುಣ್ಣಿಮೆಯಂದು ದೇವರ ರಥ ಯಡೇಹಳ್ಳಿ ವೃತ್ತ ತಲುಪಿ ಆನಂದಪುರಂನ ಸಂತೆ ಮಾರ್ಕೆಟ್ ತನಕ ರಥ ರಾಜ ಬೀದಿ ಉತ್ಸವ ನಡೆಯುತ್ತಿತ್ತು ನಂತರ ಇದು ಯಡೇಹಳ್ಳಿ ವೃತ್ತಕ್ಕೆ ಸೀಮಿತವಾಗಿದ್ದು ಈಗ ಅದೂ ಬದಲಾಗಿ ದೇವಾಲಯದಿಂದ ಯಡೇಹಳ್ಳಿ ಪ್ರವಾಸಿ ಮುಂದಿರದ ಹಿಂಬಾಗದಲ್ಲಿರುವ ಗಡಿಕಲ್ಲಿನ ತನಕ ಮಾತ್ರ ರಥೋತ್ಸವ ನಡೆಯುತ್ತದೆ.
   ಈ ದೇವಾಲಯದ ಅಭಿವೃದ್ಧಿಯಲ್ಲಿ ಸಾಗರದ ಖ್ಯಾತ ವಕೀಲರಾದ ಶಶಿಭೂಷಣರ ಕುಟುಂಬದವರು ದೊಡ್ಡ ಮಟ್ಟದ ದಾನಿಗಳಾಗಿ ಸೇವೆ ಸಲ್ಲಿಸಿದ್ದಾರೆ ಒಂದು ವಿಶೇಷ ಅಂದರೆ ಶಶಿಭೂಷಣರ ಪತ್ನಿ ಶ್ರೀಮತಿ ಸುನಂದಮ್ಮ ಕೆಳದಿ ವಂಶಸ್ಥರು.
   ಶಶಿಭೂಷಣರ ತಂದೆ ವಕೀಲ್ ಸಾಹುಕಾರ್ ಮರಿಯಪ್ಪನವರು ಸ್ವಾತಂತ್ರ್ಯ ಪೂರ್ವದಲ್ಲಿ ಆನಂದಪುರಂನ ದೊಡ್ಡ ಜಮೀನ್ದಾರರು ಮತ್ತು ಲೇವಾದೇವಿದಾರರಾಗಿದ್ದರು ಇವರ ಪುತ್ರ  ಡಾಕ್ಟರ್ ಎಸ್. ಎಸ್. ಭೂಷಣ್ ಅಮೇರಿಕಾದಲ್ಲಿ ಪ್ರಸಿದ್ಧ ವೈದ್ಯರಾಗಿದ್ದಾರೆ ಇವರ ಕುಟುಂಬಕ್ಕೆ ಕೆಂಜಿಗಾಪುರದ ಶ್ರೀ ವೀರಭದ್ರಸ್ವಾಮಿ ಮನೆ ದೇವರು.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ