Skip to main content

Blog number 2046.ಭಾಗ-1.

#ಭಾಗ_1

#ಶಿಕಾರಿಪುರ_ತಾಲ್ಲೂಕಿನ_ನೆಲವಾಗಿಲು_ಎಂಬ_ಊರಿನ

#ನಾಗೇಂದ್ರಪ್ಪ_ನಮ್ಮ_ಊರಲ್ಲಿ_ನೆಲೆಸಿದ್ದಾರೆ

#ಇವರಿಗೆ_76ರ_ವಯಸ್ಸು

#ಇವರ_ನೆನಪಿನ_ಶಕ್ತಿ_ಅಗಾದ

#ಅರವತ್ತರ_ದಶಕದಲ್ಲಿನ_ಶಿಕಾರಿಪುರ_ತಾಲ್ಲೂಕಿನ_ನೆನಪುಗಳು_ಅವರಿಂದ

  ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಅವರ ವಿಡಿಯೋ ಸಂದರ್ಶನ ನೋಡಿ

https://youtu.be/WdFfpyJ8AiA?feature=shared


  ನಮ್ಮ ಊರಿನ ವರಸಿದ್ದಿ ವಿನಾಯಕ ಸ್ವಾಮಿ ದೇವಾಲಯದಲ್ಲಿ ಪಾರುಪತ್ತೆದಾರರಾಗಿ ದೇವರ ಸೇವೆ ಸಲ್ಲಿಸುತ್ತಿರುವ ನಮ್ಮ ಊರ ನಿವಾಸಿಗಳಾಗಿರುವ
ನಾಗೇಂದ್ರಪ್ಪನವರ ಊರು ಶಿಕಾರಿಪುರ ತಾಲ್ಲೂಕಿನ ನೆಲವಾಗಿಲು.
  ಮೆಕ್ಯಾನಿಕ್- ಡ್ರೈವರ್ - ಗುಮಸ್ತರಾಗಿ ಅನೇಕ ಸಂಸ್ಥೆಗಳಲ್ಲಿ ಕೆಲಸ ಮಾಡಿದವರು ಈಗ ಅವರಿಗೆ 76 ವರ್ಷ ವಯಸ್ಸು, ಕುಡಿತ ದೂಮಪಾನದಂತ ಯಾವುದೇ ದುಶ್ಚಟ ಇವರಿಗಿಲ್ಲ, ಸುಳ್ಳು ದಗಲ್ಬಾಜಿ ಇವರ ಹತ್ತರ ಸುಳಿದಿಲ್ಲ.
  ದೈವ ಭಕ್ತ - ಕಲಾವಿದ-ಸಜ್ಜನರಾದ ಇವರು ನನ್ನ ಹಿರಿಯ ಮಿತ್ರರು, ನಮ್ಮ ರೈಸ್ ಮಿಲ್ ಜೋಡಿಸಿದವರು, ರೈಸ್ ಮಿಲ್ ಖರೀದಿಗೆ, ರೈಸ್ ಮಿಲ್ ನ ರಬ್ಬರ್ ಶೆಲ್ಲರ್, ಪಾಲಿಶರ್ ಇತ್ಯಾದಿಗಾಗಿ ನಾನು ಇವರು ಮೈಸೂರು-ಹಾಸನ-ಕೊಡಗು- ದಾವಣಗೆರೆ ಜಿಲ್ಲೆಗಳ ಅನೇಕ ಊರುಗಳಿಗೆ ಹೋಗಿದ್ದವರು.
   ನನಗೆ ಆಶ್ಚರ್ಯ ಎಂದರೆ ಇವರ ನೆನಪಿನ ಶಕ್ತಿ, ಇವರ ಹತ್ತಿರ ಹಳೆಯ ಸಂದರ್ಭಗಳ ಮಾತು ಕೆದುಕಿದರೆ ಇವರ ನೆನಪಿನ ಜರಿ ಪ್ರವಹಿಸುತ್ತದೆ ಆ ಸಂದರ್ಭದ ಜನರ ಹೆಸರು ದಿನಾಂಕ ಸಮಯ ಎಲ್ಲಾ ಹೇಳುತ್ತಾ ಹೋಗುತ್ತಾರೆ.
  ಆದ್ದರಿಂದ 60 ರ ದಶಕದ ಶಿಕಾರಿಪುರದ ಚಿತ್ರಣ ಇವರ ನೆನಪಿನಿಂದ ಹೊರ ತೆಗೆಯುವ ಪ್ರಯತ್ನ ನನ್ನದು.
  ಇವತ್ತು ಶಿಕಾರಿಪುರ ತಾಲ್ಲೂಕು ಪ್ರಸಿದ್ಧಿ ಪಡೆದಿದೆ ಆದರೆ ಇದು 1960 ರಿಂದ 2005 ರ ವರೆಗೆ ಶಿವಮೊಗ್ಗ ಜಿಲ್ಲೆಯ ಅತ್ಯಂತ ಹಿಂದುಳಿದ ತಾಲ್ಲೂಕು ಆಗಿತ್ತು.
  ಮೊದಲ ಭಾಗದಲ್ಲಿ ಆ ಕಾಲದಲ್ಲಿ ಇಡೀ ಶಿಕಾರಿಪುರ ತಾಲ್ಲೂಕಿನಲ್ಲಿ ಅತ್ಯಂತ ಶ್ರೀಮಂತ ಕೊಡುಗೈ ದಾನಿ ಆಗಿದ್ದವರು ಸುರುಗಿಹಳ್ಳಿ ಹಾಲಪ್ಪನವರು ಅವರ ಬಗ್ಗೆ ನಾಗೇಂದ್ರಪ್ಪರ ನೆನಪುಗಳು ಈ ವಿಡಿಯೋದಲ್ಲಿದೆ.
  ಮುಂದಿನ ಭಾಗಗಳಲ್ಲಿ ಶಿಕಾರಿಪುರದ ಆ ಕಾಲದ ವಿಶೇಷ ವ್ಯಕ್ತಿಗಳ ಬಗ್ಗೆ ಘಟನೆಗಳ ಬಗ್ಗೆ ನಾಗೇಂದ್ರಪ್ಪ ಮಾತಾಡಲಿದ್ದಾರೆ ಇದು ಅವತ್ತಿನ ಕಾಲಘಟ್ಟವನ್ನ ನೆನಪಿಸಲಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...