Skip to main content

Blog number 2023. ಶಿವಮೊಗ್ಗ ಜಿಲ್ಲೆಯ ಇತಿಹಾಸದ ಪುಟಗಳನ್ನು ಹುಡುಕಿ ತೆಗೆದು ರಾಜ್ಯದ ಜನರಿಗೆ ದೃಶ್ಯ ಮಾಧ್ಯಮದ ಮೂಲಕ ಡಿಜಿಟಲ್ ಮಾಧ್ಯಮ ಸಂಸ್ಥೆ ಅಲ್ಲಮ ಪ್ರಭು- ಅಕ್ಕಮಹಾದೇವಿ-ಶಾಂತಲಾ - ಕನ್ನಡದ ಮೊದಲ ಶಾಸನಗಳ ಮಾಹಿತಿ ಇತಿಹಾಸಕಾರರಾದ ರಮೇಶ್ ಹಿರೇಜಂಬೂರ್ ಮತ್ತು ನವೀನರಿಂದ ತಿಳಿಸುತ್ತಿದೆ.

#ಅಲ್ಲಮಪ್ರಭು_ಅಕ್ಕಮಹಾದೇವಿ_ಶಾಂತಲಾ_ಬಗ್ಗೆ

#ನೂರು_ಪುಸ್ತಕ_ಓದಿ_ತಿಳಿಯುವ_ಮಾಹಿತಿ

#ಈ_ಒಂದೊಂದು_ದೃಶ್ಯ_ಮಾಧ್ಯಮದ_ಕಂತುಗಳಿಂದ_ತಿಳಿಯಲು_ಸಾಧ್ಯವಿದೆ .

#ಡಿಜಿಟಲ್_ಮಾಧ್ಯಮದಲ್ಲಿ_ಶಿವಮೊಗ_ಜಿಲ್ಲೆ_ಇತಿಹಾಸ.


 ನಾನು ನರಹಂತಕ ವೀರಪ್ಪನ್ ಸರಣಿ ಬಹುಶಃ 300 ಕ್ಕೂ ಹೆಚ್ಚು ಆ ಡಿಜಿಟಲ್ ಮಾಧ್ಯಮವನ್ನು ನಿರಂತರ ಹಿಂಬಾಲಿಸುವಂತಾಗಿತ್ತು....

  ನಂತರ ಸಂಗೊಳ್ಳಿ ರಾಯಣ್ಣ,ಶಿಶುನಾಳ ಷರೀಪರು, ಕನಕದಾಸರು, ಸರ್ವಜ್ಞ ಹೀಗೆ ಸಾಲು ಸಾಲು ಇತಿಹಾಸದ ಪುಟಗಳನ್ನು ಸ್ಥಳಿಯರಿಂದ ಪ್ರಶ್ನೋತ್ತರದ ಮೂಲಕ ಜಗತ್ತಿಗೆ ತೆಗೆದಿರಿಸುವ ಡಿಜಿಟಲ್ ಮಾಧ್ಯಮದ ನಂದಿನಿ ಆಕರ್ಷ ದಂಪತಿಗಳ ಕೆಲಸ ಶ್ಲಾಘನೀಯವಾಗಿದೆ.
   ಆದುನೀಕರಣದ ವೇಗದಲ್ಲಿ ಈಗಿನ ಹಳ್ಳಿಗಳು ಬದಲಾಗುತ್ತಿರುವ ಕಾಲ ಘಟ್ಟದಲ್ಲಿ ಇತಿಹಾಸದ ಕಥೆ ಹೇಳುವವರೂ ಇಲ್ಲ, ಕೇಳುವವರೂ ಇಲ್ಲ, ಇತಿಹಾಸದ ಪುಸ್ತಕಗಳ ಓದುವವರೂ ಇಲ್ಲ.
 

  ಒಂದು ಊರಿನ ದೇವಾಲಯ - ಕೋಟೆ - ಕೊಳದ ಎದರು ನಿಂತು ದೃಶ್ಯ ಮಾಧ್ಯಮದಲ್ಲಿ ಅದರ ವಿಶೇಷ ವಿವರಿಸುತ್ತಾ ಅದಕ್ಕೆ ಸಂಬಂದ ಪಟ್ಟ ಶಿಲಾಶಾಸನಗಳ ಉಲ್ಲೇಖಿಸುತ್ತಾ ಸ್ಥಳಿಯ ಜನಪದದಲ್ಲಿ ಉಳಿದು ಬಂದಿರುವ ಇದಕ್ಕೆ ಪೂರಕವಾದ ಮಾಹಿತಿ ಹಂಚುತ್ತಾ ಆಗಿನ ಆ ಸ್ಮಾರಕ ನಿರ್ಮಾಣ ಮಾಡಿದ ರಾಜ -ಸಾಮಂತ- ಸೈನ್ಯಾಧಿಕಾರಿ- ಮಾಂಡಳಿಕ-ದಾನಿಗಳ ವಿವರಿಸುತ್ತಾ ಹೋಗುವಾಗ ನಮ್ಮ ಊರಿನ, ಜಿಲ್ಲೆಯ ಹಾಗೂ ರಾಜ್ಯದ ಇತಿಹಾಸ ಕೇಳುವವರ ಮನದಲ್ಲಿ ಅಚ್ಚಳಿಯದೇ ಉಳಿಯುತ್ತದೆ.

ರಮೇಶ್ ಹಿರೇಜಂಬೂರ್ ಮತ್ತು ನವೀನ್ ರಂತಹ ಅಮೂಲ್ಯ ಇತಿಹಾಸದ ಸ್ಥಳೀಯ ಮಾಹಿತಿದಾರರು ಬೆಳಕಿಗೆ ಬರುತ್ತಾರೆ ಇವರೆಲ್ಲ ನಮ್ಮ ನಾಡು ನುಡಿಯ ಅಸಾಮಾನ್ಯ ಸಂಶೋದಕರು ಆಗಿದ್ದಾರೆ.
   ಇತಿಹಾಸ ಸಂರಕ್ಷಣೆ ಅಂದರೆ ಈ ರೀತಿ ಜನರಿಗೆ ಪುನರ್ಮನನ ಮಾಡುವ ಇಂತಹ ಕಾರ್ಯಕ್ರಮ ಅನಿವಾಯ೯ವಾಗಿದೆ,ಇದೇ ದೊಡ್ಡ ಕಾರ್ಯವಾಗಿದೆ ಈ ರೀತಿ ಸ್ಥಳಿಯರಿಗೆ ಮಾಹಿತಿ ನೀಡುವ ಮೂಲಕ ನಮ್ಮ ಊರಿನ ಇತಿಹಾಸ ಜನಮಾನಸದಲ್ಲಿ ಶಾಶ್ವತವಾಗಿ ಉಳಿಸುವ ಕೆಲಸವಾಗಿದೆ.
  ಶಿವಮೊಗ್ಗ ಜಿಲ್ಲೆಯ ಇತಿಹಾಸ ಬೆಳಕು ಚೆಲ್ಲುವ ಈ ಡಿಜಿಟಲ್ ಮಾಧ್ಯಮದ ಎಲ್ಲಾ ಕಂತುಗಳು ಪೇಸ್ ಬುಕ್, ಯೂ ಟ್ಯೂಬ್ ನಲ್ಲಿ ಲಭ್ಯವಿದೆ ವಿದ್ಯಾರ್ಥಿಗಳಿಗೆ ಶಾಲಾ ಮಕ್ಕಳಿಗೆ ಶಾಲಾ ಶಿಕ್ಷಕರು ಇದನ್ನು ತಲುಪಿಸಿದರೆ ಮುಂದಿನ 30 ವಷ೯ದ ತಲೆಮಾರು ಇತಿಹಾಸ ಅದಕ್ಕೆ ಸಂಬಂದ ಪಟ್ಟ ಸ್ಮಾರಕ  ಹೆಚ್ಚಿನ ಸಂರಕ್ಷಣೆಗೆ ಕೊಡುಗೆ ನೀಡುವ ಕಾರ್ಯ ಮಾಡುತ್ತಾರೆ.
  ದಯಮಾಡಿ ಎಲ್ಲರೂ ಶಿವಮೊಗ್ಗ ಜಿಲ್ಲೆಯ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಡಿಜಿಟಲ್ ಮಾಧ್ಯಮ ನಿರಂತರವಾಗಿ ವೀಕ್ಷಿಸಿ ನಮ್ಮ ಜಿಲ್ಲೆಯ ಇತಿಹಾಸ ತಿಳಿದುಕೊಳ್ಳಲು ವಿನಂತಿ.

   ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಡಿಜಿಟಲ್ ಮಾಧ್ಯಮ ವೀಕ್ಷಿಸಿ

http//www.facebook.com/share/v/tgKQe6rdKijY5dqg/?mibextid=qi2Omg

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...