Skip to main content

Blog number 2039. ಮುನಿಶ್ರೀ 108 ಪುರಾಣ ಸಾಗರ ಮಹಾರಾಜರ ಇವತ್ತಿನ 1-ಏಪ್ರಿಲ್ - 2024ರ ಆಹಾರ ಸೇವನೆ ನಮ್ಮ ಶ್ರೀಕೃಷ್ಣ ಸರಸ ಕನ್ವೆನ್ಷನ್ ಹಾಲ್ ನಲ್ಲಿ.

#ಜೈನ_ದರ್ಮಾಚಾರಣೆ_ವಿಬಿನ್ನ_ಸರಳ__ಅಹಿಂಸಾ_ಆಚರಣೆ

#ಜೈನ_ಸನ್ಯಾಸಿಗಳು_ಮಾತ್ರ_ಸನ್ಯಾಸದ_ಪಕ್ಕಾ_ಆಚರಣೆ_ಮಾಡುವವರು

#ಇವತ್ತು_ನಮ್ಮ_ಕಲ್ಯಾಣಮಂಟಪದಲ್ಲಿ_ಪಾದಾರ್ಪಣೆ_ಮಾಡಿ_ಆಹಾರ_ಸ್ವೀಕರಿಸಿದದರು

#ಮುನಿಶ್ರೀ_108_ಪುರಾಣ_ಸಾಗರ_ಮಹಾರಾಜರು

#ಬೆಳಗಾವಿಯಿಂದ_ಶ್ರವಣಬೆಳಗೋಳಕ್ಕೆ_ಮಂಗಳಯಾತ್ರೆ


  ಇಂಥಹ ಸಜ್ಜನ ಸನ್ಯಾಸಿಗಳು ಕಲಿಯುಗದ ನಿಜ ಸನ್ಯಾಸಿಗಳು, ಸನ್ಯಾಸಾಶ್ರಮದ ನೀತಿ ರೀತಿ ನಿಷ್ಟೆಯಿಂದ ಪಾಲಿಸುತ್ತಾರೆ.
   ಜೀವಮಾನ ಪೂರ್ತಿ ಬರಿಗಾಲಿನಲ್ಲಿ ಸಂಚಾರ, ಕಾಮ ಕ್ರೋದ ಮದ ಮಾತ್ಸರ ಸಂಪೂರ್ಣ ತ್ಯಾಗ ಮಾಡಿದ ಮೇಲೆ ಅವರು ದಿಗಂಬರರಾಗುತ್ತಾರೆ.
  ಚಾತುರ್ಮಾಸದ ಕೆಲ ದಿನಗಳು ಮಾತ್ರ ನಿರ್ಧಿಷ್ಟ ಸ್ಥಳದಲ್ಲಿ ತಂಗುವ ಅವರು ತಮ್ಮ ಜೀವಮಾನ ಪೂರ್ತಿ ನಡಿಗೆಯಲ್ಲಿ ಸಂಚರಿಸುತ್ತಾರೆ ಯಾವ ಕಾರಣಕ್ಕೂ ವಾಹನ ಬಳಸುವುದಿಲ್ಲ.
  ದಿನಕ್ಕೆ ಒಮ್ಮೆ ಮಾತ್ರ ಆಹಾರ ಸೇವಿಸುತ್ತಾರೆ ಅದು ಬದುಕಲು ಮಾತ್ರದ ಆಹಾರ ನೀರು, ಯಾವುದೇ ಪಾತ್ರೆ ಬಳಸುವುದಿಲ್ಲ ಬರಿ ಅಂಗೈಯಲ್ಲಿ ನಿಂತು ಆಹಾರ ಸೇವನೆ ಅವರು ಆಹಾರ ಸವಿಯುವುದಿಲ್ಲ.
  ನನ್ನ ಮಾತಾ ಪಿತೃಗಳ ಪುಣ್ಯದಿಂದ ನನ್ನ ಕಲ್ಯಾಣ ಮಂಟಪದಲ್ಲಿ ಈ ಮಾರ್ಗದಲ್ಲಿ ಸಾಗುವ ಮುನಿ ಮಹಾರಾಜರು ತಂಗುತ್ತಾರೆ ಅವರ ಪಾದಸ್ಪರ್ಶದಿಂದ ನನ್ನ ಕುಟುಂಬ ಪರಿವಾರಕ್ಕೆ ಎಣಿಸಲಾರದ ಪುಣ್ಯ ಫಲವಿದೆ.
  ಇವತ್ತು ಪಾದಾರ್ಪಣೆ ಮಾಡಿದವರು ಮುನಿಶ್ರೀ 108 ಪುರಾ ಣ ಸಾಗರ ಮಹಾರಾಜರು ಅವರು ಬೆಳಗಾವಿಯಿಂದ ಶ್ರವಣಬೆಳಗೋಳದ ಮಾರ್ಗದಲ್ಲಿ ನಮ್ಮ ಊರು ದಾಟಿದ್ದಾರೆ ಅವರಿಗೆ ಪಿರಣಾವಾಡಿಯ ಸಮಸ್ತ ಶ್ರಾವಕ ಶ್ರಾವಕಿಯರ ಸಹಯೋಗ ನೀಡಿದ್ದಾರೆ.
   ಮುನಿಶ್ರೀ 108 ಪುರಾಣ ಸಾಗರರು ನಮ್ಮ ತಂದೆ ತಾಯಿ ಸ್ಮರಣಾರ್ಥ ನಿರ್ಮಿಸಿದ ಶ್ರೀಕೃಷ್ಣ ಸರಸ ಕನ್ವೆನ್ಷನ್ ಹಾಲ್ ನಲ್ಲಿ ಇವತ್ತಿನ ಆಹಾರ ಸೇವಿಸಿದರು.
  ಅವರ ಆಹಾರ ಸೇವನೆಯ ಯುಟ್ಯೂಬ್ ಇಲ್ಲಿ ಕ್ಲಿಕ್ ಮಾಡಿ ನೋಡಿ https://youtu.be/q_c6X6_RV2I?feature=shared
 ನಮ್ಮ ಸಂಸ್ಥೆಯಿಂದ ಅವರಿಗೆ ಸಮರ್ಪಿಸಿದ ತೆಂಗಿನಕಾಯಿ ಮತ್ತು ಬಿಳಿ ಸಾಸಿವೆ ಅವರ ಅಮೃತ ಹಸ್ತದಿಂದ ಸ್ಪರ್ಶಿಸಿ ಆಶ್ರೀವಾದ ಮಾಡಿ ನೀಡಿದ್ದಾರೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...