Skip to main content

Blog number 2031. ಆತ್ಮರಕ್ಷಣೆಗೆ - ರೈತರ ಪಸಲು ರಕ್ಷಣೆಗೆ ಲೈಸೆನ್ಸ್ ಪಡೆದ ಶಸ್ತ್ರಾಸ್ತ್ರಗಳನ್ನು ಪ್ರತಿ ಚುನಾವಣೆಯ ಪ್ರಕ್ರಿಯೆ ಮುಗಿಯುವ ತನಕ ಅವರ ವ್ಯಾಪ್ತಿಯ ಪೋಲಿಸ್ ಠಾಣೆಗಳಲ್ಲಿ ಸರೆಂಡರ್ ಮಾಡುವ ಪದ್ಧತಿ ಸರಿಯೇ...

#ರಾಜ್ಯದ_ಜನಪರ_ವಕೀಲರೇ_ಇದನ್ನು_ಗಮನಿಸಿ

#ಓಬಿ_ರಾಯನ_ಕಾಲದ_ಪದ್ದತಿ

#ಲೋಕಸಭಾ_ಚುನಾವಣೆ_ಬಂದಿದೆ

#ಆತ್ಮರಕ್ಷಣೆ_ಪಸಲುರಕ್ಷಣೆ_ರಿವಾಲ್ವಾರ್_ಬಂದೂಕುಗಳು_ಪೋಲಿಸ್_ಠಾಣೆಯಲ್ಲಿ_ಸರೆಂಡರ್_ಮಾಡಬೇಕು.

#ಚುನಾವಣೆ_ಬಂದಾಗ_ದರೋಡೆಕೊರರು_ಪಸಲು_ತಿನ್ನುವ_ಪ್ರಾಣಿಗಳು_ಸುಮ್ಮನಿರುತ್ತದಾ?

#ಈ_ಅನಾಗರೀಕ_ಅವೈಜ್ಞಾನಿಕ_ಪದ್ಧತಿ_ರಾಜ್ಯದಲ್ಲಿ_ಈ_ಚುನಾವಣೆಯಲ್ಲಿಯೂ_ಜಾರಿ_ಇದೆ

#ಕೇರಳಾ_ರಾಜ್ಯದ_ಉಚ್ಚ_ನ್ಯಾಯಾಲಯ_ಈ_ಪದ್ದತಿಗೆ_ತಡೆ_ಆಜ್ಞೆ_ನೀಡಿದೆ.

#ಕರ್ನಾಟಕ_ರಾಜ್ಯದಲ್ಲಿ_ಯಾರೋಬ್ಬರೂ_ಈ_ಬಗ್ಗೆ_ಉಚ್ಚ_ನ್ಯಾಯಾಲಯದಲ್ಲಿ_ಈ_ಪದ್ದತಿ_ರದ್ದತಿಗೆ_ರಿಟ್_ಹಾಕಿಲ್ಲ.
   ಆತ್ಮ ರಕ್ಷಣೆ ಮತ್ತು ಪಸಲು ರಕ್ಷಣೆಗಾಗಿ ರಿವಾಲ್ವಾರ್ ಅಥವ ಬಂದೂಕು ಲೈಸೆನ್ಸ್ ಪಡೆದವರಿಗೆ ಪ್ರತಿ ಚುನಾವಣೆಯ ಸಂದರ್ಭದಲ್ಲಿ ತಮ್ಮ ತಮ್ಮ ರಿವಾಲ್ವಾರ್ / ಬಂದೂಕುಗಳನ್ನು ಅವರ ವ್ಯಾಪ್ತಿಯ ಪೋಲಿಸ್ ಠಾಣೆಗೆ ತಂದು ಸರೆಂಡರ್ ಮಾಡಬೇಕೆಂಬ ಜ್ಞಾಪನಾ ಪತ್ರ ಪೋಲಿಸರು ನೀಡುತ್ತಾರೆ.
  ಅದರಂತೆ ಆ ವ್ಯಾಪ್ತಿಯ ಜನರು ಪೋಲಿಸರ ಆದೇಶ ಪಾಲಿಸುತ್ತಾರೆ ಆದರೆ ಈ ಪದ್ಧತಿ ಸರಿಯಾ? ದರೋಡೆಕೋರರು - ಕಳ್ಳರು ತಮ್ಮ ವೃತ್ತಿಯನ್ನು ಚುನಾವಣೆಯಲ್ಲಿ ಬಿಡುತ್ತಾರಾ? ಚುನಾವಣಾ ಸಂದರ್ಭದಲ್ಲಿ ಬಂದೂಕು ಪೋಲಿಸ್ ಠಾಣೆಯಲ್ಲಿ ಡಿಪೋಸಿಟ್ ಮಾಡಿರುತ್ತಾರೆಂಬ ಮಾಹಿತಿ ಅವರಿಗೆ ಹೆಚ್ಚಿನ ದೈರ್ಯ ನೀಡದೇ ಇರುತ್ತದಾ?.
  ಈ ಅವೈಜ್ಞಾನಿಕ ಪದ್ದತಿಯನ್ನು ಕೇರಳ ರಾಜ್ಯದ ಉಚ್ಚ ನ್ಯಾಯಾಲಯದ ಆದೇಶದಲ್ಲಿ ತಡೆ ಹಿಡಿದಿರುವುದರಿಂದ ಅಲ್ಲಿ ಈ ಪದ್ಧತಿ ಜಾರಿ ಇಲ್ಲ ಆದರೆ ಪಕ್ಕದ ನಮ್ಮ ಕರ್ನಾಟಕ ರಾಜ್ಯದಲ್ಲಿ ಜಾರಿ ಇದೆ.
   ನಮ್ಮ ಜಿಲ್ಲೆಯವರೆ ಆರಗ ಜ್ಞಾನೇಂದ್ರರಾಜ್ಯದ ಗೃಹ ಮಂತ್ರಿ ಆಗಿದ್ದಾಗ  ಮನವಿ ಮಾಡಿದ್ದೆ ಆದರೆ ಈ ಬಗ್ಗೆ ಅವರು ಪೋಲಿಸ್ ಇಲಾಖೆಯಲ್ಲಿ ಯಾವುದೇ ಇಂತಹ ಆಚರಣೆಗೆ ಮಾರ್ಪಾಡು ತರಲಿಲ್ಲ.
   ಹಾಗಂತ ನಮ್ಮ ರಾಜ್ಯದ ಯಾರೊಬ್ಬರೂ ಈವರೆಗೆ ರಾಜ್ಯದ ಉಚ್ಚ ನ್ಯಾಯಾಲಯದಲ್ಲಿ ಇದಕ್ಕೆ ಈ ವರೆಗೆ ತಡೆ ಆಜ್ಞೆ ತರುವ ಪ್ರಯತ್ನ ಮಾಡಿದ ಮಾಹತಿ ಇಲ್ಲ.
  ಆದರೆ ಪಕ್ಕದ ಕೇರಳದಲ್ಲಿನ ಉಚ್ಚ ನ್ಯಾಯಾಲಯದಲ್ಲಿ ರಿಟ್ ಸಲ್ಲಿಸಿ ತಡೆ ಆಜ್ಞೆ ತಂದ ಮಾಹಿತಿ ಇದೆ.
 2019 ರ ವಿದಾನಸಭಾ ಚುನಾವಣೆ ಸಂದರ್ಭದಲ್ಲಿ ಪುತ್ತೂರಿನ ಖ್ಯಾತ ಛಾಯಾಚಿತ್ರ ಗ್ರಾಹಕ #ಕಿರಣಮನ್ನಾಜೆ ತಮ್ಮ ಪೇಸ್ ಬುಕ್ ನಲ್ಲಿ ಈ ಅವೈಜ್ಞಾನಿಕ ಓಬಿರಾಯನ ಕಾಲದ ಪದ್ದತಿ ಬಗ್ಗೆ ಪೋಸ್ಟ್ ಲ್ಲಿ ಬರೆದಾಗ ಕೇರಳದ #ಪ್ರದೀಪರಾವ್ ಎಂಬುವವರು ಎನಾ೯ಕುಲಂ ಉಚ್ಚ ನ್ಯಾಯಾಲಯದಲ್ಲಿ ಕಾಸರಗೋಡು ಜಿಲ್ಲಾಧಿಕಾರಿಯನ್ನು ಎದರು ಪಾರ್ಟಿ ಮಾಡಿ ಸಲ್ಲಿಸಿದ ರಿಟ್ ನಲ್ಲಿ ಚುನಾವಣೆ ಸಂದರ್ಭದಲ್ಲಿ ಬಂದೂಕು ಸರೆಂಡರ್ ಮಾಡಲು ನೀಡುವ ನೋಟೀಸ್ ಗೆ ತಡೆ ಆಜ್ಞೆ ತಂದಿದ್ದಾರೆ ಎಂಬ ಮಾಹಿತಿ ನೀಡಿದ್ದರು.
  ಇಲ್ಲಿ ಕ್ಲಿಕ್ ಮಾಡಿ ಸದರಿ ಅದೇಶ ಓದಬಹುದು.
https://www.newindianexpress.com/states/kerala/2021/feb/21/hc-cops-cant-direct-people-to-surrender-licensed-arms-2266809.html

https://indiankanoon.org/doc/127267817/

 
 ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಚುನಾವಣೆ ಘೋಷಣೆ ಆಗಿದೆ ಇಲ್ಲಿಯೂ ಈಗ ಬಂದೂಕು ಸರೆಂಡರ್ ಮಾಡಲು ಜಿಲ್ಲಾಧಿಕಾರಿಗಳು ಆಯಾ ಜಿಲ್ಲೆಯಲ್ಲಿ ಪೋಲಿಸರ ಮುಖಾಂತರ ಆದೇಶ ಜಾರಿ ಮಾಡುತ್ತಾರೆ.
  ರಾಜ್ಯದ ಜನಪರ ವಕೀಲರುಗಳು ಇದನ್ನು ಜನರ ಪರವಾಗಿ ಜಿಲ್ಲಾಧಿಕಾರಿಗಳಿಗೆ ಆಕ್ಷೇಪಣೆ ಸಲ್ಲಿಸಿ ಕೇರಳ ರಾಜ್ಯದ ಉಚ್ಚ ನ್ಯಾಯಾಲಯದ ಆದೇಶ ಹಾಜರು ಪಡಿಸಿ ನಮ್ಮ ರಾಜ್ಯದಲ್ಲಿ ಈ ಬಾರಿಯಿಂದ ಈ ಅವೈಜ್ಞಾನಿಕ ಪದ್ಧತಿ ಮುಂದುವರಿಸದಂತೆ ಮನವಿ ನೀಡಬಾರದೇಕೆ?
   ಅಥವ ಪ್ರತ್ಯೇಕ ರಿಟ್ ಉಚ್ಛ ನ್ಯಾಯಾಲಯದಲ್ಲಿ ಸಲ್ಲಿಸಿ ತಕ್ಷಣ ತಡೆ ಆಜ್ಞೆ ತರಲಿ ಅಂತ ವಿನಂತಿಸುತ್ತೇನೆ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ