Skip to main content

Blog number 2018. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರಂ ಹೋಬಳಿಯ ಯಡೇಹಳ್ಳಿ ಗ್ರಾಮದ ಕೆಂಜಿಗಾಪುರದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಾಲಯ 605 ವಷ೯ಗಳ ಹಿಂದೆ ಗಜ ಬೇಟೆಗಾರ ಬಿರುದಾಂಕಿತ ವಿಜಯನಗರ ಅರಸು ಪ್ರೌಡ ಪ್ರತಾಪರಾಯರಿಂದ ನಿರ್ಮಿಸಲ್ಪಟ್ಟಿದೆ ಪ್ರತಿ ವರ್ಷ ಹೋಳಿ ಹುಣ್ಣಿಮೆ ದಿನ ರಥೋತ್ಸವ ನೆರವೇರಲ್ಪಡುತ್ತದೆ.

#ನಮ್ಮ_ಊರಿನ_ಕೆಂಜಿಗಾಪುರದ

#ಶ್ರೀವೀರಭದ್ರ_ಸ್ವಾಮಿ_ದೇವರ_ಜಾತ್ರೆ_ರಥೋತ್ಸವ

#ಪ್ರತಿ_ವರ್ಷ_ಹೋಳಿ_ಹುಣ್ಣಿಮೆಗೆ_ರಥೋತ್ಸವ

#ವಿಜಯನಗರದ_ಅರಸು_ಪ್ರೌಡ_ಪ್ರತಾಪ_ರಾಯ_600_ವರ್ಷದ_ಹಿಂದೆ_ನಿರ್ಮಿಸಿದ_ದಾಖಲೆ

#ಪ್ರೌಡ_ಪ್ರತಾಪರಿಗೆ_ಗಜ_ಬೇಟೆಗಾರ_ಎಂಬ_ಬಿರುದು_ಇತ್ತು.

#ಸಾಗರದ_ವಕೀಲರಾದ_ಶಶಿಭೂಷಣರ_ತಂದೆ_ವಕೀಲ್_ಮರಿಯಪ್ಪನವರು_ಸ್ವಾತಂತ್ರ್ಯ_ಪೂರ್ವದಲ್ಲಿ

#ಆನಂದಪುರಂನ_ದೊಡ್ಡ_ಜಮೀನ್ದಾರರು_ಲೇವಾದೇವಿದಾರರು_ಆಗಿದ್ದರು.

#ಅವರ_ಮನೆದೇವರು_ಕೆಂಜಿಗಾಪುರದ_ಶ್ರೀ_ವೀರಭದ್ರ_ದೇವರು.
  ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರಂ ಹೋಬಳಿಯ ಕೆಂಜಿಗಾಪುರ ಈಗ ಯಡೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಡಳಿತಕ್ಕೆ ಒಳಪಟ್ಟಿದೆ.
  ಈ ದೇವಾಲಯ ಮುಜರಾಯಿ ಇಲಾಖೆಗೆ ಸೇರಿದೆ, ಪ್ರತಿ ವರ್ಷ ಹೋಳಿ ಹುಣ್ಣಿಮೆಯಂದು ಕೆಂಜಿಗಾಪುರದ ಶ್ರೀ ವೀರಭದ್ರೇಶ್ವರ ದೇವರ ರಥೋತ್ಸವ ನಡೆಯುತ್ತದೆ.
  ಈ ದೇವಾಲಯ ವಿಜಯನಗರ ಸಾಮ್ರಾಜ್ಯದ ಅರಸು ಪ್ರೌಡ ಪ್ರತಾಪ ರಾಯ 1419 ರಲ್ಲಿ ನಿರ್ಮಿಸಿದ ಶಾಸನವಿದೆ (ಪ್ರೌಢಪ್ರತಾಪರಾಯ ಆಡಳಿತ ಅವಧಿ 1422-1446).
  ವಿಜಯನಗರದ ಅರಸು ಪ್ರೌಡ ಪ್ರತಾಪ ರಾಯ ಆ ಕಾಲದಲ್ಲಿ ಅರಣ್ಯದಲ್ಲಿನ ಕಾಡಾನೆಗಳನ್ನು ಹಿಡಿದು ಪಳಗಿಸಿ ಅದನ್ನು ತನ್ನ ಸೈನ್ಯದಲ್ಲಿ ಬಳಸುತ್ತಿದ್ದಂತ ಸಾಹಸಿ ಆದ್ದರಿಂದ ಪ್ರೌಢ ಪ್ರತಾಪ ರಾಯರಿಗೆ #ಗಜ_ಬೇಟೆಗಾರ ಎಂಬ ಬಿರುದು ಇತ್ತು.
   ಆರುನೂರು ವರ್ಷಗಳ ಹಿಂದೆ ಈ ಪ್ರದೇಶ ದೊಡ್ಡ ಜನ ವಸತಿ ಪ್ರದೇಶ ಆಗಿರಬೇಕು.
  ಈ ದೇವಾಲಯ ನಿರ್ಮಾಣವಾಗಿ ಶಾಸನಗಳ ಪ್ರಕಾರ 605 ವರ್ಷಗಳಾಗಿದೆ, ಪ್ರತಿ ವರ್ಷ ಹೋಳಿ ಹುಣ್ಣಿಮೆಯಂದು ದೇವರ ರಥ ಯಡೇಹಳ್ಳಿ ವೃತ್ತ ತಲುಪಿ ಆನಂದಪುರಂನ ಸಂತೆ ಮಾರ್ಕೆಟ್ ತನಕ ರಥ ರಾಜ ಬೀದಿ ಉತ್ಸವ ನಡೆಯುತ್ತಿತ್ತು ನಂತರ ಇದು ಯಡೇಹಳ್ಳಿ ವೃತ್ತಕ್ಕೆ ಸೀಮಿತವಾಗಿದ್ದು ಈಗ ಅದೂ ಬದಲಾಗಿ ದೇವಾಲಯದಿಂದ ಯಡೇಹಳ್ಳಿ ಪ್ರವಾಸಿ ಮುಂದಿರದ ಹಿಂಬಾಗದಲ್ಲಿರುವ ಗಡಿಕಲ್ಲಿನ ತನಕ ಮಾತ್ರ ರಥೋತ್ಸವ ನಡೆಯುತ್ತದೆ.
   ಈ ದೇವಾಲಯದ ಅಭಿವೃದ್ಧಿಯಲ್ಲಿ ಸಾಗರದ ಖ್ಯಾತ ವಕೀಲರಾದ ಶಶಿಭೂಷಣರ ಕುಟುಂಬದವರು ದೊಡ್ಡ ಮಟ್ಟದ ದಾನಿಗಳಾಗಿ ಸೇವೆ ಸಲ್ಲಿಸಿದ್ದಾರೆ ಒಂದು ವಿಶೇಷ ಅಂದರೆ ಶಶಿಭೂಷಣರ ಪತ್ನಿ ಶ್ರೀಮತಿ ಸುನಂದಮ್ಮ ಕೆಳದಿ ವಂಶಸ್ಥರು.
   ಶಶಿಭೂಷಣರ ತಂದೆ ವಕೀಲ್ ಸಾಹುಕಾರ್ ಮರಿಯಪ್ಪನವರು ಸ್ವಾತಂತ್ರ್ಯ ಪೂರ್ವದಲ್ಲಿ ಆನಂದಪುರಂನ ದೊಡ್ಡ ಜಮೀನ್ದಾರರು ಮತ್ತು ಲೇವಾದೇವಿದಾರರಾಗಿದ್ದರು ಇವರ ಪುತ್ರ  ಡಾಕ್ಟರ್ ಎಸ್. ಎಸ್. ಭೂಷಣ್ ಅಮೇರಿಕಾದಲ್ಲಿ ಪ್ರಸಿದ್ಧ ವೈದ್ಯರಾಗಿದ್ದಾರೆ ಇವರ ಕುಟುಂಬಕ್ಕೆ ಕೆಂಜಿಗಾಪುರದ ಶ್ರೀ ವೀರಭದ್ರಸ್ವಾಮಿ ಮನೆ ದೇವರು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...